ಮಂಗ್ಳೂರಲ್ಲಿ ಶಾ ನೇತೃತ್ವದಲ್ಲಿಬಿಜೆಪಿ ಪಾದಯಾತ್ರೆ?
Team Udayavani, Sep 26, 2017, 7:32 AM IST
ಬೆಂಗಳೂರು: ರಾಜ್ಯ ಬಿಜೆಪಿ ಇತ್ತೀಚೆಗೆ ಹಮ್ಮಿಕೊಂಡಿದ್ದ ಬೈಕ್ ರ್ಯಾಲಿ ಬೆನ್ನಲ್ಲೇ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ಅವರ ನೇತೃತ್ವದಲ್ಲಿ ಮಂಗಳೂರಿನಲ್ಲಿ ಪಾದಯಾತ್ರೆ ಆಯೋಜಿಸಲು ಪಕ್ಷ ಗಂಭೀರ ಚಿಂತನೆ ನಡೆಸುತ್ತಿದೆ.
ಹಿಂದು ಕಾರ್ಯಕರ್ತರ ಹತ್ಯೆ ಖಂಡಿಸಿ ಬಿಜೆಪಿಯಿಂದ ಮಂಗಳೂರು ಚಲೋ ಬೈಕ್ ರ್ಯಾಲಿ ಹಮ್ಮಿಕೊಳ್ಳಲಾಗಿತ್ತು. ರಾಜ್ಯ ಸರ್ಕಾರ ಬೈಕ್ ರ್ಯಾಲಿಗೆ ಅವಕಾಶ ನೀಡಿಲ್ಲವಾದ್ದರಿಂದ ಸಾರ್ವಜನಿಕವಾಗಿ ಸಭೆ ನಡೆಸಲಷ್ಟೇ ಸಾಧ್ಯವಾಗಿತ್ತು. ಈಗ ರಾಷ್ಟ್ರೀಯ ಅಧ್ಯಕ್ಷರ ಮುಂದಾಳತ್ವದಲ್ಲಿ ಮಂಗಳೂರಿನಲ್ಲಿ ಪಾದಯಾತ್ರೆ ನಡೆಸಲು ದೆಹಲಿಯಲ್ಲಿ ನಡೆದ ಕೋರ್ ಕಮಿಟಿ ಸಭೆಯಲ್ಲಿ ಚರ್ಚೆ ನಡೆದಿದೆ.
ಅಮಿತ್ ಶಾ ಮೂಲಕ ಮಂಗಳೂರಿನಲ್ಲಿ ಪಾದಯಾತ್ರೆ ನಡೆಸಲು ಬೇಕಾದ ಸಿದ್ಧತೆ ಮಾಡಿಕೊಂಡರೆ, ಅಮಿತ್ ಶಾ ಅವರನ್ನು ಪಾದಯಾತ್ರೆಗೆ ಒಪ್ಪಿಸುವ ಕಾರ್ಯವನ್ನು ಮಾಡುವುದಾಗಿ ರಾಜ್ಯ ಬಿಜೆಪಿ ಚುನಾವಣಾ ಉಸ್ತುವಾರಿ ಕೇಂದ್ರ ಸಚಿವ ಪ್ರಕಾಶ್ ಜಾವಡೇಕರ್ ಭರವಸೆ ನೀಡಿದ್ದಾರೆ ಎಂದು ತಿಳಿದು ಬಂದಿದೆ.
ಅಮಿತ್ ಶಾ ಅವರು ಅಕ್ಟೋಬರ್ 3, 4 ಮತ್ತು 5ರಂದು ಕೇರಳ ಪ್ರವಾಸ ಕೈಗೊಳ್ಳಲಿದ್ದಾರೆ. ಕೇರಳದಲ್ಲಿ ಹಿಂದು ಕಾರ್ಯಕರ್ತರ ಹತ್ಯೆ ಖಂಡಿಸಿ ಪಾದಯಾತ್ರೆ ನಡೆಸಲಿದ್ದಾರೆ. ಮಂಗಳೂರು ಮಾರ್ಗವಾಗಿ ಕೇರಳಕ್ಕೆ ತೆರಳುವುದರಿಂದ ಮಂಗಳೂರಿನಲ್ಲೂ ಇದೇ ವಿಚಾರವಾಗಿ ಪಾದಯಾತ್ರೆ ನಡೆಸಲು ರಾಜ್ಯ ಬಿಜೆಪಿ ಮುಖಂಡರು ಯೋಜನೆ ಹಾಕಿಕೊಂಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Transfer order: ರಾಜ್ಯದ 388 ನ್ಯಾಯಾಧೀಶರ ವರ್ಗಾವಣೆ ಮಾಡಿ ಆದೇಶ
PM ಮೋದಿಯವರಿಂದ ಏ.28 ಮತ್ತು 29 ರಂದು 5 ಕಡೆ ಪ್ರಚಾರ: ವಿಜಯೇಂದ್ರ ಮಾಹಿತಿ
Bellary; ಲೋಕಾಯುಕ್ತ ಬಲೆಗೆ ಬಿದ್ದ 6 ಮಂದಿ ಭ್ರಷ್ಟ ಅಧಿಕಾರಿಗಳು: ಲಕ್ಷ ಲಕ್ಷ ರೂ. ಲಂಚ!
Bidar; ನೇಹಾ ಪ್ರಕರಣದಲ್ಲಿ ಬಿಜೆಪಿ ರಾಜಕೀಯ ಮಾಡುವುದು ಸರಿಯಲ್ಲ: ಸಿಎಂ ಸಿದ್ಧರಾಮಯ್ಯ
Lok Sabha Polls: “ಮೋದಿ ಮತ್ತೊಮ್ಮೆ ಪ್ರಧಾನಿಯಾಗಿಸುವ ಪಣ ತೊಡಿ’ : ಬಿ.ವೈ. ರಾಘವೇಂದ್ರ