ಗೌರಿ ಹತ್ಯೆ: ಕರವೇ ನಾರಾಯಣಗೌಡ, ಜ್ಯೋತಿಷಿ ದ್ವಾರಕನಾಥ್‌ ವಿಚಾರಣೆ


Team Udayavani, Sep 21, 2017, 8:21 AM IST

20-PTI–12.jpg

ಬೆಂಗಳೂರು: ಪತ್ರಕರ್ತೆ ಗೌರಿ ಲಂಕೇಶ್‌ ಹತ್ಯೆ ಪ್ರಕರಣದಲ್ಲಿ ವಿಶೇಷ ತನಿಖಾ ತಂಡ ಬುಧವಾರ ಕರ್ನಾಟಕ ರಕ್ಷಣಾ ವೇದಿಕೆ ಅಧ್ಯಕ್ಷ ಟಿ.ಎ.ನಾರಾಯಣಗೌಡ ಹಾಗೂ ಜ್ಯೋತಿಷಿ ದ್ವಾರಕನಾಥ್‌ ಅವರನ್ನು ಪ್ರತ್ಯೇಕವಾಗಿ ವಿಚಾರಣೆ ನಡೆಸಿ ಹೇಳಿಕೆ ಪಡೆದುಕೊಂಡಿದೆ.

ಲಂಕೇಶ್‌ ಪತ್ರಿಕೆಯಲ್ಲಿ ತಮ್ಮ ವಿರುದ್ಧ ಲೇಖನಗಳು ಪ್ರಕಟಿಸಿದ ಗೌರಿ ಲಂಕೇಶ್‌ ಮೇಲೆ ನ್ಯಾಯಾಲಯಗಳಲ್ಲಿ ಮಾನನಷ್ಟ ಮೊಕದ್ದಮೆಗಳನ್ನು ಹೂಡಿದ್ದವರ ಪಟ್ಟಿಯನ್ನು ಎಸ್‌ಐಟಿ ಸಿದ್ಧಪಡಿಸಿದೆ. ಅಂತಹ ಪ್ರಮುಖರನ್ನು ವಿಚಾರಣೆಗೊಳಪಡಿಸಿ ಹೇಳಿಕೆ ದಾಖಲಿಸಿಕೊಳ್ಳುತ್ತಿದೆ. ಈ ವಿಚಾರಕ್ಕೆ ಸಂಬಂಧಿಸಿದಂತೆ ಗೌರಿ ಲಂಕೇಶ್‌ರೊಂದಿಗೆ ಅಸಮಾಧಾನ ಹೊಂದಿದ್ದ 70ಕ್ಕೂ ಅಧಿಕ ಮಂದಿಯ ಪಟ್ಟಿಯನ್ನು ಸಿದ್ಧಪಡಿಸಿದ್ದು, ಅದ ರಂತೆ ವಿಚಾರಣೆ ನಡೆಸಲಾಗುತ್ತಿದೆ ಎಂದು ಎಸ್‌ಐಟಿ ಉನ್ನತ ಮೂಲಗಳು ತಿಳಿಸಿವೆ.

ಈ ಹಿಂದೆ ಕರವೇ ರಾಜ್ಯಾಧ್ಯಕ್ಷ ನಾರಾಯಣಗೌಡ ವಿರುದ್ಧವೂ ಲಂಕೇಶ್‌ ಪತ್ರಿಕೆಯಲ್ಲಿ ಲೇಖನಗಳು ಪ್ರಕಟಗೊಂಡಿದ್ದವು. ಆದ್ದರಿಂದ ನಾರಾಯಣಗೌಡ 2010ರಲ್ಲಿ ಗೌರಿ ಲಂಕೇಶ್‌ ವಿರುದ್ಧ ಮಾನನಷ್ಟ ಮೊಕದ್ದಮೆ ದಾಖಲಿಸಿದ್ದರು. ಹೀಗಾಗಿ ಅವರನ್ನು ವಿಚಾರಣೆಗೆ ಒಳಪಡಿಸಲಾಗಿದೆ. ಅದರಂತೆ ಜ್ಯೋತಿಷಿ ದ್ವಾರಕನಾಥ್‌ರನ್ನು ಅವರ ನಿವಾಸದಲ್ಲಿ ಎಸ್‌ಐಟಿ ತಂಡ ವಿಚಾರಣೆ ನಡೆಸಿದೆ. ಗೌರಿ ಜತೆಗೆ ವೈರತ್ವ ಹಾಗೂ ಈಚೆಗೆ ಸಂಪರ್ಕ ಹೊಂದಿರುವ ಬಗ್ಗೆ ಹೇಳಿಕೆ ಪಡೆಯಲಾಗಿದೆ ಎಂದು ಅಧಿಕಾರಿಯೊಬ್ಬರು ತಿಳಿಸಿದರು.

ಇದಲ್ಲದೇ, ನಕ್ಸಲೀಯರ ಕೈವಾಡ, ಬಲಪಂಥೀಯರ ಕೈವಾಡ, ವೈಯಕ್ತಿಕ ದ್ವೇಷ, ಫೇಸ್‌ಬುಕ್‌, ಟ್ವಿಟರ್‌ ಬರಹಗಳು ಸೇರಿದಂತೆ ಹಲವು ಆಯಾಮಗಳನ್ನು ಇಟ್ಟುಕೊಂಡು ತನಿಖೆ ನಡೆಸಲಾಗುತ್ತಿದೆ. ಹೀಗಾಗಿಯೇ ಅಗತ್ಯವಿದ್ದವರಿಗೆ ನೋಟಿಸ್‌ ಕೊಟ್ಟು ವಿಚಾರಣೆ ನಡೆಸಲಾಗುತ್ತಿದೆ. ಹತ್ಯೆಗೆ ಸಂಬಂಧಪಟ್ಟಂತೆ ಕೆಲವು ಮಾಹಿತಿಗಳು ಲಭ್ಯವಾಗಿದ್ದು, ತನಿಖೆ ಮುಂದುವರಿಸಲಾಗಿದೆ ಎಂದು ಅಧಿಕಾರಿ ತಿಳಿಸಿದರು.

ಗೌರಿ ಲಂಕೇಶ್‌ ಹತ್ಯೆ ಪ್ರಕರಣದಲ್ಲಿ ಎಸ್‌ಐಟಿ ಅಧಿಕಾರಿಗಳು ನನ್ನ ಕಚೇರಿಗೆ ಬಂದು ಹೇಳಿಕೆ ಪಡೆದಿದ್ದಾರೆ. ಸಂಘಟನೆ ಹಾಗೂ ನನ್ನ ವಿರುದ್ಧ ಲೇಖನಗಳನ್ನು ಬರೆದಿದ್ದರಿಂದ ಮಾನನಷ್ಟ ಮೊಕದ್ದಮೆ ದಾಖಲಿಸಿದ್ದೆ. ಆದರೆ, ನಂತರ ಮುಂದುವರಿಸಿಸಿಲ್ಲ. ಅವರ
ಪಾಡಿಗೆ ಅವರಿದ್ದರು, ನಮ್ಮ ಪಾಡಿಗೆ ನಾವಿದ್ದೆವು. ಈ ಪ್ರಕರಣಕ್ಕೂ ನಮಗೂ ಯಾವುದೇ ಸಂಬಂಧವಿಲ್ಲ ಎಂದು ಹೇಳಿಕೆ ನೀಡಿದ್ದೇನೆ.
●ಟಿ.ಎ.ನಾರಾಯಣಗೌಡ, ಕರವೇ ರಾಜ್ಯಾಧ್ಯಕ್ಷ

ಟಾಪ್ ನ್ಯೂಸ್

cbsc

CBSE ವರ್ಷಕ್ಕೆ 2 ಬಾರಿ ಪರೀಕ್ಷೆ:ರೂಪರೇಖೆಗೆ ಸೂಚನೆ

indi-1

Airbus; 30 ಏರ್‌ಬಸ್‌ ವಿಮಾನ ಖರೀದಿಗೆ ಮುಂದಾದ ಇಂಡಿಗೋ ಕಂಪೆನಿ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

1-weqwwqewq

ಬಾಂದ್ರಾ- ವರ್ಲಿ ಸೀ ಲಿಂಕ್‌ಗೆ 25,000 ಟನ್‌ ಗರ್ಡರ್‌ ಅಳವಡಿಕೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

Dakshina Kannada ಅಭ್ಯರ್ಥಿಗಳ ದಿನಚರಿ

Dakshina Kannada ಅಭ್ಯರ್ಥಿಗಳ ದಿನಚರಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Lok Sabha Election ಮುಗಿದ ಮತದಾನ, ಈಗ ಸೋಲು-ಗೆಲುವಿನ ಲೆಕ್ಕಾಚಾರ

Lok Sabha Election ಮುಗಿದ ಮತದಾನ, ಈಗ ಸೋಲು-ಗೆಲುವಿನ ಲೆಕ್ಕಾಚಾರ

ಕೆಲವೆಡೆ ಹಿಂಸಾಚಾರ, ಕೈ ಕೊಟ್ಟ ಮತಯಂತ್ರ; ಬಿಸಿಲಿನಿಂದ ತಡವಾಗಿ ಬಂದ ಮತದಾರರು

ಕೆಲವೆಡೆ ಹಿಂಸಾಚಾರ, ಕೈ ಕೊಟ್ಟ ಮತಯಂತ್ರ; ಬಿಸಿಲಿನಿಂದ ತಡವಾಗಿ ಬಂದ ಮತದಾರರು

Lok Sabha Election; ಮತದಾನ ಮಾಡಿದ ಬಳಿಕ 7 ಮಂದಿ ಸಾವು

Lok Sabha Election; ಮತದಾನ ಮಾಡಿದ ಬಳಿಕ 7 ಮಂದಿ ಸಾವು

1-wqeqqwe

Vote; ಕರ್ನಾಟಕ ಮೊದಲ ಹಂತ: ಶೇಕಡಾವಾರು ಮತದಾನದ ವಿವರ

shettar

Minority ತುಷ್ಟೀಕರಣದಿಂದ ನೇಹಾಳ ಹತ್ಯೆಯಾಗಿದೆ :ಜಗದೀಶ್ ಶೆಟ್ಟರ್

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

cbsc

CBSE ವರ್ಷಕ್ಕೆ 2 ಬಾರಿ ಪರೀಕ್ಷೆ:ರೂಪರೇಖೆಗೆ ಸೂಚನೆ

indi-1

Airbus; 30 ಏರ್‌ಬಸ್‌ ವಿಮಾನ ಖರೀದಿಗೆ ಮುಂದಾದ ಇಂಡಿಗೋ ಕಂಪೆನಿ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

1-weqwwqewq

ಬಾಂದ್ರಾ- ವರ್ಲಿ ಸೀ ಲಿಂಕ್‌ಗೆ 25,000 ಟನ್‌ ಗರ್ಡರ್‌ ಅಳವಡಿಕೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.