ಸುವರ್ಣ ಗತವೈಭವ, ಹೊಸಬರ ಸೂಪರ್‌ ನ್ಯಾಚುರಲ್‌ ಸುಂದರಿ


Team Udayavani, Feb 17, 2017, 3:45 AM IST

Suvarna-Sundari-(5).jpg

1957ರಲ್ಲಿ ತೆಲುಗಿನಲ್ಲಿ “ಸುವರ್ಣ ಸುಂದರಿ’ ಎಂಬ ಸಿನಿಮಾವೊಂದು ಬಂದಿತ್ತು. ಈಗ ಮತ್ತೆ ಆ ಟೈಟಲ್‌ ರಿಪೀಟ್‌ ಆಗಿದೆ. ಹೊಸಬರ ತಂಡವೊಂದು “ಸುವರ್ಣ ಸುಂದರಿ’ ಎಂಬ ಸಿನಿಮಾ ಮಾಡಲು ಹೊರಟಿದೆ. ಕನ್ನಡ ಹಾಗೂ ತೆಲುಗಿನಲ್ಲಿ ಈ ಸಿನಿಮಾ ತಯಾರಾಗುತ್ತಿದೆ. ಸೂರ್ಯ ಎನ್ನುವವರು ಈ ಸಿನಿಮಾ ಮೂಲಕ ನಿರ್ದೇಶಕರಾಗುತ್ತಿದ್ದಾರೆ. ಈ ಹಿಂದೆ ವಾಹಿನಿಗಳಲ್ಲಿ ಕೆಲಸ ಮಾಡಿದ ಅನುಭವವಿರುವ ಸೂರ್ಯ “ಸುವರ್ಣ ಸುಂದರಿ’ಯಲ್ಲಿ ಹೊಸ ಬಗೆಯ ಕಥೆ ಹೇಳಲು ಹೊರಟಿದ್ದಾರಂತೆ. ಇದೊಂದು ಸೂಪರ್‌ ನ್ಯಾಚುರಲ್‌ ಥ್ರಿಲ್ಲರ್‌ ಕಥೆಯಾಗಿದ್ದು, 600 ವರ್ಷಗಳ ಹಿನ್ನೆಲೆಯೊಂದಿಗೆ ಕಥೆ ತೆರೆದುಕೊಳ್ಳುತ್ತದೆಯಂತೆ. 

“ಚಿತ್ರದ ಕಥೆ 600 ವರ್ಷಗಳ ಇತಿಹಾಸ ಹೊಂದಿದ್ದು, ಮೂರು ಹಂತಗಳಲ್ಲಿ ಸಾಗುತ್ತದೆ. ಪ್ರತಿಯೊಂದು ಹಂತದಲ್ಲೂ ಸಾಕಷ್ಟು ಹೊಸತನಗಳಿರಲಿದೆ. ಚಿತ್ರದಲ್ಲಿ ಶ್ರೀ ಕೃಷ್ಣದೇವರಾಯರ ಕಾಲದ ಆಳ್ವಿಕೆ ವೈಭೋಗವನ್ನು ಕೂಡಾ ತೋರಿಸುವ ಉದ್ದೇಶವಿದೆ. ಚಿತ್ರದಲ್ಲಿ 1960ರ ಕೆಲವು ಸನ್ನಿವೇಶಗಳು ಬರಲಿದ್ದು, ಅದನ್ನು ಕಪ್ಪು-ಬಿಳುಪುವಿನಲ್ಲಿ ತೋರಿಸಲಿದ್ದೇವೆ. ಚಿತ್ರದಲ್ಲಿ 10 ನಿಮಿಷಗಳ ಗ್ರಾಫಿಕ್‌ ಕೂಡಾ ಬರಲಿದೆ’ ಎಂದು ಸಿನಿಮಾ ಬಗ್ಗೆ ವಿವರ ನೀಡಿದರು ಸೂರ್ಯ.

ಚಿತ್ರದ ಕೆಲವು ಸನ್ನಿವೇಶಗಳನ್ನು ನೀರಿನಡಿ ಚಿತ್ರೀಕರಿಸಬೇಕಾಗಿದ್ದು, ಅನಂತಪುರ, ಕೇರಳ ಅಥವಾ ಬೀದರ್‌ನಲ್ಲಿ ಚಿತ್ರೀಕರಿಸುವ ಆಲೋಚನೆ ಇದೆಯಂತೆ.  ಮೊದಲೇ ಹೇಳಿದಂತೆ ಸುಮಾರು ನಾಲ್ಕು ಕೋಟಿ ರೂಪಾಯಿ ಬಜೆಟ್‌ನಲ್ಲಿ ಕನ್ನಡ ಹಾಗೂ ಎರಡು ಕೋಟಿ ರೂಪಾಯಿ ವೆಚ್ಚದಲ್ಲಿ ತೆಲುಗು ಸಿನಿಮಾವನ್ನು ನಿರ್ಮಿಸಲಿದ್ದಾರಂತೆ. ಈಗಾಗಲೇ ಒಂದು ವಾರ ಕಾಲ ತೆಲುಗು ಸಿನಿಮಾದ ಚಿತ್ರೀಕರಣ ನಡೆದು ಹೋಗಿದೆ.

ಚಿತ್ರದಲ್ಲಿ ಪೂರ್ಣ ನಟಿಸುತ್ತಿದ್ದಾರೆ. ಈ ಹಿಂದೆ “ಜೋಶ್‌’ ಹಾಗೂ “ರಾಧಿಕನ್‌ ಗಂಡ’ ಚಿತ್ರದಲ್ಲಿ ನಟಿಸಿದ್ದ ಪೂರ್ಣ ಈಗ “ಸುವರ್ಣ ಸುಂದರಿ’ಯಲ್ಲಿ ನಟಿಸುತ್ತಿದ್ದಾರೆ. ಇಲ್ಲಿ ಅವರಿಗೆ  ಒಳ್ಳೆಯ ಪಾತ್ರ ಸಿಕ್ಕಿದೆಯಂತೆ. ಇವರ ಪಾತ್ರ 60ರ ದಶಕದಲ್ಲಿ ಟ್ರಾವೆಲ್‌ ಆಗಲಿದ್ದು, ತಿಲಕ್‌ ಇವರ ಜೋಡಿಯಂತೆ. ಚಿತ್ರದಲ್ಲಿ ಸಾಕ್ಷಿ ರಾಜಕುಮಾರಿಯಾಗಿ ನಟಿಸುತ್ತಿದ್ದಾರೆ. ಇವರಿಗೆ ರಾಮ್‌ ಎನ್ನುವವರು ಜೋಡಿಯಾಗಿ ನಟಿಸುತ್ತಿದ್ದು, ಇವರ ಜೀವನದಲ್ಲಿ ನಡೆದ ಕೆಲವು ಘಟನೆಗಳ ಮೂಲಕವೂ ಕಥೆ ಮುಂದುವರೆಯಲಿದೆಯಂತೆ.  ಚಿತ್ರಕ್ಕೆ ಸಾಯಿಕಾರ್ತಿಕ್‌ ಸಂಗೀತ ನೀಡುತ್ತಿದ್ದಾರೆ. ಹಳೆಯ ದಿನಗಳ ಮೂಡ್‌ ಅನ್ನು ಸಂಗೀತದ ಮೂಲಕ ತರುವುದು ಅವರಿಗೆ ಚಾಲೆಂಜಿಂಗ್‌ ಕೆಲಸವಂತೆ. ಈಶ್ವರ್‌ ಅವರ ಛಾಯಾಗ್ರಹಣ ಚಿತ್ರಕ್ಕಿದೆ.

ಟಾಪ್ ನ್ಯೂಸ್

Tour: 9 ದಿನ 4,800 ಕಿ.ಮೀ ಪ್ರಯಾಣ-ಅಡ್ವೆಂಚರ್‌ ಬೈಕ್‌ನಲ್ಲಿ 64ರ ಹಿರಿಯರ ಸಾಹಸ ಯಾನ

Tour: 9 ದಿನ 4,800 ಕಿ.ಮೀ ಪ್ರಯಾಣ-ಅಡ್ವೆಂಚರ್‌ ಬೈಕ್‌ನಲ್ಲಿ 64ರ ಹಿರಿಯರ ಸಾಹಸ ಯಾನ

ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ

ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ

Mangaluru: ಬೈಕ್ ಡಿಕ್ಕಿಯಾಗಿ ರಸ್ತೆಗೆ ಬಿದ್ದ ಕಾರ್ಮಿಕನ ಮೇಲೆ ಹರಿದ ಟ್ಯಾಂಕರ್

Mangaluru: ಬೈಕ್ ಡಿಕ್ಕಿಯಾಗಿ ರಸ್ತೆಗೆ ಬಿದ್ದ ಕಾರ್ಮಿಕನ ಮೇಲೆ ಹರಿದ ಟ್ಯಾಂಕರ್

Lok Sabha 1 Phase: ನಿತಿನ್‌ ಗಡ್ಕರಿ ಟು ಕನಿಮೋಳಿ..ಮೊದಲ ಹಂತದ ಘಟಾನುಘಟಿ ಅಭ್ಯರ್ಥಿಗಳು…

Lok Sabha 1 Phase: ನಿತಿನ್‌ ಗಡ್ಕರಿ ಟು ಕನಿಮೋಳಿ..ಮೊದಲ ಹಂತದ ಘಟಾನುಘಟಿ ಅಭ್ಯರ್ಥಿಗಳು…

Navy chief: ಭಾರತೀಯ ನೌಕಾಪಡೆಯ ನೂತನ ಮುಖ್ಯಸ್ಥರಾಗಿ ದಿನೇಶ್ ತ್ರಿಪಾಠಿ ನೇಮಕ

Navy chief: ಭಾರತೀಯ ನೌಕಾಪಡೆಯ ನೂತನ ಮುಖ್ಯಸ್ಥರಾಗಿ ದಿನೇಶ್ ತ್ರಿಪಾಠಿ ನೇಮಕ

pramod-muthalik

Neha Hiremath Case; ಕೊಲೆಗಡುಕನನ್ನು ಎನ್ ಕೌಂಟರ್ ಮಾಡಿ: ಪ್ರಮೋದ್ ಮುತಾಲಿಕ್ ಆಗ್ರಹ

Neha Hiremath Case: ಹಂತಕನ ಊರಿನಲ್ಲಿ ಪ್ರತಿಭಟನೆ, ಮುಸ್ಲಿಂ ಸಮುದಾಯದ ಸಾಥ್

Neha Hiremath Case: ಹಂತಕನ ಊರಿನಲ್ಲಿ ಪ್ರತಿಭಟನೆ, ಮುಸ್ಲಿಂ ಸಮುದಾಯದ ಸಾಥ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Shivanna in lawyer look in Bhairathi Ranagal

Bhairathi Ranagal ಲಾಯರ್ ಶಿವಣ್ಣ; ಕುತೂಹಲ ಹೆಚ್ಚಿಸಿದ ಲುಕ್

Koti

Koti; ಡಾಲಿ ಕಣ್ಣಲ್ಲಿ ಕೋಟಿ ಕನಸು; ಪರಮ್‌ ನಿರ್ದೇಶನದ ಸಿನಿಮಾ

Ritanya Vijay; ದುನಿಯಾ ವಿಜಯ್‌ ಮಗಳು ರಿತನ್ಯಾ ಗ್ರ್ಯಾಂಡ್ ಎಂಟ್ರಿ

Ritanya Vijay; ದುನಿಯಾ ವಿಜಯ್‌ ಮಗಳು ರಿತನ್ಯಾ ಗ್ರ್ಯಾಂಡ್ ಎಂಟ್ರಿ

DEVIL; ಹೆಚ್ಚು ದಿನ ವಿಶ್ರಾಂತಿಯಿಲ್ಲ, ಅಕ್ಟೋಬರ್‌ನಲ್ಲಿ ಡೆವಿಲ್‌ ಬರೋದು ಪಕ್ಕಾ: ದರ್ಶನ್‌

DEVIL; ಹೆಚ್ಚು ದಿನ ವಿಶ್ರಾಂತಿಯಿಲ್ಲ, ಅಕ್ಟೋಬರ್‌ನಲ್ಲಿ ಡೆವಿಲ್‌ ಬರೋದು ಪಕ್ಕಾ: ದರ್ಶನ್‌

Kiran Raj, Yasha Shivakumar starer Bharjari Gandu movie

Kannada Cinema; ರಿಲೀಸ್‌ ಅಖಾಡದಲ್ಲಿ ‘ಭರ್ಜರಿ ಗಂಡು’; ಕಿರಣ್‌ಗೆ ಯಶ ನಾಯಕಿ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Tour: 9 ದಿನ 4,800 ಕಿ.ಮೀ ಪ್ರಯಾಣ-ಅಡ್ವೆಂಚರ್‌ ಬೈಕ್‌ನಲ್ಲಿ 64ರ ಹಿರಿಯರ ಸಾಹಸ ಯಾನ

Tour: 9 ದಿನ 4,800 ಕಿ.ಮೀ ಪ್ರಯಾಣ-ಅಡ್ವೆಂಚರ್‌ ಬೈಕ್‌ನಲ್ಲಿ 64ರ ಹಿರಿಯರ ಸಾಹಸ ಯಾನ

Lok Sabha Election: ‘ಬಿವೈಆರ್‌ಗೆ 3 ಲಕ್ಷ ಮತ ಅಂತರದ ಗೆಲುವು ಖಚಿತ’

Lok Sabha Election: ‘ಬಿವೈಆರ್‌ಗೆ 3 ಲಕ್ಷ ಮತ ಅಂತರದ ಗೆಲುವು ಖಚಿತ’

ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ

ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ

11-

Kushtagi: ನಿರೀಕ್ಷಿತ ಫಲಿತಾಂಶ ಬಾರದ ಹಿನ್ನೆಲೆ ಮನನೊಂದು ವಿದ್ಯಾರ್ಥಿನಿ ಆತ್ಮಹತ್ಯೆ  

Vijayapura: ಸಿಡಿಲು ಬಡಿದು ಓರ್ವನಿಗೆ ಗಾಯ, ಮೂರು ಜಾನುವಾರು ಸಾವು

Vijayapura: ಸಿಡಿಲು ಬಡಿದು ಓರ್ವನಿಗೆ ಗಾಯ, ಮೂರು ಜಾನುವಾರು ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.