ಡಾ.ರಾಜ್‌ ಸುಪ್ರಭಾತ ಆಡಿಯೋ ಬಿಡುಗಡೆ


Team Udayavani, Apr 21, 2017, 12:56 PM IST

21-SUCHI-4.jpg

ಡಾ.ರಾಜ್‌ಕುಮಾರ್‌ ಕುರಿತು ಅತಿ ಹೆಚ್ಚು ಪುಸ್ತಕಗಳು ಹೊರ ಬಂದಿವೆ. ಸಾಕಷ್ಟು ಆಡಿಯೋ, ವೀಡಿಯೋ ಸಿಡಿಗಳು ಹೊರಬಂದಿವೆ. ಇದು ನಿಜಕ್ಕೂ ದಾಖಲೆಯೇ ಸರಿ. ಈಗ ಮತ್ತೂಂದು ದಾಖಲೆಯೂ ಸೇರ್ಪಡೆಯಾಗುತ್ತಿದೆ. ಇದೇ ಮೊದಲ ಬಾರಿಗೆ ಮೇರು ಕಲಾವಿದ ಡಾ.ರಾಜ್‌ಕುಮಾರ್‌ ಕುರಿತು “ಸುಪ್ರಭಾತ’ ಹೊರ ಬಂದಿರುವುದು ವಿಶೇಷತೆಗಳಲ್ಲೊಂದು. ಹೌದು, ಇತ್ತೀಚೆಗೆ “ಡಾ.ರಾಜ್‌ಕುಮಾರ್‌ ಸುಪ್ರಭಾತ’ ಹೆಸರಿನ ಆಡಿಯೋ ಸಿಡಿಯೊಂದನ್ನು ಹೊರತರಲಾಯಿತು. ಡಾ.ರಾಜ್‌ಕುಮಾರ್‌ ಅಂತಾರಾಷ್ಟ್ರೀಯ ಪ್ರತಿಷ್ಠಾನ ಹೊರತಂದ ಸುಪ್ರಭಾತ ಆಡಿಯೋ ಸಿಡಿ ಬಿಡುಗಡೆ ಕಾರ್ಯಕ್ರಮದಲ್ಲಿ ಶ್ರೀ ಕೊಳದಮಠದ ಡಾ.ಶ್ರೀ ಶಾಂತವೀರ ಮಹಾಸ್ವಾಮೀಜಿ ಮುಖ್ಯ ಆಕರ್ಷಣೆಯಾಗಿದ್ದರು.

“ಒಬ್ಬ ಕನ್ನಡದ ಕಲಾವಿದನ ಕುರಿತು ಸುಪ್ರಭಾತ ಹೊರಬಂದಿರುವುದು ಬಹುಶಃ ಗಿನ್ನಿಸ್‌ ದಾಖಲೆ ಎನ್ನಬಹುದು’ ಎಂದು ಅಭಿಪ್ರಾಯಪಟ್ಟಿದ್ದು ಹಿರಿಯ ನಿರ್ಮಾಪಕ ಕೆಸಿಎನ್‌ ಚಂದ್ರಶೇಖರ್‌. ಸಿಡಿ ಬಿಡುಗಡೆ ಮಾಡಿ ಮಾತನಾಡಿದ ಅವರು, “ಡಾ.ರಾಜ್‌ಕುಮಾರ್‌ ಅಪರೂಪದ ವ್ಯಕ್ತಿಯಾಗಿದ್ದರು. ಚಿತ್ರೋದ್ಯಮದಲ್ಲಿ ಮಹಾನ್‌ ತಪಸ್ವಿಯಾಗಿದ್ದ ಅವರು ಮಗುವಿನಂತಹ ಮನಸ್ಸುಳ್ಳವರು. ಎಲ್ಲವನ್ನೂ ತಾಳ್ಮೆಯಿಂದ ನೋಡುತ್ತಿದ್ದರಿಂದಲೇ ಅವರು ಆ ಮಟ್ಟಕ್ಕೆ ಏರಿದರು. ಕನ್ನಡ ಚಿತ್ರರಂಗದಲ್ಲಿರುವ ಪ್ರತಿಯೊಬ್ಬರೂ ಡಾ.ರಾಜ್‌ಕುಮಾರ್‌ ಅವರ ಆದರ್ಶಗಳನ್ನು ಮೈಗೂಡಿಸಿಕೊಮಡರೆ ಉಜ್ವಲ ಭವಿಷ್ಯ ರೂಪಿಸಿಕೊಳ್ಳಬಹುದು’ ಅಂದರು.

ಹಿರಿಯ ಗೀತ ಸಾಹಿತಿ ಸಿ.ವಿ.ಶಿವಶಂಕರ್‌ ಮಾತನಾಡಿ, “ಡಾ.ರಾಜ್‌ಕುಮಾರ್‌ ಅವರು ಅಪ್ಪಟ ಶುದ್ದ ಕನ್ನಡವನ್ನು ವ್ಯಾಕರಣ ಬದ್ದವಾಗಿ ಮಾತನಾಡುತ್ತಿದ್ದರು. ಅವರು ಇರುವಷ್ಟು ಕಾಲ ದೇವ ಮಾನವರಾಗಿದ್ದರು’ ಎಂದು ಗುಣಗಾನ ಮಾಡಿದರು.

ಹಿರಿಯ ಸಾಹಿತಿ ಪ್ರೊ.ದೊಡ್ಡರಂಗೇಗೌಡ ಅವರು, “ಡಾ.ರಾಜ್‌ಕುಮಾರ್‌ ಒಬ್ಬ ಕಲಾ ಸೂರ್ಯರಾಗಿದ್ದರು. ಕಾಲೇಜು ದಿನಗಳಿಂದಲೂ ನಾನು ಅವರನ್ನು ನೋಡಿದ್ದೇನೆ. ಅವರು ಬಳಸುವ ಕನ್ನಡ ಭಾಷೆ ಅದ್ಭುತವಾಗಿತ್ತು. “ಸುಪ್ರಭಾತ’ ಸಿಡಿ ಹೊರತಂದಿರುವ ರಮೇಶ್‌ ಅವರಿಗೆ ಒಳ್ಳೆಯದಾಗಲಿ’ ಎಂದು ಹಾರೈಸಿದರು ದೊಡ್ಡ ರಂಗೇಗೌಡ. 18 ಸ್ಕಂದಗಳಲ್ಲಿರುವ ರಂಗಸ್ವಾಮಿ ಅವರ ಸಾಹಿತ್ಯವನ್ನು ಗಾಯಕ ಅಜಯ್‌ ವಾರಿಯರ್‌ ಹಲವು ರಾಗಗಳಲ್ಲಿ ಹಾಡಿದ್ದಾರೆ. ಎಲ್‌.ಎನ್‌. ಗೂಚಿ ಸಂಗೀತ  ನೀಡಿದ್ದಾರೆ. ರಮೇಶ್‌ ಅವರು ಈ ಆಡಿಯೋ ಸಿಡಿ ಹೊರತರುವಲ್ಲಿ ಯಶಸ್ವಿಯಾಗಿದ್ದಾರೆ.

ಟಾಪ್ ನ್ಯೂಸ್

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Veerappa Moily ಬಿಜೆಪಿ ವಿರುದ್ಧ ಅಸಮಾಧಾನ ಜ್ವಾಲಾಮುಖಿ ಸ್ಫೋಟ

Veerappa Moily ಬಿಜೆಪಿ ವಿರುದ್ಧ ಅಸಮಾಧಾನ ಜ್ವಾಲಾಮುಖಿ ಸ್ಫೋಟ

ಮತದಾರರ ಚೀಟಿಯಲ್ಲಿ ಕ್ಯುಆರ್‌ ಕೋಡ್‌! ಮಂಗಳೂರು ದಕ್ಷಿಣ-ಉತ್ತರದಲ್ಲಿ ಅನುಷ್ಠಾನ

ಮತದಾರರ ಚೀಟಿಯಲ್ಲಿ ಕ್ಯುಆರ್‌ ಕೋಡ್‌! ಮಂಗಳೂರು ದಕ್ಷಿಣ-ಉತ್ತರದಲ್ಲಿ ಅನುಷ್ಠಾನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Sandalwood; ‘ಫಾರೆಸ್ಟ್‌’ನಲ್ಲಿ ಚಿಕ್ಕಣ್ಣ & ಟೀಂ

Sandalwood; ‘ಫಾರೆಸ್ಟ್‌’ನಲ್ಲಿ ಚಿಕ್ಕಣ್ಣ & ಟೀಂ

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

Shivanna in lawyer look in Bhairathi Ranagal

Bhairathi Ranagal ಲಾಯರ್ ಶಿವಣ್ಣ; ಕುತೂಹಲ ಹೆಚ್ಚಿಸಿದ ಲುಕ್

Koti

Koti; ಡಾಲಿ ಕಣ್ಣಲ್ಲಿ ಕೋಟಿ ಕನಸು; ಪರಮ್‌ ನಿರ್ದೇಶನದ ಸಿನಿಮಾ

Ritanya Vijay; ದುನಿಯಾ ವಿಜಯ್‌ ಮಗಳು ರಿತನ್ಯಾ ಗ್ರ್ಯಾಂಡ್ ಎಂಟ್ರಿ

Ritanya Vijay; ದುನಿಯಾ ವಿಜಯ್‌ ಮಗಳು ರಿತನ್ಯಾ ಗ್ರ್ಯಾಂಡ್ ಎಂಟ್ರಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.