ಸುಗ್ಗಿ ಸಂಭ್ರಮ : ತುಳು ಚಿತ್ರರಂಗದಲ್ಲೊಂದು ಹೊಸ ಪ್ರಯೋಗ


Team Udayavani, May 19, 2017, 8:38 PM IST

Suggi-20-5.jpg

‘ಸುಗ್ಗಿ’ ಎಂಬ ತುಳು ಸಿನಿಮಾವೊಂದು ತಯಾರಾಗಿರುವ ವಿಷಯ ನಿಮಗೆ ಗೊತ್ತಿರಬಹುದು. ಈಗ ಆ ಚಿತ್ರ ಬಿಡುಗಡೆಯ ಹಂತದಲ್ಲಿದೆ. ಆದರೆ, ಬಿಡುಗಡೆಗೆ ಮುನ್ನವೇ ‘ಸುಗ್ಗಿ’ ತಂಡ ಖುಷಿಯಾಗಿದೆ. ಆ ಖುಷಿಗೆ ಕಾರಣ ಈಗಾಗಲೇ ಹಲವು ಚಿತ್ರೋತ್ಸವಗಳಲ್ಲಿ ಪ್ರದರ್ಶನವಾಗಿರುವ ‘ಸುಗ್ಗಿ’ ಚಿತ್ರಕ್ಕೆ ಕೆಲವು ಪ್ರಶಸ್ತಿಗಳಿಗೂ ಭಾಜನವಾಗಿದೆ. ಈ ಚಿತ್ರವನ್ನು ಡಾ.ಎಸ್‌.ರಾಜ್‌ಕಮಲ್‌ ನಿರ್ದೇಶನ ಮಾಡಿದ್ದಾರೆ. ಇವರಿಗೆ ಇದು ಚೊಚ್ಚಲ ನಿರ್ದೇಶನದ ಸಿನಿಮಾ. ಆದರೆ, ಸಿನಿಮಾ ರಂಗ ಇವರಿಗೆ ಹೊಸದಲ್ಲ. ಈಗಾಗಲೇ ಬಿಡುಗಡೆಯಾಗಿರುವ ‘ಬಬ್ಲುಷ’ದಲ್ಲಿ ನಟಿಸಿರುವ ರಾಜ್‌ ಕಮಲ್‌, ಬಿಡುಗಡೆಯಾಗಬೇಕಿರುವ ಮೂರ್‍ನಾಲ್ಕು ಕನ್ನಡ ಸಿನಿಮಾಗಳಲ್ಲೂ ನಟಿಸಿದ್ದಾರೆ. ನಿರ್ದೇಶನದ ಜೊತೆಗೆ ‘ಸುಗ್ಗಿ’ಯ ಪ್ರಮುಖ ಪಾತ್ರದಲ್ಲೂ ರಾಜ್‌ಕಮಲ್‌ ನಟಿಸಿದ್ದಾರೆ.

ಕೊಲ್ಕತ್ತ ಇಂಟರ್‌ನ್ಯಾಷನಲ್‌ ಕಲ್ಟ್ ಫಿಲ್ಮ್ ಫೆಸ್ಟಿವಲ್‌ನಲ್ಲಿ ‘ಬೆಸ್ಟ್‌ ಡೆಬ್ಯೂ ಫಿಲ್ಮ್ ಮೇಕರ್‌’, ಲಾಸ್‌ಎಂಜೆಲಿಸ್‌ ಸ್ವತಂತ್ರ ಚಿತ್ರೋತ್ಸವದಲ್ಲಿ ‘ಅತ್ಯುತ್ತಮ ವಿದೇಶಿ ಚಿತ್ರ’, ಹಾಲಿವುಡ್‌ ಇಂಟರ್‌ನ್ಯಾಷನಲ್‌ ಮೂವಿಂಗ್‌ ಪಿಕ್ಚರ್ ಫಿಲ್ಮ್ ಫೆಸ್ಟಿವಲ್‌ನಲ್ಲಿ ‘ಚೊಚ್ಚಲ ನಿರ್ದೇಶನದ ಚಿತ್ರ’ ಹಾಗೂ ದಾದಾ ಸಾಹೇಬ್‌ ಫಾಲ್ಕೆ ಅಂತಾರಾಷ್ಟ್ರೀಯ ಚಿತ್ರೋತ್ಸವದಲ್ಲಿ ‘ಜ್ಯೂರಿ ಅವಾರ್ಡ್‌’ ಪ್ರಶಸ್ತಿಗಳನ್ನು ‘ಸುಗ್ಗಿ’ ತನ್ನದಾಗಿಸಿಕೊಂಡಿದೆ. ಜೊತೆಗೆ ಫೈವ್‌ ಕಾಂಟಿನೆಂಟ್ಸ್‌ ಇಂಟರ್‌ನ್ಯಾಷನಲ್‌ ಫಿಲ್ಮ್ಫೆ ಸ್ಟಿವಲ್‌ಗೆ ‘ಅಧಿಕೃತ ಆಯ್ಕೆ’ಗೊಂಡ ಚಿತ್ರ ಎಂಬ ಹೆಗ್ಗಳಿಕೆಯೂ ‘ಸುಗ್ಗಿ’ಯದ್ದು.

‘ಈ ಚಿತ್ರದಲ್ಲಿ ಸಾಕಷ್ಟು ಹೊಸ ವಿಷಯಗಳನ್ನು ಹೇಳುವ ಪ್ರಯತ್ನ ಮಾಡಿದ್ದೇನೆ. ಮುಖ್ಯವಾಗಿ ಪ್ರೀತಿಯಿಂದಲೇ ಎಲ್ಲವನ್ನು ಗೆಲ್ಲುತ್ತೇನೆ ಎಂದು ಹೊರಟಿರುವ ಆಯುರ್ವೇದ ಪಂಡಿತನ ಸುತ್ತ ಈ ಸಿನಿಮಾ ಸುತ್ತುತ್ತದೆ’ ಎನ್ನುವುದು ರಾಜ್‌ ಕಮಲ್‌ ಮಾತು. ಈ ಚಿತ್ರದಲ್ಲಿ ಆಧುನಿಕ ಸೌಲಭ್ಯಗಳಿಂದ ದೂರವಿರುವ ಹಳ್ಳಿಯೊಂದರಲ್ಲಿರುವ ಆಯುರ್ವೇದ ಪಂಡಿತರೊಬ್ಬರ ಜೀವನ ಶೈಲಿ ಹಾಗೂ ಎಲ್ಲವನ್ನು ಪ್ರೀತಿಯಿಂದಲೇ ಗೆಲ್ಲುತ್ತಾ ಹೋಗುವ ಅವರ ಮನಸ್ಥಿತಿಯ ಕುರಿತು ಹೇಳಲಾಗಿದೆ. ಚಿತ್ರಕ್ಕೆ ‘ಮೋಕೆದ’ ಎಂಬ ಟ್ಯಾಗ್‌ಲೈನ್‌ ಕೂಡಾ ಇದೆ. ಜೊತೆಗೆ ಜಾತಿ ವ್ಯವಸ್ಥೆ, ಮರ್ಯಾದಾ ಹತ್ಯೆ ಸೇರಿದಂತೆ ಅನೇಕ ವಿಷಯಗಳ ಸುತ್ತವೂ ‘ಸುಗ್ಗಿ’ ಸುತ್ತಲಿದೆ. ಮಂಗಳೂರಿನ ಸಖತ್‌ ರಗಡ್‌ ಲೊಕೇಶನ್‌ಗಳಲ್ಲಿ ಚಿತ್ರೀಕರಣ ಮಾಡಲಾಗಿದೆ. ಎ.ಬಿ. ಷಾ ಮತ್ತು ವಿ. ಕೃಷ್ಣಮೂರ್ತಿ ‘ಸುಗ್ಗಿ’ ಚಿತ್ರದ ನಿರ್ಮಾಪಕರು. ಚಿತ್ರಕ್ಕೆ ಭೂಮಿಕಾ ನಾಯಕಿ. ಚಿತ್ರ ಮುಂದಿನ ತಿಂಗಳು ಬಿಡುಗಡೆಯಾಗಲಿದೆ.

ಟಾಪ್ ನ್ಯೂಸ್

1-aaaa

Vijaypura:ರಾಹುಲ್ ಗಾಂಧಿ ನಿರ್ಗಸುವಾಗ ವೇದಿಕೆಗೆ ಬಂದ ಸಿದ್ದರಾಮಯ್ಯ

1-sadsadad

CBI ತನಿಖೆ; ಸಂದೇಶಖಾಲಿಯಲ್ಲಿ ಬೀಡುಬಿಟ್ಟ ಕಮಾಂಡೋಗಳು; ಸುಪ್ರೀಂ ಮೆಟ್ಟಿಲೇರಿದ ಸರಕಾರ

Bantwal ಕುಮ್ಡೇಲು: ಹಳೆದ್ವೇಷದ ಹಿನ್ನೆಲೆ ಯುವಕನಿಗೆ ಚೂರಿ ಇರಿತ

Bantwal ಕುಮ್ಡೇಲು: ಹಳೆದ್ವೇಷದ ಹಿನ್ನೆಲೆ ಯುವಕನಿಗೆ ಚೂರಿ ಇರಿತ

Road Mishap; ಪಡುಬಿದ್ರಿ: ವಿದ್ಯುತ್ ಕಂಬಕ್ಕೆ ಕಾರು ಢಿಕ್ಕಿ: ಮಹಿಳೆ ಸಾವು

Road Mishap; ಪಡುಬಿದ್ರಿ: ವಿದ್ಯುತ್ ಕಂಬಕ್ಕೆ ಕಾರು ಢಿಕ್ಕಿ: ಮಹಿಳೆ ಸಾವು

Sringeri Sharadamba Temple; ಪ್ರಧಾನಿ ಮೋದಿ ಹೆಸರಲ್ಲಿ ಸಹಸ್ರನಾಮ ಪೂಜೆ

Sringeri Sharadamba Temple; ಪ್ರಧಾನಿ ಮೋದಿ ಹೆಸರಲ್ಲಿ ಸಹಸ್ರನಾಮ ಪೂಜೆ

Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ

Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Sandalwood; ‘ಫಾರೆಸ್ಟ್‌’ನಲ್ಲಿ ಚಿಕ್ಕಣ್ಣ & ಟೀಂ

Sandalwood; ‘ಫಾರೆಸ್ಟ್‌’ನಲ್ಲಿ ಚಿಕ್ಕಣ್ಣ & ಟೀಂ

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

Shivanna in lawyer look in Bhairathi Ranagal

Bhairathi Ranagal ಲಾಯರ್ ಶಿವಣ್ಣ; ಕುತೂಹಲ ಹೆಚ್ಚಿಸಿದ ಲುಕ್

Koti

Koti; ಡಾಲಿ ಕಣ್ಣಲ್ಲಿ ಕೋಟಿ ಕನಸು; ಪರಮ್‌ ನಿರ್ದೇಶನದ ಸಿನಿಮಾ

Ritanya Vijay; ದುನಿಯಾ ವಿಜಯ್‌ ಮಗಳು ರಿತನ್ಯಾ ಗ್ರ್ಯಾಂಡ್ ಎಂಟ್ರಿ

Ritanya Vijay; ದುನಿಯಾ ವಿಜಯ್‌ ಮಗಳು ರಿತನ್ಯಾ ಗ್ರ್ಯಾಂಡ್ ಎಂಟ್ರಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-aaaa

Vijaypura:ರಾಹುಲ್ ಗಾಂಧಿ ನಿರ್ಗಸುವಾಗ ವೇದಿಕೆಗೆ ಬಂದ ಸಿದ್ದರಾಮಯ್ಯ

ಕೇಂದ್ರದಿಂದ 16 ಲಕ್ಷ ಕೋಟಿ ಉದ್ಯಮಿ ಸಾಲ ಮನ್ನಾ:ಎಸ್‌.ವರಲಕ್ಷ್ಮೀ

ಕೇಂದ್ರದಿಂದ 16 ಲಕ್ಷ ಕೋಟಿ ಉದ್ಯಮಿ ಸಾಲ ಮನ್ನಾ:ಎಸ್‌.ವರಲಕ್ಷ್ಮೀ

1-sadsadad

CBI ತನಿಖೆ; ಸಂದೇಶಖಾಲಿಯಲ್ಲಿ ಬೀಡುಬಿಟ್ಟ ಕಮಾಂಡೋಗಳು; ಸುಪ್ರೀಂ ಮೆಟ್ಟಿಲೇರಿದ ಸರಕಾರ

Bantwal ಕುಮ್ಡೇಲು: ಹಳೆದ್ವೇಷದ ಹಿನ್ನೆಲೆ ಯುವಕನಿಗೆ ಚೂರಿ ಇರಿತ

Bantwal ಕುಮ್ಡೇಲು: ಹಳೆದ್ವೇಷದ ಹಿನ್ನೆಲೆ ಯುವಕನಿಗೆ ಚೂರಿ ಇರಿತ

ಗದಗ: ತೋಟದಾರ್ಯ ಮಠ ಅನ್ನ-ಅಕ್ಷರ ದಾಸೋಹಕ್ಕೆ ಪ್ರಸಿದ್ಧ

ಗದಗ: ತೋಟದಾರ್ಯ ಮಠ ಅನ್ನ-ಅಕ್ಷರ ದಾಸೋಹಕ್ಕೆ ಪ್ರಸಿದ್ಧ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.