ಜಿಎಸ್‌ಟಿ ಪಾವತಿಗೆ ಸೆಪ್ಟೆಂಬರ್‌ ಗಡುವು ಮುಕ್ತಾಯ


Team Udayavani, Oct 21, 2017, 9:20 AM IST

21-STATE-6.jpg

ಬೆಂಗಳೂರು: ಜಿಎಸ್‌ಟಿಯಡಿ ಸೆಪ್ಟೆಂಬರ್‌ ತಿಂಗಳ ವಹಿವಾಟಿಗೆ ಸಂಬಂಧಪಟ್ಟಂತೆ ತೆರಿಗೆ (ಆರ್‌3ಬಿ) ಪಾವತಿಗೆ ನೀಡಲಾಗಿದ್ದ ಅವಧಿ ಶುಕ್ರವಾರ ಮುಕ್ತಾಯವಾಗಿದ್ದು, ಶನಿವಾರದಿಂದ ಪ್ರತಿ ದಿನದ ವಿಳಂಬ ಪಾವತಿಗೆ 100 ರೂ. ದಂಡ ವಿಧಿಸಲಾಗುತ್ತದೆ.

ಅಂತಾರಾಷ್ಟ್ರೀಯ ಜಿಎಸ್‌ಟಿ, ಕೇಂದ್ರ ಜಿಎಸ್‌ಟಿ ಹಾಗೂ ರಾಜ್ಯ ಜಿಎಸ್‌ಟಿಯಡಿ ತೆರಿಗೆ ಪಾವತಿಸದಿದ್ದರೆ ದಿನಕ್ಕೆ ತಲಾ 
100ರೂ.ನಂತೆ ದಂಡ ತೆರಬೇಕಾಗುತ್ತದೆ. ಈ ರೀತಿ ಗರಿಷ್ಠ 5000ರೂ.ವರೆಗೆ ದಂಡ ವಿಧಿಸಲು ಅವಕಾಶವಿದ್ದು, ವ್ಯಾಪಾರ- ವಹಿವಾಟುದಾರರು ಸಕಾಲದಲ್ಲಿ ತೆರಿಗೆ ಪಾವತಿಸಿದರೆ ದಂಡದ ಹೊರೆಯಿಂದ ತಪ್ಪಿಸಿಕೊಳ್ಳಬಹುದಾಗಿದೆ. ನೂತನ ಸರಕು ಮತ್ತು ಸೇವಾ ತೆರಿಗೆ ವ್ಯವಸ್ಥೆಯು ಜುಲೈ 1ರಿಂದ ಜಾರಿಯಾಗಿದ್ದು, ಜುಲೈ ತಿಂಗಳ ವಹಿವಾಟಿಗೆ ಸೂಕ್ತ ತೆರಿಗೆಯನ್ನು ಆಗಸ್ಟ್‌
20ನೇ ತಾರೀಖೀನೊಳಗೆ ಪಾವತಿಸಬೇಕಿತ್ತು. ವಿಳಂಬ ಪಾವತಿಗೆ ದಿನವೊಂದಕ್ಕೆ 100ರೂ. ದಂಡ ವಿಧಿಸಲಾಗುತ್ತದೆ. ಆದರೆ ದೇಶಾದ್ಯಂತ ಹೊಸ ಜಿಎಸ್‌ಟಿ ವ್ಯವಸ್ಥೆ ಜಾರಿಯಾದ ಹಿನ್ನೆಲೆಯಲ್ಲಿ ಜುಲೈ ತಿಂಗಳ ತೆರಿಗೆ ಪಾವತಿಯಲ್ಲಿನ ವಿಳಂಬಕ್ಕೆ ದಂಡ ವಿಧಿಸುವುದನ್ನು ಕೇಂದ್ರ ಸರ್ಕಾರ ಕೈಬಿಟ್ಟಿತ್ತು. ಆಗಸ್ಟ್‌ ತಿಂಗಳ ವಹಿವಾಟಿಗೆ ತೆರಿಗೆ ಪಾವತಿಸಲು ಸೆ.20 ಕಡೆಯ ದಿನವಾಗಿತ್ತು. ವಿಳಂಬ ತೆರಿಗೆ ಪಾವತಿಗೆ ಈಗಾಗಲೇ ದಂಡ ವಿಧಿಸಲಾಗುತ್ತಿದೆ.

ಸೆಪ್ಟೆಂಬರ್‌ ವಹಿವಾಟಿಗೆ ಸಂಬಂಧಪಟ್ಟಂತೆ ತೆರಿಗೆ ಪಾವತಿಗೆ ಅ.20 ಕಡೆಯ ದಿನವಾಗಿದ್ದು, ಶುಕ್ರವಾರ ಮುಕ್ತಾಯವಾಗಿದೆ. ಈ ಬಾರಿ ಯಾವುದೇ ಕಾರಣಕ್ಕೂ ವಿಳಂಬ ಪಾವತಿಗೆ ದಂಡ ಹಾಕುವ ಪ್ರಕ್ರಿಯೆ ಕೈಬಿಡುವ ಪ್ರಸ್ತಾಪವಿಲ್ಲ ಎಂದು ಕೇಂದ್ರ ಸರ್ಕಾರ ಸ್ಪಷ್ಟಪಡಿಸಿದೆ. ಹಾಗಾಗಿ ದಂಡದ ಹೊರೆ ತಪ್ಪಿಸಿಕೊಳ್ಳಲು ವ್ಯಾಪಾರ- ವಹಿವಾಟುದಾರರು ತೆರಿಗೆ ಪಾವತಿಗೆ ಮುಗಿಬಿದ್ದಿದ್ದು 
ಕಂಡುಬಂತು. ಶುಕ್ರವಾರದೊಳಗೆ ತೆರಿಗೆ ಪಾವತಿಸಲಾಗದವರು ಪ್ರತಿ ದಿನದ ವಿಳಂಬ ಪಾವತಿಗೆ 100ರೂ. ದಂಡ ತೆರಬೇಕಾಗುತ್ತದೆ. ಈ ದಂಡ ಮೊತ್ತವನ್ನು ಗರಿಷ್ಠ 5000ರೂ. ವರೆಗೆ ಸಂಗ್ರಹಿಸಲಷ್ಟೇ ಅವಕಾಶವಿದ್ದು, ನಂತರವೂ ತೆರಿಗೆ ಪಾವತಿಸದಿದ್ದರೆ ಪ್ರಕರಣ ದಾಖಲಿಸಿಕೊಂಡು ಕಾನೂನು ಪ್ರಕಾರ ಕ್ರಮ ಜರುಗಿಸಲಿದೆ.

ಅ.27ರಂದು ವಿಶೇಷ ಸಂವಾದ 
ಎಫ್ಕೆಸಿಸಿಐ ಜಿಎಸ್‌ಟಿ ಕುರಿತಂತೆ ಅ.27ರಂದು ಸಂಸ್ಥೆಯಲ್ಲೇ  ವಿಶೇಷ ಸಂವಾದ ಆಯೋಜಿಸಿದ್ದು, ಕೇಂದ್ರ ಜಿಎಸ್‌ಟಿ ವಿಭಾಗದ ಪ್ರಮುಖರು ಹಾಗೂ ರಾಜ್ಯದಲ್ಲಿರುವ ಕೇಂದ್ರ ಹಾಗೂ ರಾಜ್ಯ ಜಿಎಸ್‌ಟಿ ಅಧಿಕಾರಿಗಳು ಪಾಲ್ಗೊಳ್ಳಲಿದ್ದಾರೆ. ಜಿಎಸ್‌ಟಿ ಕುರಿತಂತೆ ವ್ಯಾಪಾರ- ವ್ಯವಹಾರಸ್ಥರ ಗೊಂದಲ ನಿವಾರಿಸಿ ಕೊಳ್ಳಲು, ಸ್ಪಷ್ಟತೆ ಪಡೆದುಕೊಳ್ಳಲು ಅನುಕೂಲವಾಗುವಂತೆ ಎಫ್ ಕೆಸಿಸಿಐ ವತಿಯಿಂದ ಅ.27ರಂದು ವಿಶೇಷ ಸಂವಾದ ಹಮ್ಮಿಕೊಳ್ಳಲಾಗಿದೆ. ಕೇಂದ್ರ ಜಿಎಸ್‌ಟಿ ನೀತಿ ನಿರೂಪಣಾ ತಂಡದ ಪ್ರಮುಖರು, ತಾಂತ್ರಿಕ ತಜ್ಞ ಅಧಿಕಾರಿಗಳು, ರಾಜ್ಯದಲ್ಲಿರುವ ಕೇಂದ್ರ ಹಾಗೂ ರಾಜ್ಯ ಜಿಎಸ್‌ಟಿ ವಿಭಾಗದ ಹಿರಿಯ ಅಧಿಕಾರಿಗಳು
ಭಾಗವಹಿಸಲಿದ್ದಾರೆ. ವ್ಯಾಪಾರ- ವ್ಯವಹಾರಸ್ಥರ ಪ್ರಶ್ನೆಗಳಿಗೆ ಉತ್ತರಿಸುವ ಮೂಲಕ ನೇರ ಉತ್ತರ ನೀಡಲಿದ್ದಾರೆಂದು ರಾಜ್ಯ ಸರ್ಕಾರದ ಜಿಎಸ್‌ಟಿ ಸಲಹಾ ಸಮಿತಿ ಸದಸ್ಯ ಬಿ.ಟಿ.ಮನೋಹರ್‌ ತಿಳಿಸಿದರು.

ಟಾಪ್ ನ್ಯೂಸ್

1-asasas

Naxal ಬಾಧಿತ ಮತಗಟ್ಟೆಗಳ ಭದ್ರತೆಗೆ ಹೆಚ್ಚುವರಿ ಆದ್ಯತೆ: ಮುಲ್ಲೈ ಮುಗಿಲನ್‌

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

KPCC: ಮೋದಿ, ರಾಜನಾಥ್‌ಸಿಂಗ್‌ ವಿರುದ್ಧ ಕ್ರಮಕ್ಕೆ ಕೆಪಿಸಿಸಿ ದೂರು

KPCC: ಮೋದಿ, ರಾಜನಾಥ್‌ಸಿಂಗ್‌ ವಿರುದ್ಧ ಕ್ರಮಕ್ಕೆ ಕೆಪಿಸಿಸಿ ದೂರು

1-rerwer

IPL; ಸನ್‌ರೈಸರ್ಸ್ ಹೈದರಾಬಾದ್ ವಿರುದ್ಧ ಜಯದ ನಗು ಬೀರಿದ ಆರ್ ಸಿಬಿ

MONEY (2)

Mysuru: ದಾಖಲೆ ಇಲ್ಲದೆ ಸಾಗಿಸುತ್ತಿದ್ದ 89 ಲಕ್ಷ ರೂ. ವಶಕ್ಕೆ

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ

accident

Gangavathi: ಎರಡು ಪ್ರತ್ಯೇಕ ಅಪಘಾತದಲ್ಲಿ ಮೂರು ಜನ ಸಾವು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

KPCC: ಮೋದಿ, ರಾಜನಾಥ್‌ಸಿಂಗ್‌ ವಿರುದ್ಧ ಕ್ರಮಕ್ಕೆ ಕೆಪಿಸಿಸಿ ದೂರು

KPCC: ಮೋದಿ, ರಾಜನಾಥ್‌ಸಿಂಗ್‌ ವಿರುದ್ಧ ಕ್ರಮಕ್ಕೆ ಕೆಪಿಸಿಸಿ ದೂರು

State government: ರಾಜ್ಯ ಸರಕಾರಕ್ಕೆ ಎನ್‌ಸಿಬಿ ನೋಟಿಸ್‌? 

State government: ರಾಜ್ಯ ಸರಕಾರಕ್ಕೆ ಎನ್‌ಸಿಬಿ ನೋಟಿಸ್‌? 

MONEY (2)

Mysuru: ದಾಖಲೆ ಇಲ್ಲದೆ ಸಾಗಿಸುತ್ತಿದ್ದ 89 ಲಕ್ಷ ರೂ. ವಶಕ್ಕೆ

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-asasas

Naxal ಬಾಧಿತ ಮತಗಟ್ಟೆಗಳ ಭದ್ರತೆಗೆ ಹೆಚ್ಚುವರಿ ಆದ್ಯತೆ: ಮುಲ್ಲೈ ಮುಗಿಲನ್‌

1-MB

Note Ban ವೇಳೆ ಮಹಿಳೆಯರು ಮಂಗಳಸೂತ್ರ ಅಡವಿಟ್ಟಾಗ ಮೋದಿ ಮೌನ: ಭಂಡಾರಿ

Exam

Udupi; ಪಿಯುಸಿ ಪರೀಕ್ಷೆ-2 : ನಿಷೇಧಾಜ್ಞೆ ಜಾರಿ

IMD

Dakshina Kannada ಜಿಲ್ಲೆಯಲ್ಲಿ ಮುಂದುವರಿದ ಉರಿಬಿಸಿಲು:ಮಳೆಯ ಮುನ್ಸೂಚನೆ ಇಲ್ಲ

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.