ಸ್ಯಾನಿಟರಿ ನ್ಯಾಪ್‌ಕಿನ್‌ ಬೇರೆ ರಾಜ್ಯದಿಂದ ಖರೀದಿ!


Team Udayavani, Oct 21, 2017, 10:25 AM IST

21-STATE-13.jpg

ಕಲಬುರಗಿ: ನೆರೆಯ ಮಹಾರಾಷ್ಟ್ರ ಸೇರಿ ಇತರೆ ರಾಜ್ಯಗಳಲ್ಲಿ ಮಹಿಳೆಯರಿಗೆ ಹಾಗೂ ಕಿಶೋರಿಯರಿಗೆ ಉಚಿತವಾಗಿ ವಿತರಿಸುವ ಸ್ಯಾನಿಟರಿ ನ್ಯಾಪ್‌ಕಿನ್‌ಗಳನ್ನು ಸ್ಥಳೀಯ ಸ್ತ್ರೀಶಕ್ತಿ ಸ್ವ ಸ್ವಹಾಯ ಸಂಘಗಳಿಂದ ಖರೀದಿಸುತ್ತಿದ್ದರೆ, ರಾಜ್ಯದಲ್ಲಿ ಮಾತ್ರ ಬೇರೆ ರಾಜ್ಯದ ಕಂಪನಿಯೊಂದರ ಮೂಲಕ ಖರೀದಿಸಲಾಗುತ್ತಿದೆ.

ಶುಚಿ ಯೋಜನೆ ಅಡಿ ಮಹಿಳೆಯರಿಗೆ ಹಾಗೂ ಕಿಶೋರಿಯರಿಗೆ ಉಚಿತವಾಗಿ ನೀಡುವ ಸ್ಯಾನಿಟರಿ ನ್ಯಾಪ್‌ಕಿನ್‌ಗಳನ್ನು ನೆರೆಯ ಆಂಧ್ರಪ್ರದೇಶ ಮೂಲದ ಕಂಪನಿಯೊಂದರ ಮೂಲಕ ಟೆಂಡರ್‌ ಇಲ್ಲದೆ 45 ಕೋಟಿ ರೂ. ವೆಚ್ಚದಲ್ಲಿ ಕಳೆದ 7 ವರ್ಷಗಳಿಂದ ಖರೀದಿಸುತ್ತ ಬಂದಿರುವುದು ಟೀಕೆಗೆ ಗುರಿಯಾಗಿದೆ. ಜಿಲ್ಲೆಯ ಅಫಜಲಪುರ ತಾಲೂಕಿನ ಅಮೋಘಸಿದ್ದ ಸ್ತ್ರೀಶಕ್ತಿ ಸ್ವ ಸಹಾಯ ಸಂಘ, ಬಾಗಲಕೋಟೆ, ಬೆಂಗಳೂರು ಹಾಗೂ ಗೌರಿ ಬಿದನೂರಿನ ಸ್ತ್ರೀಶಕ್ತಿ ಸಂಘಗಳು ಸ್ಯಾನಿಟರಿ ನ್ಯಾಪ್‌ಕಿನ್‌ಗಳನ್ನು ತಯಾರಿಸುವ
ಘಟಕಗಳನ್ನು ಹೊಂದಿವೆ. ರಾಜ್ಯಕ್ಕೆ ಅಗತ್ಯವಾಗಿ ಬೇಕಾಗುವ ನ್ಯಾಪ್‌ಕಿನ್‌ಗಳ ತಯಾರಿಕಾ ಶಕ್ತಿ ಹೊಂದಿವೆ. ಅಲ್ಲದೆ ಸಾವಿರಾರು ಮಹಿಳೆಯರಿಗೆ ಉದ್ಯೋಗ ಲಭಿಸುತ್ತದೆ. ಹೀಗಾಗಿ ಇಲ್ಲಿಯೇ ನ್ಯಾಪ್‌ಕಿನ್‌ಗಳನ್ನು ಖರೀದಿಸಬೇಕೆಂದು ಪ್ರಸ್ತಾವನೆ ಸಲ್ಲಿಸಲಾಗಿತ್ತು.

ಅಧಿಕಾರಿಗಳು ಸ್ಯಾನಿಟರಿ ನ್ಯಾಪ್‌ಕಿನ್‌ ತಯಾರಿಕಾ ಘಟಕಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದರು. ಖರೀದಿಸುವ ಭರವಸೆಯನ್ನೂ ನೀಡಿದ್ದರು. ಆದರೆ  ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿಗಳು ಪ್ರಸ್ತಾವನೆಯನ್ನು ಕಸದ ಬುಟ್ಟಿಗೆ ಎಸೆದಿದ್ದಾರೆ. ರಾಜ್ಯಮಟ್ಟದಲ್ಲಿ ಟೆಂಡರ್‌ ಕರೆಯದಿದ್ದರೂ ವಿಭಾಗಮಟ್ಟದಲ್ಲಾದರೂ ಟೆಂಡರ್‌ ಕರೆಯುವ, ಸ್ತ್ರೀಶಕ್ತಿ ಸಂಘಗಳ ಮೂಲಕ ಸ್ಯಾನಿಟರಿ ನ್ಯಾಪ್‌ಕಿನ್‌ಗಳನ್ನು ಖರೀದಿಸುವ ಸಿದ್ಧತೆ ಮಾಡಿಕೊಂಡಿದ್ದರು. ಈ ಸಂಬಂಧ ಸಭೆ ನಡೆಸಿದ್ದರೂ ಕೊನೇ ಘಳಿಗೆಯಲ್ಲಿ ಅದೇ ಆಂಧ್ರದ ಮೂಲಕ ಎಚ್‌ಎಲ್‌ಎಲ್‌ ಲೈಫ್‌ ಕೇರ್‌ ಸಂಸ್ಥೆಗೆ ಮತ್ತೆ ಅವಕಾಶ ನೀಡಲಾಗಿದೆ.

ಸ್ತ್ರೀಶಕ್ತಿ ಸಂಘಗಳು 19.50 ರೂ.ಗೆ ಒಂದು ಕಿಟ್‌ ನೀಡುವುದಾಗಿ ನಮೂದಿಸಿದ್ದರೂ ಲೈಫ್‌ ಕೇರ್‌ ಸಂಸ್ಥೆಯಿಂದ 25 ರೂ.ನಂತೆ ಖರೀದಿ ಮಾಡಲಾಗಿದೆ. ಒಂದು ವೇಳೆ ಸ್ಥಳೀಯ ಸ್ತ್ರೀ ಸಂಘಗಳಿಂದ ಖರೀದಿಸಿದ್ದರೆ ಸರ್ಕಾರಕ್ಕೆ 14  ಕೋಟಿ ರೂ. ಉಳಿಯುತ್ತಿತ್ತು. ಹೀಗಾಗಿ ಸ್ತ್ರೀಶಕ್ತಿ ಸ್ವ ಸಹಾಯ ಸಂಘದ 400ಕ್ಕೂ ಹೆಚ್ಚು ಮಹಿಳಾ ಸದಸ್ಯರು ಅ. 30ರಿಂದ ಬೆಂಗಳೂರಿನ ಆನಂದರಾವ್‌ ವೃತ್ತದಲ್ಲಿರುವ ಆರೋಗ್ಯ ಮತ್ತು ಕುಟುಂಬ ಸೇವೆಗಳ ನಿರ್ದೇಶನಾಲಯ ಎದುರು ಉಪವಾಸ ಸತ್ಯಾಗ್ರಹ ನಡೆಸಲು ನಿರ್ಧರಿಸಿದ್ದಾರೆ. 

ಆಂಧ್ರದ ಮೂಲದ ಎಚ್‌ಎಲ್‌ಎಲ್‌ ಲೈಫ್‌ ಕೇರ್‌ ಸಂಸ್ಥೆಯೂ ಸ್ವಂತ ಸ್ಯಾನಿಟರಿ ನ್ಯಾಪ್‌ಕಿನ್‌ಗಳನ್ನು ತಯಾರಿಸುವುದಿಲ್ಲ.
ಮಹಾರಾಷ್ಟ್ರದ ಸಹೇರಿ ಕಾರ್ಖಾನೆಯಿಂದ ತರಿಸಿಕೊಂಡು ರಾಜ್ಯಕ್ಕೆ ಪೂರೈಸುತ್ತದೆ. ಮುಖ್ಯವಾಗಿ ರಾಜ್ಯಕ್ಕೆ 2.35 ಕೋಟಿ ರೂ. ನ್ಯಾಪ್‌ಕಿನ್‌ಗಳನ್ನು ಪೂರೈಸಲಾಗುವುದು ಎಂದು ಹೇಳಲಾಗುತ್ತದೆ. ವಾಸ್ತವವಾಗಿ ಅರ್ಧದಷ್ಟಾದರೂ ಪೂರೈಸುವುದಿಲ್ಲ. ಒಬ್ಬ ಮಹಿಳೆ ಇಲ್ಲವೇ ಕಿಶೋರಿಗೆ 13 ನ್ಯಾಪ್‌ಕಿನ್‌ ಕಿಟ್‌ ಕೊಡಬೇಕು. ಆದರೆ 3-4 ಸಹ ನೀಡುತ್ತಿಲ್ಲ. ಒಟ್ಟಾರೆ ವ್ಯವಸ್ಥಿತವಾಗಿ ಸಂಬಂಧ ಪಟ್ಟ ಅಧಿಕಾರಿಗಳೆಲ್ಲ ಇದನ್ನು ನಿರ್ವಹಿಸುತ್ತಿದ್ದಾರೆ ಎಂದು ಅಫಜಲಪುರದ ಅಮೋಘಸಿದ್ಧ ಸ್ತ್ರೀ ಶಕ್ತಿ ಸ್ವಸಹಾಯ ಸಂಘದ ಅಧ್ಯಕ್ಷೆ ಸುರೇಖಾ ಸುಧೀರ ಪದಕಿ ಆರೋಪಿಸಿದ್ದಾರೆ.

ಟೆಂಡರ್‌ ಇಲ್ಲದೇ 7 ವರ್ಷಗಳಿಂದ ಒಂದೇ ಸಂಸ್ಥೆಯಿಂದ ಸ್ಯಾನಿಟರಿ ನ್ಯಾಪ್‌ಕಿನ್‌ ಖರೀದಿಸುತ್ತಿರುವ ಕುರಿತು ಲೋಕಾಯುಕ್ತಕ್ಕೆ ದೂರು ನೀಡಲಾಗಿದೆ. ಟೆಂಡರ್‌ ನಿಯಮಾವಳಿ ಉಲ್ಲಂಘನೆಯಲ್ಲದೇ ಸರ್ಕಾರಕ್ಕೆ ಕೋಟ್ಯಂತರ ರೂ. ನಷ್ಟ ಉಂಟು ಮಾಡಲಾಗಿದೆ. ಈ ಕುರಿತು ಆರೋಗ್ಯಾಧಿಕಾರಿಗಳನ್ನು ಕರೆಯಿಸಿ ವಿಚಾರಿಸುವುದಾಗಿ ಲೋಕಾಯುಕ್ತ ಅಧಿಕಾರಿಗಳು ಹೇಳಿದ್ದಾರೆ.
 ● ಸುರೇಖಾ ಸುಧೀರ ಪದಕಿ, ಅಧ್ಯಕ್ಷರು, ಅಮೋಘಸಿದ್ಧ ಸ್ತ್ರೀ ಶಕ್ತಿ ಸ್ವಸಹಾಯ ಸಂಘ, ಅಫಜಲಪುರ

 ●ಹಣಮಂತರಾವ ಭೈರಾಮಡಗಿ

ಟಾಪ್ ನ್ಯೂಸ್

ಬಿಜೆಪಿಗೆ ಅಭ್ಯರ್ಥಿ ಇರಲಿಲ್ಲ, ಎಚ್‌ಡಿಕೆಗೆ ಧೈರ್ಯ ಇರಲಿಲ್ಲ: ಡಿಕೆಶಿ

Bangalore Rural; ಬಿಜೆಪಿಗೆ ಅಭ್ಯರ್ಥಿ ಇರಲಿಲ್ಲ, ಎಚ್‌ಡಿಕೆಗೆ ಧೈರ್ಯ ಇರಲಿಲ್ಲ: ಡಿಕೆಶಿ

Mekedatu Dam ನಿರ್ಮಾಣಕ್ಕೆ ಕೇಂದ್ರMekedatu Dam ನಿರ್ಮಾಣಕ್ಕೆ ಕೇಂದ್ರದ ಅನುಮತಿ ಪಡೆಯುವೆ: ದೇವೇಗೌಡಯುವೆ: ದೇವೇಗೌಡ

Mekedatu Dam ನಿರ್ಮಾಣಕ್ಕೆ ಕೇಂದ್ರದ ಅನುಮತಿ ಪಡೆಯುವೆ: ದೇವೇಗೌಡ

Lok Sabha Election; ಕಾಂಗ್ರೆಸ್‌ ಗೆದ್ದರೆ ಸಿದ್ದರಾಮಯ್ಯ ಸ್ಥಾನ ಭದ್ರ

Lok Sabha Election; ಕಾಂಗ್ರೆಸ್‌ ಗೆದ್ದರೆ ಸಿದ್ದರಾಮಯ್ಯ ಸ್ಥಾನ ಭದ್ರ

BJP-JDS ಮೈತ್ರಿಕೂಟದಿಂದ 28 ಸ್ಥಾನ ಗೆದ್ದೇ ಗೆಲ್ಲುತ್ತೇವೆ: ಬಿಎಸ್‌ವೈ

BJP-JDS ಮೈತ್ರಿಕೂಟದಿಂದ 28 ಸ್ಥಾನ ಗೆದ್ದೇ ಗೆಲ್ಲುತ್ತೇವೆ: ಬಿಎಸ್‌ವೈ

Lok Sabha Election-2024; ಬಿಜೆಪಿ ನಾಯಕರಿಂದ ಅಸಹಕಾರ: ದೇವೇಗೌಡ

Lok Sabha Election-2024; ಬಿಜೆಪಿ ನಾಯಕರಿಂದ ಅಸಹಕಾರ: ದೇವೇಗೌಡ

Jayaprakash Hegde “ಉತ್ತಮ ಕೆಲಸ ಮಾಡಿಸಿಕೊಳ್ಳಬೇಕಾದ ಅವಶ್ಯಕತೆ ಮತದಾರರಿಗಿದೆ’

Jayaprakash Hegde “ಉತ್ತಮ ಕೆಲಸ ಮಾಡಿಸಿಕೊಳ್ಳಬೇಕಾದ ಅವಶ್ಯಕತೆ ಮತದಾರರಿಗಿದೆ’

Kundapura “ಪ್ರವಾಸೋದ್ಯಮ ಅಭಿವೃದ್ಧಿಗಾಗಿ ಗೆಲ್ಲಿಸಿ’: ಜಯಪ್ರಕಾಶ್‌ ಹೆಗ್ಡೆKundapura “ಪ್ರವಾಸೋದ್ಯಮ ಅಭಿವೃದ್ಧಿಗಾಗಿ ಗೆಲ್ಲಿಸಿ’: ಜಯಪ್ರಕಾಶ್‌ ಹೆಗ್ಡೆ

Kundapura “ಪ್ರವಾಸೋದ್ಯಮ ಅಭಿವೃದ್ಧಿಗಾಗಿ ಗೆಲ್ಲಿಸಿ’: ಜಯಪ್ರಕಾಶ್‌ ಹೆಗ್ಡೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬಿಜೆಪಿಗೆ ಅಭ್ಯರ್ಥಿ ಇರಲಿಲ್ಲ, ಎಚ್‌ಡಿಕೆಗೆ ಧೈರ್ಯ ಇರಲಿಲ್ಲ: ಡಿಕೆಶಿ

Bangalore Rural; ಬಿಜೆಪಿಗೆ ಅಭ್ಯರ್ಥಿ ಇರಲಿಲ್ಲ, ಎಚ್‌ಡಿಕೆಗೆ ಧೈರ್ಯ ಇರಲಿಲ್ಲ: ಡಿಕೆಶಿ

Sagara: ಮಹಿಳೆಯ ಗರ್ಭಕೋಶದಲ್ಲಿದ್ದ 7 ಕೆಜಿ ಗಡ್ಡೆ ಹೊರತೆಗೆದ ವೈದ್ಯರು

Sagara: ಮಹಿಳೆಯ ಗರ್ಭಕೋಶದಲ್ಲಿದ್ದ 7 ಕೆಜಿ ಗಡ್ಡೆ ಹೊರತೆಗೆದ ವೈದ್ಯರು

Sirsi: ಏ. 28ಕ್ಕೆ ಶಿರಸಿಗೆ ಪ್ರಧಾನಿ ಮೋದಿ… ಸಿದ್ಧತೆ ಆರಂಭ: ಕಾಗೇರಿ

Sirsi: ಏ. 28ಕ್ಕೆ ಶಿರಸಿಗೆ ಪ್ರಧಾನಿ ಮೋದಿ… ಸಿದ್ಧತೆ ಆರಂಭ: ಕಾಗೇರಿ

ಮೂಲಭೂತ ಸೌಕರ್ಯ ಕೊಡಿ ಎಂದಿದ್ದೇನೆ ಹೊರತು, ಒಕ್ಕಲೆಬ್ಬಿಸಿ ಎಂದಿಲ್ಲ; ಬೇಳೂರು ಸ್ಪಷ್ಟನೆ

ಮೂಲಭೂತ ಸೌಕರ್ಯ ಕೊಡಿ ಎಂದಿದ್ದೇನೆ ಹೊರತು, ಒಕ್ಕಲೆಬ್ಬಿಸಿ ಎಂದಿಲ್ಲ; ಬೇಳೂರು ಸ್ಪಷ್ಟನೆ

90 ದಿನದಲ್ಲಿ ನೇಹಾ ಕುಟುಂಬಕ್ಕೆ ನ್ಯಾಯ ಸಿಗುವ ವಿಶ್ವಾಸವಿದೆ..: ರಣದೀಪ್ ಸಿಂಗ್ ಸುರ್ಜೇವಾಲಾ

90 ದಿನದಲ್ಲಿ ನೇಹಾ ಕುಟುಂಬಕ್ಕೆ ನ್ಯಾಯ ಸಿಗುವ ವಿಶ್ವಾಸವಿದೆ..: ರಣದೀಪ್ ಸಿಂಗ್ ಸುರ್ಜೇವಾಲಾ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಬಿಜೆಪಿಗೆ ಅಭ್ಯರ್ಥಿ ಇರಲಿಲ್ಲ, ಎಚ್‌ಡಿಕೆಗೆ ಧೈರ್ಯ ಇರಲಿಲ್ಲ: ಡಿಕೆಶಿ

Bangalore Rural; ಬಿಜೆಪಿಗೆ ಅಭ್ಯರ್ಥಿ ಇರಲಿಲ್ಲ, ಎಚ್‌ಡಿಕೆಗೆ ಧೈರ್ಯ ಇರಲಿಲ್ಲ: ಡಿಕೆಶಿ

Mekedatu Dam ನಿರ್ಮಾಣಕ್ಕೆ ಕೇಂದ್ರMekedatu Dam ನಿರ್ಮಾಣಕ್ಕೆ ಕೇಂದ್ರದ ಅನುಮತಿ ಪಡೆಯುವೆ: ದೇವೇಗೌಡಯುವೆ: ದೇವೇಗೌಡ

Mekedatu Dam ನಿರ್ಮಾಣಕ್ಕೆ ಕೇಂದ್ರದ ಅನುಮತಿ ಪಡೆಯುವೆ: ದೇವೇಗೌಡ

Lok Sabha Election; ಕಾಂಗ್ರೆಸ್‌ ಗೆದ್ದರೆ ಸಿದ್ದರಾಮಯ್ಯ ಸ್ಥಾನ ಭದ್ರ

Lok Sabha Election; ಕಾಂಗ್ರೆಸ್‌ ಗೆದ್ದರೆ ಸಿದ್ದರಾಮಯ್ಯ ಸ್ಥಾನ ಭದ್ರ

BJP-JDS ಮೈತ್ರಿಕೂಟದಿಂದ 28 ಸ್ಥಾನ ಗೆದ್ದೇ ಗೆಲ್ಲುತ್ತೇವೆ: ಬಿಎಸ್‌ವೈ

BJP-JDS ಮೈತ್ರಿಕೂಟದಿಂದ 28 ಸ್ಥಾನ ಗೆದ್ದೇ ಗೆಲ್ಲುತ್ತೇವೆ: ಬಿಎಸ್‌ವೈ

Lok Sabha Election-2024; ಬಿಜೆಪಿ ನಾಯಕರಿಂದ ಅಸಹಕಾರ: ದೇವೇಗೌಡ

Lok Sabha Election-2024; ಬಿಜೆಪಿ ನಾಯಕರಿಂದ ಅಸಹಕಾರ: ದೇವೇಗೌಡ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.