“ಸ್ವತಂತ್ರ ಧರ್ಮ ಆಗೋವರೆಗೂ ವಿಶ್ರಮಿಸಲ್ಲ’


Team Udayavani, Sep 25, 2017, 9:46 AM IST

25-STATE-9.jpg

ಕಲಬುರಗಿ (ಡಾ|ಎಂ.ಎಂ. ಕಲಬುರ್ಗಿ ವೇದಿಕೆ): “ಲಿಂಗಾಯತ ಧರ್ಮಕ್ಕೆ ಸ್ವತಂತ್ರ ಧರ್ಮದ ಮಾನ್ಯತೆ ಸಿಗುವವರೆಗೂ ವಿಶ್ರಮಿಸುವುದಿಲ್ಲ’ ಎಂದು ನಗರದಲ್ಲಿ ಭಾನುವಾರ ನಡೆದ ಲಿಂಗಾಯತ ಮಹಾರ್ಯಾಲಿ-ಮಹಾ ಸಮಾವೇಶದಲ್ಲಿ ಲಿಂಗಾಯತ ಸಮನ್ವಯ ಸಮಿತಿ ಸಂಘಟಕರು, ನಾಡಿನ ವಿವಿಧ ಮಠಾಧೀಶರು, ಸಚಿವರು-ಶಾಸಕರು ಒಕ್ಕೊರಲದ ಘೋಷಣೆ ಮಾಡಿದರು.

ನಗರದ ನೂತನ ಮಹಾವಿದ್ಯಾಲಯದಲ್ಲಿ ಆಯೋಜಿಸಲಾಗಿದ್ದ ಮಹಾರ್ಯಾಲಿ ಸಮಾವೇಶದಲ್ಲಿ ಪಾಲ್ಗೊಂಡಿದ್ದ ಜನಸಾಗರ ನಡುವೆ ಈ ಘೋಷಣೆ ಮಾಡಿ, ಮುಂದಿನ ದಿನಗಳಲ್ಲಿ ರಾಜ್ಯ ರಾಜಧಾನಿ ಸೇರಿ ಇತರೆಡೆ ಹೋರಾಟದ ರ್ಯಾಲಿಗಳನ್ನು ಹಿಂದೆಂದಿಗಿಂತಲೂ ಯಶಸ್ವಿ ಯಾಗಿ ಸಂಘಟಿಸಲಾಗುವುದು. ಸುಪ್ರೀಂ ಕೋರ್ಟ್‌ ಮೆಟ್ಟಿಲೇರಿಯಾದರೂ ಸ್ವತಂತ್ರ ಧರ್ಮದ ಮಾನ್ಯತೆ ಪಡೆಯಲಾಗುವುದು ಎಂದು ಪ್ರಕಟಿಸಿದರು. ಬಸವಣ್ಣನವರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮೂಲಕ ಮಹಾರ್ಯಾಲಿ ಉದ್ಘಾಟಿಸಿದ ಸಚಿವ ಎಂ.ಬಿ.ಪಾಟೀಲ ಮಾತನಾಡಿ, “12ನೇ ಶತಮಾನದ ಬಸವಣ್ಣನವರ ಕಲ್ಯಾಣ ಕ್ರಾಂತಿ ಈಗ ಪುನರಾವರ್ತನೆ ಮೂಲಕ ಸ್ವತಂತ್ರ ಧರ್ಮ ಪಡೆಯಬೇಕಾಗಿದೆ. ಹೀಗಾಗಿಯೇ ಸೆ.28ರಂದು ಚಿತ್ರದುರ್ಗದಲ್ಲಿ, ನವೆಂಬರ್‌ 5ರಂದು ಹುಬ್ಬಳ್ಳಿಯ ನೆಹರು ಮೈದಾನದಲ್ಲಿ, ನ.19ರಂದು ವಿಜಯಪುರದಲ್ಲಿ ಲಿಂಗಾಯತ ಮಹಾರ್ಯಾಲಿ ಆಯೋಜಿಸಲು ನಿರ್ಧರಿಸಲಾಗಿದೆ. ಕೊನೆಯ ದಾಗಿ ಡಿ. 10ರಂದು ಬೆಂಗಳೂರಿನಲ್ಲಿ ರಾಷ್ಟ್ರೀಯ ಮಹಾರ್ಯಾಲಿ ಆಯೋಜಿಸಿ 20ರಿಂದ 25 ಲಕ್ಷ ಜನರನ್ನು ಸೇರಿಸುವ ಮೂಲಕ ರಾಜ್ಯದಲ್ಲಿ
ಹಿಂದೆಂದೂ ಆಗದ ಐತಿಹಾಸಿಕ ಮಹಾರ್ಯಾಲಿ ನಡೆಸಿ ಬಸವ ಶಕ್ತಿ ಪ್ರದರ್ಶನ ತೋರಿಸಲಾಗುವುದು’ ಎಂದು ಹೇಳಿದರು.

ರಾಷ್ಟ್ರೀಯ ಬಸವ ಸೇನಾ ಅಸ್ತಿತ್ವಕ್ಕೆ: ಧರ್ಮದ ರಕ್ಷಣೆ ಹಾಗೂ ಸಮಾಜದಲ್ಲಿನ ಅನ್ಯಾಯ ತಡೆಗಟ್ಟಲು ರಾಷ್ಟ್ರೀಯ ಬಸವ ಸೇನಾ ಅಸ್ತಿತ್ವಕ್ಕೆ ತರಲಾಗಿದ್ದು, ಗಣಿ ಮತ್ತು ಭೂ ವಿಜ್ಞಾನ ಖಾತೆ ಸಚಿವ ವಿನಯ ಕುಲಕರ್ಣಿ ಅವರೇ ಸೇನಾದ ರಾಷ್ಟ್ರೀಯ ಅಧ್ಯಕ್ಷರು ಎಂದು ಸಚಿವ ಎಂ.ಬಿ. ಪಾಟೀಲ ಘೋಷಿಸಿದರು. “ಕಣ್ಣಿನಿಂದ ಕಂಡಿದ್ದು, ಕಿವಿಯಿಂದ ಕೇಳಿದ್ದನ್ನು ಸತ್ಯದಿಂದಲೇ ಹೇಳಿದ್ದೇನೆ’ ಎಂದು ಪುನರು ಚ್ಚರಿಸಿದ ಸಚಿವ ಪಾಟೀಲ, “ಕೆಲವರು ಷಡ್ಯಂತ್ರ ರೂಪಿಸಿದರು. ಆದರೆ ಒಟ್ಟಾರೆ ಈ ಪ್ರಕರಣಕ್ಕೆ ವಿರಾಮ ಹಾಕಿರುವುದಾಗಿ’ ಹೇಳಿದರು.

ಶರಣಬಸವೇಶ್ವರ ಮಹಾದಾಸೋಹಿ ಸಂಸ್ಥಾನದ ಪೀಠಾಧಿಪತಿ ಡಾ| ಶರಣಬಸವಪ್ಪ ಅಪ್ಪ, ಗದಗ ತೋಂಟದಾರ್ಯ ಮಠದ ಡಾ| ಸಿದ್ದಲಿಂಗ ಸ್ವಾಮಿಗಳು, ಚಿತ್ರದುರ್ಗ ಮುರುಘಾ ಮಠದ ಶಿವಮೂರ್ತಿ ಮುರುಘಾ ಶರಣರು, ಸಚಿವ ಬಸವರಾಜ ರಾಯರಡ್ಡಿ ಸೇರಿ ಇತರರು ಮಾತನಾಡಿದರು. ಶಾಸಕ ಬಿ.ಆರ್‌. ಪಾಟೀಲ ಸ್ವಾಗತಿಸಿದರು. ಸಚಿವ ಡಾ| ಶರಣಪ್ರಕಾಶ ಪಾಟೀಲ ಪ್ರಾಸ್ತಾವಿಕ ಮಾತನಾಡಿದರು. ನಿವೃತ್ತ ಐಎಎಸ್‌ ಅಧಿಕಾರಿ ಡಾ| ಶಿವಾನಂದ ಜಾಮದಾರ ವಿಷಯ ಮಂಡಿಸಿದರು. ಕೂಡಲಸಂಗಮ ಪಂಚಮಸಾಲಿ ಪೀಠದ ಜಗದ್ಗುರು ಬಸವಜಯ ಮೃತ್ಯುಂಜಯ ಸ್ವಾಮಿಗಳು, ಭಾಲ್ಕಿ ಚನ್ನಬಸವ ಪಟ್ಟದ್ದೇವರು, ಬೀದರನ ಅಕ್ಕ ಅನ್ನಪೂರ್ಣ, ನಗನೂರಿನ ಸಿದ್ಧರಾಮ ಶಿವಯೋಗಿಗಳು, ಮಹಾರಾಷ್ಟ್ರದ ಶಿವಲಿಂಗ ಶಿವಾಚಾರ್ಯರು, ಶ್ರೀಶೈಲಂ ಸಾರಂಗಮಠದ ಡಾ| ಸಾರಂಗಧರ ದೇಶಿಕೇಂದ್ರ ಸ್ವಾಮಿಗಳು, ಬೆಲ್ದಾಳದ ಸಿದ್ಧರಾಮ ಶರಣರು, ನಿಜಗುಣಾನಂದ ಸ್ವಾಮಿಗಳು, ಬಸವ ಸಮಿತಿ ಅಧ್ಯಕ್ಷ ಅರವಿಂದ ಜತ್ತಿ, ಶಾಸಕ ಡಾ|ಎ.ಬಿ.ಮಲಕರೆಡ್ಡಿ ಇದ್ದರು. 

ಇನ್ಮುಂದೆ ವಚನದೀಪ್ತಿ ಪ್ರಕಟಿಸಲ್ಲ
ವಚನದೀಪ್ತಿ ಕೃತಿ ಮೂಲಕ ಬಸವಣ್ಣನವರ ವಚನಾಂಕಿತ ಬದಲಾವಣೆ ಮಾಡಿ ಸಮಾಜದ ಕೆಂಗಣ್ಣಿಗೆ ಗುರಿಯಾಗಿದ್ದ ಬಸವ ಧರ್ಮ ಪೀಠಾಧ್ಯಕ್ಷೆ ಮಾತೆ ಮಹಾದೇವಿ, ಕೃತಿ ನಿಷೇಧ ಕುರಿತು ಸುಪ್ರೀಂಕೋರ್ಟ್‌ ನೀಡಿರುವ ತೀರ್ಪು ಸ್ವಾಗತಿಸಿದರಲ್ಲದೇ “ಕೃತಿ ಮರು ಪ್ರಕಟಿಸುವುದಿಲ್ಲ’ ಎಂದು ಮಹಾರ್ಯಾಲಿಯಲ್ಲಿ ಘೋಷಿಸಿದರು. ಬಸವಣ್ಣನವರನ್ನು ಅಣ್ಣ ಎನ್ನದೇ ಅಪ್ಪ ಎಂದು ಕರೆಯುವಂತೆ ಹೇಳಿದ ಮಾತೆ ಮಹಾದೇವಿ, ಅಣ್ಣ ಎಂದರೆ ಅಪ್ಪ ಯಾರು ಎಂಬ ಪ್ರಶ್ನೆ ಎದುರಾಗುತ್ತದೆ. ಬಸವಣ್ಣನವರೇ ಲಿಂಗಾಯತ ಧರ್ಮದ ಸ್ಥಾಪಕರಾಗಿದ್ದರಿಂದ ಅಪ್ಪ ಎಂದು ಕರೆಯುವಂತೆ ಹೇಳಿದರು.

ಸಮನ್ವಯ ಸಮಿತಿ ರಚನೆಯಾಗಿಲ್ಲ 
ಸಮಾವೇಶದ ಅಧ್ಯಕ್ಷತೆ ವಹಿಸಿದ್ದ ವಿಧಾನ ಪರಿಷತ್‌ ಸದಸ್ಯ ಬಸವ ರಾಜ ಹೊರಟ್ಟಿ ಮಾತನಾಡಿ, ವೀರಶೈವ ಹಾಗೂ ಲಿಂಗಾಯತ ನಡುವೆ ಸಮನ್ವಯ ತರುವ ನಿಟ್ಟಿನಲ್ಲಿ ಇಲ್ಲಿಯವರೆಗೆ ಯಾವುದೇ ಸಮಿತಿ ರಚನೆಯಾಗಿಲ್ಲ. ಸಮಿತಿ ರಚನೆಯಿಂದ ಏನೂ ಆಗುವುದಿಲ್ಲ. ವೀರಶೈವ ಬಿಟ್ಟು ಬಂದರೆ ಮಾತ್ರ ಒಮ್ಮತವಾಗುತ್ತದೆ. ಎಲ್ಲ ಕ್ಕಿಂತ ಮುಖ್ಯವಾಗಿ ಇಲ್ಲ-ಸಲ್ಲದ್ದನ್ನು ಮುಂದೆ ಮಾಡಿ ಬಸವಣ್ಣನ ವಿಷಯಕ್ಕೆ ಬಂದರೆ ನೆಟ್ಟಗಿರುವುದಿಲ್ಲ ಎಂದು ಹೇಳಿದರು.

ಲಿಂಗಾಯತ ಸಮುದಾಯದ ರ್ಯಾಲಿಗೂ, ಸರ್ಕಾರಕ್ಕೂ ಯಾವುದೇ ಸಂಬಂಧವಿಲ್ಲ. ಸಚಿವರು ಲಿಂಗಾಯತ ರ್ಯಾಲಿಯಲ್ಲಿ ಭಾಗಿಯಾಗುವುದು ಅವರ ವೈಯಕ್ತಿಕ ವಿಚಾರ.
ಸಿದ್ದರಾಮಯ್ಯ, ಮುಖ್ಯಮಂತ್ರಿ

ಟಾಪ್ ನ್ಯೂಸ್

OTT: ಸದ್ದಿಲ್ಲದೆ ಓಟಿಟಿಗೆ ಬಂತು ʼಒಂದು ಸರಳ ಪ್ರೇಮಕಥೆ’: ಯಾವುದರಲ್ಲಿ ಸ್ಟ್ರೀಮಿಂಗ್?‌

OTT: ಸದ್ದಿಲ್ಲದೆ ಓಟಿಟಿಗೆ ಬಂತು ʼಒಂದು ಸರಳ ಪ್ರೇಮಕಥೆ’: ಯಾವುದರಲ್ಲಿ ಸ್ಟ್ರೀಮಿಂಗ್?‌

Lok Sabha 2024: ಮೇಘಾಲಯದಲ್ಲಿ ಯಾವಾಗ ಜಾನ್‌ ಎಫ್‌ ಕೆನಡಿ ಹಿಟ್ಲರ್‌ ನನ್ನು ಬಂಧಿಸಿದ್ದು!

Lok Sabha 2024: ಮೇಘಾಲಯದಲ್ಲಿ ಯಾವಾಗ ಜಾನ್‌ ಎಫ್‌ ಕೆನಡಿ ಹಿಟ್ಲರ್‌ ನನ್ನು ಬಂಧಿಸಿದ್ದು!

17

ನಿರ್ಮಾಪಕನಾದ ರಾಜಮೌಳಿ ಪುತ್ರ: ಎರಡು ಹೊಸ ಸಿನಿಮಾ ಅನೌನ್ಸ್; ಲೀಡ್‌ ರೋಲ್ ನಲ್ಲಿ ಫಾಫಾ

ಕಾಂಗ್ರೆಸ್ ಸರಕಾರ ಬಂದಾಗಿನಿಂದ ರಾಜ್ಯದಲ್ಲಿ ಹಿಂದೂಗಳಿಗೆ ರಕ್ಷಣೆಯೇ ಇಲ್ಲದಾಗಿದೆ: ಜೋಶಿ

ಕಾಂಗ್ರೆಸ್ ಸರಕಾರ ಬಂದಾಗಿನಿಂದ ರಾಜ್ಯದಲ್ಲಿ ಹಿಂದೂಗಳಿಗೆ ರಕ್ಷಣೆಯೇ ಇಲ್ಲದಾಗಿದೆ: ಜೋಶಿ

Apex

CAA: ದೇಶದಲ್ಲಿ ಸಿಎಎ ಜಾರಿಗೆ ತಡೆ ನೀಡಲ್ಲ, 3 ವಾರದೊಳಗೆ ಉತ್ತರ ನೀಡಿ: ಸುಪ್ರೀಂಕೋರ್ಟ್

ವಸಂತ ಕಾಲ ಬಂದಾಗ…ತಾಪಮಾನ ಏರಿಕೆ- ಭಾರತದಲ್ಲಿ ವಸಂತ ಋತು ಕಣ್ಮರೆ!

ವಸಂತ ಕಾಲ ಬಂದಾಗ…ತಾಪಮಾನ ಏರಿಕೆ- ಭಾರತದಲ್ಲಿ ವಸಂತ ಋತು ಕಣ್ಮರೆ!

Pan India: ಯಶ್‌ ʼಟಾಕ್ಸಿಕ್‌ʼ ಸಿನಿಮಾದ ಪ್ರಮುಖ ಪಾತ್ರದಲ್ಲಿ ಶ್ರುತಿ ಹಾಸನ್ ನಟನೆ – ವರದಿ

Pan India: ಯಶ್‌ ʼಟಾಕ್ಸಿಕ್‌ʼ ಸಿನಿಮಾದ ಪ್ರಮುಖ ಪಾತ್ರದಲ್ಲಿ ಶ್ರುತಿ ಹಾಸನ್ ನಟನೆ – ವರದಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಕಾಂಗ್ರೆಸ್ ಸರಕಾರ ಬಂದಾಗಿನಿಂದ ರಾಜ್ಯದಲ್ಲಿ ಹಿಂದೂಗಳಿಗೆ ರಕ್ಷಣೆಯೇ ಇಲ್ಲದಾಗಿದೆ: ಜೋಶಿ

ಕಾಂಗ್ರೆಸ್ ಸರಕಾರ ಬಂದಾಗಿನಿಂದ ರಾಜ್ಯದಲ್ಲಿ ಹಿಂದೂಗಳಿಗೆ ರಕ್ಷಣೆಯೇ ಇಲ್ಲದಾಗಿದೆ: ಜೋಶಿ

ಪೊಲೀಸರ ಭರ್ಜರಿ ಕಾರ್ಯಾಚರಣೆ: ದಾಖಲೆ ಇಲ್ಲದೇ ಕಾರಿನಲ್ಲಿ ಸಾಗಿಸುತ್ತಿದ್ದ 2.93 ಕೋಟಿ ಜಪ್ತಿ

ಪೊಲೀಸರ ಭರ್ಜರಿ ಕಾರ್ಯಾಚರಣೆ: ದಾಖಲೆ ಇಲ್ಲದೇ ಕಾರಿನಲ್ಲಿ ಸಾಗಿಸುತ್ತಿದ್ದ 2.93 ಕೋಟಿ ಜಪ್ತಿ

Bengaluru:ನಗರ್ತಪೇಟೆಯಲ್ಲಿ ಬಿಜೆಪಿ ಪ್ರತಿಭಟನೆಯ ಕಿಚ್ಚು; ಕ್ರಮದ ಭರವಸೆ, ಪ್ರತಿಭಟನೆ ವಾಪಸ್

Bengaluru:ನಗರ್ತಪೇಟೆಯಲ್ಲಿ ಬಿಜೆಪಿ ಪ್ರತಿಭಟನೆಯ ಕಿಚ್ಚು; ಕ್ರಮದ ಭರವಸೆ, ಪ್ರತಿಭಟನೆ ವಾಪಸ್

vijayapura

ಅನೈತಿಕ ಸಂಬಂಧ: ಜೋಡಿ ಹತ್ಯೆಗೈದು ಮೈಮೇಲೆ ಮುಳ್ಳುಕಂಟಿ ಹಾಕಿಹೋದ ಹಂತಕರು

ಯಾರಾಗಲಿದ್ದಾರೆ ಬೆಳಗಾವಿ ಕ್ಷೇತ್ರದ ಬಿಜೆಪಿ ಅಭ್ಯರ್ಥಿ: ಶೆಟ್ಟರ್ ಸ್ಪರ್ಧೆಗೆ ಭಾರಿ ವಿರೋಧ…

ಯಾರಾಗಲಿದ್ದಾರೆ ಬೆಳಗಾವಿ ಕ್ಷೇತ್ರದ ಬಿಜೆಪಿ ಅಭ್ಯರ್ಥಿ: ಶೆಟ್ಟರ್ ಸ್ಪರ್ಧೆಗೆ ಭಾರಿ ವಿರೋಧ…

MUST WATCH

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

udayavani youtube

ಇಲ್ಲಿ ಗ್ರಾಹಕರನ್ನ ನೋಡಿಕೊಳ್ಳುವ ರೀತಿಗೆ ಎಂಥಹವರೂ ಫಿದಾ ಆಗ್ತಾರೆ

udayavani youtube

ಶ್ರೀ ಪಣಿಯಾಡಿ ಅನಂತಪದ್ಮನಾಭ ದೇವಸ್ಥಾನ,ಪಣಿಯಾಡಿ|

udayavani youtube

Rameshwaram Cafe: ಹೇಗಾಯ್ತು ಸ್ಫೋಟ? ಭಯಾನಕ ಸಿಸಿಟಿವಿ ದೃಶ್ಯ ನೋಡಿ

udayavani youtube

ಅಯೋಧ್ಯೆ ಶ್ರೀ ರಾಮನ ಸೇವೆಯಲ್ಲಿ ಉಡುಪಿಯ ಬೆಳ್ಕಳೆ ಚಂಡೆ ಬಳಗ

ಹೊಸ ಸೇರ್ಪಡೆ

OTT: ಸದ್ದಿಲ್ಲದೆ ಓಟಿಟಿಗೆ ಬಂತು ʼಒಂದು ಸರಳ ಪ್ರೇಮಕಥೆ’: ಯಾವುದರಲ್ಲಿ ಸ್ಟ್ರೀಮಿಂಗ್?‌

OTT: ಸದ್ದಿಲ್ಲದೆ ಓಟಿಟಿಗೆ ಬಂತು ʼಒಂದು ಸರಳ ಪ್ರೇಮಕಥೆ’: ಯಾವುದರಲ್ಲಿ ಸ್ಟ್ರೀಮಿಂಗ್?‌

Lok Sabha 2024: ಮೇಘಾಲಯದಲ್ಲಿ ಯಾವಾಗ ಜಾನ್‌ ಎಫ್‌ ಕೆನಡಿ ಹಿಟ್ಲರ್‌ ನನ್ನು ಬಂಧಿಸಿದ್ದು!

Lok Sabha 2024: ಮೇಘಾಲಯದಲ್ಲಿ ಯಾವಾಗ ಜಾನ್‌ ಎಫ್‌ ಕೆನಡಿ ಹಿಟ್ಲರ್‌ ನನ್ನು ಬಂಧಿಸಿದ್ದು!

17

ನಿರ್ಮಾಪಕನಾದ ರಾಜಮೌಳಿ ಪುತ್ರ: ಎರಡು ಹೊಸ ಸಿನಿಮಾ ಅನೌನ್ಸ್; ಲೀಡ್‌ ರೋಲ್ ನಲ್ಲಿ ಫಾಫಾ

ಕಾಂಗ್ರೆಸ್ ಸರಕಾರ ಬಂದಾಗಿನಿಂದ ರಾಜ್ಯದಲ್ಲಿ ಹಿಂದೂಗಳಿಗೆ ರಕ್ಷಣೆಯೇ ಇಲ್ಲದಾಗಿದೆ: ಜೋಶಿ

ಕಾಂಗ್ರೆಸ್ ಸರಕಾರ ಬಂದಾಗಿನಿಂದ ರಾಜ್ಯದಲ್ಲಿ ಹಿಂದೂಗಳಿಗೆ ರಕ್ಷಣೆಯೇ ಇಲ್ಲದಾಗಿದೆ: ಜೋಶಿ

12-malpe

Malpe: ಶ್ರೀ ವಡಭಾಂಡ ಬಲರಾಮ ದೇವಸ್ಥಾನ: ತೋರಣ ಮುಹೂರ್ತ, ಉಗ್ರಾಣ ಮುಹೂರ್ತ ಸಂಪನ್ನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.