ಕಾಫಿ ಕುಡಿಯೋ ಹೊತ್ತಿಗೆ ಬಾರ್‌ ಓಪನ್‌ ಮಾಡ್ಬೇಡಿ!


Team Udayavani, Sep 21, 2017, 6:00 AM IST

alcoholic-drinking.jpg

ಬೆಂಗಳೂರು: ರಾಜ್ಯದಲ್ಲಿ ಮದ್ಯದಂಗಡಿಗಳು ಬೆಳ್ಳಂಬೆಳಗ್ಗೆ ಬಾಗಿಲು ತೆರೆದು ವ್ಯಾಪಾರ ಮಾಡುವಂತಿಲ್ಲ. ನಿಗದಿಪಡಿಸಿರುವ ಅವಧಿಗೆ ಮುಂಚೆ ಮದ್ಯದಂಗಡಿಗಳನ್ನು ತೆರೆದರೆ, ಅಂಗಡಿಗಳ ಜತೆಗೆ ಸಂಬಂಧಿಸಿದ ಅಬಕಾರಿ ಅಧಿಕಾರಿಗಳ ವಿರುದ್ಧವೂ ಕ್ರಮ ಕೈಗೊಳ್ಳಲಾಗುವುದು ಎಂದು ಅಬಕಾರಿ ಸಚಿವ ಆರ್‌.ಬಿ.ತಿಮ್ಮಾಪುರ್‌ ಎಚ್ಚರಿಸಿದ್ದಾರೆ.

ಬೆಂಗಳೂರು ಸೇರಿದಂತೆ ನಗರ ಪ್ರದೇಶಗಳಲ್ಲಿ ಮದ್ಯದಂಗಡಿಗಳು ಬೆಳ್ಳಂಬೆಳಗ್ಗೆಯೇ ಬಾಗಿಲು ತೆಗೆಯುವ ಕುರಿತು ಸುದ್ದಿಗಾರರ ಪ್ರಶ್ನೆಗೆ ಪ್ರತಿಕ್ರಿಯಿಸಿದ ಅವರು, ಯಾವುದೇ ಮದ್ಯದಂಗಡಿಗಳು ಬೆಳಗ್ಗೆ 8 ಗಂಟೆಗೆ ಮುನ್ನ ತೆರೆಯಬಾರದು ಎಂಬ ನಿಯಮವಿದೆ. ಇನು °ಮುಂದೆ ಈ ನಿಯಮವನ್ನು ಕಟ್ಟುನಿಟ್ಟಾಗಿ ಪಾಲಿಸಬೇಕು ಎಂದು ಜತೆಗಿದ್ದ ಅಬಕಾರಿ ಆಯುಕ್ತರು ಮತ್ತು ಜಂಟಿ ಆಯುಕ್ತರಿಗೆ ಸೂಚಿಸಿದರು.ವೈನ್‌ಶಾಪ್‌ಗ್ಳು ಬೆಳಗ್ಗೆ 8ರ ನಂತರ ತೆರೆಯಬೇಕು. ಅದೇ ರೀತಿ ಬಾರ್‌ ಅಂಡ್‌ ರೆಸ್ಟೋರೆಂಟ್‌ಗಳನ್ನು ತೆರೆಯಲೂ ಸಮಯ ನಿಗದಿಪಡಿಸಲಾಗಿದೆ. ಈ ನಿಯಮ ಕಟ್ಟುನಿಟ್ಟಾಗಿ ಪಾಲನೆಯಾಗದಿದ್ದರೆ ಸಂಬಂಧಿಸಿದ ಅಧಿಕಾರಿಗಳ ವಿರುದ್ಧವೇ ಕ್ರಮ ಜರುಗಿಸಲಾಗುವುದು. ಈ ಬಗ್ಗೆ ಎಲ್ಲಾ ಅಧಿಕಾರಿಗಳಿಗೂ ಸೂಚನೆ ನೀಡಿ ಎಂದು ಆದೇಶಿಸಿದರು.

ಮದ್ಯ ಮಾರಾಟ ಶೇ. 1.12ರಷ್ಟು ಇಳಿಕೆ:
ಕಳೆದ ವರ್ಷಕ್ಕೆ ಹೋಲಿಸಿದರೆ ಪ್ರಸಕ್ತ ಸಾಲಿನಲ್ಲಿ ರಾಜ್ಯದಲ್ಲಿ ಮದ್ಯ ಮಾರಾಟ ಶೇ. 1.12ರಷ್ಟು ಇಳಿಕೆಯಾಗಿದೆ. ಹೆದ್ದಾರಿ ಬದಿಯ ಬಾರ್‌ಗಳ ವಿಚಾರದಲ್ಲಿ ಸುಪ್ರೀಂ ಕೋರ್ಟ್‌ ನೀಡಿದ ಆದೇಶವೂ ಇದಕ್ಕೆ ಕಾರಣ. ಪ್ರಸ್ತುತ ಮಾರಾಟದಲ್ಲಿ ಸುಧಾರಣೆ ಕಂಡುಬಂದಿದೆ ಎಂದು ಪ್ರಶ್ನೆಯೊಂದಕ್ಕೆ ಉತ್ತರಿಸಿದರು.

ಅಬಕಾರಿ ಇಲಾಖೆ ಎಂದರೆ ಸರ್ಕಾರದ ಬೊಕ್ಕಸ ತುಂಬಿಸುವ ಮತ್ತು ಆದಾಯ ಸಂಗ್ರಹಿಸುವ ಇಲಾಖೆ ಎಂಬುದಕ್ಕೆ ಸೀಮಿತವಾಗಿತ್ತು. ಆದರೆ, ತಮಗೆ ಆದಾಯ ಸಂಗ್ರಹಕ್ಕಿಂತ ಇಲಾಖೆಯನ್ನು ಸದೃಢಗೊಳಿಸುವುದು ಮುಖ್ಯ. ಈ ನಿಟ್ಟಿನಲ್ಲಿ ಕ್ರಮ ಕೈಗೊಳ್ಳಲಾಗುತ್ತಿದ್ದು, ಅಬಕಾರಿ ಇಲಾಖೆಗೆ ಹೊಸ ಶಸ್ತ್ರಾಸ್ತ್ರಗಳನ್ನು ಒದಗಿಸುವುದರ ಜತೆಗೆ ಅಧಿಕಾರಿಗಳಿಗೆ ಹೆಚ್ಚಿನ ಅಧಿಕಾರ ಮತ್ತು ಜವಾಬ್ದಾರಿ ನೀಡಲಾಗುವುದು ಎಂದರು.

789 ಮದ್ಯದಂಗಡಿ ಸ್ಥಳಾಂತರ:
ಸುಪ್ರೀಂ ಕೋರ್ಟ್‌ ಆದೇಶದಿಂದಾಗಿ ರಾಜ್ಯದಲ್ಲಿ 3000ಕ್ಕೂ ಹೆಚ್ಚು ಮದ್ಯದಂಗಡಿಗಳನ್ನು ಮುಚ್ಚಲಾಗಿತ್ತು. ಆದರೆ, ನಗರ ಪ್ರದೇಶಗಳ ವ್ಯಾಪ್ತಿಯಲ್ಲಿ ಅವುಗಳಿಗೆ ವಿನಾಯಿತಿ ನೀಡಿರುವುದರಿಂದ ಬಹುತೇಕ ಮದ್ಯದಂಗಡಿಗಳು ಪುನಾರಂಭವಾಗಿವೆ. ಇದೀಗ ಬೆಂಗಳೂರಿನ 200 ಸೇರಿದಂತೆ ರಾಜ್ಯಾದ್ಯಂತ ಸುಮಾರು 789 ಮದ್ಯದಂಗಡಿಗಳನ್ನು ಹೆದ್ದಾರಿ ಬದಿಯಿಂದ ಸ್ಥಳಾಂತರ ಮಾಡಲೇ ಬೇಕಾಗಿದೆ. ಅವುಗಳನ್ನು ಸ್ಥಳಾಂತರ ಮಾಡುವವರೆಗೆ ತೆರೆಯಲು ಅವಕಾಶ ನೀಡುವುದಿಲ್ಲ ಎಂದು ಹೇಳಿದರು.

ಮಧ್ಯದಂಗಡಿ ತೆರೆಯುವ ಸಮಯ– ಬೆಳಗ್ಗೆ 8 ಗಂಟೆ ನಂತರ
ಮುಚ್ಚುವ ಸಮಯ- ಬೆಂಗಳೂರಿನಲ್ಲಿ ಮಧ್ಯರಾತ್ರಿ 1, ಇತರೆಡೆ ರಾತ್ರಿ 11

ಟಾಪ್ ನ್ಯೂಸ್

1-wqqwewqe

BJP; ಖೂಬಾ ಮತ್ತೊಮ್ಮೆ ಸಚಿವರಾಗ್ತಾರೆ : ಔರಾದ್ ನಲ್ಲಿ ಯಡಿಯೂರಪ್ಪ ಘೋಷಣೆ

Kollywood: ಅಜಿತ್‌ ಹುಟ್ಟುಹಬ್ಬಕ್ಕೆ ಸೂಪರ್‌ ಹಿಟ್ ʼಬಿಲ್ಲಾʼ ರೀ ರಿಲೀಸ್; ಫ್ಯಾನ್ಸ್‌ ಖುಷ್

Kollywood: ಅಜಿತ್‌ ಹುಟ್ಟುಹಬ್ಬಕ್ಕೆ ಸೂಪರ್‌ ಹಿಟ್ ʼಬಿಲ್ಲಾʼ ರೀ ರಿಲೀಸ್; ಫ್ಯಾನ್ಸ್‌ ಖುಷ್

Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ

Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ

19-uv-fusion

Vote: ಬನ್ನಿ ಉತ್ತಮ ನಾಯಕನನ್ನು ಆಯ್ಕೆ ಮಾಡೋಣ

ಜ.26ರಂದು 2ನೇ ಹಂತದ ಚುನಾವಣೆ;ರಾಹುಲ್‌, ತರೂರ್‌, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ

ಜ.26ರಂದು 2ನೇ ಹಂತದ ಚುನಾವಣೆ;ರಾಹುಲ್‌, ತರೂರ್‌, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ

18-aranthodu

Aranthodu: ಜೀಪ್-ಬೈಕ್ ಅಪಘಾತ; ಗಂಭೀರ ಗಾಯಗೊಂಡಿದ್ದ ಬೈಕ್ ಸವಾರ ಸಾವು

17-voting

Vote: ಮತದಾನದ ಮಹತ್ವ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

siddaramaiah

Bidar; ನೇಹಾ ಪ್ರಕರಣದಲ್ಲಿ ಬಿಜೆಪಿ ರಾಜಕೀಯ‌ ಮಾಡುವುದು ಸರಿಯಲ್ಲ: ಸಿಎಂ ಸಿದ್ಧರಾಮಯ್ಯ‌

Lok Sabha Polls: “ಮೋದಿ ಮತ್ತೂಮ್ಮೆ ಪ್ರಧಾನಿಯಾಗಿಸುವ ಪಣ ತೊಡಿ’ : ಬಿ.ವೈ. ರಾಘವೇಂದ್ರ

Lok Sabha Polls: “ಮೋದಿ ಮತ್ತೊಮ್ಮೆ ಪ್ರಧಾನಿಯಾಗಿಸುವ ಪಣ ತೊಡಿ’ : ಬಿ.ವೈ. ರಾಘವೇಂದ್ರ

Lok Sabha Election: “ಅಭಿವೃದ್ಧಿಯೋ – ಅಕ್ರಮವೋ ಯೋಚಿಸಿ ಮತ ನೀಡಿ’: ಗಾಯತ್ರಿ ಸಿದ್ದೇಶ್ವರ್

Lok Sabha Election: “ಅಭಿವೃದ್ಧಿಯೋ – ಅಕ್ರಮವೋ ಯೋಚಿಸಿ ಮತ ನೀಡಿ’: ಗಾಯತ್ರಿ ಸಿದ್ದೇಶ್ವರ್

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು

Vote: ಉದಾಸೀನ ಮಾಡದಿರಿ, ತಪ್ಪದೇ ಮತ ಹಾಕಿ…

Vote: ಉದಾಸೀನ ಮಾಡದಿರಿ, ತಪ್ಪದೇ ಮತ ಹಾಕಿ…

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-wqqwewqe

BJP; ಖೂಬಾ ಮತ್ತೊಮ್ಮೆ ಸಚಿವರಾಗ್ತಾರೆ : ಔರಾದ್ ನಲ್ಲಿ ಯಡಿಯೂರಪ್ಪ ಘೋಷಣೆ

ಬಾಗಲಕೋಟೆ: ಯಾರೇ ಪಕ್ಷ ಬಿಟ್ಟರೂ ಏನೂ ಆಗಲ್ಲ- ಸಿದ್ದು ಸವದಿ

ಬಾಗಲಕೋಟೆ: ಯಾರೇ ಪಕ್ಷ ಬಿಟ್ಟರೂ ಏನೂ ಆಗಲ್ಲ- ಸಿದ್ದು ಸವದಿ

ಧಾರವಾಡ: “ಶ್ರೀರಾಮ-ಕೃಷ್ಣರ ಜೀವನ ಇಂದಿಗೂ ಆದರ್ಶ’

ಧಾರವಾಡ: “ಶ್ರೀರಾಮ-ಕೃಷ್ಣರ ಜೀವನ ಇಂದಿಗೂ ಆದರ್ಶ’

Kollywood: ಅಜಿತ್‌ ಹುಟ್ಟುಹಬ್ಬಕ್ಕೆ ಸೂಪರ್‌ ಹಿಟ್ ʼಬಿಲ್ಲಾʼ ರೀ ರಿಲೀಸ್; ಫ್ಯಾನ್ಸ್‌ ಖುಷ್

Kollywood: ಅಜಿತ್‌ ಹುಟ್ಟುಹಬ್ಬಕ್ಕೆ ಸೂಪರ್‌ ಹಿಟ್ ʼಬಿಲ್ಲಾʼ ರೀ ರಿಲೀಸ್; ಫ್ಯಾನ್ಸ್‌ ಖುಷ್

Kaup: ಎ.25ರಿಂದ ಕಳತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ, ನಾಗಮಂಡಲ

Kaup: ಎ.25ರಿಂದ ಕಳತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ, ನಾಗಮಂಡಲ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.