ಕನ್ನಡದ ಪ್ರೀತಿಗೆ ತಮಿಳಿನ ಹೆಸರು


Team Udayavani, Apr 21, 2017, 12:37 PM IST

21-SUCHI-3.jpg

ಈಗಾಗಲೇ “ಕಾದಲ್‌’ ಎಂಬ ಸಿನಿಮಾವೊಂದು ಸದ್ದಿಲ್ಲದೆಯೇ ಶುರುವಾಗಿ, ಚಿತ್ರೀಕರಣವನ್ನೂ ಪೂರ್ಣಗೊಳಿಸಿ ಇದೀಗ ಪ್ರೇಕ್ಷಕರ ಎದುರು ಬರಲು ಸಿದ್ದವಾಗಿದೆ. ಮೊದಲ ಹಂತವಾಗಿ ಚಿತ್ರದ ಆಡಿಯೋ ಸಿಡಿಯನ್ನು ಹೊರತಂದಿದೆ ಚಿತ್ರತಂಡ. ಇಲ್ಲಿ “ಕಾದಲ್‌’ ಅನ್ನೋದು ಯಾವ ಪದ ಎಂಬ ಗೊಂದಲ ಉಂಟಾಗಬಹುದು. ಆ ಗೊಂದಲ ವಾಣಿಜ್ಯ ಮಂಡಳಿಯಲ್ಲೂ ಇತ್ತು. ಶೀರ್ಷಿಕೆ ನೋಂದಣಿ ಮಾಡಿಸಲು ಹೋದ ನಿರ್ದೇಶಕರಿಗೆ “ಕಾದಲ್‌’ ಕನ್ನಡ ಪದವಲ್ಲ ಎಂಬ ಬಗ್ಗೆ ತಕರಾರು ಇತ್ತು. ಕೊನೆಗೆ ನಿರ್ದೇಶಕರು, ಇದು ನಿಘಂಟುವಿನಲ್ಲಿ “ಕಾದಲ್‌’ ಪದ ಇರುವ ಬಗ್ಗೆ ವಿವರಿಸಿದಾಗಲಷ್ಟೇ ಶೀರ್ಷಿಕೆ ಪಕ್ಕಾ ಆಗಿದೆ. ಆಮೇಲೆ ಸಿನಿಮಾ ಶುರುವಾಗಿ, ಈಗ ಬಿಡುಗಡೆಯ ಹಂತಕ್ಕೆ ಬಂದಿದೆ.

ಮುರಳಿ ಈ ಸಿನಿಮಾದ ನಿರ್ದೇಶಕರು. ಈ ಹಿಂದೆ “ಮುಮ್ತಾಜ್‌’ ಚಿತ್ರ ಮಾಡಿದ್ದ ಮುರಳಿ ಈ ಸಿನಿಮಾ ಮೂಲಕ ಮುಮ್ತಾಜ್‌ ಮುರಳಿಯಾಗಿದ್ದಾರೆ. ಇದೊಂದು ಅಪ್ಪಟ ಪ್ರೇಮಕಥೆ ಎಂಬುದು ನಿರ್ದೇಶಕರ ಮಾತು. “ಸಹಾಯಕ ನಿರ್ದೇಶಕನೊಬ್ಬ ತನಗೆ ಗೊತ್ತಿಲ್ಲದೆಯೇ ಕ್ಯಾನ್ಸರ್‌ ಪೀಡಿತ ಹುಡುಗಿಯನ್ನು ಪ್ರೀತಿ ಮಾಡುತ್ತಾನೆ. ಆ ವಿಷಯ ಗೊತ್ತಾದಾಗ, ಅವನು ನಿರ್ದೇಶಕನಾಗುತ್ತಾನೋ ಅಥವಾ ತನ್ನ ಪ್ರೀತಿ ಉಳಿಸಿಕೊಳ್ಳಲು ಹೋರಾಡಿ, ಸಫ‌ಲನಾಗುತ್ತಾನೋ ಎಂಬುದೇ ಕಥೆಯ ಒನ್‌ಲೈನ್‌’ ಎನ್ನುತ್ತಾರೆ ನಿರ್ದೇಶಕ ಮುರಳಿ.

ಈ ಸಿನಿಮಾವನ್ನು ಎಸ್‌.ಸುರೇಶ್‌ ನಿರ್ಮಿಸಿದ್ದಾರೆ. ಹಿರಿಯ ನಿರ್ದೇಶಕ ಪುಟ್ಟಣ್ಣ ಕಣಗಾಲ್‌ ಅವರ ಹೊಸ ಚಿತ್ರದಲ್ಲಿ ಅವಕಾಶ ಗಿಟ್ಟಿಸಿಕೊಳ್ಳಲು ಅಡಿಷನ್‌ಗೆ ಹೋಗಿದ್ದ ಎಸ್‌.ಸುರೇಶ್‌ ಅವರ ನಟನೆಯ ಕನಸು ನನಸಾಗಲಿಲ್ಲವಂತೆ. ಎಸ್‌.ಐ.ಟಿ ಕಾಲೇಜಿನಲ್ಲಿ ಪ್ರೊಫೆಸರ್‌ ಆಗಿರುವ ಸುರೇಶ್‌, ಆ ಕನಸನ್ನು ಮಗನ ಮೂಲಕ ನನಸು ಮಾಡಲು ಹೊರಟಿದ್ದಾರೆ. ಮಗನನ್ನು ನಾಯಕನನ್ನಾಗಿಸಿ, ಖುಷಿಯಿಂದ “ಕಾದಲ್‌’ ಚಿತ್ರಕ್ಕೆ ನಿರ್ಮಾಪಕರಾಗಿದ್ದಾರೆ ಅವರು.

ಇನ್ನು, ಸಿವಿಲ್‌ ಎಂಜನಿಯರ್‌ ಆಗಿರುವ ತುಮಕೂರಿನ ಆಕಾಶ್‌ ಈ ಚಿತ್ರದ ಹೀರೋ. ಅವರಿಗೆ ಇದು ಮೊದಲ ಸಿನಿಮಾ. ಇನ್ನು, ಇವರಿಗೆ ಮೈಸೂರಿನ ರಂಗಭೂಮಿ ನಟಿ ಧರಣಿ ನಾಯಕಿಯಾಗಿದ್ದಾರೆ. ಇವರಿಗೆ ಇದು ನಾಲ್ಕನೆ ಚಿತ್ರ. ಚಿತ್ರದಲ್ಲಿ ಸುಧಾಕರ್‌, ಮಂಜುನಾಥ್‌, ಕುಮಾರಿ ಭಾವನ ಸೇರಿದಂತೆ ಬಹುತೇಕ ಹೊಸ ಪ್ರತಿಭೆಗಳು ಇಲ್ಲಿ ಕಾಣಿಸಿಕೊಳ್ಳುತ್ತಿವೆ. ಸಹೋದರ ಪವನ್‌ ಬರೆದಿರುವ ಗೀತೆಗೆ ಪ್ರವೀಣ್‌ ಸಂಗೀತ ನೀಡದ್ದಾರೆ. ಪದ್ಮಪ್ರಸಾದ್‌ ಜೈನ್‌ ಕೂಡ ಒಂದು ಗೀತೆ ರಚಿಸಿದ್ದಾರೆ. ಹರಿಕೃಷ್ಣ ಅವರ ನೃತ್ಯ ನಿರ್ದೇಶನವಿದೆ. ಅಲ್ಟಿಮೇಟ್‌ ಶಿವು ಅವರ ಸಾಹಸವಿದೆ. ಪೂರ್ಣ ಚಂದ್ರ ಭಕಾಟೆ ಕ್ಯಾಮೆರಾ ಹಿಡಿದರೆ, ಕಾರ್ತಿಕ್‌ ಸಂಕಲನ ಮಾಡಿದ್ದಾರೆ.

ಅಂದಹಾಗೆ, ಅಜೇಯ್‌ ರಾವ್‌ ಚಿತ್ರದ ಆಡಿಯೋ ಸಿಡಿ ಬಿಡುಗಡೆ ಮಾಡಿ ತಂಡಕ್ಕೆ ಶುಭಹಾರೈಸಿದರು. ಸಿ ಮ್ಯೂಸಿಕ್‌ ಕಂಪನಿಯ ಈ ಚಿತ್ರದ ಹಾಡುಗಳನ್ನು ಹೊರ ತಂದಿದೆ. ಜೂನ್‌ನಲ್ಲಿ  ಚಿತ್ರ ರಿಲೀಸ್‌ ಮಾಡಲು ನಿರ್ಮಾಪಕರು ತಯಾರಿ ನಡೆಸಿದ್ದಾರೆ.

ಟಾಪ್ ನ್ಯೂಸ್

Hubli; ನೇಹಾ ಪ್ರಕರಣದಲ್ಲಿ ಸರ್ಕಾರದ ನಡವಳಿಕೆ ಸರಿಯಾಗಿರಲಿಲ್ಲ: ಬಿ.ವೈ. ವಿಜಯೇಂದ್ರ

 PM Modi:ನನ್ನ 90 ಸೆಕೆಂಡ್‌ ಭಾಷಣ ಕಾಂಗ್ರೆಸ್‌, INDIA ಮೈತ್ರಿಕೂಟಕ್ಕೆ ತಲ್ಲಣ ಹುಟ್ಟಿಸಿದೆ

 PM Modi:ನನ್ನ 90 ಸೆಕೆಂಡ್‌ ಭಾಷಣ ಕಾಂಗ್ರೆಸ್‌, INDIA ಮೈತ್ರಿಕೂಟಕ್ಕೆ ತಲ್ಲಣ ಹುಟ್ಟಿಸಿದೆ

Padibagilu: ರಿಂಗ್ ಹಾಕಲೆಂದು ಬಾವಿಗಿಳಿದ ಇಬ್ಬರು ಉಸಿರುಗಟ್ಟಿ ಸಾವು

Padibagilu: ರಿಂಗ್ ಹಾಕಲೆಂದು ಬಾವಿಗಿಳಿದ ಇಬ್ಬರು ಉಸಿರುಗಟ್ಟಿ ಸಾವು

ಕೇಜ್ರಿವಾಲ್‌, ಕವಿತಾಗೆ ಮತ್ತೆ 14 ದಿನ ನ್ಯಾಯಾಂಗ ಬಂಧನ ವಿಸ್ತರಣೆ: ದೆಹಲಿ ಕೋರ್ಟ್

ಕೇಜ್ರಿವಾಲ್‌, ಕವಿತಾಗೆ ಮತ್ತೆ 14 ದಿನ ನ್ಯಾಯಾಂಗ ಬಂಧನ ವಿಸ್ತರಣೆ: ದೆಹಲಿ ಕೋರ್ಟ್

Team India; Not Hardik; Bhajji has suggested the name of Team India’s next T20 captain

Team India; ಹಾರ್ದಿಕ್ ಅಲ್ಲ; ಟೀಂ ಇಂಡಿಯಾದ ಮುಂದಿನ ಟಿ20 ನಾಯಕನ ಹೆಸರು ಸೂಚಿಸಿದ ಭಜ್ಜಿ

Neha ಕೊಲೆ ಆರೋಪಿ ನಿರ್ದೋಷಿಯಾಗಿ ಹೊರಗೆ ಬಂದರೆ ನಾವೇ ಶಿಕ್ಷೆ ಕೊಟ್ಟು ಜೈಲಿಗೆ ಹೋಗಲು ಸಿದ್ಧ

Neha ಕೊಲೆ ಆರೋಪಿ ನಿರ್ದೋಷಿಯಾಗಿ ಹೊರಗೆ ಬಂದ್ರೆ ನಾವೇ ಶಿಕ್ಷೆ ಕೊಟ್ಟು ಜೈಲಿಗೆ ಹೋಗಲು ಸಿದ್ಧ

18

ನೇಹಾ ಪ್ರಕರಣವನ್ನು ರಾಜಕೀಯಕ್ಕೆ ಬಳಸುವಂತಹ ನೀಚತನಕ್ಕೆ ಬಿಜೆಪಿ ಇಳಿದಿದೆ-ಚನ್ನರಾಜ ಹಟ್ಟಿಹೊಳಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Sandalwood; ‘ಫಾರೆಸ್ಟ್‌’ನಲ್ಲಿ ಚಿಕ್ಕಣ್ಣ & ಟೀಂ

Sandalwood; ‘ಫಾರೆಸ್ಟ್‌’ನಲ್ಲಿ ಚಿಕ್ಕಣ್ಣ & ಟೀಂ

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

Shivanna in lawyer look in Bhairathi Ranagal

Bhairathi Ranagal ಲಾಯರ್ ಶಿವಣ್ಣ; ಕುತೂಹಲ ಹೆಚ್ಚಿಸಿದ ಲುಕ್

Koti

Koti; ಡಾಲಿ ಕಣ್ಣಲ್ಲಿ ಕೋಟಿ ಕನಸು; ಪರಮ್‌ ನಿರ್ದೇಶನದ ಸಿನಿಮಾ

Ritanya Vijay; ದುನಿಯಾ ವಿಜಯ್‌ ಮಗಳು ರಿತನ್ಯಾ ಗ್ರ್ಯಾಂಡ್ ಎಂಟ್ರಿ

Ritanya Vijay; ದುನಿಯಾ ವಿಜಯ್‌ ಮಗಳು ರಿತನ್ಯಾ ಗ್ರ್ಯಾಂಡ್ ಎಂಟ್ರಿ

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

Hubli; ನೇಹಾ ಪ್ರಕರಣದಲ್ಲಿ ಸರ್ಕಾರದ ನಡವಳಿಕೆ ಸರಿಯಾಗಿರಲಿಲ್ಲ: ಬಿ.ವೈ. ವಿಜಯೇಂದ್ರ

 PM Modi:ನನ್ನ 90 ಸೆಕೆಂಡ್‌ ಭಾಷಣ ಕಾಂಗ್ರೆಸ್‌, INDIA ಮೈತ್ರಿಕೂಟಕ್ಕೆ ತಲ್ಲಣ ಹುಟ್ಟಿಸಿದೆ

 PM Modi:ನನ್ನ 90 ಸೆಕೆಂಡ್‌ ಭಾಷಣ ಕಾಂಗ್ರೆಸ್‌, INDIA ಮೈತ್ರಿಕೂಟಕ್ಕೆ ತಲ್ಲಣ ಹುಟ್ಟಿಸಿದೆ

Padibagilu: ರಿಂಗ್ ಹಾಕಲೆಂದು ಬಾವಿಗಿಳಿದ ಇಬ್ಬರು ಉಸಿರುಗಟ್ಟಿ ಸಾವು

Padibagilu: ರಿಂಗ್ ಹಾಕಲೆಂದು ಬಾವಿಗಿಳಿದ ಇಬ್ಬರು ಉಸಿರುಗಟ್ಟಿ ಸಾವು

ಕೇಜ್ರಿವಾಲ್‌, ಕವಿತಾಗೆ ಮತ್ತೆ 14 ದಿನ ನ್ಯಾಯಾಂಗ ಬಂಧನ ವಿಸ್ತರಣೆ: ದೆಹಲಿ ಕೋರ್ಟ್

ಕೇಜ್ರಿವಾಲ್‌, ಕವಿತಾಗೆ ಮತ್ತೆ 14 ದಿನ ನ್ಯಾಯಾಂಗ ಬಂಧನ ವಿಸ್ತರಣೆ: ದೆಹಲಿ ಕೋರ್ಟ್

Team India; Not Hardik; Bhajji has suggested the name of Team India’s next T20 captain

Team India; ಹಾರ್ದಿಕ್ ಅಲ್ಲ; ಟೀಂ ಇಂಡಿಯಾದ ಮುಂದಿನ ಟಿ20 ನಾಯಕನ ಹೆಸರು ಸೂಚಿಸಿದ ಭಜ್ಜಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.