ಕಾಡಿನ ರಹಸ್ಯ; ಚೂರಿಕಟ್ಟೆಗೆ ಹೋದ ರಾಘು; ಕಥೆಯ ಜೊತೆಗೆ ಬಂದರು


Team Udayavani, Mar 24, 2017, 3:45 AM IST

sdc.jpg

“ಚೌಕಬಾರ’ ಎಂಬ ಕಿರುಚಿತ್ರವೊಂದು ಬಂದಿರುವ ಹಾಗೂ ಆ ಚಿತ್ರ ರಾಜ್ಯ ಪ್ರಶಸ್ತಿಯನ್ನು ಮುಡಿಗೇರಿಸಿಕೊಂಡಿರುವ ಬಗ್ಗೆ ನೀವು ಕೇಳಿರಬಹುದು. ಆ ಚಿತ್ರವನ್ನು ನಿರ್ದೇಶಿಸಿದ್ದು ರಾಘು ಶಿವಮೊಗ್ಗ. ಆ ಕಿರುಚಿತ್ರದ ಪ್ರದರ್ಶನದ ಸಂದರ್ಭದಲ್ಲೇ ರಾಘು ಮುಂದೆ ಸಿನಿಮಾ ಮಾಡಲಿದ್ದಾರೆಂದು ಕಿರುಚಿತ್ರ ತಂಡ ಖುಷಿಯಿಂದ ಹೇಳಿಕೊಂಡಿತ್ತು. ಅದರಂತೆ ರಾಘು ಶಿವಮೊಗ್ಗ ಈಗ ಸಿನಿಮಾ ಮಾಡುತ್ತಿದ್ದಾರೆ. ಅದು “ಚೂರಿಕಟ್ಟೆ’. ಏನಿದು ಚೂರಿಕಟ್ಟೆ ಎಂದು ನೀವು ಕೇಳಬಹುದು. ಶಿವಮೊಗ್ಗ ಸಾಗರದ ಕಡೆಯಲ್ಲಿರುವ ಒಂದು ಸಣ್ಣ ಊರು. ಈಗ ಆ ಊರನ್ನೇ ಸಿನಿಮಾದ ಟೈಟಲ್‌ ಆಗಿಟ್ಟುಕೊಂಡು ಸಿನಿಮಾ ಮಾಡಲು ಹೊರಟಿದ್ದಾರೆ ರಾಘು ಶಿವಮೊಗ್ಗ. ಇತ್ತೀಚೆಗೆ ಈ ಸಿನಿಮಾಕ್ಕೆ ಮುಹೂರ್ತ ನಡೆದಿದೆ. 

ರಾಘು ಶಿವಮೊಗ್ಗ ತಮ್ಮ ಚೊಚ್ಚಲ ನಿರ್ದೇಶನದಲ್ಲಿ ಸಸ್ಪೆನ್ಸ್‌, ಥ್ರಿಲ್ಲರ್‌ ಸಿನಿಮಾ ಮಾಡಲು ಹೊರಟಿದ್ದಾರೆ. ಟಿಬರ್‌ ಮಾಫಿಯಾ ಸುತ್ತ ಸಿನಿಮಾ ಮಾಡಲು ಹೊರಟಿರುವ ರಾಘು ಶಿವಮೊಗ್ಗ ಸಾಕಷ್ಟು ಇಂಟರೆಸ್ಟಿಂಗ್‌ ವಿಷಯಗಳನ್ನು ಈ ಸಿನಿಮಾದಲ್ಲಿ ಹೇಳಲಿದ್ದಾರಂತೆ. ಟಿಂಬರ್‌ ಎಂದಮೇಲೆ ಕಥೆ ಕಾಡಲ್ಲೇ ನಡೆಯುತ್ತದೆ ಎಂದು ಹೊಸದಾಗಿ ಹೇಳಬೇಕಿಲ್ಲ. “ಚೂರಿಕಟ್ಟೆ’ ಕೂಡಾ ಕಾಡಿನ ಬ್ಯಾಕ್‌ಡ್ರಾಪ್‌ನಲ್ಲೇ ನಡೆಯುವ ಕಥೆ. ಹೊಸನಗರ ಸುತ್ತಮುತ್ತ ಚಿತ್ರೀಕರಣ ನಡೆಸಲಿದೆ ರಾಘು ಅಂಡ್‌ ಟೀಂ. “ಚೂರಿಕಟ್ಟೆ’ ಎಂಬ ಹೆಸರಿನಲ್ಲಿ ಫೋರ್ಸ್‌ ಇದೆ ಎಂಬ ಕಾರಣಕ್ಕೆ ಚಿತ್ರಕ್ಕೆ ಅದೇ ಟೈಟಲ್‌ ಇಡಲಾಗಿದೆಯಂತೆ. ಅದು ಬಿಟ್ಟರೆ ಆ ಊರಿಗೆ ಕಥೆಗೂ ಯಾವುದೇ ಸಂಬಂಧವಿಲ್ಲ. “ಕತೆ ಬಹುತೇಕ ಕಾಡಲ್ಲೇ ನಡೆಯುತ್ತದೆ. ಬೇಸಿಗೆಯಲ್ಲಿ ಶೂಟಿಂಗ್‌ ಇರುವುದರಿಂದ ರಗಡ್‌ ಆಗಿರುವಂತಹ ಕಾಡನ್ನು ತೋರಿಸಬೇಕೆಂದಿದ್ದೇವೆ’ ಎನ್ನುವುದು ರಾಘು ಶಿವಮೊಗ್ಗ ಮಾತು. ಅಂದಹಾಗೆ ಈ ಚಿತ್ರವನ್ನು ನಯಾಜ್‌ ನಿರ್ಮಿಸುತ್ತಿದ್ದಾರೆ. 

ಚಿತ್ರದಲ್ಲಿ ಪ್ರವೀಣ್‌ ನಾಯಕರಾಗಿ ನಟಿಸುತ್ತಿದ್ದಾರೆ. “ಸಿಂಪಲ್ಲಾಗ್‌ ಇನ್ನೊಂದ್‌ ಲವ್‌ಸ್ಟೋರಿ’ ಚಿತ್ರದಲ್ಲಿ ನಟಿಸಿದ ಪ್ರವೀಣ್‌ಗೆ ಇಲ್ಲಿ ಒಳ್ಳೆಯ ಪಾತ್ರ ಸಿಕ್ಕಿದೆಯಂತೆ. ಪೊಲೀಸ್‌ ಆಗಬೇಕೆಂಬ ಆಸೆ ಇಟ್ಟುಕೊಂಡಿರುವ ಹುಡುಗನಾಗಿ ಕಾಣಿಸಿಕೊಳ್ಳುತ್ತಿರುವ ಅವರ ನಡವಳಿಕೆ ಕೂಡಾ ಪೊಲೀಸ್‌ ರೀತಿಯಲ್ಲೇ ಇರುತ್ತದೆಯಂತೆ. “ರಾಘು ಶಿವಮೊಗ್ಗ ಅವರು ಈಗಾಗಲೇ ತಮ್ಮ ಕಿರುಚಿತ್ರದಲ್ಲೇ ಮೆಚ್ಚುಗೆ ಪಡೆದಿದ್ದಾರೆ. ಈಗ ಒಂದೊಳ್ಳೆಯ ಕಥೆಯೊಂದಿಗೆ ಸಿನಿಮಾ ಮಾಡುತ್ತಿದ್ದಾರೆ. ಅವರ ಕೆಲಸದ ಮೇಲೆ ನನಗೆ ನಂಬಿಕೆ ಇದೆ’ ಎನ್ನುವುದು ಪ್ರವೀಣ್‌ ಮಾತು. ಚಿತ್ರದಲ್ಲಿ ಪ್ರೇರಣಾ ಎಂಬ ಹೊಸ ಹುಡುಗಿ ನಾಯಕಿಯಾಗಿ ನಟಿಸುತ್ತಿದ್ದಾರೆ. ಕಾಲೇಜಿಗೆ ಹೋಗುವ ಹುಡುಗಿಯ ಪಾತ್ರ ಎಂದಷ್ಟೇ ಹೇಳುವ ಪ್ರೇರಣಾ ಪಾತ್ರದ ಬಗ್ಗೆ ಹೆಚ್ಚು ಮಾತನಾಡಲಿಲ್ಲ.

ಇನ್ನು, ಈ ಹಿಂದೆ “ಚೌಕಬಾರ’ದಲ್ಲಿ ಪ್ರಮುಖ ಪಾತ್ರ ಮಾಡಿದ್ದ ಮಂಜುನಾಥ ಹೆಗಡೆ, ಅಚ್ಯುತ್‌ ಕುಮಾರ್‌, ಶರತ್‌ ಲೋಹಿತಾಶ್ವ ಕೂಡಾ “ಚೂರಿಕಟ್ಟೆ’ಯಲ್ಲಿ ಪ್ರಮುಖ ಪಾತ್ರ ಮಾಡುತ್ತಿದ್ದಾರೆ. ಮಂಜುನಾಥ ಹೆಗಡೆ ಇಲ್ಲಿ ಫಾರೆಸ್ಟ್‌ ಆಫೀಸರ್‌ ಆಗಿ ಕಾಣಿಸಿಕೊಂಡರೆ, ಅಚ್ಯುತ್‌ ಹೆಗಡೆ ಪೊಲೀಸ್‌. ಚಿತ್ರಕ್ಕೆ ವಾಸುಕಿ ವೈಭವ್‌ ಸಂಗೀತ, ಅದ್ವೆ„ತ್‌ ಗುರುಮೂರ್ತಿ ಛಾಯಾಗ್ರಹಣವಿದೆ. 

ಟಾಪ್ ನ್ಯೂಸ್

Delhi Police: ಮಾರುತಿ ಸ್ವಿಫ್ಟ್‌ ಕಾರಿನಲ್ಲಿ 30ಕ್ಕೂ ಅಧಿಕ ಕುರಿ, ಮೇಕೆ ಸಾಗಾಟ!

Delhi Police: ಮಾರುತಿ ಸ್ವಿಫ್ಟ್‌ ಕಾರಿನಲ್ಲಿ 30ಕ್ಕೂ ಅಧಿಕ ಕುರಿ, ಮೇಕೆ ಸಾಗಾಟ!

BJP 2025ರಲ್ಲಿ ಹಿಂದುಳಿದ ಸಮುದಾಯಗಳ ಮೀಸಲಾತಿ ತೆಗೆದು ಹಾಕಲಿದೆ: ರೇವಂತ್ ರೆಡ್ಡಿ

BJP 2025ರಲ್ಲಿ ಹಿಂದುಳಿದ ಸಮುದಾಯಗಳ ಮೀಸಲಾತಿ ತೆಗೆದು ಹಾಕಲಿದೆ: ರೇವಂತ್ ರೆಡ್ಡಿ

Patna: ಹೋಟೆಲ್ ನಲ್ಲಿ ಭಾರಿ ಅಗ್ನಿ ಅವಘಡ, 6 ಮಂದಿ ಸಜೀವ ದಹನ, ಹಲವರಿಗೆ ಗಾಯ

Patna: ಹೋಟೆಲ್ ನಲ್ಲಿ ಭಾರಿ ಅಗ್ನಿ ಅವಘಡ, 6 ಮಂದಿ ಸಜೀವ ದಹನ, ಹಲವರಿಗೆ ಗಾಯ

ರಾಜ್ಯದಲ್ಲಿ 20ಕ್ಕಿಂತ ಹೆಚ್ಚು ಕ್ಷೇತ್ರ ಗೆಲ್ಲುತ್ತೇವೆ: ರಣದೀಪ್ ಸುರ್ಜೇವಾಲಾ

Loksabha; ರಾಜ್ಯದಲ್ಲಿ 20ಕ್ಕಿಂತ ಹೆಚ್ಚು ಕ್ಷೇತ್ರ ಗೆಲ್ಲುತ್ತೇವೆ: ರಣದೀಪ್ ಸುರ್ಜೇವಾಲಾ

ನೀತಿ ಸಂಹಿತೆ ಉಲ್ಲಂಘನೆ: ಏಪ್ರಿಲ್ 29ರೊಳಗೆ ಉತ್ತರ ನೀಡಲು ಮೋದಿ, ರಾಹುಲ್‌ಗೆ ಸೂಚನೆ

ನೀತಿ ಸಂಹಿತೆ ಉಲ್ಲಂಘನೆ: ಏಪ್ರಿಲ್ 29ರೊಳಗೆ ಉತ್ತರ ನೀಡಲು ಮೋದಿ, ರಾಹುಲ್‌ಗೆ ಸೂಚನೆ

Anil Kumble Reveals His IPL Bid 2008

IPL: ಆರ್ ಸಿಬಿ ತಂಡಕ್ಕಾಗಿ ಮಲ್ಯ ಅಂದು…..: ವಿಶೇಷ ಘಟನೆ ನೆನೆದ ಅನಿಲ್ ಕುಂಬ್ಳೆ

11-belthangady

LS Polls: ಬೆಳ್ತಂಗಡಿ ತಾಲೂಕಿನ ಉಜಿರೆಯ ಮಸ್ಟರಿಂಗ್ ಕೇಂದ್ರಕ್ಕೆ ದ.ಕ. ಜಿಲ್ಲಾಧಿಕಾರಿ ಭೇಟಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Sandalwood; ‘ಫಾರೆಸ್ಟ್‌’ನಲ್ಲಿ ಚಿಕ್ಕಣ್ಣ & ಟೀಂ

Sandalwood; ‘ಫಾರೆಸ್ಟ್‌’ನಲ್ಲಿ ಚಿಕ್ಕಣ್ಣ & ಟೀಂ

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

Shivanna in lawyer look in Bhairathi Ranagal

Bhairathi Ranagal ಲಾಯರ್ ಶಿವಣ್ಣ; ಕುತೂಹಲ ಹೆಚ್ಚಿಸಿದ ಲುಕ್

Koti

Koti; ಡಾಲಿ ಕಣ್ಣಲ್ಲಿ ಕೋಟಿ ಕನಸು; ಪರಮ್‌ ನಿರ್ದೇಶನದ ಸಿನಿಮಾ

Ritanya Vijay; ದುನಿಯಾ ವಿಜಯ್‌ ಮಗಳು ರಿತನ್ಯಾ ಗ್ರ್ಯಾಂಡ್ ಎಂಟ್ರಿ

Ritanya Vijay; ದುನಿಯಾ ವಿಜಯ್‌ ಮಗಳು ರಿತನ್ಯಾ ಗ್ರ್ಯಾಂಡ್ ಎಂಟ್ರಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Delhi Police: ಮಾರುತಿ ಸ್ವಿಫ್ಟ್‌ ಕಾರಿನಲ್ಲಿ 30ಕ್ಕೂ ಅಧಿಕ ಕುರಿ, ಮೇಕೆ ಸಾಗಾಟ!

Delhi Police: ಮಾರುತಿ ಸ್ವಿಫ್ಟ್‌ ಕಾರಿನಲ್ಲಿ 30ಕ್ಕೂ ಅಧಿಕ ಕುರಿ, ಮೇಕೆ ಸಾಗಾಟ!

BJP 2025ರಲ್ಲಿ ಹಿಂದುಳಿದ ಸಮುದಾಯಗಳ ಮೀಸಲಾತಿ ತೆಗೆದು ಹಾಕಲಿದೆ: ರೇವಂತ್ ರೆಡ್ಡಿ

BJP 2025ರಲ್ಲಿ ಹಿಂದುಳಿದ ಸಮುದಾಯಗಳ ಮೀಸಲಾತಿ ತೆಗೆದು ಹಾಕಲಿದೆ: ರೇವಂತ್ ರೆಡ್ಡಿ

We Are The Bad Boys song from Vidyarthi Vidyarthiniyare

Kannada Cinema; ಬ್ಯಾಡ್‌ ಬಾಯ್ಸ್ ಬಂದ್ರು..! ವಿದ್ಯಾರ್ಥಿ ವಿದ್ಯಾರ್ಥಿನಿಯರ ಹಾಡಿದು…

Patna: ಹೋಟೆಲ್ ನಲ್ಲಿ ಭಾರಿ ಅಗ್ನಿ ಅವಘಡ, 6 ಮಂದಿ ಸಜೀವ ದಹನ, ಹಲವರಿಗೆ ಗಾಯ

Patna: ಹೋಟೆಲ್ ನಲ್ಲಿ ಭಾರಿ ಅಗ್ನಿ ಅವಘಡ, 6 ಮಂದಿ ಸಜೀವ ದಹನ, ಹಲವರಿಗೆ ಗಾಯ

14-fusion

Rural Life: ಗ್ರಾಮೀಣ ಬದುಕಿನ ಮೆಲುಕು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.