ಬೆಂಗಳೂರು ಕೃಷಿ ವಿವಿಯಿಂದ 8 ಹೊಸ ತಳಿಗಳ ಆವಿಷ್ಕಾರ


Team Udayavani, Oct 24, 2017, 7:05 AM IST

24-2.jpg

ಬೆಂಗಳೂರು: ಬರಗಾಲದ ಸಂದರ್ಭದಲ್ಲೂ ಕಡಿಮೆ ನೀರಿನಲ್ಲಿ ಬೆಳೆಯುವ ಅತ್ಯಧಿಕ ಇಳುವರಿ ನೀಡುವ, ಅತಿ ಹೆಚ್ಚು ರೋಗ ನಿರೋಧಕ ಶಕ್ತಿ ಹೊಂದಿರುವ ಕಬ್ಬು, ಮೇವಿನ ಅಲಸಂದೆ, ಜಂಬುನೇರಳೆ, ಮುಸುಕಿನ ಜೋಳ, ತೊಗರಿ ಸೇರಿ ಸುಧಾರಿತ
ತಳಿಗಳನ್ನು ಬೆಂಗಳೂರು ಕೃಷಿ ವಿವಿ ವಿಜ್ಞಾನಿಗಳು ಸಂಶೋಧನೆ ಮಾಡಿದ್ದಾರೆ.

ನವೆಂಬರ್‌ನಲ್ಲಿ ಜಿಕೆವಿಕೆಯಲ್ಲಿ ನಡೆಯುವ ಕೃಷಿ ಮೇಳದಲ್ಲಿ ಹೊಸದಾಗಿ ಸಂಶೋಧಿಸಲ್ಪಟ್ಟ ಸುಧಾರಿತ ತಳಿಗಳ ಬಿಡುಗಡೆಗೊಳಿಸಿ ರೈತ ಸಮುದಾಯಕ್ಕೆ ಇವುಗಳ ಉಪಯೋಗವನ್ನು ಪರಿಚಯಿಸಲು ಬೆಂಗಳೂರು ಕೃಷಿ ವಿವಿ ಸಜ್ಜಾಗಿದೆ. ಮಂಡ್ಯದ ವಿ.ಸಿ.ಫಾರಂನ ಕೃಷಿ ವಿಜ್ಞಾನಿಗಳಾದ ಸಿ.ಲೋಹಿತಾಶ್ವ ಮತ್ತು ಡಾ.ಪುಟ್ಟರಾಮನಾಯ್ಕ (ಮುಸುಕಿನಜೋಳ), ಚಿಂತಾಮಣಿ ಕೃಷಿ ಸಂಶೋಧನಾ ಕೇಂದ್ರದ ವಿಜ್ಞಾನಿ ಡಾ.ವೆಂಕಟರಮಣ (ಜಂಬು ನೇರಳೆ), ಜಿಕೆವಿಕೆಯ ಕೃಷಿ ವಿಜ್ಞಾನಿಗಳಾದ ಡ.ಬೈರೇಗೌಡ, ಡಾ.ಟಿ.ಓಂಕಾರಪ್ಪ, ಡಾ.ಎಚ್‌. ಕೆ.ರಾಮಪ್ಪ (ತೊಗರಿ), ಡಾ.ಡಿ.ಎಲ್‌.ಸಾವಿತ್ರಮ್ಮ (ಅಲಸಂದೆ), ಡಾ.ನಿರಂಜನಮೂರ್ತಿ (ಬೀಜದ ದಂಟಿನ ಸೊಪ್ಪು), ಡಾ.ಎಂ.ವಸುಂಧರಾ (ಔಷಧಿ ಸಸ್ಯ-ಸ್ಕೀವಿಯಾ), ಮಂಡ್ಯದ ವಿ.ಸಿ.ಫಾರಂನ ಡಾ.ಎಸ್‌.ಎನ್‌.ಸ್ವಾಮಿಗೌಡ‌ ( ಕಬ್ಬು) , 
ಡಾ.ಬಿ.ಜಿ.ಶೇಖರ್‌ (ಮೇವಿನ ಅಲಸಂದೆ) ಎಂಬುವರು ಸುಧಾರಿತ ತಳಿಗಳನ್ನು ನಾಲ್ಕೈದು ವರ್ಷಗಳ ಕಾಲ ಸತತವಾಗಿ ಅಧ್ಯಯನ ನಡೆಸಿ ಅಭಿವೃದ್ಧಿ ಪಡಿಸಿದ್ದಾರೆ.

ಹೊಸದಾಗಿ ಸಂಶೋಧಿಸಲ್ಪಟ್ಟ ಸುಧಾರಿತ ತಳಿಗಳನ್ನು ಸುಲಭವಾಗಿ ಗುರುತಿಸಲು ವೈಜ್ಞಾನಿಕ ಹೆಸರುಗಳನ್ನು ಸಹ ನೀಡಲಾಗಿದೆ. ಕಬ್ಬು (ವಿಸಿಎಫ್ 0517), ಮೇವಿನ ಅಲಸಂದೆ (ಎಂಎಫ್ಸಿ 09.1): ಬೀಜದ ದಂಟಿನ ಸೊಪ್ಪು (ಕೆಬಿಜಿಎ 4), ಅಲಸಂದೆ (ಎವಿ 6), ಜಂಬು ನೇರಳೆ (ಚಿಂತಾಮಣಿ ಸೆಲೆಕ್ಷನ್‌ 1), ಔಷಧಿ ಸಸ್ಯ (ಸ್ಕೀವಿಯಾ ರೆಬೌಡಿಯನಾ), ಮುಸುಕಿನ ಜೋಳ (ಎಂಎಎಚ್‌ 14.5), ತೊಗರಿ (ಬಿಆರ್‌ಜಿ 3) ಇವು ರೈತರು ಸಾಮಾನ್ಯವಾಗಿ ಬಳಸುವ ತಳಿಗಳಿಗಿಂತ ದುಪ್ಪಟ್ಟು ಮತ್ತು ಅದಕ್ಕಿಂತ ಹೆಚ್ಚು ಇಳುವರಿ ನೀಡುತ್ತವೆ. ಇದರಿಂದ ಕಡಿಮೆಯಾಗಿರುವ ಕೃಷಿ ಭೂಮಿ, ಹವಾಮಾನದ ಏರುಪೇರಿನಿಂದ ಕೃಷಿ ಉತ್ಪನ್ನಗಳ ಪ್ರಮಾಣ 
ಕಡಿಮೆಯಾಗುತ್ತಿದೆ ಎಂಬ ಆತಂಕವನ್ನು ದೂರಮಾಡಲಿವೆ ಎಂದು ವಿಜ್ಞಾನಿಗಳು ವಿಶ್ವಾಸ ವ್ಯಕ್ತಪಡಿಸುತ್ತಾರೆ.

ಜನಸಂಖ್ಯೆ ಹೆಚ್ಚುತ್ತಿದ್ದಂತೆ ಅದಕ್ಕೆ ಅನುಗುಣವಾಗಿ ಕೃಷಿ ಉತ್ಪನ್ನಗಳ ಪ್ರಮಾಣ ಏರುತ್ತಿಲ್ಲ. ಇದಕ್ಕೆ ಪ್ರಮುಖ ಕಾರಣ ರೈತರು ಸಾಂಪ್ರದಾಯಿಕ ಮತ್ತು ಸ್ಥಳೀಯವಾಗಿ ಅಭಿವೃದ್ಧಿಪಡಿಸಿದ ತಳಿಗಳನ್ನು ಬಳಸುತ್ತಿರುವುದು. ಸ್ಥಳೀಯ ತಳಿಗಳು ಹೆಚ್ಚು ಗೊಬ್ಬರ
ಬಳಸಿಕೊಂಡರೂ ಇಳುವರಿ ಮಾತ್ರ ಕಡಿಮೆ ನೀಡುತ್ತಿವೆ. ಜತೆಗೆ ಕೆಲವು ತಳಿಗಳಲ್ಲಿ ರೋಗ ನಿರೋಧಕ ಶಕ್ತಿ ಕಡಿಮೆ ಇರುವುದರಿಂದ ಆಗಾಗ ರೋಗಬಾಧೆಗೆ ಒಳಗಾಗುತ್ತಿವೆ. ಇದು ಇಳುವರಿ ಮೇಲೆ ಪರಿಣಾಮ ಬೀರುತ್ತಿದ್ದು, ರೈತರು ಆರ್ಥಿಕವಾಗಿ ಸಮಸ್ಯೆಗೆ ತುತ್ತಾಗುತ್ತಿದ್ದರು. ಆದ್ದರಿಂದ ಕೃಷಿ ವಿವಿ ವಿಜ್ಞಾನಿಗಳು, ಹೊಸ ಸುಧಾರಿತ ಹೆಚ್ಚು ಇಳುವರಿ ನೀಡುವ ತಳಿಗಳ ಆವಿಷ್ಕಾರಕ್ಕೆ ಆದ್ಯತೆ
ನೀಡಿದ್ದು, ಸುಮಾರು ಎಂಟು ತಳಿಗಳನ್ನು ಕಳೆದ ಐದು ವರ್ಷಗಳ ಸತತ ಶ್ರಮದಿಂದ ಸಂಶೋಧಿಸಿದ್ದಾರೆ. ಸುಧಾರಿತ ತಳಿಗಳ ಬೀಜಗಳು ಬೆಂಗಳೂರು ಕೃಷಿ ವಿವಿ ಆವರಣದಲ್ಲಿ ಇರುವ ಬೀಜ ಸಂಸ್ಕರಣ ಕೇಂದ್ರ ಮತ್ತು ಕೃಷಿ ತಂತ್ರಜ್ಞಾನ ಮಾಹಿತಿ ಕೇಂದ್ರದಲ್ಲಿ ಸಿಗುತ್ತವೆ.  

ಕಳೆದ ವರ್ಷ ಅಂತಾರಾಷ್ಟ್ರೀಯ ಕೃಷಿ ಮೇಳದಲ್ಲಿ ಸುಧಾರಿತ 5 ತಳಿಗಳನ್ನು ಬಿಡುಗಡೆ ಮಾಡಿದ್ದೆವು. ಈ ಬಾರಿ 8 ತಳಿಗಳನ್ನು ಬಿಡುಗಡೆ ಮಾಡಲಾಗುತ್ತಿದೆ. ಸಮಗ್ರ ಕೃಷಿ, ಸಮರ್ಪಕ ನೀರು ನಿರ್ವಹಣೆ ಹಾಗೂ ಸಿರಿಧಾನ್ಯ ಈ ಮೂರು ವಿಷಯಕ್ಕೆ ಮೇಳದಲ್ಲಿ ಆದ್ಯತೆ ನೀಡಲಾಗುವುದು. 
 ●ಡಾ.ಶಿವಣ್ಣ, ಕುಲಪತಿ, ಕೃಷಿ ವಿವಿ, ಬೆಂಗಳೂರು 

 ●ಸಂಪತ್‌ ತರೀಕೆರೆ

ಟಾಪ್ ನ್ಯೂಸ್

Award: ಅಮಿತಾಬ್ ಬಚ್ಚನ್, ಎಆರ್ ರೆಹಮಾನ್ ಗೆ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಗೌರವ

ಪ್ರತಿಷ್ಠಿತ ಲತಾ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಸ್ವೀಕರಿಸಿದ ಬಾಲಿವುಡ್ ನಟ ಅಮಿತಾಬ್ ಬಚ್ಚನ್

5-harikrishna

LS Polls: ಹಿಂದೂ ಸಂಸ್ಕೃತಿ, ಪರಂಪರೆ ಉಳಿಸಲು ಬಿಜೆಪಿಯೇ ಶಕ್ತಿ: ಹರಿಕೃಷ್ಣ ಬಂಟ್ವಾಳ

3-dinesh

33 ವರ್ಷಗಳಲ್ಲಿ ದ.ಕ. ಜಿಲ್ಲೆಗೆ ಬಿಜೆಪಿ ಸಂಸದರ ಕೊಡುಗೆ ಏನು? ಸಚಿವ ದಿನೇಶ್‌ ಗುಂಡೂರಾವ್‌

Patna: ಪಾಟ್ನಾದಲ್ಲಿ ನಿತೀಶ್ ಕುಮಾರ್ ಪಕ್ಷದ ನಾಯಕನ ಗುಂಡಿಕ್ಕಿ ಹತ್ಯೆ… ಆರೋಪಿಗಳು ಪರಾರಿ

Patna: ಪಾಟ್ನಾದಲ್ಲಿ ನಿತೀಶ್ ಕುಮಾರ್ ಪಕ್ಷದ ನಾಯಕನ ಗುಂಡಿಕ್ಕಿ ಹತ್ಯೆ… ಆರೋಪಿಗಳು ಪರಾರಿ

Ramakrishna Mission: ರಾಮಕೃಷ್ಣ ಮಠ, ಮಿಷನ್‌ನ ಅಧ್ಯಕ್ಷರಾಗಿ ಕನ್ನಡಿಗ ಸ್ವಾಮೀಜಿ ಆಯ್ಕೆ

Ramakrishna Mission: ರಾಮಕೃಷ್ಣ ಮಠ, ಮಿಷನ್‌ನ ಅಧ್ಯಕ್ಷರಾಗಿ ಕನ್ನಡಿಗ ಸ್ವಾಮೀಜಿ ಆಯ್ಕೆ

Sam Pitroda: ಪಿತ್ರೋಡಾ ಹೇಳಿಕೆ, ನಮ್ಮ ಅಭಿಪ್ರಾಯ ಅಲ್ಲ: ಕಾಂಗ್ರೆಸ್‌

Sam Pitroda: ಪಿತ್ರೋಡಾ ಹೇಳಿಕೆ, ನಮ್ಮ ಅಭಿಪ್ರಾಯ ಅಲ್ಲ: ಕಾಂಗ್ರೆಸ್‌

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Lok Sabha Polls: “ಮೋದಿ ಮತ್ತೂಮ್ಮೆ ಪ್ರಧಾನಿಯಾಗಿಸುವ ಪಣ ತೊಡಿ’ : ಬಿ.ವೈ. ರಾಘವೇಂದ್ರ

Lok Sabha Polls: “ಮೋದಿ ಮತ್ತೂಮ್ಮೆ ಪ್ರಧಾನಿಯಾಗಿಸುವ ಪಣ ತೊಡಿ’ : ಬಿ.ವೈ. ರಾಘವೇಂದ್ರ

Lok Sabha Election: “ಅಭಿವೃದ್ಧಿಯೋ – ಅಕ್ರಮವೋ ಯೋಚಿಸಿ ಮತ ನೀಡಿ’: ಗಾಯತ್ರಿ ಸಿದ್ದೇಶ್ವರ್

Lok Sabha Election: “ಅಭಿವೃದ್ಧಿಯೋ – ಅಕ್ರಮವೋ ಯೋಚಿಸಿ ಮತ ನೀಡಿ’: ಗಾಯತ್ರಿ ಸಿದ್ದೇಶ್ವರ್

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು

Vote: ಉದಾಸೀನ ಮಾಡದಿರಿ, ತಪ್ಪದೇ ಮತ ಹಾಕಿ…

Vote: ಉದಾಸೀನ ಮಾಡದಿರಿ, ತಪ್ಪದೇ ಮತ ಹಾಕಿ…

Lok Sabha Election 2024; ನಿಮ್ಮ ಮತವನ್ನು ಮಾರಿಕೊಳ್ಳಬೇಡಿ: ಗಣ್ಯರ ಮನವಿ

Lok Sabha Election 2024; ನಿಮ್ಮ ಮತವನ್ನು ಮಾರಿಕೊಳ್ಳಬೇಡಿ: ಗಣ್ಯರ ಮನವಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Lok Sabha Polls: “ಮೋದಿ ಮತ್ತೂಮ್ಮೆ ಪ್ರಧಾನಿಯಾಗಿಸುವ ಪಣ ತೊಡಿ’ : ಬಿ.ವೈ. ರಾಘವೇಂದ್ರ

Lok Sabha Polls: “ಮೋದಿ ಮತ್ತೂಮ್ಮೆ ಪ್ರಧಾನಿಯಾಗಿಸುವ ಪಣ ತೊಡಿ’ : ಬಿ.ವೈ. ರಾಘವೇಂದ್ರ

Lok Sabha Election: “ಅಭಿವೃದ್ಧಿಯೋ – ಅಕ್ರಮವೋ ಯೋಚಿಸಿ ಮತ ನೀಡಿ’: ಗಾಯತ್ರಿ ಸಿದ್ದೇಶ್ವರ್

Lok Sabha Election: “ಅಭಿವೃದ್ಧಿಯೋ – ಅಕ್ರಮವೋ ಯೋಚಿಸಿ ಮತ ನೀಡಿ’: ಗಾಯತ್ರಿ ಸಿದ್ದೇಶ್ವರ್

4-annamalai

Modi ಕಲ್ಪನೆಯ ವಿಕಸಿತ ಭಾರತಕ್ಕಾಗಿ ಕೋಟ ಅವರನ್ನು ಗೆಲ್ಲಿಸೋಣ: ಅಣ್ಣಾ ಮಲೈ

Award: ಅಮಿತಾಬ್ ಬಚ್ಚನ್, ಎಆರ್ ರೆಹಮಾನ್ ಗೆ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಗೌರವ

ಪ್ರತಿಷ್ಠಿತ ಲತಾ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಸ್ವೀಕರಿಸಿದ ಬಾಲಿವುಡ್ ನಟ ಅಮಿತಾಬ್ ಬಚ್ಚನ್

5-harikrishna

LS Polls: ಹಿಂದೂ ಸಂಸ್ಕೃತಿ, ಪರಂಪರೆ ಉಳಿಸಲು ಬಿಜೆಪಿಯೇ ಶಕ್ತಿ: ಹರಿಕೃಷ್ಣ ಬಂಟ್ವಾಳ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.