ಸಮಾಧಿಯಿಂದ ಶವ ಮೇಲಕ್ಕೆತ್ತಿ ಚಿನ್ನ ದೋಚಿದರು!!
Team Udayavani, Oct 24, 2017, 11:20 AM IST
ಕಲಬುರಗಿ: ಹಣ ಕಂಡ್ರೆ ಹೆಣ ಬಾಯಿ ಬಿಡುತ್ತೇ ಅನ್ನೋ ಮಾತಿದೆ. ಆದರೆ ಇಲ್ಲಿ ಚಿನ್ನಕ್ಕಾಗಿ ಹೆಣವನ್ನೂ ಬಿಟ್ಟಿಲ್ಲ. ಅಳಂದದ ಖಜೂರಿ ಗ್ರಾಮದಲ್ಲಿ ನಡೆದ ಘಟನೆಯೊಂದರಲ್ಲಿ ಹಣದ ಆಸೆಗೆ ಬಿದ್ದ ಖದೀಮರು ಶವವನ್ನೇ ಮೇಲಕ್ಕೆತ್ತಿ ಚಿನ್ನಾಭರಣವನ್ನು ದೋಚಿದ್ದಾರೆ.
5 ದಿನಗಳ ಹಿಂದೆ ಪ್ರೇಮಾ ಬಾಯಿ ಎನ್ನುವ ವೃದ್ಧೆ ಮೃತಪಟ್ಟಿದ್ದರು. ಅವರನ್ನು 50 ಗ್ರಾಂ ಚಿನ್ನಾಭರಣಗಳ ಸಮೇತ ಗ್ರಾಮಸ್ಥರು ಸಮಾಧಿ ಮಾಡಿದ್ದರು. ಆದರೆ ಸೋಮವಾರ ರಾತ್ರಿ ಸಮಾಧಿಯನ್ನು ಅಗೆದು ಶವದ ಮೇಲಿದ್ದ ಚಿನ್ನಾಭರಣಗಳನ್ನು ದೋಚಿ ಖದೀಮರು ಪರಾರಿಯಾಗಿದ್ದಾರೆ. ದುಷ್ಕರ್ಮಿಗಳು ಶವವನ್ನು ಹಾಗೆಯೇ ಬಿಟ್ಟು ತೆರಳಿರುವುದು ಜನರ ಆಕ್ರೋಶಕ್ಕೆ ಕಾರಣವಾಗಿದೆ. ಈ ಸಂಬಂಧ ಅಳಂದ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.
ಮಕ್ಕಳಿಲ್ಲದ ಪ್ರೇಮಾ ಬಾಯಿಯ ಚಿನ್ನಾಭರಣಕ್ಕಾಗಿ ಅಂತ್ಯ ಸಂಸ್ಕಾರಕ್ಕೆ ಮುನ್ನ ಸಂಬಂಧಿಕರ ನಡುವೆ ಜಗಳ ನಡೆದಿದ್ದು, ಹೀಗಾಗಿ ಯಾರಿಗೂ ಬೇಡ, ಸಮಾಧಿಯಲ್ಲಿರಲಿ ಎಂದು ಚಿನ್ನಾಭರಣಗಳ ಸಮೇತ ಮಣ್ಣು ಮಾಡಲಾಗಿತ್ತು.
ಈ ಬಗ್ಗೆ ತಿಳಿದವರೇ ಸಮಾಧಿ ಅಗೆದು ಚಿನ್ನಾಭರಣ ದೋಚಿದ್ದಾರೆ ಎಂದು ಗ್ರಾಮಸ್ಥರು ದೂರಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Congress ತುಷ್ಟೀಕರಣ ರಾಜಕೀಯಕ್ಕೆ ಮುಸ್ಲಿಂ ಮೀಸಲಾತಿಗೆ ಬೆಂಬಲಿಸುತ್ತದೆ: ಬೊಮ್ಮಾಯಿ
Politics: ಮೋದಿ ಸಾರ್ವಜನಿಕರಲ್ಲಿ ಕೋಮು ಭಾವನೆ ಹುಟ್ಟು ಹಾಕುತ್ತಿದ್ದಾರೆ; ಎಚ್.ಕೆ. ಪಾಟೀಲ
Neha Case: ನ್ಯಾಯಾಂಗ ಬಂಧನದಲ್ಲಿದ್ದ ಆರೋಪಿ ಸಿಐಡಿ ವಶಕ್ಕೆ
Temperature ರಾಜ್ಯದ 10 ಜಿಲ್ಲೆಗಳಲ್ಲಿ ಬೀಸಲಿದೆ ಬಿಸಿಗಾಳಿ
ಸಂಪತ್ತು ಹಂಚಿಕೆ ಬಗ್ಗೆ ನಾವೆಲ್ಲಿ ಹೇಳಿದ್ದೇವೆ: ಖರ್ಗೆ ಪ್ರಶ್ನೆ
MUST WATCH
ಹೊಸ ಸೇರ್ಪಡೆ
ಹಳದಿ ಶಾಸ್ತ್ರದ ವೇಳೆ ವರನಿಗೆ ವಿದ್ಯುತ್ ಸ್ಪರ್ಶ… ಆಸ್ಪತ್ರೆ ದಾರಿ ಮಧ್ಯೆ ಕೊನೆಯುಸಿರು
Inheritance Tax: ಸ್ಯಾಮ್ ಪಿತ್ರೋಡಾ ಹೇಳಿದ್ದೇನು-ಏನಿದು ಪಿತ್ರಾರ್ಜಿತ ತೆರಿಗೆ ಜಟಾಪಟಿ!
Yugadi: ವರುಷದ ಆದಿ ಯುಗಾದಿ
U-turn ಹೊಡೆದ ರಾಹುಲ್: ಸಂಪತ್ತು ಹಂಚಿಕೆ ಬಗ್ಗೆ ಹೇಳಿಲ್ಲ,ಅನ್ಯಾಯ…
ತಂಗಿ ಮದುವೆಗೆ ಟಿವಿ ಗಿಫ್ಟ್ ಕೊಟ್ಟದ್ದಕ್ಕೆ ಅಸಮಾಧಾನ: ಪತಿಯನ್ನು ಥಳಿಸಿ ಕೊಲ್ಲಿಸಿದ ಪತ್ನಿ