ವಿಶೇಷ ಅಧಿವೇಶನಕ್ಕೆ ಪ್ರತಿಷ್ಠೆಯ ಅಡ್ಡಗಾಲು


Team Udayavani, Oct 12, 2017, 6:00 AM IST

vidhana-soudha-750.jpg

ಬೆಂಗಳೂರು: ವಿಧಾನಸಭೆ ವಜ್ರಮಹೋತ್ಸವ ವಿಶೇಷ ಅಧಿವೇಶನದ ದಿನಾಂಕ ನಿಗದಿ ವಿಚಾರದಲ್ಲಿ ರಾಜ್ಯ ಸರ್ಕಾರ
ಮತ್ತು ವಿಧಾನಸಭೆ ಸಚಿವಾಲಯದ ನಡುವೆ ತಿಕ್ಕಾಟ ಆರಂಭವಾಗಿದೆ.

ವಿಶೇಷ ಅಧಿವೇಶನ ಹಾಗೂ ಕಾರ್ಯಕ್ರಮ ನಡೆಸುವ ಬಗ್ಗೆ ಅನುಮೋದನೆ ಕೋರಿ ವಿಧಾನಸಭೆ ಸಚಿವಾಲಯ ಕೊಟ್ಟಿದ್ದ ಪ್ರಸ್ತಾವನೆಗೆ ರಾಜ್ಯ ಸಚಿವ ಸಂಪುಟ ತಡೆ ಹಿಡಿದಿದೆ. ಸರ್ಕಾರದ ಗಮನಕ್ಕೆ ತಾರದೇ ರಾಷ್ಟ್ರಪತಿಗಳನ್ನು ಭೇಟಿ ಮಾಡಿ ದಿನಾಂಕವನ್ನು ನಿಗದಿ ಮಾಡಿರುವ ವಿಧಾನಸಭೆ ಸ್ಪೀಕರ್‌ ಮತ್ತು ಮೇಲ್ಮನೆ ಸಭಾಪತಿಗಳ ವಿರುದ್ಧ ಅಸಮಾಧಾನಗೊಂಡು ಸಂಪುಟ ಈ ನಿರ್ಧಾರ ತೆಗೆದುಕೊಂಡಿದೆ ಎಂದು ಹೇಳಲಾಗಿದೆ.

ಇದಕ್ಕೆ ಪ್ರತಿಕ್ರಿಯೆ ನೀಡಿರುವ ಸ್ಪೀಕರ್‌ ಕೋಳಿವಾಡ ಅವರು, ಸರ್ಕಾರವೇ ತೀರ್ಮಾನ ಮಾಡುತ್ತದೆ ಎನ್ನುವುದಾದರೆ ಅವರೇ
ಬಂದು ಅಧಿವೇಶನ ನಡೆಸಲಿ. ಯಾರೋ ಏನೋ ಹೇಳಿದ್ದಕ್ಕೆ ನಾನು ಉತ್ತರ ಕೊಡಲ್ಲ. ಮುಖ್ಯಮಂತ್ರಿಗೆ ಗೊತ್ತಿಲ್ಲ ಅಂದ್ರೆ,
ಅವರೇ ಅಧಿವೇಶನ ಕ್ಯಾನ್ಸಲ್‌ ಮಾಡಲಿ ಎಂದು ಹೇಳಿದ್ದಾರೆ.

 ನ.13ರಿಂದ ಬೆಳಗಾವಿ ಅಧಿವೇಶನ: ಈ ಮಧ್ಯೆ, ವಿಧಾನಸೌಧ ವಜ್ರ ಮಹೋತ್ಸವ ಮತ್ತು ಎರಡು ದಿನದ ವಿಶೇಷ ಅಧಿವೇಶನದ ಖರ್ಚಿನ ಬಾಬ್ತು 28 ಕೋಟಿ ರೂ. ಅನುಮೋದನೆಗಾಗಿ ಸಲ್ಲಿಸಿದ್ದ ಕಡತಕ್ಕೆ ಒಪ್ಪಿಗೆ ನೀಡದೇ ಸಂಪುಟ ಸಭೆ ತಡೆ ಹಿಡಿದು ನ. 13 ರಿಂದ ಬೆಳಗಾವಿಯಲ್ಲಿ ಅಧಿವೇಶನ ನಡೆಸುವ ನಿರ್ಣಯ ಕೈಗೊಂಡಿತು.

ಅ. 25, 26 ರಂದು ಎರಡು ದಿನ ವಿಶೇಷ ಅಧಿವೇಶನ ನಡೆಸಲು ವಿಧಾನಸಭಾಧ್ಯಕ್ಷ ಕೆ.ಬಿ. ಕೋಳಿವಾಡ ಹಾಗೂ ಪರಿಷತ್‌ ಸಭಾಪತಿ ಡಿ.ಎಚ್‌.ಶಂಕರ ಮೂರ್ತಿ ದಿನಾಂಕ ನಿಗದಿ ಮಾಡಿ ರಾಷ್ಟ್ರಪತಿಗೆ ಆಹ್ವಾನ ನೀಡಿದ್ದು, ಸರ್ಕಾರದ ಅಸಮಾಧಾನಕ್ಕೆ ಕಾರಣವಾಗಿದೆ. ಕಂದಾಯ ಸಚಿವ ಕಾಗೋಡು ತಿಮ್ಮಪ್ಪ ಸಂಪುಟ ಸಭೆಯಲ್ಲಿ ವಿಷಯ ಪ್ರಸ್ತಾಪಿಸಿ 28 ಕೋಟಿ ರೂ. ವೆಚ್ಚದ ಔಚಿತ್ಯವನ್ನು ಪ್ರಶ್ನಿಸಿದರು ಎಂದು ಹೇಳಲಾಗಿದೆ.

ಆದರೆ, ಈಗಾಗಲೇ ದಿನಾಂಕ ನಿಗದಿ ಮಾಡಿ ರಾಷ್ಟ್ರಪತಿಯವರಿಗೆ ಅಹ್ವಾನ ನೀಡಿದ್ದು, ಅವರೂ ಕೂಡ ಕಾರ್ಯಕ್ರಮಕ್ಕೆ ಆಗಮಿಸಲು ಒಪ್ಪಿಕೊಂಡಿರುವುದರಿಂದ ಸರ್ಕಾರ ಇಕ್ಕಟ್ಟಿನಲ್ಲಿ ಸಿಲುಕಿದೆ. ವಿಶೇಷ ಅಧಿವೇಶನ ರದ್ದುಗೊಳಿಸುವ ಬದಲು ಈಗಾಗಲೇ ನಿಗದಿಯಾಗಿರುವ ದಿನಾಂಕದಂತೆ ವಜ್ರಮಹೋತ್ಸವ ಕಾರ್ಯಕ್ರಮ ನಡೆಸುವ ಕುರಿತಂತೆ ಮತ್ತೂಂದು ಸಂಪುಟ ಸಭೆ ನಡೆದಾಗ ಅದಕ್ಕೆ ಒಪ್ಪಿಗೆ ನೀಡಲು ಸರ್ಕಾರ ಆಲೋಚಿಸಿದೆ ಎಂದು ತಿಳಿದು ಬಂದಿದೆ.

ಆದರೆ, ಇದಕ್ಕೂ ಮೊದಲು ಖರ್ಚು ವೆಚ್ಚದ ಕುರಿತಂತೆ ಸಭಾಧ್ಯಕ್ಷ ಕೆ.ಬಿ. ಕೋಳಿವಾಡ ಹಾಗೂ ಸಭಾಪತಿ ಡಿ.ಎಚ್‌. ಶಂಕರ ಮೂರ್ತಿಯೊಂದಿಗೆ ಮಾತುಕತೆ ನಡೆಸಲು ಕಾನೂನು ಸಚಿವ ಟಿ.ಬಿ. ಜಯಚಂದ್ರ ಅವರಿಗೆ ಜವಾಬ್ದಾರಿ ವಹಿಸಲಾಗಿದೆ ಎಂದು ತಿಳಿದು ಬಂದಿದೆ.

ಸರ್ಕಾರದ ಗಮನಕ್ಕೆ ತಾರದೇ ನಿರ್ಧರಿಸಿದ್ದೇವೆ ಎಂಬ ಬಗ್ಗೆ ಮುಖ್ಯಮಂತ್ರಿಗೆ ಕೇಳಿ ಅವರೇ ಹೇಳುತ್ತಾರೆ. ಸರ್ಕಾರವೇ ತೀರ್ಮಾನ ಮಾಡುತ್ತದೆ ಎನ್ನುವುದಾದರೆ ಅವರೇ ಬಂದು ಅಧಿವೇಶನ ನಡೆಸಲಿ. ಯಾರೋ ಏನೋ ಹೇಳಿದ್ದಕ್ಕೆ ನಾನು ಉತ್ತರ ಕೊಡಲ್ಲ. ಮುಖ್ಯಮಂತ್ರಿಗೆ ಗೊತ್ತಿಲ್ಲ ಅಂದ್ರೆ, ಅವರೇ ಅಧಿವೇಶನ ಕ್ಯಾನ್ಸಲ್‌ ಮಾಡಲಿ.
– ಕೆ.ಬಿ. ಕೋಳಿವಾಡ, ವಿಧಾನಸಭಾಧ್ಯಕ್ಷ

ಅಕ್ಟೋಬರ್‌ 25, 26 ರಂದು ವಿಶೇಷ ಅಧಿವೇಶನ ಕರೆಯುವ ಕುರಿತು ಇನ್ನೂ ಸಂಪುಟದಲ್ಲಿ ತೀರ್ಮಾನ ಆಗಿಲ್ಲ. ಸಭಾಧ್ಯಕ್ಷರು ಈಗಾಗಲೇ ದಿನಾಂಕ ನಿಗದಿ ಮಾಡಿ ರಾಷ್ಟ್ರಪತಿಯವರಿಗೂ ಆಹ್ವಾನ ನೀಡಿದ್ದಾರೆ. ಸಂಪುಟದಲ್ಲಿ ತೀರ್ಮಾನವಾದ ನಂತರ ಅಧಿಕೃತವಾಗುತ್ತದೆ. ಹೀಗಾಗಿ ಪ್ರಸ್ತಾವನೆ ಸಲ್ಲಿಸಲು ವಿಧಾನಸಭಾ ಕಾರ್ಯದರ್ಶಿಗೆ ಸೂಚಿಸಲಾಗುವುದು.
–  ಟಿ.ಬಿ. ಜಯಚಂದ್ರ, ಸಚಿವ

ಟಾಪ್ ನ್ಯೂಸ್

Rahul Gandhi 3

BJP ಮಾಧ್ಯಮಗಳಿಂದ ನನಗೆ ನಿತ್ಯ ನಿಂದನೆ: ರಾಹುಲ್‌ ಗಾಂಧಿ ಆರೋಪ

1-qewqeqwe

TIME; ವಿಶ್ವದ 100 ಪ್ರಭಾವಿಗಳ ಪೈಕಿ ಆಲಿಯಾ, ಪ್ರಿಯಂವದ

1-aewr

DRDO; ನಿರ್ಭಯ್‌ ಪರೀಕ್ಷಾರ್ಥ ಉಡಾವಣೆ ಯಶಸ್ವಿ

1eewqe

Iran ವಶದಲ್ಲಿದ್ದ ಹಡಗಿನ ಮಹಿಳಾ ಸಿಬಂದಿ ವಾಪಸ್‌

vachanananda

Panchamasali ಎಂಬ ಕಾರಣಕ್ಕೆ ಯತ್ನಾಳ್‌ಗೆ ಸಿಎಂ ಅವಕಾಶ ನಿರಾಕರಣೆ: ವಚನಾನಂದ ಶ್ರೀ

police crime

Chitradurga: ಅನ್ಯಕೋಮಿನ ಯುವತಿಗೆ ಡ್ರಾಪ್ ನೀಡಿದ್ದಕ್ಕೆ ಹಲ್ಲೆ

1-wewq-eqwe

IPL; ರೋಚಕ ಪಂದ್ಯದಲ್ಲಿ ಪಂಜಾಬ್‌ ಎದುರು 9 ರನ್ ಜಯ ಸಾಧಿಸಿದ ಮುಂಬೈ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

30

CET Exam: ಮೊದಲ ದಿನ ಸುಸೂತ್ರವಾಗಿ ನಡೆದ ಸಿಇಟಿ

1-weqwewq

Belur: ದೈತ್ಯ ‘ಕರಡಿ’ ಆನೆ ಕೊನೆಗೂ ಸೆರೆ

police crime

Chitradurga: ಅನ್ಯಕೋಮಿನ ಯುವತಿಗೆ ಡ್ರಾಪ್ ನೀಡಿದ್ದಕ್ಕೆ ಹಲ್ಲೆ

LS Polls 2024: ಸುಮಲತಾ ಪ್ರಚಾರಕ್ಕೆ ಬರುವುದು ರಾಜ್ಯ ನಾಯಕರ ತೀರ್ಮಾನ: ನಿಖಿಲ್‌

LS Polls 2024: ಸುಮಲತಾ ಪ್ರಚಾರಕ್ಕೆ ಬರುವುದು ರಾಜ್ಯ ನಾಯಕರ ತೀರ್ಮಾನ: ನಿಖಿಲ್‌

R. Ashok: ಬಿಜೆಪಿಯಲ್ಲಿ ಈಶ್ವರಪ್ಪನವರದು ಮುಗಿದ ಅಧ್ಯಾಯ: ಅಶೋಕ್‌

R. Ashok: ಬಿಜೆಪಿಯಲ್ಲಿ ಈಶ್ವರಪ್ಪನವರದು ಮುಗಿದ ಅಧ್ಯಾಯ: ಅಶೋಕ್‌

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

30

CET Exam: ಮೊದಲ ದಿನ ಸುಸೂತ್ರವಾಗಿ ನಡೆದ ಸಿಇಟಿ

1-wqeqwe

Maharashtra; ರತ್ನಾಗಿರಿ- ಸಿಂಧುದುರ್ಗದಲ್ಲಿ ರಾಣೆ vs ಠಾಕ್ರೆ ಕಾದಾಟ

1-HM

Mathura ನನ್ನನ್ನು ಗೋಪಿಕೆಯೆಂದು ಭಾವಿಸುವೆ: ಬಿಜೆಪಿ ಅಭ್ಯರ್ಥಿ ಹೇಮಾ

Rahul Gandhi 3

BJP ಮಾಧ್ಯಮಗಳಿಂದ ನನಗೆ ನಿತ್ಯ ನಿಂದನೆ: ರಾಹುಲ್‌ ಗಾಂಧಿ ಆರೋಪ

1-qewqeqwe

TIME; ವಿಶ್ವದ 100 ಪ್ರಭಾವಿಗಳ ಪೈಕಿ ಆಲಿಯಾ, ಪ್ರಿಯಂವದ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.