ಸಿದ್ದಗಂಗಾಶ್ರೀಗಳಿಗೆ ಭಾರತ ರತ್ನ ಆಮಿಷ: ಮಾತೆ ಮಹಾದೇವಿ ಆರೋಪ
Team Udayavani, Sep 13, 2017, 6:16 PM IST
ಬಾಗಲಕೋಟೆ: ಪ್ರತ್ಯೇಕ ಲಿಂಗಾಯತ ಧರ್ಮಕ್ಕೆ ತಮ್ಮ ಬೆಂಬಲವಿದೆ ಎಂಬ ಜಲಸಂಪನ್ಮೂಲ ಸಚಿವ ಎಂಬಿ ಪಾಟೀಲ್ ಅವರ ಹೇಳಿಕೆಯನ್ನು ತುಮಕೂರಿನ ಸಿದ್ದಗಂಗಾ ಮಠದ ಡಾ.ಶಿವಕುಮಾರ ಸ್ವಾಮೀಜಿ ತಳ್ಳಿಹಾಕಿದ್ದಾರೆ. ಏತನ್ಮಧ್ಯೆ ಸಿದ್ದಗಂಗಾಶ್ರೀಗಳಿಗೆ ಭಾರತ ರತ್ನ ಆಮಿಷವೊಡ್ಡುವ ಮೂಲಕ ಹೇಳಿಕೆಯನ್ನು ಬದಲಾಯಿಸಿದ್ದಾರೆ ಎಂದು ಮಾತೆ ಮಹಾದೇವಿ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ.
ಬುಧವಾರ ಬಾಗಲಕೋಟೆಯಲ್ಲಿ ಸುದ್ದಿಗೋಷ್ಠಿ ನಡೆಸಿದ ಮಾತೆ ಮಹಾದೇವಿ, ಸಿದ್ದಗಂಗಾಶ್ರೀಗಳಿಗೆ ಈಗ ನೆನಪಿನ ಶಕ್ತಿ ಉಳಿಯುತ್ತಿಲ್ಲ. ಬೇಲಿಮಠದ ಶ್ರೀಗಳನ್ನು ನೀವು ಯಾರು ಎಂದು ಕೇಳಿದ್ದರು. ಇದನ್ನೇ ಕೆಲವರು ದುರುಪಯೋಗಪಡಿಸಿಕೊಳ್ಳುತ್ತಿದ್ದಾರೆ ಎಂದು ಆರೋಪಿಸಿದರು.
ಸಿದ್ದಗಂಗಾಶ್ರೀಗಳಿಗೆ ಭಾರತ ರತ್ನ ಕೊಡಿಸುವ ಆಮಿಷವೊಡ್ಡಿದ್ದಾರೆ ಎಂಬ ಬಗ್ಗೆ ಮಾಹಿತಿ ಬಂದಿದೆ. ಬಿಜೆಪಿ ರಾಜ್ಯಾಧ್ಯಕ್ಷ ಬಿಎಸ್ ಯಡಿಯೂರಪ್ಪ ಮತ್ತು ಸೋಮಣ್ಣ ಶ್ರೀಗಳಿಗೆ ಆಮಿಷವೊಡ್ಡಿರುವುದಾಗಿ ದೂರಿದರು. ಶೀಘ್ರದಲ್ಲಿಏಯ ನಾವಿದನ್ನು ಸಾಬೀತು ಮಾಡುತ್ತೇವೆ. ಭಾರತ ರತ್ನಕ್ಕಾಗಿ ಶ್ರೀಗಳು ಹೀಗೆ ಮಾತು ತಿರುಗಿಸಬಾರದು ಎಂದು ಹೇಳಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
ಯಾರಾಗಲಿದ್ದಾರೆ ಬೆಳಗಾವಿ ಕ್ಷೇತ್ರದ ಬಿಜೆಪಿ ಅಭ್ಯರ್ಥಿ: ಶೆಟ್ಟರ್ ಸ್ಪರ್ಧೆಗೆ ಭಾರಿ ವಿರೋಧ…
ಆನೆಗೊಂದಿ-ಕಡೆಬಾಗಿಲು ಚೆಕ್ ಪೋಸ್ಟ್ ಬಳಿ 32.95 ಲಕ್ಷ ರೂ.ದಾಖಲೆ ಇಲ್ಲದ ಹಣ ವಶಕ್ಕೆ
Ramanagara ಅಪಘಾತ; ವಿದ್ಯಾರ್ಥಿಗಳ ಪ್ರತಿಭಟನೆ
Telangana: ಜಾರ್ಖಂಡ್ ಗವರ್ನರ್ ಗೆ ಹೆಚ್ಚುವರಿ ಹೊಣೆಗಾರಿಕೆ, ತಮಿಳಿಸೈ ರಾಜೀನಾಮೆ ಅಂಗೀಕಾರ
Road mishap: ಆಟೋ ರಿಕ್ಷಾ – ಕಂಟೇನರ್ ಅಪಘಾತ; ಓರ್ವ ಮೃತ್ಯು, ನಾಲ್ವರಿಗೆ ಗಾಯ