ಸಕ್ರೆಬೈಲಿನಿಂದ ಐದು ಮರಿಯಾನೆ ಜಾರ್ಖಂಡ್‌ಗೆ


Team Udayavani, Oct 3, 2017, 9:53 AM IST

03-STATE-8.jpg

ಶಿವಮೊಗ್ಗ: ರಾಜ್ಯದ ಪ್ರತಿಷ್ಠಿತ ಆನೆ ಬಿಡಾರಗಳಲ್ಲಿ ಒಂದಾದ ಸಕ್ರೆಬೈಲು ಆನೆ ಬಿಡಾರದಿಂದ 5 ಮರಿಯಾನೆಗಳು ಜಾರ್ಖಂಡ್‌ಗೆ ಹಸ್ತಾಂತರವಾಗಲಿವೆ.

ಅಮೃತ (12), ಅದರ ಮರಿ ಪಾರ್ವತಿ (2), ಕಿರಣ (4), ರಾಘವೇಂದ್ರ (30) ಹಾಗೂ ಭಾಸ್ಕರ (5) ಮರಿಯಾನೆಗಳನ್ನು ಹೊರ ರಾಜ್ಯಕ್ಕೆ ಕಳುಹಿ ಸಲು ತೆರೆಮರೆಯ ಸಿದ್ಧತೆ ಆರಂಭಗೊಂಡಿದೆ. ಎಲ್ಲ ಅಂದುಕೊಂಡಂತೆ ಆದರೆ ನವೆಂಬರ್‌ನಲ್ಲಿ ಈ ಐದು ಮರಿಯಾನೆಗಳು ಸಕ್ರೆಬೈಲು ಆನೆ ಬಿಡಾರಕ್ಕೆ ಬಹುತೇಕ ಶಾಶ್ವತ ವಿದಾಯ ಹೇಳಲಿವೆ.

ಪ್ರಾಣಿ ವೀಕ್ಷಣೆಗೆ ಬಳಕೆ: ಜಾರ್ಖಂಡ್‌ನ‌ ದುದ್ವಾ ಸಫಾರಿಯಲ್ಲಿ ಹುಲಿ, ಸಿಂಹ ಸೇರಿ ಕಾಡು ಪ್ರಾಣಿಗಳನ್ನು ವೀಕ್ಷಿಸಲು ಆನೆಗಳನ್ನು ಬಳಸಲಾಗುತ್ತಿದೆ. ಅಲ್ಲೀಗ ಆನೆಗಳ ಕೊರತೆ ಎದುರಾಗಿದ್ದು, ಇದಕ್ಕಾಗಿ ಸಕ್ರೆಬೈಲು ಆನೆ ಬಿಡಾರದಿಂದ ಐದು ಮರಿಯಾನೆ ಗಳನ್ನು ಕರೆದೊಯ್ಯಲಾಗುತ್ತಿದೆ. ಆದರೆ, ಪ್ರವಾಸಿ ತಾಣವೂ ಆಗಿದ್ದ ಸಕ್ರೆಬೈಲು ಆನೆ ಬಿಡಾರದಲ್ಲಿ ಮರಿಯಾನೆಗಳೇ ದೊಡ್ಡ ಆಕರ್ಷಣೆಯಾಗಿದ್ದು, ಮರಿಯಾನೆಗಳನ್ನು ಜಾರ್ಖಂಡ್‌ ರಾಜ್ಯಕ್ಕೆ ಕಳುಹಿಸುವ ವನ್ಯಜೀವಿ ಇಲಾಖೆ ನಿರ್ಧಾರ ಆನೆ ಬಿಡಾರದ ಮಾವುತರು, ಕಾವಾಡಿಗಳು ಮತ್ತು ಪ್ರಾಣಿ ಪ್ರೇಮಿಗಳಲ್ಲಿ ಅಸಮಾಧಾನ ಮೂಡಿಸಿದೆ.

ಎರಡು ವರ್ಷದ ಹಿಂದೇ ಒಪ್ಪಿಗೆ: ಕಳೆದ ಎರಡು ವರ್ಷಗಳ ಹಿಂದೆ ಜಾರ್ಖಂಡ್‌ನ‌ ದುದ್ವಾ ಟೈಗರ್‌ ಜಂಗಲ್‌ ಸಫಾರಿಗೆ ಎಲಿಫೆಂಟ್‌ ಪೆಟ್ರೊಲಿಂಗ್‌ ಗಾಗಿ ರಾಜ್ಯದ ವಿವಿಧ ಆನೆ ಬಿಡಾರದಲ್ಲಿನ ಆನೆ ಗಳಿಗಾಗಿ ಬೇಡಿಕೆ ಸಲ್ಲಿಸಲಾಗಿತ್ತು. ಈ ಸಂದರ್ಭ ದಲ್ಲಿ ರಾಜ್ಯದ ದುಬಾರೆ ಮತ್ತು ಮುತ್ತೂಡಿಯಿಂದ 12 ಸಾಕಾನೆಗಳನ್ನು ಜಾರ್ಖಂಡ್‌ಗೆ ಕಳುಹಿಸಲಾಗಿತ್ತು. ಅದೇ ಸಂದರ್ಭದಲ್ಲಿ ಸಕ್ರೆಬೈಲು
ಆನೆ ಬಿಡಾರದಿಂದ ಐದು ಸಾಕಾನೆಗಳನ್ನು ದುದ್ವಾಕ್ಕೆ ಕಳುಹಿಸಲು ಅರಣ್ಯ ಹಿರಿಯ ಅಧಿಕಾರಿಗಳು ಅನುಮೋದನೆ ನೀಡಿದ್ದರು. ಈಗ ಆ ಪ್ರಕ್ರಿಯೆ ಅಂತಿಮ ಹಂತಕ್ಕೆ ತಲುಪಿದೆ. 

ತರಬೇತಿ: ಆಕ್ಟೋಬರ್‌ ಮೊದಲ ವಾರದಲ್ಲಿ ಜಾರ್ಖಂಡ್‌ನ‌ ಮಾವುತರು ಇಲ್ಲಿನ ಸಕ್ರೆಬೈಲಿಗೆ ಬಂದು ತರಬೇತಿ ಪಡೆಯಲಿದ್ದಾರೆ. ಅವರಿಗೆ ಬಿಡಾರದ ಮಾವುತರು ಆನೆಗಳಿಗೆ ನೀಡುವ ಕಮಾಂಡಿಂಗ್‌ ಬಗ್ಗೆ ತರಬೇತಿ ನೀಡಲಿದ್ದು, ಬಳಿಕ ವಾಹನದಲ್ಲಿ ರಸ್ತೆ ಮೂಲಕ ಒಂಭತ್ತು ದಿನಗಳ ಕಾಲ ಸಾಗುವ ಗಜ ಪಯಣದಲ್ಲಿ ವನ್ಯಜೀವಿ ವೈದ್ಯರು ಹಾಗೂ ಮಾವುತರು ಇರಲಿದ್ದಾರೆ. ದುದ್ವಾ ವನ್ಯಜೀವಿ ಪ್ರದೇಶದಲ್ಲಿ ಆನೆಗಳಿಗೆ ಮತ್ತು ಅಲ್ಲಿನ ಮಾವುತರಿಗೆ ಹೊಂದಿಕೊಳ್ಳುವಂತೆ ಸಕ್ರೆಬೈಲು ಮಾವುತರು ತರಬೇತಿ ನೀಡಿ ಹಿಂತಿರುಗಲಿದ್ದಾರೆ.

ಇವೇ ಇಲ್ಲಿನ ಆಕರ್ಷಣೆ: ಸಕ್ರೆಬೈಲು ಆನೆ ಬಿಡಾರ ಇತ್ತೀಚಿನ ವರ್ಷಗಳಲ್ಲಿ ರಾಜ್ಯದ ಪ್ರತಿಷ್ಠಿತ ಬಿಡಾರವಾಗಿ ಹೊರಹೊಮ್ಮಿದೆ. ಇಲ್ಲಿನ ಸಾಕಾನೆ ಗಳು ಪ್ರವಾಸಿಗರ ಆಕರ್ಷಣೆಯಾಗಿದ್ದು, ಅದರ ಲ್ಲಿಯೂ ಮರಿಯಾನೆಗಳು ಹೆಚ್ಚಿನ ರೀತಿಯಲ್ಲಿ ಪ್ರವಾಸಿಗರನ್ನು, ಅದರಲ್ಲಿಯೂ ಮಕ್ಕಳನ್ನು ಆಕರ್ಷಿಸುತ್ತಿವೆ. ಪ್ರತಿ ವರ್ಷ ವನ್ಯಜೀವಿ ಸಂರಕ್ಷಣಾ ದಿನಾಚರಣೆ ಸಂದರ್ಭದಲ್ಲಿ ಆಯೋಜಿಸುವ ಆನೆಗಳ ಕ್ರೀಡಾಕೂಟದಲ್ಲಿ ಈ ಮರಿಯಾನೆಗಳು ಹೆಚ್ಚು ಚಪ್ಪಾಳೆ ಗಿಟ್ಟಿಸುತ್ತಿದ್ದವು. ಇವುಗಳ ಆಟ, ತುಂಟಾಟಗಳನ್ನು ನೋಡಲೆಂದೇ ಅಪಾರ ಸಂಖ್ಯೆಯಲ್ಲಿ ಜನರು ಆಗಮಿಸುತ್ತಾರೆ ಎಂಬುದು ಮಾವುತರು ಮತ್ತು ಕಾವಾಡಿಗಳ ಮಾತು. 

ನಾವೇನೂ ಹೇಳುವಂತಿಲ್ಲ
ಆನೆಗಳನ್ನು ಕಳುಹಿಸುವ ನಿರ್ಧಾರ ಸರ್ಕಾರದ ಮಟ್ಟದಲ್ಲಿ ನಡೆದ ಪ್ರಕ್ರಿಯೆ. ಇಲ್ಲಿ ನಾವೇನೂ ಹೇಳುವಂತಿಲ್ಲ. ನಮ್ಮ ಕೈಯಲ್ಲಿ ಏನೂ ಇಲ್ಲ ಎನ್ನುತ್ತಾರೆ ಸ್ಥಳೀಯ ಅಧಿಕಾರಿಗಳು. ಒಟ್ಟಾರೆ ಇಲ್ಲಿನ ಸಕ್ರೆಬೈಲು ಆನೆ ಬಿಡಾರದ ಆಕರ್ಷಣೆಯ ಕೇಂದ್ರವಾಗಿದ್ದ ಐದು ಮರಿಯಾನೆಗಳು ಇನ್ನು ನೆನಪು ಮಾತ್ರ ಎಂಬುದನ್ನು ನೆನೆಸಿಕೊಳ್ಳುವುದೇ ಕಷ್ಟ ಎಂಬುದು ಜನರ ಮಾತು. 

 ಗೋಪಾಲ್‌ ಯಡಗೆರೆ

ಟಾಪ್ ನ್ಯೂಸ್

Lokayukta

Bellary; ಲೋಕಾಯುಕ್ತ ಬಲೆಗೆ ಬಿದ್ದ 6 ಮಂದಿ ಭ್ರಷ್ಟ ಅಧಿಕಾರಿಗಳು: ಲಕ್ಷ ಲಕ್ಷ ರೂ. ಲಂಚ!

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

1-asaa

Heart beats; ಭಾರತದ ಹೃದಯ ಪಾಕಿಸ್ಥಾನದ ಯುವತಿಗೆ ಹೊಸ ಜೀವನ ನೀಡಿತು..

who will be the Indian fast bowlers for t20 world cup

T20 World Cup; ಯಾರಿಲ್ಲ.. ಯಾರಿಲ್ಲ.. ವಿಶ್ವಕಪ್ ಗೆ ವೇಗದ ಬೌಲರ್ ಗಳು ಯಾರೆಲ್ಲಾ?

ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಮಾಡುವ ಹಾಗಿಲ್ಲ

ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಹಕ್ಕು ಹೊಂದಿಲ್ಲ

1-qwqwewqe

IPL ಅಕ್ರಮ ಪ್ರಸಾರ ಕೇಸ್; ನಟಿ ತಮನ್ನಾಗೆ ಸಂಕಷ್ಟ: ಸೈಬರ್ ಸೆಲ್ ನೋಟಿಸ್

1-wqqwewqe

BJP; ಖೂಬಾ ಮತ್ತೊಮ್ಮೆ ಸಚಿವರಾಗ್ತಾರೆ : ಔರಾದ್ ನಲ್ಲಿ ಯಡಿಯೂರಪ್ಪ ಘೋಷಣೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Lokayukta

Bellary; ಲೋಕಾಯುಕ್ತ ಬಲೆಗೆ ಬಿದ್ದ 6 ಮಂದಿ ಭ್ರಷ್ಟ ಅಧಿಕಾರಿಗಳು: ಲಕ್ಷ ಲಕ್ಷ ರೂ. ಲಂಚ!

siddaramaiah

Bidar; ನೇಹಾ ಪ್ರಕರಣದಲ್ಲಿ ಬಿಜೆಪಿ ರಾಜಕೀಯ‌ ಮಾಡುವುದು ಸರಿಯಲ್ಲ: ಸಿಎಂ ಸಿದ್ಧರಾಮಯ್ಯ‌

Lok Sabha Polls: “ಮೋದಿ ಮತ್ತೂಮ್ಮೆ ಪ್ರಧಾನಿಯಾಗಿಸುವ ಪಣ ತೊಡಿ’ : ಬಿ.ವೈ. ರಾಘವೇಂದ್ರ

Lok Sabha Polls: “ಮೋದಿ ಮತ್ತೊಮ್ಮೆ ಪ್ರಧಾನಿಯಾಗಿಸುವ ಪಣ ತೊಡಿ’ : ಬಿ.ವೈ. ರಾಘವೇಂದ್ರ

Lok Sabha Election: “ಅಭಿವೃದ್ಧಿಯೋ – ಅಕ್ರಮವೋ ಯೋಚಿಸಿ ಮತ ನೀಡಿ’: ಗಾಯತ್ರಿ ಸಿದ್ದೇಶ್ವರ್

Lok Sabha Election: “ಅಭಿವೃದ್ಧಿಯೋ – ಅಕ್ರಮವೋ ಯೋಚಿಸಿ ಮತ ನೀಡಿ’: ಗಾಯತ್ರಿ ಸಿದ್ದೇಶ್ವರ್

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Lokayukta

Bellary; ಲೋಕಾಯುಕ್ತ ಬಲೆಗೆ ಬಿದ್ದ 6 ಮಂದಿ ಭ್ರಷ್ಟ ಅಧಿಕಾರಿಗಳು: ಲಕ್ಷ ಲಕ್ಷ ರೂ. ಲಂಚ!

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

1-asaa

Heart beats; ಭಾರತದ ಹೃದಯ ಪಾಕಿಸ್ಥಾನದ ಯುವತಿಗೆ ಹೊಸ ಜೀವನ ನೀಡಿತು..

who will be the Indian fast bowlers for t20 world cup

T20 World Cup; ಯಾರಿಲ್ಲ.. ಯಾರಿಲ್ಲ.. ವಿಶ್ವಕಪ್ ಗೆ ವೇಗದ ಬೌಲರ್ ಗಳು ಯಾರೆಲ್ಲಾ?

ನರಗುಂದ: ಸಮಾಜದಲ್ಲಿ ದೇವಸ್ಥಾನಗಳು ಭಕ್ತಿಯ ಸಂಗಮ- ಶಾಂತಲಿಂಗ ಸ್ವಾಮೀಜಿ

ನರಗುಂದ: ಸಮಾಜದಲ್ಲಿ ದೇವಸ್ಥಾನಗಳು ಭಕ್ತಿಯ ಸಂಗಮ- ಶಾಂತಲಿಂಗ ಸ್ವಾಮೀಜಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.