ಖರ್ಚಿನ ಲೆಕ್ಕಕೇಳುವ ಅಧಿಕಾರ ಸರ್ಕಾರಕ್ಕಿಲ್ಲ


Team Udayavani, Oct 13, 2017, 6:00 AM IST

vidhana-soudha-750.jpg

ಬೆಂಗಳೂರು: ವಿಶೇಷ ಸಂದರ್ಭಗಳಲ್ಲಿ ಅಧಿವೇಶನ ಕರೆಯುವ ಅಧಿಕಾರ ತಮಗಷ್ಟೇ ಇದ್ದು, ವಜ್ರ ಮಹೋತ್ಸವದ ಲೆಕ್ಕ ಕೇಳುವ ಅಧಿಕಾರ ಸರ್ಕಾರಕ್ಕೆ ಇಲ್ಲ ಎಂದು ವಿಧಾನಸಭೆ ಸಚಿವಾಲಯ ತಿರುಗೇಟು ನೀಡಿದೆ. ಈ ಮೂಲಕ ಇದೇ ತಿಂಗಳ 25 ಮತ್ತು 26 ರಂದು ಆಯೋಜಿಸಲಾಗಿರುವ ವಿಧಾನಸೌಧದ ವಜ್ರ ಮಹೋತ್ಸವ ಕಾರ್ಯಕ್ರಮ ವಿವಾದ ಮತ್ತಷ್ಟು ತಾರಕಕ್ಕೇರಿದೆ.

ಬುಧವಾರವಷ್ಟೇ ಸಚಿವ ಸಂಪುಟ ಸಭೆಯಲ್ಲಿ ಸರ್ಕಾರದ ಗಮನಕ್ಕೆ ತಾರದೆ ಸ್ಪೀಕರ್‌ ಮತ್ತು ಸಭಾಪತಿ ವಿಶೇಷ ಅಧಿವೇಶನ ದಿನಾಂಕ ನಿಗದಿ ಮಾಡಿದ ಬಗ್ಗೆ ಅಸಮಾಧಾನ ವ್ಯಕ್ತವಾಗಿತ್ತು. ಜತೆಗೆ, ಈ ಕಾರ್ಯಕ್ರಮಕ್ಕೆ 28 ಲಕ್ಷ ರೂ. ಬೇಕೇ ಎಂಬ ಬಗ್ಗೆ ಸಚಿವರು ತಗಾದೆ ಎತ್ತಿದ್ದರು. ಈ ಹಿನ್ನೆಲೆಯಲ್ಲಿ ವಿಧಾನಸಭೆ ಸಚಿವಾಲಯದ ನಿರ್ಧಾರವನ್ನು ಒಪ್ಪಿಕೊಳ್ಳಲು ಆಗದೇ, ಬಿಡಲೂ ಆಗದೇ ಖರ್ಚಿನ ಲೆಕ್ಕವನ್ನು ಮುಂದಿಟ್ಟುಕೊಂಡು ಸದ್ಯ ಅಧಿವೇಶನಕ್ಕೆ ತಡೆ ನೀಡಿದೆ.

ಸಂವಿಧಾನದ 176/1 ರ ಪ್ರಕಾರ ಅಧಿವೇಶನ ಕರೆಯುವ ಅಧಿಕಾರ ರಾಜ್ಯಪಾಲರಿಗೆ ಇದೆ. ರಾಜ್ಯಪಾಲರು ಹೊಸ ಸರ್ಕಾರ ಬಂದಾಗ‌ ಆರಂಭದಲ್ಲಿ ಮತ್ತು ಪ್ರತಿ ವರ್ಷ ಆರಂಭದಲ್ಲಿ ಜಂಟಿ ಅಧಿವೇಶನವನ್ನು ಉದ್ದೇಶಿಸಿ ಮಾತನಾಡುತ್ತಾರೆ. ಆದರೆ, ಸರ್ಕಾರ ಅಧಿವೇಶನ ನಡೆಸುವ ದಿನಾಂಕವನ್ನು ಸಂಪುಟದಲ್ಲಿ ಚರ್ಚಿಸಿ ನಿರ್ಧರಿಸಿ ರಾಜ್ಯಪಾಲರ ಅನುಮತಿಗೆ ಕಳುಹಿಸಿಕೊಡುತ್ತಾರೆ. ರಾಜ್ಯಪಾಲರ ಅನುಮತಿ ಪಡೆದು ವಿಧಾನಸಭೆ ಕಾರ್ಯದರ್ಶಿ ಅಧಿಕೃತ ಆದೇಶ ಹೊರಡಿಸುತ್ತಾರೆ.

ವಜ್ರ ಮಹೋತ್ಸವದ ವಿಶೇಷ ಅಧಿವೇಶನ ಕರೆಯುವ ಕುರಿತಂತೆ ನಡೆದ ಸಭೆಗಳಲ್ಲಿ ಕಾನೂನು ಸಚಿವ ಟಿ.ಬಿ. ಜಯಚಂದ್ರ ಎರಡು ಬಾರಿ ಭಾಗವಹಿಸಿ ಅಧಿವೇಶನ ನಡೆಸಲು ಸಹಮತ ವ್ಯಕ್ತಪಡಿಸಿದ್ದರು ಎನ್ನಲಾಗಿದೆ. ಅಲ್ಲದೇ ರಾಷ್ಟ್ರಪತಿಗೆ ಆಹ್ವಾನ ನೀಡಲು ತೆರಳುವ ಸಂದರ್ಭದಲ್ಲಿಯೂ ಮುಖ್ಯಮಂತ್ರಿಯ ಗಮನಕ್ಕೆ ತಂದು, ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವರನ್ನೂ ಜೊತೆಗೆ ಬರುವಂತೆ ಸ್ಪೀಕರ್‌ ಕೋಳಿವಾಡ ಕೇಳಿದ್ದರು ಎನ್ನಲಾಗಿದೆ.

ವಿಶೇಷ ಸಂದರ್ಭದಲ್ಲಿ ಅಧಿವೇಶನ ಕರೆಯುವ ಸಂಪ್ರದಾಯ ವಿಧಾನ ಸೌಧ ಆರಂಭದಿಂದಲೂ ನಡೆದುಕೊಂಡು ಬಂದಿದ್ದು, 1957 ರಲ್ಲಿ  ಅಂದಿನ ಪ್ರಧಾನಿ ಜವಾಹರಲಾಲ್‌ ನೆಹರು, ವಿಧಾನಸಭೆಯ ವಿಶೇಷ ಅಧಿವೇಶನದಲ್ಲಿ ಪಾಲ್ಗೊಂಡಿದ್ದರು. ಸಾರ್ಕ್‌ ಸಮ್ಮೇಳನದ ಸಂದರ್ಭದಲ್ಲಿ ಅಂದಿನ ಪ್ರಧಾನಿ ರಾಜೀವ್‌ ಗಾಂಧಿ ಕೂಡ ವಿಶೇಷ ಅಧಿವೇಶನದಲ್ಲಿ ಪಾಲ್ಗೊಂಡಿದ್ದರು. ಅಷ್ಟೆ ಅಲ್ಲದೇ ರಾಷ್ಟ್ರಪತಿಗಳಾಗಿದ್ದ ಎಪಿಜೆ ಅಬ್ದುಲ್‌ ಕಲಾಮ್‌ ಸುವರ್ಣ ಕರ್ನಾಕಟ ವರ್ಷಾಚರಣೆ ಸಂದರ್ಭದಲ್ಲಿ ಹಾಗೂ ಬೆಳಗಾವಿ ಸುವರ್ಣ ಸೌಧ ಉದ್ಘಾಟನೆ ಸಂದರ್ಭದಲ್ಲಿ ರಾಷ್ಟ್ರಪತಿಯಾಗಿದ್ದ ಪ್ರಣಬ್‌ ಮುಖರ್ಜಿ ಸಂವಿಧಾನದ ನಿಯಮದ ಹೊರತಾಗಿ ವಿಶೇಷ ಅಧಿವೇಶನದಲ್ಲಿ ಪಾಲ್ಗೊಂಡು ಭಾಷಣ ಮಾಡಿದ್ದು, ಅದೇ ಸಂಪ್ರದಾಯವನ್ನು ಈ ಬಾರಿಯೂ ಮುಂದುವರೆಸಲಾಗುತ್ತಿದೆ ಎನ್ನುವುದು ವಿಧಾನಸಭೆ ಸಚಿವಾಲಯದ ವಾದ.

ವಿಧಾನಸಭೆ ಸಚಿವಾಲಯ ಶಾಸಕಾಂಗದ ಪ್ರಾತಿನಿಧಿಕ ಸಂಸ್ಥೆಯಾಗಿದ್ದು, ಶಾಸಕಾಂಗದ ಕಾರ್ಯಕ್ರಮಗಳ ಲೆಕ್ಕವನ್ನು ಕೇಳಲು ಸರ್ಕಾರಕ್ಕೆ ಅಧಿಕಾರ ಇಲ್ಲ ಎನ್ನಲಾಗುತ್ತಿದೆ. ಶಾಸಕಾಂಗವೇ ಸರ್ಕಾರಕ್ಕೆ ಪ್ರತಿ ವರ್ಷ ಖರ್ಚು ಮಾಡಲು ಹಣ ನೀಡುತ್ತದೆ. ಹೀಗಾಗಿ ಕಾನೂನು ಸಚಿವರಿಗೆ ಶಾಸಕಾಂಗದ ಲೆಕ್ಕ ಕೇಳುವ ಅಧಿಕಾರ ಇಲ್ಲ ಎನ್ನುವುದು ವಿಧಾನಸಭೆ ಕಾರ್ಯದರ್ಶಿ ಎಸ್‌. ಮೂರ್ತಿ ಅವರ ವಾದ.

ಆದರೆ, ವಿಧಾನಸೌಧ ಲೋಕೋಪಯೋಗಿ ಹಾಗೂ ಆಡಳಿತ ಸುಧಾರಣೆ ಇಲಾಖೆಯ ವ್ಯಾಪ್ತಿಯಲ್ಲಿರುವುದರಿಂದ ಕಟ್ಟಡ ವಜ್ರಮಹೋತ್ಸವ ನಡೆಸುವ ಅಧಿಕಾರ ವಿಧಾನಸಭೆ ಸಚಿವಾಲಯಕ್ಕೆ ಇಲ್ಲ ಎಂಬ ವಾದ ಸರ್ಕಾರ ಮಾಡುತ್ತಿದೆ. ಅಲ್ಲದೇ ಬೆಳಗಾವಿಯಲ್ಲಿ ನಡೆಯುವ 10 ದಿನದ ಅಧಿವೇಶನಕ್ಕೆ 10 ಕೋಟಿ ರೂಪಾಯಿ ವೆಚ್ಚ ಮಾಡಲಾಗುತ್ತದೆ. ಆದರೆ, ಕೇವಲ ಎರಡು ದಿನ ನಡೆಯುವ ಅಧಿವೇಶನಕ್ಕೆ 28 ಕೋಟಿ ವೆಚ್ಚ ಮಾಡುತ್ತಿರುವುದು ಹಣಕಾಸು ಇಲಾಖೆಯ ಹುಬ್ಬೇರಿಸುವಂತೆ ಮಾಡಿದೆ.

ರಾಷ್ಟ್ರಪತಿ ಬರ್ತಾರಾ ?
ವಿಧಾನಸೌಧದ ವಜ್ರಮಹೋತ್ಸವ ಕಾರ್ಯಕ್ರಮಕ್ಕೆ ಭರ್ಜರಿ ಸಿದ್ದತೆ ನಡೆಯುತ್ತಿದ್ದು, ಈ ನಡುವೆಯೇ ಸರ್ಕಾರ ಮತ್ತು ವಿಧಾನಸಭೆ ಸಚಿವಾಲಯದ ನಡುವೆ ಸಂಘರ್ಷ ಏರ್ಪಟ್ಟಿದೆ.ಈ ರೀತಿಯ ಗೊಂದಲದ ಕಾರ್ಯಕ್ರಮಕ್ಕೆ ರಾಷ್ಟ್ರಪತಿ ಆಗಮಿಸುತ್ತಾರಾ ಎಂಬ ಚರ್ಚೆ ವಿಧಾನಸೌಧದ ಕಾರಿಡಾರ್‌ನಲ್ಲಿ ಕೇಳಿ ಬರುತ್ತಿದೆ. ರಾಷ್ಟ್ರಪತಿಗಳು ಭಾಗವಹಿಸುವ ಕಾರ್ಯಕ್ರಮಗಳಲ್ಲಿ ಯಾವುದೇ ಗೊಂದಲ ಇಲ್ಲದಿದ್ದರೆ ಮಾತ್ರ ಪಾಲ್ಗೊಳ್ಳುವ ಸಂಪ್ರದಾಯ ಇದೆ. ಸರ್ಕಾರ ಮತ್ತು ಸಚಿವಾಲಯದ ನಡುವೆಯೇ ಹೊಂದಾಣಿಕೆ ಇಲ್ಲದ ಕಾರ್ಯಕ್ರಮಕ್ಕೆ ರಾಷ್ಟ್ರಪತಿಗಳು ಆಗಮಿಸುತ್ತಾರಾ ಎಂಬ ಮಾತುಗಳು ಕೇಳಿ ಬರುತ್ತಿವೆ.

ವಿಶೇಷ ಸಂದರ್ಭದಲ್ಲಿ ಅಧಿವೇಶನ ನಡೆಸಲು ವಿಧಾನಸಭೆ ಸಚಿವಾಲಯಕ್ಕೆ ಅಧಿಕಾರ ಇದೆ. ವಿಧಾನಸಭೆ ಸಚಿವಾಲಯ ಮಾಡುವ ವೆಚ್ಚದ ವಿವರವನ್ನು ಕೇಳುವ ಅಧಿಕಾರ ಕಾನೂನು ಸಚಿವರಿಗೆ ಇಲ್ಲ. ಸರ್ಕಾರಕ್ಕೆ ಖರ್ಚು ಮಾಡಲು ಹಣ ನೀಡುವುದೇ ಶಾಸಕಾಂಗ. ಹೀಗಾಗಿ ವಜ್ರಮಹೋತ್ಸವ ಕಾರ್ಯಕ್ರಮದ ಲೆಕ್ಕವನ್ನು ಸರ್ಕಾರ ಕೇಳುವಂತಿಲ್ಲ.
– ಎಸ್‌. ಮೂರ್ತಿ, ವಿಧಾನಸಭೆ ಕಾರ್ಯದರ್ಶಿ.

ಎರಡು ದಿನದ ಕಾರ್ಯಕ್ರಮ ಪಟ್ಟಿ ಸಿದ್ದ
ಅಕ್ಟೋಬರ್‌ 25 ಬುಧವಾರ

ಬೆಳಿಗ್ಗೆ 11 ಕ್ಕೆ : ವಿಧಾನ ಮಂಡಲದ ವಿಶೇಷ ಜಂಟಿ ಅಧಿವೇಶನ ಉದ್ದೇಶಿಸಿ ರಾಷ್ಟ್ರಪತಿ ಭಾಷಣ

ಮಧ್ಯಾಹ್ನ 12.30 ಕ್ಕೆ ರಾಷ್ಟ್ರಪತಿಯಿಂದ ಪರಿಷತ್‌ ಸಭಾಂಗಣ ವೀಕ್ಷಣೆ. ಗಾಂಧಿ ಪ್ರತಿಮೆ ಎದುರು ಶಾಸಕರೊಂದಿಗೆ ಫೋಟೊ ತೆಗೆಸಿಕೊಳ್ಳುವುದು.

ಮಧ್ಯಾಹ್ನ 1.30 ಕ್ಕೆ ಬ್ಯಾಂಕ್ವೆಟ್‌ ಹಾಲ್‌ನಲ್ಲಿ ಶಾಸಕರಿಗೆ ಭೋಜನ.

ಮಧ್ಯಾಹ್ನ 3ರಿಂದ 5 ಗಂಟೆವರೆಗೆ ಗಿರೀಶ್‌ ಕಾಸರವಳ್ಳಿ ನಿರ್ದೇಶನದ “ವಿಧಾನಸೌಧ ಕಟ್ಟಡ ನಿರ್ಮಾಣ’ ಸಾಕ್ಷ್ಯ ಚಿತ್ರ ಪ್ರದರ್ಶನ.

ಟಿ.ಎನ್‌ ಸೀತಾರಾಮ್‌ ನಿರ್ದೇಶನ ” ಕರ್ನಾಟಕ ವಿಧಾನ ಮಂಡಲ ಶಾಸನ ಸಭೆ ನಡೆದು ಬಂದ ಹಾದಿ’ ಸಾಕ್ಷ್ಯ ಚಿತ್ರ ಪ್ರದರ್ಶನ ಮಾಸ್ಟರ್‌ ಕಿಶನ್‌ ನಿರ್ದೇಶನದ 3ಡಿ ವರ್ಚುವಲ್‌ ರಿಯಾಲಿಟಿ ವಿಡಿಯೋ ಪ್ರದರ್ಶನ.

ಸಾಯಂಕಾಲ 5 ರಿಂದ 6 ಗಂಟೆವರೆಗೆ ವಿಧಾನಸೌಧದ ಮುಂಭಾಗದಲ್ಲಿ ಸಾಂಸ್ಕೃತಿಕ ಕಾರ್ಯಕ್ರಮ.

ಸಂಜೆ 6 ರಿಂದ 6.30 ವರೆಗೆ ಮಾಜಿ ಮುಖ್ಯಮಂತ್ರಿಗಳಾದ ಕೆ.ಸಿ. ರೆಡ್ಡಿ, ಕೆಂಗಲ್‌ ಹನುಮಂತಯ್ಯ, ಕಡಿದಾಳ ಮಂಜಪ್ಪ ಅವರಿಗೆ ಗೌರವ ಅರ್ಪಣೆ.

ಸಂಜೆ 6.30 ರಿಂದ 8.30 ರ ವರೆಗೆ ಹಂಸಲೇಖ ತಂಡದಿಂದ ರಸ ಮಂಜರಿ ಕಾರ್ಯಕ್ರಮ ಜೊತೆಗೆ 3ಡಿ ಮ್ಯಾಪಿಂಗ್‌ ಮೂಲಕ ಸರ್ಕಾರದ ಸಾಧನೆಗಳನ್ನು ಬಿಂಬಿಸುವ ಚಿತ್ರಗಳ ಪ್ರದರ್ಶನ.

ಅಕ್ಟೋಬರ 26 ಗುರುವಾರ
ಬೆಳಿಗ್ಗೆ 11 ರಿಂದ ಸಂಜೆ 5 ರವರೆಗೆ ಅಧಿವೇಶನ
ಸಂಜೆ 5 ರಿಂದ 6 ರವರೆಗೆ ಸಾಂಸ್ಕೃತಿಕ ಕಾರ್ಯಕ್ರಮ.
ಸಂಜೆ 6 ರಿಂದ 8.30 ರ ವರೆಗೆ ಗ್ರ್ಯಾಮಿ ಪ್ರಶಸ್ತಿ ವಿಜೇತ ರಿಕಿ ಕೇಜ್‌ ಅವರ ತಂಡದಿಂದ ಕರ್ನಾಟಕದ ವೈವಿದ್ಯತೆ ಕುರಿತು “ಶಾಂತಿ ಸಂಸಾರ ಸಂಗೀತ ಕಾರ್ಯಕ್ರಮ’ ಹಾಗೂ 3ಡಿ ಮ್ಯಾಪ್‌ ಮೂಲಕ ಸರ್ಕಾರದ ಸಾಧನೆಗಳ ಚಿತ್ರಗಳ ಪ್ರದರ್ಶನ ನಡೆಯಲಿದೆ.

– ಶಂಕರ ಪಾಗೋಜಿ

ಟಾಪ್ ನ್ಯೂಸ್

Mangaluru: ಕಪಿತಾನಿಯೋ ಮತದಾನ ಕೇಂದ್ರದ ಬಳಿ ಪೊಲೀಸರೊಂದಿಗೆ‌ ಕಾರ್ಯಕರ್ತರ ಘರ್ಷಣೆ…

Mangaluru: ಕಪಿತಾನಿಯೋ ಮತದಾನ ಕೇಂದ್ರದ ಬಳಿ ಪೊಲೀಸರೊಂದಿಗೆ‌ ಕಾರ್ಯಕರ್ತರ ಘರ್ಷಣೆ…

Congress ನಿಂದ ಸ್ಮಾರ್ಟ್ ಕಾರ್ಡ್ ಹಂಚಿಕೆ: ರೆಡ್‌ಹ್ಯಾಂಡ್ ಆಗಿ ಹಿಡಿದ ಮೈತ್ರಿ ಕಾರ್ಯಕರ್ತರು

Congress ನಿಂದ ಸ್ಮಾರ್ಟ್ ಕಾರ್ಡ್ ಹಂಚಿಕೆ: ರೆಡ್‌ಹ್ಯಾಂಡ್ ಆಗಿ ಹಿಡಿದ ಮೈತ್ರಿ ಕಾರ್ಯಕರ್ತರು

Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ

Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ…

ಅರಂತೋಡು: ಬೈಕ್ – ಕಾರು ನಡುವೆ ಅಪಘಾತ… ಓರ್ವ ಮೃತ್ಯು

ಅರಂತೋಡು: ಬೈಕ್ – ಕಾರು ನಡುವೆ ಅಪಘಾತ… ಓರ್ವ ಮೃತ್ಯು

LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ

LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ

Election: ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ… ಬಿಗಿ ಭದ್ರತೆ

Election: ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ… ಬಿಗಿ ಭದ್ರತೆ

IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್‌

IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Congress ನಿಂದ ಸ್ಮಾರ್ಟ್ ಕಾರ್ಡ್ ಹಂಚಿಕೆ: ರೆಡ್‌ಹ್ಯಾಂಡ್ ಆಗಿ ಹಿಡಿದ ಮೈತ್ರಿ ಕಾರ್ಯಕರ್ತರು

Congress ನಿಂದ ಸ್ಮಾರ್ಟ್ ಕಾರ್ಡ್ ಹಂಚಿಕೆ: ರೆಡ್‌ಹ್ಯಾಂಡ್ ಆಗಿ ಹಿಡಿದ ಮೈತ್ರಿ ಕಾರ್ಯಕರ್ತರು

Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ

Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ…

Election: ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ… ಬಿಗಿ ಭದ್ರತೆ

Election: ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ… ಬಿಗಿ ಭದ್ರತೆ

Hubballi: ನನ್ನ ಕುಟುಂಬಕ್ಕೆ ಜೀವ ಬೆದರಿಕೆ ಇದೆ, ಭದ್ರತೆ ಕೊಡಿ; ನೇಹಾ ತಂದೆ ಹಿರೇಮಠ

Hubballi: ನನ್ನ ಕುಟುಂಬಕ್ಕೆ ಜೀವ ಬೆದರಿಕೆ ಇದೆ, ಭದ್ರತೆ ಕೊಡಿ; ನೇಹಾ ತಂದೆ ಹಿರೇಮಠ

IT raid: ಡಿಕೆಸು ಆಪ್ತರ ಮನೆ ಮೇಲೆ ಐಟಿ ದಾಳಿ;  ಜಪ್ತಿ ಮಾಡಿರುವ ದಾಖಲೆ ಪರಿಶೀಲನೆ

IT raid: ಡಿಕೆಸು ಆಪ್ತರ ಮನೆ ಮೇಲೆ ಐಟಿ ದಾಳಿ;  ಜಪ್ತಿ ಮಾಡಿರುವ ದಾಖಲೆ ಪರಿಶೀಲನೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Mangaluru: ಕಪಿತಾನಿಯೋ ಮತದಾನ ಕೇಂದ್ರದ ಬಳಿ ಪೊಲೀಸರೊಂದಿಗೆ‌ ಕಾರ್ಯಕರ್ತರ ಘರ್ಷಣೆ…

Mangaluru: ಕಪಿತಾನಿಯೋ ಮತದಾನ ಕೇಂದ್ರದ ಬಳಿ ಪೊಲೀಸರೊಂದಿಗೆ‌ ಕಾರ್ಯಕರ್ತರ ಘರ್ಷಣೆ…

Congress ನಿಂದ ಸ್ಮಾರ್ಟ್ ಕಾರ್ಡ್ ಹಂಚಿಕೆ: ರೆಡ್‌ಹ್ಯಾಂಡ್ ಆಗಿ ಹಿಡಿದ ಮೈತ್ರಿ ಕಾರ್ಯಕರ್ತರು

Congress ನಿಂದ ಸ್ಮಾರ್ಟ್ ಕಾರ್ಡ್ ಹಂಚಿಕೆ: ರೆಡ್‌ಹ್ಯಾಂಡ್ ಆಗಿ ಹಿಡಿದ ಮೈತ್ರಿ ಕಾರ್ಯಕರ್ತರು

Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ

Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ…

ಅರಂತೋಡು: ಬೈಕ್ – ಕಾರು ನಡುವೆ ಅಪಘಾತ… ಓರ್ವ ಮೃತ್ಯು

ಅರಂತೋಡು: ಬೈಕ್ – ಕಾರು ನಡುವೆ ಅಪಘಾತ… ಓರ್ವ ಮೃತ್ಯು

LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ

LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.