ಎಸ್ಐಟಿ ಅಧಿಕಾರಿಗಳ ಬದಲಾವಣೆ ಇಲ್ಲ: ಸಚಿವ
Team Udayavani, Oct 23, 2017, 7:50 AM IST
ಯಾದಗಿರಿ: “ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಪ್ರಕರಣ ಕುರಿತಂತೆ ಎಸ್ಐಟಿ ಅಧಿಕಾರಿಗಳನ್ನು ವಾಪಸ್ ಕರೆಸಿಕೊಂಡಿಲ್ಲ. ಮಾಧ್ಯಮಗಳ ವರದಿ ಉಹಾಪೋಹದಿಂದ ಕೂಡಿದ್ದು, ಅಗತ್ಯ ಬಿದ್ದರೆ ಇನ್ನೂ ಹೆಚ್ಚಿನ ಅಧಿಕಾರಿಗಳ ನೇಮಕ ಮಾಡಲಾಗುವುದು’ ಎಂದು ಗೃಹ ಸಚಿವ ರಾಮಲಿಂಗಾರೆಡ್ಡಿ ಹೇಳಿದರು.
ನಗರದಲ್ಲಿ ನೂತನ ಜಿಲ್ಲಾ ಪೊಲೀಸ್ ಕಚೇರಿ ಉದ್ಘಾಟಿಸಿ ನಂತರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, “ಗೌರಿ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖೆ ನಡೆಯುತ್ತಿದ್ದು, ಈಗಾಗಲೇ ಆರೋಪಿಗಳ ಸುಳಿವು ದೊರೆತಿದೆ. ಅದನ್ನು ಮಾಧ್ಯಮ ಹಾಗೂ ಸಾರ್ವಜನಿಕರ ಮುಂದೆ ಹೇಳಲು ಸಾಧ್ಯವಿಲ್ಲ. ಆದಷ್ಟು ಬೇಗ ಆರೋಪಿಯನ್ನು ಬಂಧಿಸಲಾಗುವುದು. ಎಸ್ ಐಟಿ ಅಧಿಕಾರಿಗಳು ಸ್ಥಳೀಯರ ಮಾಹಿತಿ ಆಧರಿಸಿ ರೇಖಾಚಿತ್ರ ರಚಿಸಿದ್ದಾರೆ. ಬಲಪಂಥೀಯ, ಎಡಪಂಥೀಯರು ಎಂಬ ಬಗ್ಗೆ ಅವರು ತಲೆಕೆಡಿಸಿಕೊಳ್ಳುವುದಿಲ್ಲ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Hubli; ನೇಹಾ ಪ್ರಕರಣದಲ್ಲಿ ಸರ್ಕಾರದ ನಡವಳಿಕೆ ಸರಿಯಾಗಿರಲಿಲ್ಲ: ಬಿ.ವೈ. ವಿಜಯೇಂದ್ರ
Neha ಕೊಲೆ ಆರೋಪಿ ನಿರ್ದೋಷಿಯಾಗಿ ಹೊರಗೆ ಬಂದ್ರೆ ನಾವೇ ಶಿಕ್ಷೆ ಕೊಟ್ಟು ಜೈಲಿಗೆ ಹೋಗಲು ಸಿದ್ಧ
Hubballi: ಮೂವರು ನಕಲಿ ಸಿಐಡಿ ಅಧಿಕಾರಿಗಳ ಬಂಧನ… ಮೊಬೈಲ್, ಬೈಕ್ ವಶ
ತಾಳಿಭಾಗ್ಯ ಯೋಜನೆ ತಂದ ‘ಕಾಂಗ್ರೆಸ್’ ಕಿತ್ತುಕೊಳ್ಳುವ ಕೆಲಸ ಎಂದೂ ಮಾಡಲ್ಲ: H.K. Patil
ಮಗಳ ಪ್ರಕರಣ ದಿಕ್ಕು ತಪ್ಪುತ್ತಿದೆ ಎಂದಿದ್ದ ನೇಹಾಳ ತಂದೆ ರಾಜ್ಯ ಸರಕಾರದ ಕ್ಷಮೆ ಕೇಳಿದ್ದೇಕೆ?