ಪತ್ರಕರ್ತೆ ಗೌರಿ ಲಂಕೇಶ್‌ ಯಾರು ಎಂಬುದೇ ಗೊತ್ತಿಲ್ಲ


Team Udayavani, Aug 31, 2018, 6:25 AM IST

murder-case.jpg

ಬೆಳಗಾವಿ: “ಪತ್ರಕರ್ತೆ ಗೌರಿ ಲಂಕೇಶ್‌ ಹತ್ಯೆ ಪ್ರಕರಣದಲ್ಲಿ ನನ್ನ ಪತಿಯನ್ನು ಎಸ್‌ಐಟಿಯವರು ಯಾವುದೇ ಆಧಾರವಿಲ್ಲದೇ ಬಂಧಿಸಿದ್ದು, ಗೌರಿ ಲಂಕೇಶ ಯಾರೆಂಬುದೇ ನನ್ನ ಪತಿಗೆ ಗೊತ್ತಿಲ್ಲ’ ಎಂದು ಭರತ ಕುರಣೆ ಪತ್ನಿ ಗಾಯತ್ರಿ ತಿಳಿಸಿದರು.

ನಗರದಲ್ಲಿ ಗುರುವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, “ಗೌರಿ ಲಂಕೇಶ್‌ ಹತ್ಯೆ ಪ್ರಕರಣದ ಗಂಧ ಗಾಳಿಯೇ ಗೊತ್ತಿಲ್ಲದ ನನ್ನ ಪತಿಯನ್ನು ಎಸ್‌ಐಟಿ ಬಂಧಿಸಿದೆ. ವಿಚಾರಣೆಗೆ ಕರೆದುಕೊಂಡು ಹೋಗಿ ಮಾನಸಿಕ ಕಿರುಕುಳ ನೀಡುತ್ತಿದೆ. ದುಡಿದು ತಿನ್ನುತ್ತಿದ್ದ ನಮ್ಮ ಬದುಕಿಗೆ ಪೊಲೀಸರು ಕಲ್ಲು ಹಾಕಿದ್ದಾರೆ’ ಎಂದು ಆರೋಪಿಸಿ ಕಣ್ಣೀರು ಸುರಿಸಿದರು.

“ಪತಿಯನ್ನು ಬಂಧಿಸಿ ಮಾನಸಿಕ ಹಿಂಸೆ ನೀಡುತ್ತಿರುವ ಮಾಹಿತಿ ದೊರೆತಿದೆ. ಎಂಟು ತಿಂಗಳ ಗರ್ಭಿಣಿಯಾದ ನನಗೂ ಇದು ಪರೋಕ್ಷವಾಗಿ ಹಿಂಸೆ ಕೊಟ್ಟಂತಾಗಿದೆ. ಒಂದು ತಿಂಗಳಿಂದ ತಂದೆ ಇಲ್ಲದೆ ನನ್ನ ಇಬ್ಬರು ಹೆಣ್ಣು ಮಕ್ಕಳೂ ತೀವ್ರವಾಗಿ ನೊಂದಿದ್ದಾರೆ. ಅಮಾಯಕರಾದ ನನ್ನ ಪತಿಯನ್ನು ವಾಪಸ್‌ ಕಳುಹಿಸಬೇಕು’ ಎಂದು ಮನವಿ ಮಾಡಿದರು.

“ನನ್ನ ಪತಿ 2013ರ ಅಕ್ಟೋಬರ್‌ 31ರಂದು ಖಾನಾಪುರ ತಾಲೂಕಿನ ಚಿಕಲೆ ಎಂಬಲ್ಲಿ 3 ಎಕರೆ ಜಾಗ ಖರೀದಿಸಿದ್ದು, 2015ರ ಜನವರಿ 26ರಂದು ರೆಸಾರ್ಟ್‌ ಆರಂಭಿಸಿದ್ದರು. ಒಂದೂವರೆ ವರ್ಷಗಳ ಕಾಲ ರೆಸಾರ್ಟ್‌ ಚೆನ್ನಾಗಿಯೇ ನಡೆದಿತ್ತು. ಬಳಿಕ ಜಾಗ ಕೃಷಿಯೇತರ (ಎನ್‌ಎ)ಅಲ್ಲ ಎಂಬ ಕಾರಣಕ್ಕೆ ಅರಣ್ಯ ಇಲಾಖೆಯವರು 2016, ಡಿ.27ರಂದು ತೆರವುಗೊಳಿಸಿದ್ದಾರೆ. ರೆಸಾರ್ಟ್‌ ಬಂದ್‌ ಮಾಡಿರುವಾಗ ಅಲ್ಲಿ ಬಂದೂಕು ತರಬೇತಿ ನೀಡಲಾಗಿದೆ ಎಂಬ ಸುಳ್ಳು ಸುದ್ದಿ ಹರಡಿದ್ದು, ಮನಸ್ಸಿಗೆ ತೀವ್ರ ನೋವು ತಂದಿದೆ’ ಎಂದು ಹೇಳಿದರು.

ಎಸ್‌ಐಟಿ ಈಗ ಬಂಧಿಸಿರುವ ಸಾಗರ, ನನ್ನ ಪತಿಯ ಸ್ನೇಹಿತ. ನಮ್ಮ ರೆಸಾರ್ಟ್‌ನಲ್ಲಿ ಕೆಲಸ ಮಾಡುವಾಗ ಅನೇಕ ಸಲ ಅವರಿಗೆ  ಕರೆ ಮಾಡಿದ್ದನ್ನೇ ಆಧಾರವಾಗಿಟ್ಟುಕೊಂಡು ಗೌರಿ ಹತ್ಯೆ ಪ್ರಕರಣಕ್ಕಾಗಿ ಸಂಪರ್ಕಿಸಲಾಗಿದೆ ಎಂಬ ಸುಳ್ಳು ಆರೋಪ ಹೊರಿಸಿ ಅವರನ್ನೂ ಬಂಧಿಸಲಾಗಿದೆ. ಅಂದರೆ, ಭರತ ಕುರಣೆಗೆ ಪರಿಚಯವಿರುವವರೆಲ್ಲರನ್ನೂ ಬಂಧಿಸುತ್ತಾರೆಯೇ ಎಂಬ ಆತಂಕವನ್ನು ಅವರು ವ್ಯಕ್ತಪಡಿಸಿದರು.

ನನ್ನ ಮಗ ತಪ್ಪೇ ಮಾಡಿಲ್ಲ:
ತಾಯಿ ರೇಖಾ ಕುರಣೆ ಮಾತನಾಡಿ, “ಕರ್ಪೂರ ಹಾಗೂ ಅಗರಬತ್ತಿ ಮಾರುತ್ತ ಕಷ್ಟಪಟ್ಟು ಬೆಳೆದಿರುವ ನನ್ನ ಮಗ ಭರತ, ರೆಸಾರ್ಟ್‌ ಉದ್ಯೋಗ ನಡೆಸಿ ಈಗ ತರಕಾರಿ ಮಾರುಕಟ್ಟೆಯಲ್ಲಿ ಅಂಗಡಿ ಇಟ್ಟುಕೊಂಡಿದ್ದಾನೆ. ರೆಸಾರ್ಟ್‌ನಲ್ಲಿ ಬಂದೂಕು ತರಬೇತಿ ಎಂಬ ಸುಳ್ಳು ಸುದ್ದಿ ಹಬ್ಬಿಸಿ ನಮ್ಮ ಮನಸ್ಸಿಗೆ ತೀವ್ರ ನೋವುಂಟು ಮಾಡಲಾಗಿದೆ. ನನ್ನ ಮಗ ತಪ್ಪೇ ಮಾಡಿಲ್ಲ ಎಂದರೆ ಬಂಧಿಸಿದ್ದು ಏಕೆ?’ ಎಂದು ಪ್ರಶ್ನಿಸಿದರು.

ಭರತನನ್ನು ಭೇಟಿ ಮಾಡಿಸಲು ಎಸ್‌ಐಟಿಯವರು ಬಿಡುತ್ತಿಲ್ಲ. ಮೂರು ಸಲ ಹೋದರೂ ನಮ್ಮ ವಿಡಿಯೋ ಮಾಡಿಕೊಳ್ಳುತ್ತಿದ್ದಾರೆ. ಭರತನಿಗೆ ಬೇಕಾದ ವಕೀಲನನ್ನು ನೇಮಿಸಿಕೊಳ್ಳಲು ಎಸ್‌ಐಟಿಯವರು ಬಿಡಲಿಲ್ಲ. ಮಾನಸಿಕವಾಗಿ ತೀವ್ರ ನೊಂದಿರುವ ಭರತನ ಪಾರದರ್ಶಕ ವಿಚಾರಣೆ ನಡೆಯಬೇಕು.
– ಚೇತನ ಮನೇರಿಕರ, ಭರತ ಕುರಣೆ ಪರ ವಕೀಲ.

ಅಮಾಯಕ ಹಿಂದೂ ಯುವಕರ ಬಂಧನ ಖಂಡಿಸಿ ಶಿವಮೊಗ್ಗ, ಉಡುಪಿ ಹಾಗೂ ಮಂಗಳೂರಿನಲ್ಲಿ ಸೆ.4ರಂದು, ಸೆ.5ರಂದು ಬೆಂಗಳೂರಿನಲ್ಲಿ ಪ್ರತಿಭಟನಾ ರ್ಯಾಲಿ ಆಯೋಜಿಸಲಾಗಿದೆ. ಸೆ.1ರಂದು ಬೆಳಗಾವಿ ನಗರದ ಧರ್ಮವೀರ ಸಂಭಾಜಿ ಚೌಕ್‌ದಿಂದ ಜಿಲ್ಲಾಧಿಕಾರಿ ಕಚೇರಿವರೆಗೆ ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ.
– ಋಷಿಕೇಶ ಗುರ್ಜರ, ಹಿಂದೂ ಜನಜಾಗೃತಿ ಸಮಿತಿ ಜಿಲ್ಲಾ ಸಮನ್ವಯಕಾರ.

ಟಾಪ್ ನ್ಯೂಸ್

Exam

CET ಸುಗಮವಾಗಿ ನಡೆದಿದೆ: ಆಕ್ಷೇಪಣೆ ಸಲ್ಲಿಕೆಗೆ ಏ.27ರವರೆಗೆ ಅವಕಾಶ

1-wwqwqe

BJP ಶ್ರೀರಾಮುಲು, ಗಾಯತ್ರಿ ಸಿದ್ದೇಶ್ವರ್ ಈಗಾಗಲೇ ಗೆದ್ದಿದ್ದಾರೆ: ಜನಾರ್ದನ ರೆಡ್ಡಿ

Outrage over mistakes in CET exam question paper; Request for mercy marks

CET ಪರೀಕ್ಷೆ ಪ್ರಶ್ನೆಪತ್ರಿಕೆಯಲ್ಲಿ ಲೋಪಕ್ಕೆ ಆಕ್ರೋಶ; ಕೃಪಾಂಕಕ್ಕೆ ಆಗ್ರಹ

1-qweeweq

Viral video; ಯಾರಿವರು ಇಶಾ ಅರೋರಾ? ಮತದಾನದ ದಿನ ಭಾರಿ ಸುದ್ದಿ

New Jersey: ಸ್ಥಳೀಯ ಶಾಪ್‌ ನಲ್ಲಿ ಕಳ್ಳತನ- ಇಬ್ಬರು ಭಾರತೀಯ ವಿದ್ಯಾರ್ಥಿನಿಯರ ಬಂಧನ

New Jersey: ಸ್ಥಳೀಯ ಶಾಪ್‌ ನಲ್ಲಿ ಕಳ್ಳತನ- ಇಬ್ಬರು ಭಾರತೀಯ ವಿದ್ಯಾರ್ಥಿನಿಯರ ಬಂಧನ

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರಕಾರ ಬದ್ದ: ಸತೀಶ್ ಜಾರಕಿಹೊಳಿ

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರ್ಕಾರ ಬದ್ಧ: ಸತೀಶ್ ಜಾರಕಿಹೊಳಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Exam

CET ಸುಗಮವಾಗಿ ನಡೆದಿದೆ: ಆಕ್ಷೇಪಣೆ ಸಲ್ಲಿಕೆಗೆ ಏ.27ರವರೆಗೆ ಅವಕಾಶ

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರಕಾರ ಬದ್ದ: ಸತೀಶ್ ಜಾರಕಿಹೊಳಿ

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರ್ಕಾರ ಬದ್ಧ: ಸತೀಶ್ ಜಾರಕಿಹೊಳಿ

Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್‌ರಿಂದ ಪರಿಶೀಲನೆ

Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್‌ರಿಂದ ಪರಿಶೀಲನೆ

Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ

Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ

Lok Sabha Election: ‘ಬಿವೈಆರ್‌ಗೆ 3 ಲಕ್ಷ ಮತ ಅಂತರದ ಗೆಲುವು ಖಚಿತ’

Lok Sabha Election: ‘ಬಿವೈಆರ್‌ಗೆ 3 ಲಕ್ಷ ಮತ ಅಂತರದ ಗೆಲುವು ಖಚಿತ’

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

1-wewqewqe

Kalaburgi: ಮಹಿಳೆಯ ಬಾತ್ ರೂಮ್ ವಿಡಿಯೋ ರೆಕಾರ್ಡ್ ಮಾಡಿದ ಸೆಕ್ಯೂರಿಟಿ ಗಾರ್ಡ್

Exam

CET ಸುಗಮವಾಗಿ ನಡೆದಿದೆ: ಆಕ್ಷೇಪಣೆ ಸಲ್ಲಿಕೆಗೆ ಏ.27ರವರೆಗೆ ಅವಕಾಶ

1-qweqwewq

Congress;ಕಾರ್ಕಳ ಕ್ಷೇತ್ರದಿಂದ 40 ಸಾವಿರ ಲೀಡ್ ಗೆ ಪ್ರಯತ್ನ: ಮುನಿಯಾಲು

1-wewqe

Belgavi; ತಂದೆ ಮಾಡಿದ ಅಭಿವೃದ್ಧಿ ಕೆಲಸಗಳನ್ನು ಮುಂದುವರಿಸುತ್ತೇವೆ: ಶ್ರದ್ಧಾ ಶೆಟ್ಟರ್

2-aa

ಮೂಡುಬೆಳ್ಳೆ : ವೈಭವದ ಹಸಿರುವಾಣಿ ಹೊರೆಕಾಣಿಕೆ ಮೆರವಣಿಗೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.