ನವರಸ ಚಿತ್ರ: ನಿರ್ಮಾಪಕರ ಕನಸು; ನಿರ್ದೇಶಕರ ವೈರ


Team Udayavani, Jun 23, 2017, 11:59 AM IST

Vaira-(19).jpg

ಸದ್ಯ “ವೈರ’ ಸಿನಿಮಾ ನಿರ್ದೇಶಿಸಿ, ನಟಿಸಿರುವ ನವರಸನ್‌ ಅವರಿಗೆ ಈ ಸಿನಿಮಾ ನಿರ್ದೇಶಿಸಬೇಕೆಂಬ ಯಾವ ಆಸೆಯೂ ಇರಲಿಲ್ಲವಂತೆ. ಯಾರಾದರೂ ಬೇರೆ ನಿರ್ದೇಶಕರಿಂದ ಈ ಕಥೆ ಮಾಡಿಸಿ, ತಾನು ನಟಿಸಬೇಕೆಂದುಕೊಂಡಿದ್ದರಂತೆ.

ಅದೇ ಉದ್ದೇಶದಿಂದ ನಿರ್ಮಾಪಕ ಧರ್ಮಶ್ರೀ ಮಂಜುನಾಥ್‌ ಅವರಲ್ಲಿ ಕಥೆ ಹೇಳಿದರಂತೆ. ಕಥೆ ಕೇಳಿ ಖುಷಿಯಾದ
ಮಂಜುನಾಥ್‌ ಅವರು, ನಿಮ್ಮ ಕನಸನ್ನು ಬೇರೆಯವರ ಕೈಗೆ ಕೊಡುವ ಬದಲು ನೀವೇ ನಿರ್ದೇಶಿಸಿ, ನಟಿಸಿ ಎಂದರಂತೆ. ಹಾಗಾಗಿ, ತಾನು “ವೈರ’ ಸಿನಿಮಾವನ್ನು ನಿರ್ದೇಶಿಸಬೇಕಾಯಿತು ಎಂದು ಹೇಳಿಕೊಂಡರು ನವರಸನ್‌. ಅವರ ಮಾತಿಗೆ ವೇದಿಕೆಯಾಗಿದ್ದು “ವೈರ’ ಚಿತ್ರದ ಟ್ರೇಲರ್‌ ಬಿಡುಗಡೆ. ಇತ್ತೀಚೆಗೆ ಚಿತ್ರತಂಡ ಜೊತೆಯಾಗಿ “ವೈರ’
ಚಿತ್ರದ ಟ್ರೇಲರ್‌ ಬಿಡುಗಡೆ ಮಾಡಿತು.

ನಿರ್ಮಾಪಕ ಮಂಜುನಾಥ್‌ ಅವರು ಈ ಸಿನಿಮಾ ನಿರ್ಮಿಸಲು ಕಾರಣ ಚಿತ್ರದ ಕಥೆಯಂತೆ. “ನನಗೆ ಸಣ್ಣ ಸಿನಿಮಾ ದೊಡ್ಡ ಸಿನಿಮಾ ಎಂದಿಲ್ಲ. ಕಥೆ ಮುಖ್ಯ. ಕಥೆ ಚೆನ್ನಾಗಿದ್ದರೆ ನಾನು ಸಿನಿಮಾ ಮಾಡುತ್ತೇನೆ. ನವರಸನ್‌ ಬಂದು ಕಥೆ ಹೇಳಿದರು. ಆ ಸಿನಿಮಾವನ್ನು ನಾನು ಕನಸು ಕಂಡೆ. ನನ್ನ ಕನಸಿನಂತೆ ಈ ಸಿನಿಮಾವನ್ನು ಮಾಡಿಕೊಡಿ ಎಂದೆ. ಅದರಂತೆ ನವರಸನ್‌ ಚೆನ್ನಾಗಿ ಸಿನಿಮಾ ಮಾಡಿದ್ದಾರೆ. ಕನ್ನಡಕ್ಕೆ ಇದು ಒಳ್ಳೆಯ ಸಿನಿಮಾವಾಗುವ ವಿಶ್ವಾಸವಿದೆ’ ಎನ್ನುವುದು ಮಂಜುನಾಥ್‌ ಮಾತು.

ಚಿತ್ರಕ್ಕೆ ರವಿ ಬಸ್ರೂರು ಸಂಗೀತ, ಹಿನ್ನೆಲೆ ಸಂಗೀತ ನೀಡಿದ್ದಾರೆ. ನಿರ್ದೇಶಕರು ಬಂದು ತಮ್ಮ ಸಿನಿಮಾಕ್ಕೆ ಕೆಲಸ ಮಾಡಿಕೊಡಿ ಎಂದಾಗ, “ಫ್ರೆಂಡ್‌ಶಿಪ್‌ ಇದ್ದರೆ ಜೊತೆಗೆ ಟಿ ಕುಡಿಯುವ, ಊಟ ಮಾಡುವ. ಕೆಲಸ ಮಾತ್ರ ನನಗೆ ಇಷ್ಟವಾದರೆ ಮಾತ್ರ ಮಾಡುತ್ತೇನೆ’ ಎಂದರಂತೆ ರವಿ ಬಸ್ರೂರು. ಆದರೆ, ಸಿನಿಮಾ ನೋಡಿದ ಕೂಡಲೇ ಖುಷಿಯಿಂದ ಕೆಲಸ ಮಾಡಿಕೊಡುತ್ತೇನೆ ಎಂದರಂತೆ. ಹೀಗೆ ಖುಷಿಯಿಂದ ಹೇಳಿಕೊಂಡೆ ರವಿ ಬಸ್ರೂರುಗೆ ಮೈಕ್‌ ಕೊಟ್ಟರು ನವರಸನ್‌. ಚಿತ್ರ ಕತೆಯಿಂದ ಹಿಡಿದು ತಾಂತ್ರಿಕವಾಗಿ ಸಿನಿಮಾ ಚೆನ್ನಾಗಿ ಬಂದಿದ್ದು, ಹಿನ್ನೆಲೆ ಸಂಗೀತಕ್ಕೆ ಹೆಚ್ಚಿನ ಮಹತ್ವವಿದೆಯಂತೆ. ಆ ಕಾರಣದಿಂದ ತಾನು ಒಪ್ಪಿಕೊಂಡಿದ್ದಾಗಿ ಹೇಳಿದರು. ನಾಯಕಿ ಪ್ರಿಯಾಂಕಾ
ಮಲಾ°ಡ್‌ ಅವರದ್ದು ಕಥೆಗೆ ಟ್ವಿಸ್ಟ್‌ ಕೊಡುವ ಪಾತ್ರವಂತೆ. ಹಿರಿಯ ನಿರ್ಮಾಪಕ ಜಿ.ಕೆ.ರೆಡ್ಡಿ ಕೂಡಾ ತಂಡಕ್ಕೆ
ಶುಭಕೋರಿದರು.

ಟಾಪ್ ನ್ಯೂಸ್

Boat Capsizes In Odisha’s Mahanadi River

Mahanadi River Tragedy: ಮಗುಚಿದ 50 ಜನರಿದ್ದ ದೋಣಿ; ಇಬ್ಬರು ಸಾವು; ಎಂಟು ಮಂದಿ ನಾಪತ್ತೆ

Tamil Nadu BJP chief Annamalai demands re-poll due to missing voter names

Loksabha Election; ತಮಿಳುನಾಡಿನಲ್ಲಿ ಮರು ಮತದಾನಕ್ಕೆ ಬಿಜೆಪಿ ಅಧ್ಯಕ್ಷ ಅಣ್ಣಾಮಲೈ ಆಗ್ರಹ

3-blthngady

ತಾಲೂಕಿನೆಲ್ಲೆಡೆ ಮುಂಜಾನೆ ಭಾರಿ ಮಳೆ;ಕೆಸರುಮಯ ರಾಷ್ಟ್ರೀಯ ಹೆದ್ದಾರಿಯಾಗಿಸಿದ ಗುತ್ತಿಗೆದಾರರು

MSD ಎಂಟ್ರಿ ಶಬ್ಧಕ್ಕೆ ಕಿವುಡುತನ ಸಾಧ್ಯತೆ; ವೈರಲ್ ಆಯ್ತು ಡಿಕಾಕ್ ಪತ್ನಿಯ ಇನ್ಸ್ಟಾ ಪೋಸ್ಟ್

MSD ಎಂಟ್ರಿ ಶಬ್ಧಕ್ಕೆ ಕಿವುಡುತನ ಸಾಧ್ಯತೆ; ವೈರಲ್ ಆಯ್ತು ಡಿಕಾಕ್ ಪತ್ನಿಯ ಇನ್ಸ್ಟಾ ಪೋಸ್ಟ್

UCC; ದೇಶವು ಶರಿಯಾ ಕಾನೂನಿನಲ್ಲಿ ನಡೆಯಬೇಕೆ?: ಯುಸಿಸಿ ಜಾರಿ ಬಗ್ಗೆ ಅಮಿತ್ ಶಾ ಖಡಕ್ ಮಾತು

UCC; ದೇಶವು ಶರಿಯಾ ಕಾನೂನಿನಲ್ಲಿ ನಡೆಯಬೇಕೆ?: ಯುಸಿಸಿ ಜಾರಿ ಬಗ್ಗೆ ಅಮಿತ್ ಶಾ ಖಡಕ್ ಮಾತು

2-rain

Rain: ಉಡುಪಿ ಜಿಲ್ಲೆಗೆ ತಂಪೆರೆದ ಮಳೆರಾಯ, ಜಿಲ್ಲಾದ್ಯಂತ ಗುಡುಗು ಸಹಿತ ಧಾರಾಕಾರ ಮಳೆ

1-24-saturday

Daily Horoscope: ಉದ್ಯೋಗ ಸ್ಥಾನದಲ್ಲಿ ನೆಮ್ಮದಿಯ ವಾತಾವರಣ, ಅಕಸ್ಮಾತ್‌ ಧನಪ್ರಾಪ್ತಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Sandalwood; ‘ಫಾರೆಸ್ಟ್‌’ನಲ್ಲಿ ಚಿಕ್ಕಣ್ಣ & ಟೀಂ

Sandalwood; ‘ಫಾರೆಸ್ಟ್‌’ನಲ್ಲಿ ಚಿಕ್ಕಣ್ಣ & ಟೀಂ

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

Shivanna in lawyer look in Bhairathi Ranagal

Bhairathi Ranagal ಲಾಯರ್ ಶಿವಣ್ಣ; ಕುತೂಹಲ ಹೆಚ್ಚಿಸಿದ ಲುಕ್

Koti

Koti; ಡಾಲಿ ಕಣ್ಣಲ್ಲಿ ಕೋಟಿ ಕನಸು; ಪರಮ್‌ ನಿರ್ದೇಶನದ ಸಿನಿಮಾ

Ritanya Vijay; ದುನಿಯಾ ವಿಜಯ್‌ ಮಗಳು ರಿತನ್ಯಾ ಗ್ರ್ಯಾಂಡ್ ಎಂಟ್ರಿ

Ritanya Vijay; ದುನಿಯಾ ವಿಜಯ್‌ ಮಗಳು ರಿತನ್ಯಾ ಗ್ರ್ಯಾಂಡ್ ಎಂಟ್ರಿ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Boat Capsizes In Odisha’s Mahanadi River

Mahanadi River Tragedy: ಮಗುಚಿದ 50 ಜನರಿದ್ದ ದೋಣಿ; ಇಬ್ಬರು ಸಾವು; ಎಂಟು ಮಂದಿ ನಾಪತ್ತೆ

Tamil Nadu BJP chief Annamalai demands re-poll due to missing voter names

Loksabha Election; ತಮಿಳುನಾಡಿನಲ್ಲಿ ಮರು ಮತದಾನಕ್ಕೆ ಬಿಜೆಪಿ ಅಧ್ಯಕ್ಷ ಅಣ್ಣಾಮಲೈ ಆಗ್ರಹ

3-blthngady

ತಾಲೂಕಿನೆಲ್ಲೆಡೆ ಮುಂಜಾನೆ ಭಾರಿ ಮಳೆ;ಕೆಸರುಮಯ ರಾಷ್ಟ್ರೀಯ ಹೆದ್ದಾರಿಯಾಗಿಸಿದ ಗುತ್ತಿಗೆದಾರರು

MSD ಎಂಟ್ರಿ ಶಬ್ಧಕ್ಕೆ ಕಿವುಡುತನ ಸಾಧ್ಯತೆ; ವೈರಲ್ ಆಯ್ತು ಡಿಕಾಕ್ ಪತ್ನಿಯ ಇನ್ಸ್ಟಾ ಪೋಸ್ಟ್

MSD ಎಂಟ್ರಿ ಶಬ್ಧಕ್ಕೆ ಕಿವುಡುತನ ಸಾಧ್ಯತೆ; ವೈರಲ್ ಆಯ್ತು ಡಿಕಾಕ್ ಪತ್ನಿಯ ಇನ್ಸ್ಟಾ ಪೋಸ್ಟ್

UCC; ದೇಶವು ಶರಿಯಾ ಕಾನೂನಿನಲ್ಲಿ ನಡೆಯಬೇಕೆ?: ಯುಸಿಸಿ ಜಾರಿ ಬಗ್ಗೆ ಅಮಿತ್ ಶಾ ಖಡಕ್ ಮಾತು

UCC; ದೇಶವು ಶರಿಯಾ ಕಾನೂನಿನಲ್ಲಿ ನಡೆಯಬೇಕೆ?: ಯುಸಿಸಿ ಜಾರಿ ಬಗ್ಗೆ ಅಮಿತ್ ಶಾ ಖಡಕ್ ಮಾತು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.