ಹೆಬ್ಳೀಕರ್‌ ರಿಟರ್ನ್ಸ್! ಚಿಂತನ ಮಂಥನ


Team Udayavani, Feb 17, 2017, 3:45 AM IST

Mana-Manthana-(19).jpg

“ಡಾ. ಅಶೋಕ್‌ ಪೈ ತುಂಬಾ ಇಷ್ಟಪಟ್ಟು ನಿರ್ಮಿಸಿದ ಸಿನಿಮಾವಿದು. ಅವರೊಂದಿಗೆ ಇದು ನನ್ನ ನಾಲ್ಕನೇ ಚಿತ್ರ. ಯುರೋಪ್‌ನಿಂದ ಫೋನ್‌ ಮಾಡಿ, “ಸಿನಿಮಾವನ್ನು ನಾನು ಬಂದ ಮೇಲೆ ರಿಲೀಸ್‌ ಮಾಡೋಣ’ ಅಂತ ಹೇಳಿದ್ದರು. ಆದರೆ, ಅವರು ಅಲ್ಲೇ ಕೊನೆಯುಸಿರೆಳೆದರು. ಹೀಗಾಗಿ ಸಿನಿಮಾ ರಿಲೀಸ್‌ ಆಗೋದು ಸ್ವಲ್ಪ ತಡವಾಯ್ತು …’ ಹೀಗೆ ಹೇಳಿ ಕ್ಷಣ ಕಾಲ ಮೌನಕ್ಕೆ ಶರಣಾದರು ನಿರ್ದೇಶಕ ಕಮ್‌ ನಟ ಸುರೇಶ್‌ ಹೆಬ್ಳೀಕರ್‌.

ಅವರು ಮಾತನಾಡಿದ್ದು “ಮನ ಮಂಥನ’ ಚಿತ್ರದ ಬಗ್ಗೆ. “ಕಳೆದ ಒಂದೂವರೆ ದಶಕದ ಬಳಿಕ ನಿರ್ದೇಶಿಸಿರುವ ಚಿತ್ರವಿದು. ಹಾಗಾಗಿ, ಒಳ್ಳೆಯ ವಿಷಯದೊಂದಿಗೇ ಪುನಃ ಬಂದಿದ್ದೇನೆ. ಇದು ಬದುಕಿನಲ್ಲಿರುವ ಕೆಲ ಸತ್ಯ ಘಟನೆಗಳನ್ನಾಧರಿಸಿದ ಚಿತ್ರ. ಈಗಿನ ಯುವಕರ ಬಯಕೆ, ಕನಸು ಮತ್ತು ಅವರ ಚಿಂತನೆ ಮಾರ್ಗ, ಭವಿಷ್ಯ ಇವೆಲ್ಲವೂ ಪೋಷಕರಿಗೆ ಅರ್ಥ ಆಗೋದು ಕಷ್ಟ. ಅಂತಹ ಅರ್ಥವಾಗುವ ಅವಕಾಶದ ವಂಚನೆಯೇ ಒಂದು ರೀತಿಯ ಸಂತಾಪ ಮತ್ತು ಘರ್ಷಣೆಗೆ ಕಾರಣ. ಇಂತಹ ಹಲವು ಸನ್ನಿವೇಶಗಳು ಚಿತ್ರದಲ್ಲಿ ಕಾಣಸಿಗುತ್ತವೆ. ಮನೋವಿಜ್ಞಾನಕ್ಕೆ ಸಂಬಂಧಿಸಿದ ಎಳೆಯೇ ಚಿತ್ರದ ಹೈಲೆಟ್‌ …’

“ಗ್ಯಾಪ್‌ ಬಳಿಕ ಮಾಡಿದ ಸಿನಿಮಾವಾದ್ದರಿಂದ ತಂಬಾ ಗಂಭೀರ ವಿಷಯದ ಜತೆಯಲ್ಲಿ, ಸಂದೇಶ ಸಾರುವ ಅಂಶಗಳೂ ಇವೆ. ಅಶೋಕ್‌ ಪೈ ಅವರೇ ಕೊಟ್ಟ ಕಥೆಗೆ, ಚಿತ್ರಕಥೆ, ಸಂಭಾಷಣೆ ಬರೆದು ನಿರ್ದೇಶಿಸಿದ್ದೇನೆ. ಈ ಚಿತ್ರದಲ್ಲಿ ನಟಿಸಿರುವ ಪ್ರತಿಯೊಬ್ಬ ಕಲಾವಿದರೂ ನೈಜವಾಗಿ ಅಭಿನಯಿಸಿರುವುದು ಚಿತ್ರದ ಪ್ಲಸ್‌. ಇದೊಂದು ಚಿಕ್ಕ ಬಜೆಟ್‌ ಚಿತ್ರವಾದರೂ, ಈಗಿನ ಯೂತ್ಸ್ಗಿರುವ ತಳಮಳ, ಪೋಷಕರಲ್ಲಿರುವ ಆತಂಕ ಇತ್ಯಾದಿಗಳನ್ನು ಬಿಚ್ಚಿಡುವ ಮೂಲಕ ಒಂದಷ್ಟು ಪರಿಹಾರ ಸೂಚಿಸುವ ಅಂಶಗಳನ್ನು ಹೊಂದಿದೆ’ ಎನ್ನುತ್ತಾರೆ ಸುರೇಶ್‌ ಹೆಬ್ಳೀಕರ್‌.

ರಮೇಶ್‌ ಭಟ್‌ಗೆ ಹೆಬ್ಳೀಕರ್‌ ಜತೆ ಸಮಾರು ನಾಲ್ಕು ದಶಕದ ಪಯಣವಂತೆ. “ಇಲ್ಲಿ ಎಲ್ಲವೂ ಒಳಗೊಂಡಿದೆ. ಇಲ್ಲಿ ಹೀರೋ ಇಪ್ಪತ್ತು ಜನರಿಗೆ ಹೊಡೆದುರುಳಿಸಲ್ಲ. ಐಟಂ ಸಾಂಗ್‌ ಇಲ್ಲ. ಗ್ಲಾಮರ್‌ ಇಲ್ಲ. ಹೆವಿ ಮೆಲೋಡ್ರಾಮವೂ ಇಲ್ಲ. ಒಂದು ಸಹಜವಾದ ಚಿತ್ರಣ ಕಟ್ಟಿಕೊಟ್ಟಿದ್ದಾರೆ. ಒಂದು ಚೌಕಟ್ಟಿನಲ್ಲಿ ನನ್ನ ಪಾತ್ರವಿದೆ. ಅದಕ್ಕೆ ಸರ್ಕಾರಿ ಮುದ್ರೆಯೂ ಬಿದ್ದಿದೆ. ಅಭಿನಯಕ್ಕೆ ಅವಾರ್ಡ್‌ ಸಿಕ್ಕಿರುವುದು ಖುಷಿ ಕೊಟ್ಟಿದೆ’ ಎಂದರು ರಮೇಶ್‌ಭಟ್‌.

ಹೀರೋ ಕಿರಣ್‌ ರಜಪೂತ್‌ಗೆ ಇದು ಮೊದಲ ಸಿನಿಮಾ. ಧಾರವಾಡ ಮೂಲದ ಕಿರಣ್‌ ರಜಪೂತ್‌ ಒಮ್ಮೆ, ಹೆಬ್ಳೀಕರ್‌ ಅವರನ್ನು ಭೇಟಿ ಮಾಡಿ, ಸಿನಿಮಾ ಆಸೆ ಹೇಳಿಕೊಂಡಿದ್ದರಂತೆ. ಆಗ, ಓಕೆ ಅಂದಿದ್ದರಂತೆ ಹೆಬ್ಳೀಕರ್‌, ಏನೋ ಒಂದು ಸಣ್ಣ ಪಾತ್ರ ಕೊಡ್ತಾರೆ ಅಂದುಕೊಂಡ ರಜಪೂತ್‌ಗೆ, ಹೀರೋ ಅವಕಾಶ ಕೊಟ್ಟಿದ್ದಕ್ಕೆ ಇನ್ನಿಲ್ಲದ ಖುಷಿ ಇದೆ. ಅವರಿಗಿಲ್ಲಿ ಮುಗ್ಧ ಹುಡುಗನ ಪಾತ್ರವಂತೆ.

ಅರ್ಪಿತ ಸಿನಿಮಾದ ನಾಯಕಿ. ಅವರಿಗೂ ಇಲ್ಲಿ ಮುಗ್ಧ ಹುಡುಗಿಯ ಪಾತ್ರ ಸಿಕ್ಕಿದೆಯಂತೆ. ಹಿರಿಯ ನಟಿ ಸಂಗೀತ ಅವರಿಗೆ ಹೆಬ್ಳೀಕರ್‌ ಜತೆ ಮೊದಲ ಸಿನಿಮಾವಂತೆ. ಅವರಿಂದ ಸಾಕಷ್ಟು ಕಲಿತಿದ್ದುಂಟು. ಸೆಟ್‌ನಲ್ಲಿ ಒಳ್ಳೆಯ ವಾತಾವರಣ ಇತ್ತು’ ಎಂದರು ಸಂಗೀತ.

ಟಾಪ್ ನ್ಯೂಸ್

Ram Navami Procession: ರಾಮನವಮಿ ಮೆರವಣಿಗೆ ವೇಳೆ ಘರ್ಷಣೆ: 20ಕ್ಕೂ ಹೆಚ್ಚು ಮಂದಿಗೆ ಗಾಯ

Ram Navami Procession: ರಾಮನವಮಿ ಮೆರವಣಿಗೆ ವೇಳೆ ಘರ್ಷಣೆ: 20ಕ್ಕೂ ಹೆಚ್ಚು ಮಂದಿಗೆ ಗಾಯ

2-shimoga

Bhadravathi: ಲಾರಿ ಡಿಕ್ಕಿ, ರೈಲು ಹಳಿಗಳು ಏರುಪೇರು; ಎರಡೂವರೆ ತಾಸು ಪ್ರಯಾಣಿಕರು ಹೈರಾಣು

1-24-thursday

Daily Horoscope: ಕೊಟ್ಟ ಮಾತಿಗೆ ತಪ್ಪದಂತೆ ಎಚ್ಚರಿಕೆ ಇರಲಿ,ಅನವಶ್ಯ ವಿವಾದಗಳಿಂದ ದೂರವಿರಿ

Elections; ದೇಶದಲ್ಲಿ ಹಂತ 1: ಬಹಿರಂಗ ಪ್ರಚಾರ ಅಂತ್ಯ, ನಾಳೆ ಮತದಾನ

Elections; ದೇಶದಲ್ಲಿ ಹಂತ 1: ಬಹಿರಂಗ ಪ್ರಚಾರ ಅಂತ್ಯ, ನಾಳೆ ಮತದಾನ

1eqqewe

IPL; ಪಂಜಾಬ್‌ ಕಿಂಗ್ಸ್‌-ಮುಂಬೈ ಇಂಡಿಯನ್ಸ್‌ : ಒಂದೇ ದೋಣಿಯ ಪಯಣಿಗರು

Lok Sabha Polls 2024 ಕರ್ನಾಟಕದ ನಂಟು ಹೊರರಾಜ್ಯದಲ್ಲಿ ಸ್ಪರ್ಧೆ

Lok Sabha Polls 2024; ಕರ್ನಾಟಕದ ನಂಟು ಹೊರರಾಜ್ಯದಲ್ಲಿ ಸ್ಪರ್ಧೆ

ಭಾರತದ ಜಿಡಿಪಿ ಶೇ.6.8 ದರದಲ್ಲಿ ಪ್ರಗತಿ: ಐಎಂಎಫ್ ಅಂದಾಜು

ಭಾರತದ ಜಿಡಿಪಿ ಶೇ.6.8 ದರದಲ್ಲಿ ಪ್ರಗತಿ: ಐಎಂಎಫ್ ಅಂದಾಜು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Shivanna in lawyer look in Bhairathi Ranagal

Bhairathi Ranagal ಲಾಯರ್ ಶಿವಣ್ಣ; ಕುತೂಹಲ ಹೆಚ್ಚಿಸಿದ ಲುಕ್

Koti

Koti; ಡಾಲಿ ಕಣ್ಣಲ್ಲಿ ಕೋಟಿ ಕನಸು; ಪರಮ್‌ ನಿರ್ದೇಶನದ ಸಿನಿಮಾ

Ritanya Vijay; ದುನಿಯಾ ವಿಜಯ್‌ ಮಗಳು ರಿತನ್ಯಾ ಗ್ರ್ಯಾಂಡ್ ಎಂಟ್ರಿ

Ritanya Vijay; ದುನಿಯಾ ವಿಜಯ್‌ ಮಗಳು ರಿತನ್ಯಾ ಗ್ರ್ಯಾಂಡ್ ಎಂಟ್ರಿ

DEVIL; ಹೆಚ್ಚು ದಿನ ವಿಶ್ರಾಂತಿಯಿಲ್ಲ, ಅಕ್ಟೋಬರ್‌ನಲ್ಲಿ ಡೆವಿಲ್‌ ಬರೋದು ಪಕ್ಕಾ: ದರ್ಶನ್‌

DEVIL; ಹೆಚ್ಚು ದಿನ ವಿಶ್ರಾಂತಿಯಿಲ್ಲ, ಅಕ್ಟೋಬರ್‌ನಲ್ಲಿ ಡೆವಿಲ್‌ ಬರೋದು ಪಕ್ಕಾ: ದರ್ಶನ್‌

Kiran Raj, Yasha Shivakumar starer Bharjari Gandu movie

Kannada Cinema; ರಿಲೀಸ್‌ ಅಖಾಡದಲ್ಲಿ ‘ಭರ್ಜರಿ ಗಂಡು’; ಕಿರಣ್‌ಗೆ ಯಶ ನಾಯಕಿ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

5-fusion

UV Fusion: ನಾಟಕದ ಜೀವನಕ್ಕೆ ಯಾತಕ್ಕಾಗಿ ದೇವರ ಹೊಣೆ

4-uv-fusion

Women: ಜಗದೆಲ್ಲ ನೋವನುಂಡರೂ ಹಿತ ಬಯಸುವವಳು ಮಾತೇ

3-uv-fusion

Holi: ಬಣ್ಣಗಳ ಹಬ್ಬ ಹೋಳಿ ಹಬ್ಬ, ಉಲ್ಲಾಸ ತರುವ ಬಣ್ಣಗಳ ಹಬ್ಬ

Ram Navami Procession: ರಾಮನವಮಿ ಮೆರವಣಿಗೆ ವೇಳೆ ಘರ್ಷಣೆ: 20ಕ್ಕೂ ಹೆಚ್ಚು ಮಂದಿಗೆ ಗಾಯ

Ram Navami Procession: ರಾಮನವಮಿ ಮೆರವಣಿಗೆ ವೇಳೆ ಘರ್ಷಣೆ: 20ಕ್ಕೂ ಹೆಚ್ಚು ಮಂದಿಗೆ ಗಾಯ

2-shimoga

Bhadravathi: ಲಾರಿ ಡಿಕ್ಕಿ, ರೈಲು ಹಳಿಗಳು ಏರುಪೇರು; ಎರಡೂವರೆ ತಾಸು ಪ್ರಯಾಣಿಕರು ಹೈರಾಣು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.