ಚಾಮುಂಡೇಶ್ವರಿಗೆ ಬೆಳ್ಳಿ ಆನೆನೀಡಿ ಹರಕೆ ತೀರಿಸಿದ ಡಿಕೆಶಿ
Team Udayavani, Sep 26, 2017, 8:17 AM IST
ಮೈಸೂರು: ಶರನ್ನವರಾತ್ರಿ ಹಿನ್ನೆಲೆಯಲ್ಲಿ ಇಂಧನ ಸಚಿವ ಡಿ.ಕೆ.ಶಿವಕುಮಾರ್ ಸೋಮವಾರ ಕುಟುಂಬ ಸಮೇತರಾಗಿ ಚಾಮುಂಡಿಬೆಟ್ಟಕ್ಕೆ ಆಗಮಿಸಿ ಚಾಮುಂಡೇಶ್ವರಿ ದೇವಿಗೆ ವಿಶೇಷ ಪೂಜೆ ಸಲ್ಲಿಸಿ ಹರಕೆ ತೀರಿಸಿದರು.
ತಲಾ 15 ಕೆ.ಜಿ. ತೂಕದ ಎರಡು ಬೆಳ್ಳಿಯ ಆನೆಗಳನ್ನು ದೇವಿಗೆ ಕಾಣಿಕೆಯಾಗಿ ನೀಡಿದರು. ಕಳೆದ ತಿಂಗಳಷ್ಟೇ ತಮ್ಮ ಮೇಲೆ ಐಟಿ ದಾಳಿ ನಡೆದ ನಂತರ ಚಾಮುಂಡಿಬೆಟ್ಟಕ್ಕೆ ಆಗಮಿಸಿ ವಿಶೇಷ ಪೂಜೆ ಸಲ್ಲಿಸಿದ್ದ ಡಿ.ಕೆ.ಶಿವಕುಮಾರ್ ಮತ್ತು ಕುಟುಂಬದವರು, ನವರಾತ್ರಿ ಸಂದರ್ಭದಲ್ಲಿ ದೇವಿಗೆ ಹರಕೆ ತೀರಿಸಿದರೆ ಒಳಿತಾಗುತ್ತದೆಂಬ ಸಲಹೆಯಂತೆ ಸೋಮವಾರ ಬೆಟ್ಟಕ್ಕೆ ಬಂದು ಕಾಣಿಕೆ ಒಪ್ಪಿಸಿದ್ದಾರೆ.
ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಇದು ದೇವಿ ಮತ್ತು ಭಕ್ತನ ನಡುವಿನ ವಿಚಾರ. ಈ ಹಿಂದೆ ಮಾಡಿಕೊಂಡಿದ್ದ ಹರಕೆಯಂತೆ 30ಕೆ.ಜಿ. ತೂಕದ ಆನೆಗಳನ್ನು ದೇವಿಗೆ ಅರ್ಪಿಸಿದ್ದೇನೆ. ಮನಸ್ಸಿನಲ್ಲಿರುವ ಕಷ್ಟಗಳನ್ನು ಬಹಿರಂಗವಾಗಿ ಹೇಳಿಕೊಳ್ಳಲಾಗುವುದಿಲ್ಲ, ಆದರೆ, ಎದುರಾಗಿರುವ ಸಂಕಷ್ಟಗಳನ್ನು ತಾಯಿ ನಿವಾರಣೆ ಮಾಡುತ್ತಾಳೆಂಬ ನಂಬಿಕೆಯಿಂದ ದರ್ಶನಕ್ಕೆ ಬಂದಿದ್ದೇನೆ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Kalaburagi; ಭಾರೀ ಮಳೆ: ಆಳಂದದಲ್ಲಿ ಸಿಡಿಲು ಬಡಿದು ಬಾಲಕ ಸಾವು
Udupi: ನಿಟ್ಟೂರಿನಲ್ಲಿ ಬಸ್ ಢಿಕ್ಕಿಯಾಗಿ ಬೈಕ್ ಸವಾರ ದಾರುಣ ಸಾವು
Congress ಟ್ಯಾಕ್ಸ್ ಸಿಟಿಯನ್ನು ಟ್ಯಾಂಕರ್ ಸಿಟಿ ಮಾಡಿದೆ: ಬೆಂಗಳೂರಿನಲ್ಲಿ ಮೋದಿ
Kollywood: 18 ವರ್ಷದ ಬಳಿಕ ಪತಿ ಸೂರ್ಯ ಜೊತೆ ನಟಿಸಲಿದ್ದಾರೆ ಜ್ಯೋತಿಕಾ
ಸರ್ವರಿಗೂ ಸಮಪಾಲು ಸಮಬಾಳು ನೀಡಿದ ಕಾಂಗ್ರೆಸ್ ಪಕ್ಷಕ್ಕೆ ಮತ ನೀಡಿ: ಗೀತಾ ಶಿವರಾಜ್ ಕುಮಾರ್