ಗೋಕಾಕ್: ಶ್ರೀರಾಮ ಸೇನೆ ಕಾರ್ಯಕರ್ತನ ಹತ್ಯೆ
Team Udayavani, Sep 25, 2017, 9:30 AM IST
ಬೆಳಗಾವಿ: ಶ್ರೀರಾಮ ಸೇನೆ ಕಾರ್ಯಕರ್ತನೊಬ್ಬನನ್ನು ಇರಿದು ಕೊಲೆ ಮಾಡಿದ ಘಟನೆ ನಗರದಲ್ಲಿ ಭಾನುವಾರ ತಡರಾತ್ರಿ ನಡೆದಿದೆ ಎಂದು ಮಾಧ್ಯಮ ವರದಿ ತಿಳಿಸಿದೆ.
ರೋಹಿತ್ ರಾಜು ಪಾಟೀಲ(26) ಹತ್ಯೆಯಾದ ಯುವಕ. ಬೈಕ್ನಲ್ಲಿ ಬಂದಿದ್ದ ದುಷ್ಕರ್ಮಿಗಳು ನಗರದ ಅಪ್ಸರಾ ಕೂಟದ ಸರ್ಕಲ್ ಬಳಿ ಯುವಕನನ್ನು ತಡೆದು ಕಣ್ಣಿಗೆ ಖಾರದ ಪುಡಿ ಎರಚಿ ಚಾಕುವಿನಿಂದ ತಿವಿದಿದ್ದಾರೆ ಎಂದು ತಿಳಿದು ಬಂದಿದೆ.
ಗೋಕಾಕ್ ಟೌನ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.