ಕನ್ನಡದಲ್ಲೀಗ ಸುವರ್ಣ ಯುಗ: ಅರ್ಜುನ ರಾಗ


Team Udayavani, Apr 21, 2017, 12:23 PM IST

21-SUCHI-2.jpg

ನೋಡ ನೋಡುತ್ತಲೇ ಅರ್ಜುನ್‌ ಜನ್ಯ ಬರೋಬ್ಬರಿ 70 ಸಿನಿಮಾಗಳಿಗೆ ಸಂಗೀತ ಕೊಟ್ಟಿದ್ದಾರೆ. ಈ ವಾರ ಬಿಡುಗಡೆಯಾಗುತ್ತಿರುವ “ರಾಗ’ ಚಿತ್ರವು, ಅರ್ಜುನ್‌ ಜನ್ಯ ಸಂಗೀತ ಸಂಯೋಜಿಸಿರುವ 70ನೇ  ಸೆಂಚುರಿಗೆ ಇನ್ನು 30 ಸಿನಿಮಾ ಮಾತ್ರ ಬಾಕಿ. ಈ ವರ್ಷ ಏನಿಲ್ಲವೆಂದರೂ ಹದಿನೈದು ಚಿತ್ರಗಳು ಸೆಟ್ಟೇರಲಿವೆ. ಮುಂದಿನ ಒಂದೆರೆಡು ವರ್ಷಗಳಲ್ಲಿ ಸೆಂಚುರಿ ಬಾರಿಸುವುದು ಗ್ಯಾರಂಟಿ.

ಕಡಿಮೆ ಅವಧಿಯಲ್ಲಿ ಇಷ್ಟೊಂದು ಸಿನಿಮಾಗಳನ್ನು ಮಾಡೋದು ಕಷ್ಟ ಎಂದನಿಸಬಹುದು. ಆದರೆ, ಅರ್ಜುನ್‌ಗೆ ಅದೆಂದೂ ಕಷ್ಟ ಎಂದನಿಸಿಲ್ಲವಂತೆ. “ಇಷ್ಟ ಇರುವ ಮತ್ತು ಪ್ರೀತಿ ಇರುವವರ ಜತೆ ಕೆಲಸ ಮಾಡಬೇಕಾದರೆ, ಯಾವುದೂ ಕಷ್ಟ ಆಗಲ್ಲ. ಕಷ್ಟ ಅನಿಸೋದು ಬೇರೆ ರೀತಿಯ ಜನರ ಜತೆ ಕೆಲಸ ಮಾಡುವಾಗ. ಕಳೆದ ವರ್ಷ ಹದಿನೈದು ಸಿನಿಮಾ ಮಾಡಿದ್ದೇನೆ. ನಿಜವಾಗಿಯೂ ಅದು ನನಗೇ ಗೊತ್ತಿಲ್ಲ. ಅದೆಲ್ಲಾ ಸಾಧ್ಯವಾಗಿದ್ದು, ಅರ್ಜುನ್‌ ಜನ್ಯ ಒಬ್ಬನಿಂದ ಅಲ್ಲ. ನನ್ನ ಜತೆ ರಾತ್ರಿ, ಹಗಲು ಕೆಲಸ ಮಾಡಿದ ಸಂಗೀತಗಾರರು, ಬೆಂಗಳೂರು ಮತ್ತು ಚೆನ್ನೈನಲ್ಲಿರುವ ನನ್ನ ಮ್ಯೂಸಿಷಿಯನ್ಸ್‌ ಕೊಟ್ಟ ಸಹಕಾರ, ಪ್ರೋತ್ಸಾಹದಿಂದ ಎಷ್ಟೇ ಒತ್ತಡವಿದ್ದರೂ ಎಲ್ಲವನ್ನೂ ನಿಭಾಯಿಸಿದ್ದೇನೆ. ಒಂದು ಕಡೆ ಸಿನಿಮಾ, ಇನ್ನೊಂದು ಕಡೆ ರಿಯಾಲಿಟಿ ಶೋ ಇವೆಲ್ಲ ಸರಿಯಾಗಿ ನಿರ್ವಹಿಸಲು ಒಳ್ಳೇ ಟೀಮ್‌ ಜತೆಗಿರಬೇಕು. ನನ್ನ ಜತೆ ಆ ತಂಡವಿದೆ. ಹಾಗಾಗಿ ಸಲೀಸಾಗಿಯೇ ಎಲ್ಲವೂ ನಡೆಯುತ್ತಿದೆ’ ಎನ್ನುತ್ತಾರೆ ಅರ್ಜುನ್‌.

ಅರ್ಜುನ್‌ ಸುಲಭವಾಗಿ ಕೆಲಸ ಮಾಡುವುದರ ಜೊತೆಗೆ ಇಷ್ಟೊಂದು ಚಿತ್ರಗಳಿಗೆ ಸಂಗೀತ ನೀಡುವುದಕ್ಕೆ ಸಾಧ್ಯವಾಗಿರುವುದಕ್ಕೆ ಅವರ ಸರಳತೆಯೇ ಕಾರಣ ಎಂಬ ಮಾತು ಅವರನ್ನು ಹತ್ತಿರದಿಂದ ನೋಡಿದವರು ಹೇಳುತ್ತಾರೆ. “ಚಿಕ್ಕ ವಯಸ್ಸಿನಿಂದಲೂ ನಾನು ಸಾಕಷ್ಟು ಸಮಸ್ಯೆ ನೋಡಿಕೊಂಡೇ ಬಂದಿದ್ದೇನೆ. ನನಗೆ ಯಾವುದೂ ಸುಲಭವಾಗಿ ಸಿಕ್ಕಿಲ್ಲ. ನನಗೆ ಅರ್ಥ ಆಗಿದ್ದೇನೆಂದರೆ, ಲೈಫ‌ಲ್ಲಿ ಖುಷಿಯಾಗಲಿ ದುಃಖವಾಗಲಿ ಈ ಎರಡೂ ಶಾಶ್ವತ ಅಲ್ಲ. ತುಂಬ ಖುಷಿ ಪಟ್ಟಾಗ ಸಹಜವಾಗಿಯೇ ಒಳಗಡೆ ಅಹಂಕಾರ ಬರುತ್ತೆ. ಆದರೆ, ಅದು ಶಾಶ್ವತ ಅಲ್ವಲ್ಲ ಗುರು ಅಂತ ಗೊತ್ತಾಗಿ ಹೋಗುತ್ತೆ. ದುಃಖ ಬಂದಾಗಲೂ ಬೇಸರದಿಂದ ಯಾರನ್ನಾದರೂ ಬೈಯಬೇಕು, ಹೀಯಾಳಿಸಬೇಕು ಅನಿಸುತ್ತೆ. ಅದೂ ಶಾಶ್ವತವಲ್ಲ ಅಂತ ಎನಿಸಿದಾಗ ಸಹಜಸ್ಥಿತಿಗೆ ಬರುತ್ತಾರೆ. ನಾನು ಭಗವದ್ಗೀತೆ ಓದಿಲ್ಲ. ಆದರೆ, ಅದನ್ನು ಓದದೆಯೇ ಒಳ್ಳೇದು ಕೆಟ್ಟದ್ದನ್ನು ಗೊತ್ತಿಲ್ಲದೇ ಅರಿವು ಮಾಡಿಕೊಂಡು ಬಂದಿದ್ದೇನೆ. ಮುಖ್ಯವಾಗಿ ನಾನು ತುಂಬಾ ಫಾಲೋ ಮಾಡಿದ್ದು ಸಂಗೀತ ನಿರ್ದೇಶಕ ಎ.ಆರ್‌. ರೆಹಮಾನ್‌ ಅವರ ಜೀವನ ಶೈಲಿಯನ್ನ. ಅವರ ಒಳ್ಳೆಯ ಮಾತುಗಳನ್ನ ಆಲಿಸಿಕೊಂಡು ಬಂದಿದ್ದೇನೆ. ಬಹುಶಃ ಅದೇ ನನ್ನ ಸಿಂಪ್ಲಿಸಿಟಿಗೆ ಕಾರಣವಿರಬೇಕು’ ಎನ್ನುತ್ತಾರೆ ಅರ್ಜುನ್‌ ಜನ್ಯ.

ಅರ್ಜುನ್‌ ಯಶಸ್ಸಿಗೆ ಕಾರಣವೇನೆಂದರೆ, ಒಂದೇ ತರಹದ ಸಂಗೀತಕ್ಕೆ ಅಂಟಿಕೊಳ್ಳದೆಯೇ ಎಲ್ಲಾ ತರಹದ ಪ್ರಯತ್ನಗಳನ್ನೂ ಮಾಡುವುದಂತೆ. “ಕನ್ನಡದಲ್ಲಿ ನನ್ನ ಜರ್ನಿ ಶುರುವಾಗಿ 11 ವರ್ಷಗಳಾಗಿವೆ. ಎಲ್ಲಾ ತರಹದ ಸಂಗೀತದ ಟ್ರೆಂಡ್‌ ಅನ್ನೂ ಗಮನಿಸಿದ್ದೇನೆ. ನಾನು ಬರುವಾಗ ಗುರುಕಿರಣ್‌ ಅವರು “ಜೋಗಿ’ ಮೂಲಕ ಅದ್ಭುತ ಹಾಡುಗಳನ್ನು ಕೊಟ್ಟಿದ್ದರು. ಆಮೇಲೆ  “ಮುಂಗಾರು ಮಳೆ’ ಮೂಲಕ ಮನೋಮೂರ್ತಿ ಅದ್ಭುತ ಮೆಲೋಡಿ ಕೊಟ್ಟರು. ಆ ಟ್ರೆಂಡ್‌ ಕೂಡ ನೋಡಿದೆ. ಅದಾದ ಮೇಲೆ ಹರಿಕೃಷ್ಣ ಅವರು ಟಪ್ಪಾಂಗುಚ್ಚಿ ಟ್ರೆಂಡ್‌ಗೆ ಮುನ್ನುಡಿ ಬರೆದರು. ಅದರ ಜತೆಯಲ್ಲೆ ನಾನೂ ಬಂದೆ. ಈಗೀಗ ಹೊಸಬರೂ ಸಹ ತಿರುಗಿ ನೋಡುವಂತಹ ಸಂಗೀತ ಕೊಡುತ್ತಿದ್ದಾರೆ. ಚರಣ್‌ರಾಜ್‌ರಂತಹ ಯುವ ಸಂಗೀತ ನಿರ್ದೇಶಕರು ಪ್ರಯೋಗಾತ್ಮಕ ಸಿನಿಮಾಗಳಲ್ಲೂ ಸೈ ಎನಿಸಿಕೊಳ್ಳುತ್ತಿದ್ದಾರೆ. ಹಾಗೆ ಹೇಳುವುದಾದರೆ, ಕನ್ನಡದಲ್ಲೀಗ ಸುವರ್ಣ ಯುಗ. ನಾನಂತೂ ಎಂಜಾಯ್‌ ಮಾಡುತ್ತಿದ್ದೇನೆ. ಒಂದೇ ರೀತಿಯ ಸಂಗೀತಕ್ಕೆ ಅಂಟಿಕೊಳ್ಳುವುದಕ್ಕಿಂತ ಬೇರೆ ಏನಾದರೊಂದು ಪ್ರಯೋಗ ಮಾಡಬೇಕು, ಅದು ಈಗ ಆಗುತ್ತಿದೆ’ ಎನ್ನುತ್ತಾರೆ ಅರ್ಜುನ್‌.

ಟಾಪ್ ನ್ಯೂಸ್

ಜ.26ರಂದು 2ನೇ ಹಂತದ ಚುನಾವಣೆ;ರಾಹುಲ್‌, ತರೂರ್‌, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ

ಜ.26ರಂದು 2ನೇ ಹಂತದ ಚುನಾವಣೆ;ರಾಹುಲ್‌, ತರೂರ್‌, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ

18-aranthodu

Aranthodu: ಜೀಪ್-ಬೈಕ್ ಅಪಘಾತ; ಗಂಭೀರ ಗಾಯಗೊಂಡಿದ್ದ ಬೈಕ್ ಸವಾರ ಸಾವು

17-voting

Vote: ಮತದಾನದ ಮಹತ್ವ

Siddaramaiah

Haveri; ದೇಶ ಬಿಡುತ್ತೇನೆ ಎಂದಿದ್ದ ದೇವೇಗೌಡರು ಮೋದಿ ಜತೆ ಸೇರಿದ್ದಾರೆ: ಸಿದ್ದರಾಮಯ್ಯ

15-udupi

Lok Sabha Election-2024; ಕಾಪು ವಿಧಾನಸಭಾ ಕ್ಷೇತ್ರದಲ್ಲಿ ಅಂತಿಮ ಹಂತದ ಸಿದ್ಧತೆ ಪೂರ್ಣ

Delhi Police: ಮಾರುತಿ ಸ್ವಿಫ್ಟ್‌ ಕಾರಿನಲ್ಲಿ 30ಕ್ಕೂ ಅಧಿಕ ಕುರಿ, ಮೇಕೆ ಸಾಗಾಟ!

Delhi Police: ಮಾರುತಿ ಸ್ವಿಫ್ಟ್‌ ಕಾರಿನಲ್ಲಿ 30ಕ್ಕೂ ಅಧಿಕ ಕುರಿ, ಮೇಕೆ ಸಾಗಾಟ!

BJP 2025ರಲ್ಲಿ ಹಿಂದುಳಿದ ಸಮುದಾಯಗಳ ಮೀಸಲಾತಿ ತೆಗೆದು ಹಾಕಲಿದೆ: ರೇವಂತ್ ರೆಡ್ಡಿ

BJP 2025ರಲ್ಲಿ ಹಿಂದುಳಿದ ಸಮುದಾಯಗಳ ಮೀಸಲಾತಿ ತೆಗೆದು ಹಾಕಲಿದೆ: ರೇವಂತ್ ರೆಡ್ಡಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Sandalwood; ‘ಫಾರೆಸ್ಟ್‌’ನಲ್ಲಿ ಚಿಕ್ಕಣ್ಣ & ಟೀಂ

Sandalwood; ‘ಫಾರೆಸ್ಟ್‌’ನಲ್ಲಿ ಚಿಕ್ಕಣ್ಣ & ಟೀಂ

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

Shivanna in lawyer look in Bhairathi Ranagal

Bhairathi Ranagal ಲಾಯರ್ ಶಿವಣ್ಣ; ಕುತೂಹಲ ಹೆಚ್ಚಿಸಿದ ಲುಕ್

Koti

Koti; ಡಾಲಿ ಕಣ್ಣಲ್ಲಿ ಕೋಟಿ ಕನಸು; ಪರಮ್‌ ನಿರ್ದೇಶನದ ಸಿನಿಮಾ

Ritanya Vijay; ದುನಿಯಾ ವಿಜಯ್‌ ಮಗಳು ರಿತನ್ಯಾ ಗ್ರ್ಯಾಂಡ್ ಎಂಟ್ರಿ

Ritanya Vijay; ದುನಿಯಾ ವಿಜಯ್‌ ಮಗಳು ರಿತನ್ಯಾ ಗ್ರ್ಯಾಂಡ್ ಎಂಟ್ರಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಜ.26ರಂದು 2ನೇ ಹಂತದ ಚುನಾವಣೆ;ರಾಹುಲ್‌, ತರೂರ್‌, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ

ಜ.26ರಂದು 2ನೇ ಹಂತದ ಚುನಾವಣೆ;ರಾಹುಲ್‌, ತರೂರ್‌, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ

18-aranthodu

Aranthodu: ಜೀಪ್-ಬೈಕ್ ಅಪಘಾತ; ಗಂಭೀರ ಗಾಯಗೊಂಡಿದ್ದ ಬೈಕ್ ಸವಾರ ಸಾವು

17-voting

Vote: ಮತದಾನದ ಮಹತ್ವ

Siddaramaiah

Haveri; ದೇಶ ಬಿಡುತ್ತೇನೆ ಎಂದಿದ್ದ ದೇವೇಗೌಡರು ಮೋದಿ ಜತೆ ಸೇರಿದ್ದಾರೆ: ಸಿದ್ದರಾಮಯ್ಯ

16-adu-jeevitham

Movie Review: ಆಡು ಜೀವಿದಂ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.