ಟಿಪ್ಪು ಜಯಂತಿ ಮುಸ್ಲಿಂ ಉಗ್ರವಾದಕ್ಕೆ ಪ್ರೇರಣೆ


Team Udayavani, Oct 24, 2017, 8:32 AM IST

24-14.jpg

ಬೆಂಗಳೂರು: ರಾಜ್ಯ ಸರ್ಕಾರ ಟಿಪ್ಪು ಜಯಂತಿ ಆಚರಣೆ ಮಾಡುವುದರಿಂದಾಗಿ ಮುಸ್ಲಿಂ ಯುವಕರು ಉಗ್ರವಾದ ಕಡೆಗೆ
ಆಕರ್ಷಿತರಾಗುತ್ತಿದ್ದಾರೆ ಎಂದು ವಿಶ್ವಹಿಂದು ಪರಿಷತ್‌ ಕ್ಷೇತ್ರೀಯ ಸಂಘಟನಾ ಕಾರ್ಯದರ್ಶಿ ಗೋಪಾಲ್‌ ಆತಂಕ ವ್ಯಕ್ತಪಡಿಸಿದರು. ಟಿಪ್ಪು ಜಯಂತಿ ವಿರೋಧಿ ಹೋರಾಟ ಸಮಿತಿಯು ಸೋಮವಾರ ನಗರದ ಶಿವಾನಂದ ವೃತ್ತದ ಗುರುರಾಜ ಕಲ್ಯಾಣ ಮಂಟಪದಲ್ಲಿ ಹಮ್ಮಿಕೊಂಡಿದ್ದ ರಾಜ್ಯಮಟ್ಟದ ಸಮಾವೇಶದಲ್ಲಿ ಮಾತನಾಡಿದ ಅವರು, ಟಿಪ್ಪು ಜಯಂತಿಯ ಆಚರಣೆ ಸಂವಿಧಾನ ತತ್ವಕ್ಕೆ ವಿರುದ್ಧವಾಗಿದೆ. ಇದರಿಂದ ಮುಸ್ಲಿಂ ಯುವಕರು ಉಗ್ರವಾದದ ಕಡೆಗೆ ಆಕರ್ಷಿತರಾಗಿ ಐಸಿಸ್‌ ಸೇರುತ್ತಿದ್ದಾರೆ. ರಾಜ್ಯದಲ್ಲಿ ಹಿಂದು ಸಂಘಟನೆಯ 13 ಮಂದಿ ಕಾರ್ಯಕರ್ತರ ಹತ್ಯೆಯಾಗಿದೆ. ಇದರೊಂದಿಗೆ ಸಮಾಜವು ಅಸುರಕ್ಷತೆ ಹಾಗೂ ಮತಾಂಧತೆಯ ಕಡೆಗೆ ಹೊರಳುತ್ತಿದೆ ಎಂದು ಕಳವಳ ವ್ಯಕ್ತಪಡಿಸಿದರು.

ಟಿಪ್ಪು ಸ್ವಾತಂತ್ರ್ಯ ಹೋರಾಟಗಾರನಲ್ಲ. ಒಬ್ಬ ಸ್ವಾರ್ಥಿ ಹಾಗೂ ತನ್ನ ಸಾಮ್ರಾಜ್ಯ ವಿಸ್ತರಣೆಗಾಗಿ ಹೋರಾಟ ಮಾಡಿದ್ದಾನೆ. ತನ್ನ ನಿಲುವನ್ನು ಒಪ್ಪದವರನ್ನು, ವಿರೋಧಿಸಿದವರನ್ನು ಟಿಪ್ಪು ಡ್ರಾಪ್‌ನಲ್ಲಿ ತಳ್ಳಿ ಕೊಲೆ ಮಾಡುತ್ತಿದ್ದ ಎನ್ನುವುದನ್ನು ಇತಿಹಾಸ ಹೇಳುತ್ತದೆ.  ವೀರ ಮದಕರಿ ನಾಯಕರನ್ನು ವಿಷಹಾಕಿ ಕೊಂದಿರುವ ಬಗ್ಗೆ ಮುರುಘಾ ಮಠ ಪ್ರಕಟಿಸಿರುವ ಪುಸ್ತಕದಲ್ಲಿ
ಇದೆ ಎಂದು ಉಲ್ಲೇಖೀಸಿದರು.

ಉಂಡಮನೆಗೆ ಸಿಎಂ ದ್ರೋಹ: ಸಂಸದ ಪ್ರತಾಪ್‌ ಸಿಂಹ ಮಾತನಾಡಿ, ತಾರಾ ಸುಬ್ಬರಾವ್‌ ಪುಸ್ತಕ, ಮುರುಘಾ ಮಠದ ಪುಸ್ತಕ, ಮೈಸೂರು ವಿಶ್ವವಿದ್ಯಾಲಯದ ಪ್ರವಾಸಿ ಕಂಡ ಇಂಡಿಯಾ ಮೊದಲಾದ ಪುಸ್ತಕದಲ್ಲಿ ಟಿಪ್ಪು ಕ್ರೌರ್ಯದ ಬಗ್ಗೆ ಉಲ್ಲೇಖೀಸಲಾಗಿದೆ. ಈ ಪುಸ್ತಕಗಳನ್ನು ಸಂಘ ಪರಿವಾರದವರು ಬರೆದಿಲ್ಲ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಆಪ್ತರು ಬರೆದಿದ್ದಾರೆ. ಇದನ್ನೆಲ್ಲ ಇನ್ನೊಮ್ಮೆ ಅವರು ಓದಬೇಕು. ನಾಲ್ವಡಿ ಕೃಷ್ಣರಾಜ ಒಡೆಯರ ಬಗ್ಗೆ ಇಲ್ಲ ಸಲ್ಲದ ಮಾತನಾಡುತ್ತಾರೆ. ಯದುವಂಶ ನಾಶ ಮಾಡಿದ ಟಿಪ್ಪುವಿಗೆ ಬೆಂಬಲ ನೀಡುವ ಮೂಲಕ ಸಿಎಂ ಉಂಡಮನೆಗೆ ದ್ರೋಹ ಬಗೆಯುತ್ತಿದ್ದಾರೆ ಎಂದು ಆರೋಪಿಸಿದರು.

ಸಮಿತಿಯ ಅಧ್ಯಕ್ಷ ಅಡ್ಡಂಡ ಕಾರ್ಯಪ್ಪ, ಲೇಖಕ ರಾಬರ್ಟ್‌ ರೋಜಾರಿಯೋ, ಮೇಲ್ಮನೆ ಸದಸ್ಯ ಡಿ.ಎಸ್‌.ವೀರಯ್ಯ, ಎಸ್ಸಿ,ಎಸ್‌ಟಿ ಮೀಸಲಾತಿ ಹಿತರಕ್ಷಣ ವೇದಿಕೆ ಸಂಚಾಲಕ ಫ‌ಟಾಫ‌ಟ್‌ ಶ್ರೀನಿವಾಸ್‌ ಮೊದಲಾದವರು ಉಪಸ್ಥಿತರಿದ್ದರು. 

ಬಿಜೆಪಿ ಧೋರಣೆಗೆ ಸಚಿವ ಖಾದರ್‌ಆಕ್ರೋಶ 
ಬೆಂಗಳೂರು: ರಾಜ್ಯ ಸರ್ಕಾರ ಟಿಪ್ಪು ಜಯಂತಿ ಆಚರಿಸಲು ಮುಂದಾಗಿರುವುದನ್ನು ವಿರೋಧಿಸುತ್ತಿರುವ ಬಿಜೆಪಿಯ ಧೋರಣೆಗೆ ಪಶುಸಂಗೋಪನಾ ಸಚಿವ ಎ. ಮಂಜು ಹಾಗೂ ಆಹಾರ ಮತ್ತು ನಾಗರಿಕ ಸಚಿವ ಯು.ಟಿ. ಖಾದರ್‌ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಕೆಪಿಸಿಸಿ ಕಚೇರಿ ಯಲ್ಲಿ ಮಾತನಾಡಿದ ಅವರು, ಟಿಪ್ಪು ಜಯಂತಿಯನ್ನು ವಿರೋಧಿಸುವ ಮೂಲಕ ಬಿಜೆಪಿಯವರು ಸಮಾಜದಲ್ಲಿ ಅನಗತ್ಯ ಗೊಂದಲ ಸೃಷ್ಠಿಸಿ ಮುಂದಿನ ಚುನಾವಣೆಯಲ್ಲಿ ರಾಜಕೀಯ ಲಾಭ ಮಾಡಿಕೊಳ್ಳಲು ಯತ್ನಿಸುತ್ತಿ ದ್ದಾರೆ. ಪ್ರತಿಪಕ್ಷ ಬಿಜೆಪಿಯ ನಾಯಕರ ಕುತಂತ್ರಕ್ಕೆ ರಾಜ್ಯದ ಜನತೆ ಬಲಿಯಾಗಬಾರದು. ಟಿಪ್ಪು ಜಯಂತಿಯನ್ನು ಆಚರಿಸುವ ಮೂಲಕ ಬಿಜೆಪಿಗೆ ತಕ್ಕ ಉತ್ತರ ನೀಡುತ್ತೇವೆ ಎಂದು ಹೇಳಿದರು. 

ಟಿಪ್ಪು ಮೊದಲ ಭಯೋತ್ಪಾದಕ. ಸ್ವಾತಂತ್ರ್ಯ ಹೋರಾಟಗಾರನಲ್ಲ. ಟಿಪ್ಪು ಜಯಂತಿ ಟೆರರಿಸಂ ಡೇ ಆಗುತ್ತದೆ. ಕ್ರೈಸ್ತರ ಪವಿತ್ರ ದಿನದಂದು ಮಂಗಳೂರಿನ 23 ಚಚ್‌ ìಗಳನ್ನು ಟಿಪ್ಪು ನಾಶ ಮಾಡಿದ್ದಾನೆ. ಕ್ರೈಸ್ತ ಧರ್ಮದ ಮುಖಂಡರಿಗೆ ಈ ಬಗ್ಗೆ ಗೊತ್ತಿದ್ದರೂ ವಿರೋಧಿಸುತ್ತಿಲ್ಲ. ಜನಪ್ರತಿನಿಧಿಗಳಾದ ಆಸ್ಕರ್‌ ಫ‌ರ್ನಾಂಡಿಸ್‌, ಐವನ್‌ ಡಿಸೋಜಾ, ಲೋಬೋ ಮೊದಲಾದವರು ಈ ಬಗ್ಗೆ ಧ್ವನಿ ಎತ್ತುತ್ತಿಲ್ಲ. ಕ್ರೈಸ್ತ ಧರ್ಮದ ಮುಖಂಡರು ಈ ಬಗ್ಗೆ ಬಹಿರಂಗ ಪ್ರತಿಕ್ರಿಯೆ ನೀಡಬೇಕು.
 ●ರಾಬರ್ಟ್‌ ರೋಜಾರಿಯೋ, ಲೇಖಕ

ಸಮಾಜ ಸುಧಾರಣೆ, ಅಸ್ಪೃಶ್ಯತೆ ನಿವಾರಣೆ ಸೇರಿದಂತೆ ಯಾವುದೇ ಸಾಮಾಜಿಕ ಕಾರ್ಯವನ್ನು ಟಿಪ್ಪು ಸುಲ್ತಾನ್‌ ಮಾಡಿಲ್ಲ. ತಲೆಯ ಮೇಲೆ ಮಲಹೊರುವ ಪದ್ಧತಿಯನ್ನು ಮುಸ್ಲಿಂ ರಾಜರೇ ಮೊದಲು ಆರಂಭಿಸಿದ್ದು. ಇದನ್ನು ನಿಷೇಧ ಮಾಡಿಲ್ಲ. ಟಿಪ್ಪು ಆಸ್ಪತ್ರೆ ಅಥವಾ ಕಾಲೇಜನ್ನು ನಿರ್ಮಾಣ ಮಾಡಿಲ್ಲ. ಇಂಥ ಮತಾಂಧನ ಜಯಂತಿ ಮಾಡುವುದು ಸರಿಯಲ್ಲ.
 ●ಡಿ.ಎಸ್‌.ವೀರಯ್ಯ, ಮೇಲ್ಮನೆ ಸದಸ್ಯ

ಟಾಪ್ ನ್ಯೂಸ್

Mangaluru ಪೆಟ್ರೋಲ್‌, ಡೀಸೆಲ್‌ ತುಟ್ಟಿ : ಪುಷ್ಪಾ ಅಮರನಾಥ್‌

Mangaluru ಪೆಟ್ರೋಲ್‌, ಡೀಸೆಲ್‌ ತುಟ್ಟಿ : ಪುಷ್ಪಾ ಅಮರನಾಥ್‌

Congress ಆಳ್ವಿಕೆಯಲ್ಲಿ ಹಿಂದುಗಳಿಗೆ ಉಳಿಗಾಲ ಇಲ್ಲ : ಯಶ್‌ಪಾಲ್‌

Congress ಆಳ್ವಿಕೆಯಲ್ಲಿ ಹಿಂದುಗಳಿಗೆ ಉಳಿಗಾಲ ಇಲ್ಲ : ಯಶ್‌ಪಾಲ್‌

Lok Sabha Election ಫ‌ಲಿತಾಂಶದ ಬೆನ್ನಲ್ಲೇ ಮುಖ್ಯಮಂತ್ರಿ ಕುರ್ಚಿ ಅಲುಗಾಡಲಿದೆ: ಡಿ.ವಿ.

Lok Sabha Election ಫ‌ಲಿತಾಂಶದ ಬೆನ್ನಲ್ಲೇ ಮುಖ್ಯಮಂತ್ರಿ ಕುರ್ಚಿ ಅಲುಗಾಡಲಿದೆ: ಡಿ.ವಿ.

BJP ನಿರ್ದೇಶಿಸಿದರೆ ಮಂಡ್ಯದಲ್ಲೂ ಪ್ರಚಾರ: ಸುಮಲತಾ ಅಂಬರೀಷ್‌

BJP ನಿರ್ದೇಶಿಸಿದರೆ ಮಂಡ್ಯದಲ್ಲೂ ಪ್ರಚಾರ: ಸುಮಲತಾ ಅಂಬರೀಷ್‌

ಕೋಟ್ಯಂತರ ರೂ. ಮೌಲ್ಯದ ಗೋಡಂಬಿ ಅಪಹರಣ; ಸೆರೆ

Brahmavar ಕೋಟ್ಯಂತರ ರೂ. ಮೌಲ್ಯದ ಗೋಡಂಬಿ ಅಪಹರಣ; ಸೆರೆ

1-aaaaaawwq

Bumrah ಎಸೆತಕ್ಕೆ ಸ್ವೀಪ್‌ ಶಾಟ್‌: ಅಶುತೋಷ್‌ ಶರ್ಮ ಫುಲ್‌ ಖುಷ್‌

ಲಿಂಗಾಯತರಿಗೆ ಸಿಎಂ ಹುದ್ದೆ ವಂಚಿಸಿದ್ದು ಕುಮಾರಸ್ವಾಮಿ: ಸಚಿವ ಎಂ.ಬಿ. ಪಾಟೀಲ್‌

ಲಿಂಗಾಯತರಿಗೆ ಸಿಎಂ ಹುದ್ದೆ ವಂಚಿಸಿದ್ದು ಕುಮಾರಸ್ವಾಮಿ: ಸಚಿವ ಎಂ.ಬಿ. ಪಾಟೀಲ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ವೈಯಕ್ತಿಕ ಕಾರಣಗಳಿಂದ ರಾಜ್ಯದಲ್ಲಿ ಕೊಲೆ: ಸಿಎಂ ಸಿದ್ದರಾಮಯ್ಯ

ವೈಯಕ್ತಿಕ ಕಾರಣಗಳಿಂದ ರಾಜ್ಯದಲ್ಲಿ ಕೊಲೆ: ಸಿಎಂ ಸಿದ್ದರಾಮಯ್ಯ

Siddaramaiah ಸರಕಾರದಲ್ಲಿ ಹಿಂದೂಗಳ ರಕ್ತಕ್ಕೆ ಬೆಲೆ ಇಲ್ಲ: ಅಶೋಕ್‌

Siddaramaiah ಸರಕಾರದಲ್ಲಿ ಹಿಂದೂಗಳ ರಕ್ತಕ್ಕೆ ಬೆಲೆ ಇಲ್ಲ: ಅಶೋಕ್‌

ಚೊಂಬಿನ ಮೂಲಕ ಮೋದಿ ಸ್ವಾಗತಕ್ಕೆ ಕಾಂಗ್ರೆಸ್‌ ಸಿದ್ಧತೆ

ಚೊಂಬಿನ ಮೂಲಕ ಮೋದಿ ಸ್ವಾಗತಕ್ಕೆ ಕಾಂಗ್ರೆಸ್‌ ಸಿದ್ಧತೆ

Congresss ಚೊಂಬು ಜಾಹೀರಾತು ವಿರುದ್ಧ ಬಿಜೆಪಿ ಚಾರ್ಜ್‌ಶೀಟ್‌

Congresss ಚೊಂಬು ಜಾಹೀರಾತು ವಿರುದ್ಧ ಬಿಜೆಪಿ ಚಾರ್ಜ್‌ಶೀಟ್‌

High Court ಎಚ್‌ಡಿಕೆಗೆ ಮಹಿಳಾ ಆಯೋಗ ನೀಡಿದ್ದ ನೋಟಿಸ್‌ಗೆ ಹೈಕೋರ್ಟ್‌ ತಡೆ

High Court ಎಚ್‌ಡಿಕೆಗೆ ಮಹಿಳಾ ಆಯೋಗ ನೀಡಿದ್ದ ನೋಟಿಸ್‌ಗೆ ಹೈಕೋರ್ಟ್‌ ತಡೆ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Mangaluru ಪೆಟ್ರೋಲ್‌, ಡೀಸೆಲ್‌ ತುಟ್ಟಿ : ಪುಷ್ಪಾ ಅಮರನಾಥ್‌

Mangaluru ಪೆಟ್ರೋಲ್‌, ಡೀಸೆಲ್‌ ತುಟ್ಟಿ : ಪುಷ್ಪಾ ಅಮರನಾಥ್‌

Congress ಆಳ್ವಿಕೆಯಲ್ಲಿ ಹಿಂದುಗಳಿಗೆ ಉಳಿಗಾಲ ಇಲ್ಲ : ಯಶ್‌ಪಾಲ್‌

Congress ಆಳ್ವಿಕೆಯಲ್ಲಿ ಹಿಂದುಗಳಿಗೆ ಉಳಿಗಾಲ ಇಲ್ಲ : ಯಶ್‌ಪಾಲ್‌

Lok Sabha Election ಫ‌ಲಿತಾಂಶದ ಬೆನ್ನಲ್ಲೇ ಮುಖ್ಯಮಂತ್ರಿ ಕುರ್ಚಿ ಅಲುಗಾಡಲಿದೆ: ಡಿ.ವಿ.

Lok Sabha Election ಫ‌ಲಿತಾಂಶದ ಬೆನ್ನಲ್ಲೇ ಮುಖ್ಯಮಂತ್ರಿ ಕುರ್ಚಿ ಅಲುಗಾಡಲಿದೆ: ಡಿ.ವಿ.

1-ewqe

Olympics ಅರ್ಹತೆ ತಪ್ಪುವ ಭೀತಿಯಲ್ಲಿ ದೀಪಕ್‌, ಸುಜೀತ್‌

BJP ನಿರ್ದೇಶಿಸಿದರೆ ಮಂಡ್ಯದಲ್ಲೂ ಪ್ರಚಾರ: ಸುಮಲತಾ ಅಂಬರೀಷ್‌

BJP ನಿರ್ದೇಶಿಸಿದರೆ ಮಂಡ್ಯದಲ್ಲೂ ಪ್ರಚಾರ: ಸುಮಲತಾ ಅಂಬರೀಷ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.