ಲಿಂಗಾಯತಕ್ಕಾಗಿ ಸಮಿತಿ ಮೊದಲ ಬಾರಿಗೆ ಸಭೆಯಲ್ಲಿ ಬಿಜೆಪಿ ಭಾಗಿ


Team Udayavani, Oct 13, 2017, 6:00 AM IST

BJP_symbol.jpg

ಬೆಂಗಳೂರು: ವೀರಶೈವ ಮತ್ತು ಲಿಂಗಾಯತ ಪ್ರತ್ಯೇಕ ಧರ್ಮದ ಬೇಡಿಕೆ ಕುರಿತಂತೆ ಎರಡೂ ಬಣಗಳ ನಡುವೆ ಹೊಂದಾಣಿಕೆ ಮೂಡಿದ್ದು, ಸಭೆಗೆ ಬಿಜೆಪಿ ನಾಯಕರಾದ ಪ್ರಭಾಕರ ಕೋರೆ, ಮಹಾಂತೇಶ ಕವಟಗಿಮಠ ಹಾಗೂ ಶಂಕರ ಬಿದರಿ ಪಾಲ್ಗೊಂಡಿದ್ದು ಹೊಸ ತಿರುವು ಪಡೆದಂತಾಗಿದೆ.

ಗುರುವಾರ ಬೆಂಗಳೂರಿನ ಖಾಸಗಿ ಹೊಟೆಲ್‌ನಲ್ಲಿ ನಡೆದ ಸಮನ್ವಯ ಸಮಿತಿ ಸಭೆಯಲ್ಲಿ ಎರಡೂ ಬಣಗಳ ಕಾನೂನು ತಜ್ಞರು ಹಾಗೂ ಮುಖಂಡರು ಪಾಲ್ಗೊಂಡು ತಮ್ಮದೇ ವಾದ ಮಂಡಿಸಿದ್ದಾರೆ. ಆದರೆ, ಪ್ರತ್ಯೇಕ ಧರ್ಮದ ಬೇಡಿಕೆಗೆ ಲಿಂಗಾಯತ ಧರ್ಮ ಹೋರಾಟಗಾರರು ಅವಸರ ಮಾಡುತ್ತಿರುವ ಬಗ್ಗೆ ಸಭೆಯಲ್ಲಿ ತೀವ್ರ ಆಕ್ಷೇಪ ವ್ಯಕ್ತವಾಗಿದ್ದು, ಇಬ್ಬರು ನಾಯಕರ ನಡುವೆ ಮಾತಿನ ಚಕಮಕಿಗೆ ಕಾರಣವಾಗಿದೆ.

ಕೋರೆ -ಎಂಬಿಪಿ ನಡುವೆ ಮಾತಿನ ಚಕಮಕಿ: ಲಿಂಗಾಯತ ,ವೀರಶೈವಕ್ಕಿಂತ ಹೇಗೆ ಭಿನ್ನ ಎನ್ನುವ ಕುರಿತಂತೆ ನಿವೃತ್ತ ಐಎಎಸ್‌ ಅಧಿಕಾರಿ ಎಸ್‌.ಎಂ. ಜಾಮದಾರ್‌ ವಿವರಣೆ ನೀಡುವ ಸಂದರ್ಭದಲ್ಲಿ ಮಧ್ಯ ಪ್ರವೇಶ ಮಾಡಿದ ರಾಜ್ಯಸಭಾ ಸದಸ್ಯ ಪ್ರಭಾಕರ ಕೋರೆ ಆಕ್ಷೇಪ ಎತ್ತಿದರು ಎನ್ನಲಾಗಿದೆ. ಅವರ ಆಕ್ಷೇಪಕ್ಕೆ ಸಚಿವ ಎಂ.ಬಿ. ಪಾಟೀಲ್‌ ಏಕ ವಚನದಲ್ಲಿ ಮಾತನಾಡಿದ್ದಾರೆಂದು ಹೇಳಲಾಗಿದ್ದು, ಈ ಸಂದರ್ಭದಲ್ಲಿ ಎರಡೂ ಬಣಗಳ ನಡುವೆ ಮಾತಿನ ಚಕಮಕಿ ನಡೆಯಿತು ಎಂದು ತಿಳಿದು ಬಂದಿದೆ.

ಅವಸರ ಏಕೆ ? ವೀರಶೈವ ಲಿಂಗಾಯತ ಪ್ರತ್ಯೇಕ ಧರ್ಮ ಘೋಷಣೆ ಆಗಬೇಕು ಎನ್ನುವುದರ ಬಗ್ಗೆ ಎರಡೇ ತಿಂಗಳಲ್ಲಿ ಆಗಬೇಕು ಎನ್ನುವ ಅವಸರ ಏಕೆ ಎಂದು ಕೋರೆ ಪ್ರಶ್ನಿಸಿದ್ದಾರೆ ಎನ್ನಲಾಗಿದೆ. ಈ ಅವಸರದ ಹಿಂದೆ ಧರ್ಮ ಸ್ಥಾಪನೆಗಿಂತ ರಾಜಕೀಯ ಹಿತಾಸಕ್ತಿ ಇದೆ ಎಂದು ವಾದಿಸಿದ್ದಾರೆ ಎನ್ನಲಾಗಿದೆ. ಅದಕ್ಕೆ ಎಂ.ಬಿ. ಪಾಟೀಲ್‌ ಸಮಜಾಯಿಷಿ ನೀಡಿ, ಮುಖ್ಯಮಂತ್ರಿ ಸಿದ್ದರಾಮಯ್ಯ ವೀರಶೈವ ಲಿಂಗಾಯತ ಪ್ರತ್ಯೇಕ ಧರ್ಮ ಶಿಫಾರಸ್ಸು ಮಾಡಲು ಎಲ್ಲರೂ ಒಗ್ಗಟ್ಟಾಗಿ ಬರುವಂತೆ ಹೇಳಿದ್ದಾರೆ. ಇದುವರೆಗೂ ಯಾವ ಮುಖ್ಯಮಂತ್ರಿಯೂ ಕೇಂದ್ರಕ್ಕೆ ಶಿಫಾರಸ್ಸು ಮಾಡುವುದಾಗಿ ಹೇಳಿರಲಿಲ್ಲ. ಹೀಗಾಗಿ ಚುನಾವಣೆ ನೀತಿ ಸಂಹಿತೆ ಜಾರಿಯಾಗುವ ಮೊದಲೇ ಪ್ರಕರಣ ಇತ್ಯರ್ಥ ಆದರೆ, ಮುಖ್ಯಮಂತ್ರಿ ಸಿದ್ದರಾಮಯ್ಯ  ಕೇಂದ್ರ ಸರ್ಕಾರಕ್ಕೆ ಶಿಫಾರಸ್ಸು ಮಾಡುತ್ತಾರೆ ಎಂದು ಹೇಳಿದ್ದಾರೆ.

ಇದೇ ಮುಖ್ಯಮಂತ್ರಿ ಶಿಫಾರಸ್ಸು ಮಾಡಬೇಕೆಂಬ ಅವಸರ ಏಕೆ ? ಮುಂದೆ ಬರುವವರೂ ಶಿಫಾರಸ್ಸು ಮಾಡಬಹುದಲ್ಲ ಎಂದು ಕೋರೆ ಪ್ರಶ್ನಿಸಿದ್ದು, ನೀವು ಚುನಾವಣೆ ಅಜೆಂಡಾ ಇಟ್ಟುಕೊಂಡು ಈ ಹೋರಾಟ ಮಾಡುತ್ತಿದ್ದೀರಿ ಎಂದು ನೇರವಾಗಿಯೇ ಹೇಳಿದ್ದಾರೆ ಎನ್ನಲಾಗಿದೆ. ಅವರ ಮಾತಿಗೆ ಎಂ.ಬಿ ಪಾಟೀಲ್‌ ಆಕ್ರೋಶಗೊಂಡಿದ್ದರು ಎನ್ನಲಾಗಿದ್ದು, ಇಬ್ಬರು ನಾಯಕರ ವಾದವನ್ನು ತಡೆಯಲು ವೈದ್ಯಕೀಯ ಶಿಕ್ಷಣ ಸಚಿವ ಡಾ. ಶರಣ ಪ್ರಕಾಶ್‌ ಪಾಟೀಲ್‌ ಹಾಗೂ ನಿವೃತ್ತ ಮುಖ್ಯ ಕಾರ್ಯದರ್ಶಿ ಬಿ.ಎಸ್‌. ಪಾಟೀಲ್‌ ಮಧ್ಯ ಪ್ರವೇಶಿಸಿ ಶಾಂತಗೊಳಿಸಿದರು ಎಂದು ತಿಳಿದು ಬಂದಿದೆ.

ಗುರುವಾರ ನಡೆದ ಸಭೆಯಲ್ಲಿ ಸಚಿವರಾದ ಎಂ.ಬಿ. ಪಾಟೀಲ್‌, ವಿನಯ ಕುಲಕರ್ಣಿ, ಡಾ. ಶರಣ ಪ್ರಕಾಶ್‌ ಪಾಟೀಲ್‌, ಈಶ್ವರ ಖಂಡ್ರೆ, ವೀರಶೈವ ಮಹಾಸಭೆಯ ಅಧ್ಯಕ್ಷ ಶಾಮನೂರು ಶಿವಶಂಕರಪ್ಪ, ತಿಪ್ಪಣ್ಣ, ಪ್ರಧಾನ ಕಾರ್ಯದರ್ಶಿ ರೇಣುಕಾ ಪ್ರಸಾದ್‌, ನಿವೃತ್ತ ಅಧಿಕಾರಿಗಳಾದ ಎಸ್‌.ಎಂ. ಜಾಮದಾರ್‌, ಶಂಕರ ಬಿದರಿ, ಬಿ.ಎಸ್‌. ಪಾಟೀಲ್‌, ಶಿಕ್ಷಣ ತಜ್ಞರಾದ ಪ್ರೊ. ವೀರಣ್ಣ ರಾಜೂರ್‌, ಪ್ರೊ. ಚಂದ್ರಶೇಖರ, ಪ್ರೊ. ನಂದೀಶ್‌ ಅಂಚೆ, ಕಾನೂನು ತಜ್ಞರಾದ ಶಿವಕುಮಾರಸ್ವಾಮಿ ಹಾಗೂ ಸವದತ್ತಿ ಮಠ ಹಾಜರಿದ್ದರು. ವಿಧಾನ ಪರಿಷತ್‌ ಸದಸ್ಯ ಬಸವರಾಜ ಹೊರಟ್ಟಿ ಗೈರು ಹಾಜರಾಗಿದ್ದರು.

ತಜ್ಞರ ಸಮಿತಿ ರಚನೆಗೆ ನಿರ್ಧಾರ
ವೀರಶೈವ ಮತ್ತು ಲಿಂಗಾಯತ ನಾಯಕರ ಎರಡೂ ಬಣಗಳು ಸತತ ನಾಲ್ಕು ಸಭೆಗಳನ್ನು ನಡೆಸಿ ಕಡೆಗೂ ವಾಸ್ತವಾಂಶ ತಿಳಿಯಲು ತಜ್ಞರ ಸಮಿತಿ ರಚನೆಗೆ ನಿರ್ಧರಿಸಿದ್ದಾರೆ. ಎರಡೂ ಬಣಗಳಿಂದ ತಲಾ ಐವರು ಕಾನೂನು, ಇತಿಹಾಸ, ಸಾಹಿತ್ಯ ಕ್ಷೇತ್ರದ ತಜ್ಞರನ್ನು ಒಳಗೊಂಡ ಹತ್ತು ಜನರ ಸಮಿತಿ ರಚಿಸಲು ನಿರ್ಧರಿಸಲಾಗಿದ್ದು, ಸಮಿತಿಗೆ ವೀರಶೈವ ಮಹಾಸಭೆ ಅಧ್ಯಕ್ಷ ಶಾಮನೂರು ಶಿವಶಂಕರಪ್ಪ ಅವರನ್ನೇ ಅಧ್ಯಕ್ಷರನ್ನಾಗಿ ಮಾಡಲಾಗಿದೆ. ಮೂರು ದಿನದಲ್ಲಿ ತಜ್ಞರ ಸಮಿತಿ ರಚಿಸಿ ಹತ್ತು ದಿನದಲ್ಲಿ ಸಮಿತಿ ಪ್ರತ್ಯೇಕ ಧರ್ಮ ಬೇಡಿಕೆಗೆ ಕಾನೂನಿನ ಸಾಧ್ಯತೆಗಳು ಹಾಗೂ ವೀರಶೈವ ಮತ್ತು ಲಿಂಗಾಯತ ಹೆಸರಿನ ಪ್ರಸ್ತಾವನೆ ಮಾಡುವ ಕುರಿತಂತೆ ವರದಿ ನೀಡಲು ಸಮಿತಿಗೆ ಸೂಚಿಸಲು ನಿರ್ಧರಿಸಲಾಗಿದೆ.

ಸತತ ಮೂರು ಗಂಟೆಗಳ ಕಾಲ ಎಲ್ಲರೂ ಚರ್ಚೆ ಮಾಡಿ, ವೀರಶೈವ ಲಿಂಗಾಯತರು ಎಲ್ಲರೂ ಒಟ್ಟಾಗಿ ಹೋಗಬೇಕು, ಸಮಾಜ ಒಡೆಯದಂತೆ ನೋಡಿಕೊಳ್ಳಬೇಕು. ಪ್ರತ್ಯೇಕ ಧರ್ಮದ ಮಾನ್ಯತೆ ಕುರಿತಂತೆ ಹತ್ತು ಜನರ ತಜ್ಞರ ಸಮಿತಿ ರಚನೆ ಮಾಡಿ ಅವರ ವರದಿ ಆಧರಿಸಿ ರಾಜ್ಯ ಸರ್ಕಾರಕ್ಕೆ ಮನವಿ ಸಲ್ಲಿಸಲು ನಿರ್ಧರಿಸಲಾಗಿದೆ. ಇಂದಿನ ಸಭೆಯಲ್ಲಿ ಯಾವುದೇ ಗೊಂದಲ ಇಲ್ಲ
– ಶಾಮನೂರು ಶಿವಶಂಕರಪ್ಪ, ವೀರಶೈವ ಮಹಾಸಭೆ ಅಧ್ಯಕ್ಷ. 

ಟಾಪ್ ನ್ಯೂಸ್

Anti Israel ಪ್ರತಿಭಟನೆ-ಭಾರತೀಯ ಮೂಲದ ಪ್ರಿನ್ಸ್‌ ಟನ್‌ ವಿವಿ ವಿದ್ಯಾರ್ಥಿನಿ ಬಂಧನ

Anti Israel ಪ್ರತಿಭಟನೆ-ಭಾರತೀಯ ಮೂಲದ ಪ್ರಿನ್ಸ್‌ ಟನ್‌ ವಿವಿ ವಿದ್ಯಾರ್ಥಿನಿ ಬಂಧನ

ಸುಳ್ಳು ಹೇಳುವುದರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನಿಸ್ಸಿಮರು: ಸಚಿವ ಪ್ರಹ್ಲಾದ್ ಜೋಶಿ

ಸುಳ್ಳು ಹೇಳುವುದರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನಿಸ್ಸಿಮರು: ಸಚಿವ ಪ್ರಹ್ಲಾದ್ ಜೋಶಿ

Kalaburagi: ಸೋಲುವ ಭೀತಿಯಿಂದ ಪ್ರಧಾನಿಯಿಂದ ಕೀಳು ಮಟ್ಟದ ಹೇಳಿಕೆ: ಡಾ. ಅಜಯಸಿಂಗ್

Kalaburagi: ಸೋಲುವ ಭೀತಿಯಿಂದ ಪ್ರಧಾನಿಯಿಂದ ಕೀಳು ಮಟ್ಟದ ಹೇಳಿಕೆ: ಡಾ. ಅಜಯಸಿಂಗ್

Dakshina kannada: ದ.ಕ.: 18,18,127 ಮತದಾರರ ಕೈಯಲ್ಲಿ 9 ಅಭ್ಯರ್ಥಿಗಳ ಭವಿಷ್ಯ

Dakshina kannada: ದ.ಕ.: 18,18,127 ಮತದಾರರ ಕೈಯಲ್ಲಿ 9 ಅಭ್ಯರ್ಥಿಗಳ ಭವಿಷ್ಯ

ಹಣ ಹಂಚಿ ಚುನಾವಣೆ ನಡೆಸಲು ಅವಕಾಶ ಮಾಡಿಕೊಡಿ… ಚುನಾವಣಾ ಆಯೋಗದ ವಿರುದ್ಧ HDK ಕಿಡಿ

ಹಣ ಹಂಚಿ ಚುನಾವಣೆ ನಡೆಸಲು ಅವಕಾಶ ಮಾಡಿಕೊಡಿ… ಚುನಾವಣಾ ಆಯೋಗದ ವಿರುದ್ಧ HDK ಕಿಡಿ

Bantwal: ಮತದಾನ ಮಾಡಿ ಮದುವೆ ಮುಹೂರ್ತಕ್ಕೆ ಅಣಿಯಾದ ನವವಧು

Bantwal: ಮದುವೆ ಮುಹೂರ್ತಕ್ಕೂ ಮೊದಲೇ ಮತದಾನ ಹಕ್ಕು ಚಲಾಯಿಸಿದ ನವವಧು

Election: ಮತದಾನ ಆರಂಭವಾದ 2 ಗಂಟೆಯಲ್ಲೇ ಉಡುಪಿ ಚಿಕ್ಕಮಗಳೂರು ಕ್ಷೇತ್ರದಲ್ಲಿ 12.82% ಮತದಾನ

Election: ಮತದಾನ ಆರಂಭವಾದ 2 ಗಂಟೆಯಲ್ಲೇ ಉಡುಪಿ ಚಿಕ್ಕಮಗಳೂರು ಕ್ಷೇತ್ರದಲ್ಲಿ 12.82% ಮತದಾನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಸುಳ್ಳು ಹೇಳುವುದರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನಿಸ್ಸಿಮರು: ಸಚಿವ ಪ್ರಹ್ಲಾದ್ ಜೋಶಿ

ಸುಳ್ಳು ಹೇಳುವುದರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನಿಸ್ಸಿಮರು: ಸಚಿವ ಪ್ರಹ್ಲಾದ್ ಜೋಶಿ

Kalaburagi: ಸೋಲುವ ಭೀತಿಯಿಂದ ಪ್ರಧಾನಿಯಿಂದ ಕೀಳು ಮಟ್ಟದ ಹೇಳಿಕೆ: ಡಾ. ಅಜಯಸಿಂಗ್

Kalaburagi: ಸೋಲುವ ಭೀತಿಯಿಂದ ಪ್ರಧಾನಿಯಿಂದ ಕೀಳು ಮಟ್ಟದ ಹೇಳಿಕೆ: ಡಾ. ಅಜಯಸಿಂಗ್

ಹಣ ಹಂಚಿ ಚುನಾವಣೆ ನಡೆಸಲು ಅವಕಾಶ ಮಾಡಿಕೊಡಿ… ಚುನಾವಣಾ ಆಯೋಗದ ವಿರುದ್ಧ HDK ಕಿಡಿ

ಹಣ ಹಂಚಿ ಚುನಾವಣೆ ನಡೆಸಲು ಅವಕಾಶ ಮಾಡಿಕೊಡಿ… ಚುನಾವಣಾ ಆಯೋಗದ ವಿರುದ್ಧ HDK ಕಿಡಿ

Election: ಮತದಾನ ಆರಂಭವಾದ 2 ಗಂಟೆಯಲ್ಲೇ ಉಡುಪಿ ಚಿಕ್ಕಮಗಳೂರು ಕ್ಷೇತ್ರದಲ್ಲಿ 12.82% ಮತದಾನ

Election: ಮತದಾನ ಆರಂಭವಾದ 2 ಗಂಟೆಯಲ್ಲೇ ಉಡುಪಿ ಚಿಕ್ಕಮಗಳೂರು ಕ್ಷೇತ್ರದಲ್ಲಿ 12.82% ಮತದಾನ

Congress ನಿಂದ ಸ್ಮಾರ್ಟ್ ಕಾರ್ಡ್ ಹಂಚಿಕೆ: ರೆಡ್‌ಹ್ಯಾಂಡ್ ಆಗಿ ಹಿಡಿದ ಮೈತ್ರಿ ಕಾರ್ಯಕರ್ತರು

Congress ನಿಂದ ಸ್ಮಾರ್ಟ್ ಕಾರ್ಡ್ ಹಂಚಿಕೆ: ರೆಡ್‌ಹ್ಯಾಂಡ್ ಆಗಿ ಹಿಡಿದ ಮೈತ್ರಿ ಕಾರ್ಯಕರ್ತರು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Anti Israel ಪ್ರತಿಭಟನೆ-ಭಾರತೀಯ ಮೂಲದ ಪ್ರಿನ್ಸ್‌ ಟನ್‌ ವಿವಿ ವಿದ್ಯಾರ್ಥಿನಿ ಬಂಧನ

Anti Israel ಪ್ರತಿಭಟನೆ-ಭಾರತೀಯ ಮೂಲದ ಪ್ರಿನ್ಸ್‌ ಟನ್‌ ವಿವಿ ವಿದ್ಯಾರ್ಥಿನಿ ಬಂಧನ

ಸುಳ್ಳು ಹೇಳುವುದರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನಿಸ್ಸಿಮರು: ಸಚಿವ ಪ್ರಹ್ಲಾದ್ ಜೋಶಿ

ಸುಳ್ಳು ಹೇಳುವುದರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನಿಸ್ಸಿಮರು: ಸಚಿವ ಪ್ರಹ್ಲಾದ್ ಜೋಶಿ

Kalaburagi: ಸೋಲುವ ಭೀತಿಯಿಂದ ಪ್ರಧಾನಿಯಿಂದ ಕೀಳು ಮಟ್ಟದ ಹೇಳಿಕೆ: ಡಾ. ಅಜಯಸಿಂಗ್

Kalaburagi: ಸೋಲುವ ಭೀತಿಯಿಂದ ಪ್ರಧಾನಿಯಿಂದ ಕೀಳು ಮಟ್ಟದ ಹೇಳಿಕೆ: ಡಾ. ಅಜಯಸಿಂಗ್

Dakshina kannada: ದ.ಕ.: 18,18,127 ಮತದಾರರ ಕೈಯಲ್ಲಿ 9 ಅಭ್ಯರ್ಥಿಗಳ ಭವಿಷ್ಯ

Dakshina kannada: ದ.ಕ.: 18,18,127 ಮತದಾರರ ಕೈಯಲ್ಲಿ 9 ಅಭ್ಯರ್ಥಿಗಳ ಭವಿಷ್ಯ

ಹಣ ಹಂಚಿ ಚುನಾವಣೆ ನಡೆಸಲು ಅವಕಾಶ ಮಾಡಿಕೊಡಿ… ಚುನಾವಣಾ ಆಯೋಗದ ವಿರುದ್ಧ HDK ಕಿಡಿ

ಹಣ ಹಂಚಿ ಚುನಾವಣೆ ನಡೆಸಲು ಅವಕಾಶ ಮಾಡಿಕೊಡಿ… ಚುನಾವಣಾ ಆಯೋಗದ ವಿರುದ್ಧ HDK ಕಿಡಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.