ಸೈಬರ್‌ ಕ್ರಿಮಿನಲ್‌ ವಿರುದ್ಧ ಟ್ರಿಮ್‌ ಆ್ಯಂಡ್‌ ಸ್ಲಿಮ್‌ ಕೆಂಪೇಗೌಡ


Team Udayavani, Apr 21, 2017, 1:13 PM IST

21-SUCHI-5.jpg

“ಕೆಂಪೇಗೌಡ -2′ ಚಿತ್ರ ಆರಂಭವಾಗುತ್ತಿದೆ ಎಂಬ ಸುದ್ದಿ ಹರಡಿದ ದಿನದಿಂದಲೂ ಅನೇಕರಲ್ಲಿ ಒಂದು ಕುತೂಹಲವಿತ್ತು. ಅದೇನೆಂದರೆ “ಕೆಂಪೇಗೌಡ-2’ನಲ್ಲಿ ಯಾರು ನಟಿಸುತ್ತಾರೆ, ಸುದೀಪ್‌ ಇರುತ್ತಾರಾ ಎಂಬ ಪ್ರಶ್ನೆ ಅನೇಕರಲ್ಲಿತ್ತು. ಈಗ ಆ ಪ್ರಶ್ನೆಗೆ ಉತ್ತರ ಸಿಕ್ಕಿದೆ. ಸುದೀಪ್‌ ಬದಲು “ಕೆಂಪೇಗೌಡ-2’ನಲ್ಲಿ ಕೋಮಲ್‌ ನಟಿಸುತ್ತಿದ್ದಾರೆ. ಇತ್ತೀಚೆಗೆ ಚಿತ್ರ ಟೈಟಲ್‌ ಹಾಗೂ ಟ್ರೇಲರ್‌ ಬಿಡುಗಡೆ ಸಮಾರಂಭ ನಡೆಯಿತು. ಈ ಹಿಂದೆ “ಕೆಂಪೇಗೌಡ’ ಚಿತ್ರ ನಿರ್ಮಿಸಿದ ಶಂಕರೇಗೌಡ ಅವರೇ ಈ ಚಿತ್ರವನ್ನು ನಿರ್ಮಿಸುತ್ತಿದ್ದಾರೆ. ಅವರಿಗೆ ಈ ಬಾರಿ ಶಂಕರ್‌ ರೆಡ್ಡಿ ಕೂಡಾ ಸಾಥ್‌ ನೀಡುತ್ತಿದ್ದಾರೆ. ಟ್ರೇಲರ್‌ ಹಾಗೂ ಶಂಕರೇಗೌಡ ಅವರ “ಎಸ್‌ ಕಂಪೆನಿ’ ಲಾಂಚ್‌ಗೆ ಮಾಜಿ ಕೇಂದ್ರ ಸಚಿವ ಸುಶೀಲ್‌ ಕುಮಾರ್‌ ಶಿಂಧೆ ಸೇರಿದಂತೆ ಅನೇಕರು ಅತಿಥಿಯಾಗಿ ಆಗಮಿಸಿದ್ದರು. 

ಅಂದಹಾಗೆ, “ಕೆಂಪೇಗೌಡ-2′ ಚಿತ್ರವನ್ನು ರೋಶನ್‌ ಮೋಹನ್‌ ನಿರ್ದೇಶನ ಮಾಡುತ್ತಿದ್ದಾರೆ. ಜಾಹೀರಾತು ಕ್ಷೇತ್ರದಲ್ಲಿ ಸಾಕಷ್ಟು ಅನುಭವ ಪಡೆದಿರುವ ರೋಶನ್‌ ಮೋಹನ್‌ ಅವರು ಈಗ “ಕೆಂಪೇಗೌಡ -2′ ಮಾಡುತ್ತಿದ್ದಾರೆ. ಸುದೀಪ್‌ ಅವರ “ಕೆಂಪೇಗೌಡ’ ತಮಿಳಿನ “ಸಿಂಗಂ’ ಚಿತ್ರದ ರೀಮೇಕ್‌ ಆಗಿತ್ತು. ಆ ನಂತರ “ಸಿಂಗಂ-2′ ಕೂಡಾ ಬಂತು. ಹಾಗಾಗಿ, ಇದು ಕೂಡಾ ರೀಮೇಕ್‌ ಸಿನಿಮಾನಾ ಎಂಬ ಪ್ರಶ್ನೆ ಬರೋದು ಸಹಜ. ಆದರೆ ಇದು ರೀಮೇಕ್‌ ಅಲ್ಲ. ಸ್ವಮೇಕ್‌ ಸಿನಿಮಾ.

ಚಿತ್ರದ ಬಗ್ಗೆ ಮಾತನಾಡುವ ಕೋಮಲ್‌, “ಇದು ರೀಮೇಕ್‌ ಸಿನಿಮಾ ಅಲ್ಲ. ಪಕ್ಕಾ ಒರಿಜಿನಲ್‌ ಸಿನಿಮಾ. ಅದೇ ಕಾರಣಕ್ಕೆ ಚಿತ್ರಕ್ಕೆ “ಪಕ್ಕಾ ಒರಿಜಿನಲ್‌’ ಎಂಬ ಟ್ಯಾಗ್‌ಲೈನ್‌ ಇದೆ. ತುಂಬಾ ಸಹಜವಾಗಿ, ಸಿನಿಮ್ಯಾಟಿಕ್‌ ಆಗಿಯೂ ಇರದೆ, ಈ ಸಿನಿಮಾ ಮೂಡಿಬರುತ್ತದೆ. ಡಿಜಿಟಲ್‌ ಇಂಡಿಯಾದಲ್ಲಿ ಸೈಬರ್‌ ಕ್ರಿಮಿನಲ್‌ಗ‌ಳು ಕೂಡಾ ಜಾಸ್ತಿಯಾಗುತ್ತಿದ್ದಾರೆ. ಬೇರೆ ಕ್ರಿಮಿನಲ್‌ಗ‌ಳಿಗಿಂತ ಆ ತರಹದ ಕ್ರಿಮಿನಲ್‌ಗ‌ಳನ್ನು ಹಿಡಿಯೋದು ಪೊಲೀಸ್‌ ಇಲಾಖೆಗೆ ಸವಾಲಿನ ಕೆಲಸ. ಇಂತಹ ಸಂದರ್ಭದಲ್ಲಿ ನಾಯಕ ಯಾವ ತರಹ ಸೈಬರ್‌ ಕ್ರಿಮಿನಲ್‌ ಸೇರಿದಂತೆ ಇತರ ಕ್ರಿಮಿನಲ್‌ಗ‌ಳನ್ನು ಮಟ್ಟ ಹಾಕುತ್ತಾನೆ ಎಂಬ ಲೈನ್‌ನೊಂದಿಗೆ ಕಥೆ ಸಾಗುತ್ತದೆ. ತುಂಬಾ ಸಹಜವಾಗಿ, ನೈಜತೆಯೊಂದಿಗೆ ಕಟ್ಟಿಕೊಡಲು ಪ್ರಯತ್ನಿಸುತ್ತಿದ್ದೇವೆ. ಅದು ನಟನೆಯಿಂದ ಹಿಡಿದು ಕಾನೂನು ಅಂಶಗಳವರೆಗೂ. ಹಾಗಾಗಿಯೇ ಪೊಲೀಸ್‌ ಆಫೀಸರ್‌ಗಳಲ್ಲಿ ಮಾತನಾಡಿ, ಚಿತ್ರಕ್ಕೆ ಪೂರಕವಾದ ಕಾನೂನಿನ ಅರಿವು, ಕೇಸ್‌ಗಳ ಬಗ್ಗೆ ಮಾಹಿತಿ ಪಡೆಯುತ್ತಿದ್ದೇವೆ. ಯಾವುದೇ ಒಂದು ಅಂಶದಲ್ಲೂ ತಪ್ಪು ಕಾಣಬಾರದು. ಈಗ ಪ್ರೇಕ್ಷಕರು ತುಂಬಾ ಬುದ್ಧಿವಂತರು. ಏನೇ ತಪ್ಪಾದರೂ ಬೇಗನೇ ಗುರುತಿಸುತ್ತಾರೆ. ಹಾಗಾಗಿ, ಯಾವುದೇ ಆಭಾಸ ಆಗಬಾರದು ಎಂದು ಎಚ್ಚರ ವಹಿಸುತ್ತಿದ್ದೇವೆ’ ಎನ್ನುವುದು ಕೋಮಲ್‌ ಮಾತು. 

ಈ ಚಿತ್ರಕ್ಕಾಗಿ ಕೋಮಲ್‌ ತೂಕ ಇಳಿಸಿಕೊಂಡು ಸ್ಲಿಮ್‌ ಆಗಿದ್ದಾರೆ ಕೂಡಾ.  

ಟಾಪ್ ನ್ಯೂಸ್

ವಿಜಯಪುರ: ಗಂಡನಿಂದ ಕಿತ್ತು ಹೆಂಡತಿಗೆ ಕೊಡುವುದೇ ಸಿದ್ದು ಗ್ಯಾರಂಟಿ: ಸಿ.ಟಿ.ರವಿ ವಾಗ್ದಾಳಿ

ವಿಜಯಪುರ: ಗಂಡನಿಂದ ಕಿತ್ತು ಹೆಂಡತಿಗೆ ಕೊಡುವುದೇ ಸಿದ್ದು ಗ್ಯಾರಂಟಿ: ಸಿ.ಟಿ.ರವಿ ವಾಗ್ದಾಳಿ

Bigg Boss OTT ಸೀಸನ್‌ -3 ಅನೌನ್ಸ್:‌ ಈ ಬಾರಿ ಮತ್ತೆ ಸಲ್ಮಾನ್‌ ಖಾನ್ ನಿರೂಪಣೆ

Bigg Boss OTT ಸೀಸನ್‌ -3 ಅನೌನ್ಸ್:‌ ಈ ಬಾರಿ ಮತ್ತೆ ಸಲ್ಮಾನ್‌ ಖಾನ್ ನಿರೂಪಣೆ

Dwarakish:ಸೋಲು, ಗೆಲುವಿನ ಪಯಣ; ವ್ಯಾಪಾರ ಬಿಟ್ಟು ಖ್ಯಾತ ನಟನಾದ ಪ್ರಚಂಡ ಕುಳ್ಳ ದ್ವಾರಕೀಶ್!

Dwarakish:ಸೋಲು, ಗೆಲುವಿನ ಪಯಣ; ವ್ಯಾಪಾರ ಬಿಟ್ಟು ಖ್ಯಾತ ನಟನಾದ ಪ್ರಚಂಡ ಕುಳ್ಳ ದ್ವಾರಕೀಶ್!

19

Aamir Khan: ರಾಜಕೀಯ ಪಕ್ಷದ ಪರ ಪ್ರಚಾರ; ನಕಲಿ ವಿಡಿಯೋ ವಿರುದ್ಧ FIR ದಾಖಲಿಸಿದ ಆಮಿರ್‌

BCCI instructions to share photos of the IPL match day ground!

IPL 2024 ಪಂದ್ಯ ದಿನ ಮೈದಾನದ ಫೋಟೋ ಹಂಚದಂತೆ ಬಿಸಿಸಿಐ ಸೂಚನೆ!

Mishap: ಭೀಕರ ರಸ್ತೆ ಅಪಘಾತ: ಕ್ರೇನ್ ಗೆ ಡಿಕ್ಕಿ ಹೊಡೆದ ರಿಕ್ಷಾ 7 ಮಂದಿ ಸ್ಥಳದಲ್ಲೇ ಮೃತ್ಯು

Mishap: ಭೀಕರ ರಸ್ತೆ ಅಪಘಾತ: ಕ್ರೇನ್ ಗೆ ಡಿಕ್ಕಿ ಹೊಡೆದ ರಿಕ್ಷಾ 7 ಮಂದಿ ಸ್ಥಳದಲ್ಲೇ ಮೃತ್ಯು

Sensible voters know who to win: Yatnal

Vijayapura; ಯಾರನ್ನು ಗೆಲ್ಲಿಸಬೇಕೆಂದು ಪ್ರಜ್ಞಾವಂತ ಮತದಾರರಿಗೆ ಗೊತ್ತಿದೆ: ಯತ್ನಾಳ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Shivanna in lawyer look in Bhairathi Ranagal

Bhairathi Ranagal ಲಾಯರ್ ಶಿವಣ್ಣ; ಕುತೂಹಲ ಹೆಚ್ಚಿಸಿದ ಲುಕ್

Koti

Koti; ಡಾಲಿ ಕಣ್ಣಲ್ಲಿ ಕೋಟಿ ಕನಸು; ಪರಮ್‌ ನಿರ್ದೇಶನದ ಸಿನಿಮಾ

Ritanya Vijay; ದುನಿಯಾ ವಿಜಯ್‌ ಮಗಳು ರಿತನ್ಯಾ ಗ್ರ್ಯಾಂಡ್ ಎಂಟ್ರಿ

Ritanya Vijay; ದುನಿಯಾ ವಿಜಯ್‌ ಮಗಳು ರಿತನ್ಯಾ ಗ್ರ್ಯಾಂಡ್ ಎಂಟ್ರಿ

DEVIL; ಹೆಚ್ಚು ದಿನ ವಿಶ್ರಾಂತಿಯಿಲ್ಲ, ಅಕ್ಟೋಬರ್‌ನಲ್ಲಿ ಡೆವಿಲ್‌ ಬರೋದು ಪಕ್ಕಾ: ದರ್ಶನ್‌

DEVIL; ಹೆಚ್ಚು ದಿನ ವಿಶ್ರಾಂತಿಯಿಲ್ಲ, ಅಕ್ಟೋಬರ್‌ನಲ್ಲಿ ಡೆವಿಲ್‌ ಬರೋದು ಪಕ್ಕಾ: ದರ್ಶನ್‌

Kiran Raj, Yasha Shivakumar starer Bharjari Gandu movie

Kannada Cinema; ರಿಲೀಸ್‌ ಅಖಾಡದಲ್ಲಿ ‘ಭರ್ಜರಿ ಗಂಡು’; ಕಿರಣ್‌ಗೆ ಯಶ ನಾಯಕಿ

MUST WATCH

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

udayavani youtube

ಕೇಕ್ ಪ್ರಿಯರಿಗೆ ಹೇಳಿ ಮಾಡಿಸಿದ ಜಾಗ ಔರಾ .

ಹೊಸ ಸೇರ್ಪಡೆ

ವಿಜಯಪುರ: ಗಂಡನಿಂದ ಕಿತ್ತು ಹೆಂಡತಿಗೆ ಕೊಡುವುದೇ ಸಿದ್ದು ಗ್ಯಾರಂಟಿ: ಸಿ.ಟಿ.ರವಿ ವಾಗ್ದಾಳಿ

ವಿಜಯಪುರ: ಗಂಡನಿಂದ ಕಿತ್ತು ಹೆಂಡತಿಗೆ ಕೊಡುವುದೇ ಸಿದ್ದು ಗ್ಯಾರಂಟಿ: ಸಿ.ಟಿ.ರವಿ ವಾಗ್ದಾಳಿ

Bigg Boss OTT ಸೀಸನ್‌ -3 ಅನೌನ್ಸ್:‌ ಈ ಬಾರಿ ಮತ್ತೆ ಸಲ್ಮಾನ್‌ ಖಾನ್ ನಿರೂಪಣೆ

Bigg Boss OTT ಸೀಸನ್‌ -3 ಅನೌನ್ಸ್:‌ ಈ ಬಾರಿ ಮತ್ತೆ ಸಲ್ಮಾನ್‌ ಖಾನ್ ನಿರೂಪಣೆ

Loksabha

Udupi Chikmagalur Lok Sabha Election: ಮಹಿಳಾ ಮತದಾರರೇ ಅಧಿಕ

ಮೂಡಿಗೆರೆ: ನೆಮ್ಮದಿ ಕಳೆದುಕೊಂಡ ಜನರಿಂದ ತಕ್ಕ ಉತ್ತರ- ಕೆ.ಜಯಪ್ರಕಾಶ್‌ ಹೆಗ್ಡೆ

ಮೂಡಿಗೆರೆ: ನೆಮ್ಮದಿ ಕಳೆದುಕೊಂಡ ಜನರಿಂದ ತಕ್ಕ ಉತ್ತರ- ಕೆ.ಜಯಪ್ರಕಾಶ್‌ ಹೆಗ್ಡೆ

3-

ಕಾರ್ಯಕರ್ತರ ಸಭೆ; ಅಭ್ಯರ್ಥಿ ಜಯಪ್ರಕಾಶ್ ಹೆಗ್ಡೆಗೆ ಬೆಂಬಲ ನೀಡಿ ಗೆಲ್ಲಿಸುವಂತೆ ಮನವಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.