“ಪೇಜಾವರ ಶ್ರೀಗಳಿಗೆ ಲಿಂಗಾಯತರ ಭಯವೇಕೆ’


Team Udayavani, Oct 21, 2017, 10:12 AM IST

21-STATE-11.jpg

ಬೆಂಗಳೂರು: “ಲಿಂಗಾಯತ ಪ್ರತ್ಯೇಕ ಧರ್ಮದ ಬಗ್ಗೆ ಪೇಜಾವರ ಶ್ರೀಗಳಿಗೆ ಭಯವೇಕೆ’ ಎಂದು ನಿವೃತ್ತ ಐಎಎಸ್‌ ಅಧಿಕಾರಿ ಎಸ್‌.ಎಂ. ಜಾಮದಾರ ಪ್ರಶ್ನಿಸಿದ್ದಾರೆ. “ಲಿಂಗಾಯತರು ಹಿಂದೂ ಧರ್ಮದ ಭಾಗವೇ ಆಗಿದ್ದಾರೆ’ ಎಂದು ಹೇಳಿಕೆ ನೀಡಿರುವ ಪೇಜಾವರ ಶ್ರೀಗಳ ಹೇಳಿಕೆ ಬಗ್ಗೆ ಕಿಡಿಕಾರಿರುವ ಅವರು, “ಲಿಂಗಾಯತ ಪ್ರತ್ಯೇಕ ಧರ್ಮದ ಹೋರಾಟದ ಬಗ್ಗೆ ಪೇಜಾವರ ಶ್ರೀಗಳು ಅನಗತ್ಯ ಹೇಳಿಕೆಗಳನ್ನು ನೀಡುತ್ತಿದ್ದಾರೆ. ಅವರು ಲಿಂಗಾಯತ ಹೋರಾಟಕ್ಕೆ ಭಯಗೊಂಡಿರುವರೇ ಅಥವಾ ಇದರ ಹಿಂದೆ ಏನಾದರೂ ಹುನ್ನಾರ ಇದೆಯೇ’ ಎಂದು ಪ್ರಶ್ನಿಸಿದ್ದಾರೆ.

ಶುಕ್ರವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, “ಬೌದ್ಧ, ಜೈನ, ಸಿಖ್‌ ಧರ್ಮಗಳಿಗೆ ಮಾನ್ಯತೆ ನೀಡುವ ಸಂದರ್ಭದಲ್ಲಿ ಮಾತನಾಡದ ಸಂಘ ಪರಿವಾರ, ಬಿಜೆಪಿ ನಾಯಕರು ಹಾಗೂ ಪೇಜಾವರ ಶ್ರೀಗಳು ಈಗ ಅಷ್ಟೊಂದು ಪ್ರತಿಕ್ರಿಯೆ ನೀಡುತ್ತಿರುವುದೇಕೆ? ಲಿಂಗಾಯತರು ಭಯೋತ್ಪಾದಕರಲ್ಲ, ದೇಶ ದ್ರೋಹಿಗಳೂ ಅಲ್ಲ. 850 ವರ್ಷಗಳಿಂದಲೂ ಲಿಂಗಾಯತರು ಹಿಂದೂ ಧರ್ಮದ ಭಾಗವಾಗಿಲ್ಲ. ಈಗ ಹೊರಹೋಗುವ ಪ್ರಶ್ನೆಯೇ ಬರುವುದಿಲ್ಲ’ ಎಂದು ಹೇಳಿದರು. ಲಿಂಗಾಯತರು ಶಿವನ ಪೂಜೆ ಮಾಡುವುದರಿಂದ ಅವರೂ ಹಿಂದೂಗಳೆ ಎಂದು ಪೇಜಾವರ ಶ್ರೀಗಳು ಹೇಳಿದ್ದಾರೆ. ಲಿಂಗಾಯತರ ಶಿವನಿಗೂ ಹಿಂದುಗಳ ಶಿವನಿಗೂ ವ್ಯತ್ಯಾಸವಿದೆ. ಹಿಂದುಗಳ ಶಿವನಿಗೆ ಆಕಾರ, ಮದುವೆ ಮಕ್ಕಳು ಎಲ್ಲ ಇದ್ದಾರೆ. ಲಿಂಗಾಯತರ ಶಿವನು ನಿರಾಕಾರನಾಗಿದ್ದು ಅವನಿಗೆ ಮದುವೆ, ಮಕ್ಕಳು ಯಾರೂ ಇಲ್ಲ ಎಂದು ಪ್ರತಿಪಾದಿಸಿದರು.

ವೀರಶೈವರು ಲಿಂಗಾಯತರಲ್ಲ: ವೀರಶೈವರು ಲಿಂಗಾಯತರೇ ಅಲ್ಲ. ಅವರು ಹಿಂದೂ ಧರ್ಮದ ಎಲ್ಲ ಆಚರಣೆಗಳನ್ನು ಮಾಡಿಕೊಂಡು ಬರುತ್ತಿದ್ದಾರೆ. ವೀರಶೈವರನ್ನು ಪ್ರತ್ಯೇ  ಕವಾಗಿ ಬಿಟ್ಟರೆ ನಾವು ಸ್ವತಂತ್ರ ಧರ್ಮ ಪಡೆದುಕೊಳ್ಳುತ್ತೇವೆ. ವೀರಶೈವರನ್ನು ಲಿಂಗಾಯತ ರೊಂದಿಗೆ ಸೇರಿಸಿಕೊಂಡು ಹೋಗುವ ಪ್ರಯತ್ನ ನಡೆಯುತ್ತಿದೆ. ಅದಕ್ಕಾಗಿ ಸಾಕಷ್ಟು ಚರ್ಚೆಗಳು ನಡೆಯುತ್ತಿವೆ ಎಂದರು. ಪ್ರತ್ಯೇಕ ಧರ್ಮದ ಮಾನ್ಯತೆಗೆ ತಜ್ಞರ ಸಮಿತಿ ರಚಿಸುವ ಬದಲು ರಾಜ್ಯ ಸರ್ಕಾರ ನೇರವಾಗಿ ಅಲ್ಪ ಸಂಖ್ಯಾತರ ಆಯೋಗಕ್ಕೆ ನಮ್ಮ ಮನವಿಗಳನ್ನು ಕಳುಹಿಸಿ ಕೊಟ್ಟರೆ, ನಾವು ನಮ್ಮ ವಾದವನ್ನು ಅಲ್ಲಿ ಮಾಡುತ್ತೇವೆ. ಆಯೋಗದ
ಮುಂದೆ ಯಾರು ದಾಖಲೆಗಳನ್ನು ನೀಡುತ್ತಾರೆ‌, ಆ ಹೆಸರಿನಲ್ಲಿ ಪ್ರತ್ಯೇಕ ಧರ್ಮಕ್ಕೆ ಮಾನ್ಯತೆ ದೊರೆಯಲಿದೆ ಎಂದು ಹೇಳಿದರು.

ಧರ್ಮ ಹೋರಾಟಕ್ಕೆ  ವಿಚಾರವಾದಿಗಳ ಹತ್ಯೆ ಪ್ರತ್ಯೇಕ ಲಿಂಗಾಯತ ಧರ್ಮದ ಪರವಾಗಿ ಧ್ವನಿ ಎತ್ತಿದ ಸಂಶೋಧಕ ಎಂ.ಎಂ. ಕಲಬುರ್ಗಿ, ಸಾಹಿತಿ ಲಿಂಗಣ್ಣ ಸತ್ಯಂಪೇಟೆ ಹಾಗೂ ಪರ್ತಕರ್ತೆ ಗೌರಿ ಲಂಕೇಶ್‌ ಹತ್ಯೆ ನಡೆದಿದೆ ಎಂಬ ಸಂಶಯ ಇದೆ ಎಂದು ಜಾಮದಾರ್‌ ಹೊಸ ಬಾಂಬ್‌ ಸಿಡಿಸಿದರು. ಕಲಬುರ್ಗಿ ಮತ್ತು ಲಿಂಗಣ್ಣ ಸತ್ಯಂಪೇಟೆ ಲಿಂಗಾಯತ ಪ್ರತ್ಯೇಕ ಧರ್ಮದ ಪ್ರಬಲ ಪ್ರತಿಪಾದಕರಾಗಿದ್ದರು, ಗೌರಿ ಲಂಕೇಶ್‌ ಕೂಡ ತಮ್ಮ ಪತ್ರಿಕೆಯಲ್ಲಿ ಇಪ್ಪತ್ತು ಪುಟಗಳಷ್ಟು ಲಿಂಗಾಯತ ಪ್ರತ್ಯೇಕ ಧರ್ಮದ ಬಗ್ಗೆ ಬರೆದಿದ್ದರು. ಆ ಕಾರಣಕ್ಕಾಗಿಯೇ ಅವರ ಹತ್ಯೆ ನಡೆದಿದೆ ಎಂಬ ಅನುಮಾನ ಮೂಡುತ್ತಿದೆ. ನನಗೂ ಜೀವ ಬೆದರಿಕೆ ಇದೆ. ಪ್ರತ್ಯೇಕ ಧರ್ಮಕ್ಕಾಗಿ ನಡೆಯುವ ಹೋರಾಟದಲ್ಲಿ ನಾವು ಯಾವುದೇ ಬೆದರಿಕೆಗೆ ಬಗ್ಗುವುದಿಲ್ಲ. ನಮ್ಮ ಹೋರಾಟ ನಿರಂತರವಾಗಿರುತ್ತದೆ ಎಂದು ತಿಳಿಸಿದರು.

ಶಿವ ಭಕ್ತರೆಲ್ಲ ಹಿಂದೂಗಳಲ್ಲ: ನಿಡುಮಾಮಿಡಿ ಶ್ರೀ
ಮೈಸೂರು: “ಶಿವ ಭಕ್ತರೆಲ್ಲ ಹಿಂದೂಗಳಲ್ಲ. ಶಿವನನ್ನು ಪೂಜಿಸುವ ಕೆಲವು ಜನರನ್ನು ಮಾತ್ರ ಹಿಂದೂಗಳೆನ್ನಬಹುದು. ಸನಾತನಿಗಳೂ ಶಿವಭಕ್ತರಿದ್ದಾರೆ’ ಎಂದು ಮಾನವ ಧರ್ಮ ಪೀಠದ ನಿಡುಮಾಮಿಡಿ ವೀರಭದ್ರ ಚೆನ್ನಮಲ್ಲ  ಸ್ವಾಮೀಜಿ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ. ಭಾರತ ಮೂಲ ನಿವಾಸಿಗಳ ಸಂಸ್ಕೃತಿ, ಸಾಹಿತ್ಯ ಅಧ್ಯಯನ ಮತ್ತು ಸಂಶೋಧನಾ ಸಂಸ್ಥೆ ಇದೇ ಮೊದಲ ಬಾರಿಗೆ
ಶುಕ್ರವಾರ ನಗರದ ಪುರಭವನದಲ್ಲಿ ಆಯೋಜಿಸಿದ್ದ ಬಲಿ ಚಕ್ರವರ್ತಿ ಸ್ಮರಣೋತ್ಸವ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು. ಇತ್ತೀಚೆಗೆ ಪೇಜಾವರ ಶ್ರೀಗಳು ಶಿವನನ್ನು ಪೂಜಿಸುವವರೆಲ್ಲ ಹಿಂದೂಗಳು ಎಂದು ಹೇಳುತ್ತಿದ್ದಾರೆ. ಆದರೆ, ಎಲ್ಲ ಶಿವಭಕ್ತರೂ ಹಿಂದೂಗಳು ಎನ್ನುವುದು ಅನ್ಯಾಯ. ಭಾರತದ ಮೂಲ ನಿವಾಸಿಗಳಲ್ಲಿ 18 ಕೋಮುಗಳು ವೈದಿಕ ಮೌಲ್ಯಗಳನ್ನು ನಿರಾಕರಿಸಿ ಶಿವಭಕ್ತರಾಗಿದ್ದಾರೆ ಎಂದರು.

ಶಿವಭಕ್ತರ ಮೇಲೆ ದಾಳಿ ಮಾಡಿ, ಶಿವ ಸಂಸ್ಕೃತಿಯನ್ನು ನಾಶ ಮಾಡುವ ಕೆಲಸವನ್ನು ಸನಾತನಿಗಳು ಪ್ರಾಚೀನ ಕಾಲದಿಂದಲೂ ಮಾಡುತ್ತಾ ಬಂದಿದ್ದಾರೆ. ಆರ್ಯರು ತಮ್ಮ ಹೆಣ್ಣು ಮಕ್ಕಳನ್ನು ಕಮಲ ಮುಖೀ, ಚಂದ್ರಮುಖೀ ಎಂದು ಚಿತ್ರಿಸಿ, ತಮ್ಮವರಲ್ಲದವರ ಹೆಣ್ಣು ಮಕ್ಕಳನ್ನು ಶೂರ್ಪನಖೀ, ಮಂಡೋದರಿ ಎಂದು ಬಿಂಬಿಸಿದ್ದಾರೆ ಎಂದರು. ಬೆಂಗಳೂರಿನಲ್ಲಿ ಶುಕ್ರವಾರ ನಿವೃತ್ತ ಐಎಎಸ್‌ ಅಧಿಕಾರಿ ಎಸ್‌.ಎಂ. ಜಾಮದಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದರು.  

ಟಾಪ್ ನ್ಯೂಸ್

1-WQEWQEWQ

Eshwarappa ಅವರಿಂದ ನಾನೇನು ಕಲಿಯಬೇಕಾಗಿಲ್ಲ: ಗೀತಾ ಶಿವರಾಜ್ ಕುಮಾರ್

Vijayendra (2)

PM ಮೋದಿಯವರಿಂದ ಏ.28 ಮತ್ತು 29 ರಂದು 5 ಕಡೆ ಪ್ರಚಾರ: ವಿಜಯೇಂದ್ರ ಮಾಹಿತಿ

Lokayukta

Bellary; ಲೋಕಾಯುಕ್ತ ಬಲೆಗೆ ಬಿದ್ದ 6 ಮಂದಿ ಭ್ರಷ್ಟ ಅಧಿಕಾರಿಗಳು: ಲಕ್ಷ ಲಕ್ಷ ರೂ. ಲಂಚ!

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

1-asaa

Heart beats; ಭಾರತದ ಹೃದಯ ಪಾಕಿಸ್ಥಾನದ ಯುವತಿಗೆ ಹೊಸ ಜೀವನ ನೀಡಿತು..

who will be the Indian fast bowlers for t20 world cup

T20 World Cup; ಯಾರಿಲ್ಲ.. ಯಾರಿಲ್ಲ.. ವಿಶ್ವಕಪ್ ಗೆ ವೇಗದ ಬೌಲರ್ ಗಳು ಯಾರೆಲ್ಲಾ?

ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಮಾಡುವ ಹಾಗಿಲ್ಲ

ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಹಕ್ಕು ಹೊಂದಿಲ್ಲ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Transfer order: ರಾಜ್ಯದ 388 ನ್ಯಾಯಾಧೀಶರ ವರ್ಗಾವಣೆ ಮಾಡಿ ಆದೇಶ

Transfer order: ರಾಜ್ಯದ 388 ನ್ಯಾಯಾಧೀಶರ ವರ್ಗಾವಣೆ ಮಾಡಿ ಆದೇಶ

Vijayendra (2)

PM ಮೋದಿಯವರಿಂದ ಏ.28 ಮತ್ತು 29 ರಂದು 5 ಕಡೆ ಪ್ರಚಾರ: ವಿಜಯೇಂದ್ರ ಮಾಹಿತಿ

Lokayukta

Bellary; ಲೋಕಾಯುಕ್ತ ಬಲೆಗೆ ಬಿದ್ದ 6 ಮಂದಿ ಭ್ರಷ್ಟ ಅಧಿಕಾರಿಗಳು: ಲಕ್ಷ ಲಕ್ಷ ರೂ. ಲಂಚ!

siddaramaiah

Bidar; ನೇಹಾ ಪ್ರಕರಣದಲ್ಲಿ ಬಿಜೆಪಿ ರಾಜಕೀಯ‌ ಮಾಡುವುದು ಸರಿಯಲ್ಲ: ಸಿಎಂ ಸಿದ್ಧರಾಮಯ್ಯ‌

Lok Sabha Polls: “ಮೋದಿ ಮತ್ತೂಮ್ಮೆ ಪ್ರಧಾನಿಯಾಗಿಸುವ ಪಣ ತೊಡಿ’ : ಬಿ.ವೈ. ರಾಘವೇಂದ್ರ

Lok Sabha Polls: “ಮೋದಿ ಮತ್ತೊಮ್ಮೆ ಪ್ರಧಾನಿಯಾಗಿಸುವ ಪಣ ತೊಡಿ’ : ಬಿ.ವೈ. ರಾಘವೇಂದ್ರ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Shimoga: ಈಶ್ವರಪ್ಪ ಪರ ಪ್ರಚಾರ ನಡೆಸಿದ್ದ ಮಹಿಳೆ ಮೇಲೆ ಹಲ್ಲೆ- ದೂರು1

Shimoga: ಈಶ್ವರಪ್ಪ ಪರ ಪ್ರಚಾರ ನಡೆಸಿದ್ದ ಮಹಿಳೆ ಮೇಲೆ ಹಲ್ಲೆ- ದೂರು

Bramavara: “ನನ್ನನ್ನು ಕ್ಷಮಿಸಿ’ ಎಂದು ಹೇಳಿ ನಾಪತ್ತೆ

Bramavara: “ನನ್ನನ್ನು ಕ್ಷಮಿಸಿ’ ಎಂದು ಹೇಳಿ ನಾಪತ್ತೆ

Bird flu: ಕೇರಳದಲ್ಲಿ ಹಕ್ಕಿಜ್ವರ ಭೀತಿ; ಚೆಕ್‌ಪೋಸ್ಟ್‌ಗಳಲ್ಲಿ ತಪಾಸಣೆ

Bird flu: ಕೇರಳದಲ್ಲಿ ಹಕ್ಕಿಜ್ವರ ಭೀತಿ; ಚೆಕ್‌ಪೋಸ್ಟ್‌ಗಳಲ್ಲಿ ತಪಾಸಣೆ

Delhi LG: ಕೇರಳ ಚರ್ಚುಗಳಿಗೆ ದಿಲ್ಲಿ ಗೌರ್ನರ್‌ ಭೇಟಿ; ಆಯೋಗಕ್ಕೆ “ಕೈ’ ದೂರು

Delhi LG: ಕೇರಳ ಚರ್ಚುಗಳಿಗೆ ದಿಲ್ಲಿ ಗೌರ್ನರ್‌ ಭೇಟಿ; ಆಯೋಗಕ್ಕೆ “ಕೈ’ ದೂರು

Transfer order: ರಾಜ್ಯದ 388 ನ್ಯಾಯಾಧೀಶರ ವರ್ಗಾವಣೆ ಮಾಡಿ ಆದೇಶ

Transfer order: ರಾಜ್ಯದ 388 ನ್ಯಾಯಾಧೀಶರ ವರ್ಗಾವಣೆ ಮಾಡಿ ಆದೇಶ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.