ನಾಗಾಲೋಟ ಶುರು; ಬಂಡಾಯದ ಭಾವುಟ


Team Udayavani, Jul 21, 2017, 5:25 AM IST

suchi.gif

ನರಗುಂದ ಭಾಗದವರಾದ ಸಿದ್ದೇಶ್‌ ವಿರಕ್ತಮಠ ಅವರಿಗೆ ನರಗುಂದದಲ್ಲಿ ನಡೆದ ಹೋರಾಟ, ಅಲ್ಲಿನ ರೈತರ ಬಂಡಾಯ ಯಾವತ್ತೂ ಕಾಡುತ್ತಿತ್ತಂತೆ. ಏಕೆಂದರೆ, ಕರ್ನಾಟಕದಲ್ಲಾದ ದೊಡ್ಡ ಬಂಡಾಯಗಳಲ್ಲಿ ನರಗುಂದ ಕೂಡಾ ಒಂದು. ಮಲಪ್ರಭಾ ನೀರಿನ ಫ‌ಲಾನುಭವಿಗಳು ಎಕರೆಗೆ ಎರಡೂವರೆ ಸಾವಿರ ಕಂದಾಯ ಕಟ್ಟಬೇಕೆಂಬ ಆಗಿನ ಸರ್ಕಾರದ ಆದೇಶದ ವಿರುದ್ಧ ಬಂಡೆದ್ದ ರೈತರ ಹೋರಾಟ ಇತಿಹಾಸದಲ್ಲಿ ದೊಡ್ಡ ಸ್ಥಾನ ಪಡೆದಿದೆ.

ಈ ಹೋರಾಟವನ್ನು ಯಾಕೆ ಸಿನಿಮಾ ಮಾಡಬಾರದೆಂದೆನಿಸಿ ಸಿದ್ದೇಶ್‌ ವಿರಕ್ತಮಠ ಅವರು ಕಥೆಯ ಜೊತೆಗೆ ಈಗ ಸಿನಿಮಾ ನಿರ್ಮಾಣ ಕೂಡಾ ಮಾಡುತ್ತಿದ್ದಾರೆ. ಅದು “ನರಗುಂದ ಬಂಡಾಯ’. ಈ ಚಿತ್ರವನ್ನು ನಾಗೇಂದ್ರ ಮಾಗಡಿ ನಿರ್ದೇಶನ ಮಾಡುತ್ತಿದ್ದಾರೆ. “ನಾನು ಕೂಡಾ ಹೋರಾಟದ ನೆಲದಿಂದ ಬಂದವನು. ಹಾಗಾಗಿ, ಆ ಭಾಗದ ಹೋರಾಟ ನನ್ನನ್ನು ಕಾಡುತ್ತಿತ್ತು. ಅದನ್ನು ಸಿನಿಮಾ ರೂಪದಲ್ಲಿ ತರಬೇಕೆಂದು ನಾನು ಆಲೋಚಿಸಿದಾಗ ಒಳ್ಳೆಯ ತಂಡ ಸಿಕ್ಕಿತು. ಸ್ನೇಹಿತರೆಲ್ಲರೂ ಬೆಂಬಲಕ್ಕೆ ನಿಂತಿದ್ದಾರೆ. ಇತಿಹಾಸದಲ್ಲಿ ತನ್ನದೇ ಆದ ಸ್ಥಾನ ಪಡೆದಿರುವ ನರಗುಂದ ಬಂಡಾಯದ ಕುರಿತು ಸಿನಿಮಾ ಮಾಡುವ ನಮ್ಮ ಕನಸು ಈಡೇರುತ್ತಿದೆ’ ಎಂದರು ನಿರ್ಮಾಪಕ ಸಿದ್ದೇಶ್‌.

ಈ ಚಿತ್ರವನ್ನು ನಿರ್ದೇಶಿಸುತ್ತಿರುವ ನಾಗೇಂದ್ರ ಮಾಗಡಿಯವರು ನವಲಗುಂದವರು. ಹಾಗಾಗಿ, ಅವರಿಗೂ ಈ ಹೋರಾಟದ ಬಗ್ಗೆ ಗೊತ್ತಿತ್ತಂತೆ. ಈಗ ಆ ಕಥೆಯನ್ನು ಸಿನಿಮಾ ಮಾಡುತ್ತಿರುವ ಬಗ್ಗೆ ಅವರಿಗೆ ಖುಷಿ ಇದೆ. ಕಥೆ 80ರ ದಶಕದಲ್ಲಿ ನಡೆಯುವುದರಿಂದ ಅದಕ್ಕೆ ತಕ್ಕಂತಹ ಲೊಕೇಶನ್‌ನಲ್ಲೇ ಚಿತ್ರೀಕರ  ಮಾಡುವುದಾಗಿ’ ಹೇಳುತ್ತಾರೆ ನಾಗೇಂದ್ರ. ಸುಮಾರು 45 ದಿನಗಳ ಚಿತ್ರೀಕರಣ ನಡೆಯಲಿದೆಯಂತೆ. ಚಿತ್ರಕ್ಕೆ ಕೇಶವಾದಿತ್ಯ ಸಂಭಾಷಣೆ ಬರೆದಿದ್ದು, ಚಿತ್ರದಲ್ಲಿ ಬರುವ ಪಾತ್ರಗಳು ತುಂಬಾ ಗಂಭೀರ ಹಾಗೂ ಹೋರಾಟದ ಹಿನ್ನೆಲೆ ಹೊಂದಿದ್ದರಿಂದ ಸಂಭಾಷಣೆ ಕೂಡಾ ಅಷ್ಟೇ ಖಡಕ್‌ ಆಗಿರುತ್ತದೆಯಂತೆ.

ಚಿತ್ರದಲ್ಲಿ ರಕ್ಷಿತ್‌ ನಾಯಕರಾಗಿ ನಟಿಸುತ್ತಿದ್ದಾರೆ. ಕಿರುತೆರೆಯಲ್ಲಿ ಬಿಝಿಯಾಗಿದ್ದ ರಕ್ಷಿತ್‌ಗೆ ಸಿನಿಮಾ ಹೀರೋ ಆಗುವ ಕನಸಿತ್ತಂತೆ. ಈ ಸಿನಿಮಾದಲ್ಲಿ ಗಂಭೀರ ಪಾತ್ರ ಸಿಕ್ಕಿದ್ದು, ಚಿತ್ರಕ್ಕಾಗಿ ಸಾಕಷ್ಟು ತಯಾರಿ ನಡೆಸುತ್ತಿದ್ದಾರಂತೆ. ಮುಖ್ಯವಾಗಿ ಕುದುರೆ ಸವಾರಿ ಕಲಿಯುತ್ತಿದ್ದಾರಂತೆ ರಕ್ಷಿತ್‌. ನಾಯಕಿ ಶುಭಾ ಪೂಂಜಾ ಇಲ್ಲಿ ಖಡಕ್‌ ಹಳ್ಳಿ ಹುಡುಗಿ. ಉತ್ತರ ಕರ್ನಾಟಕ ಭಾಷೆಗೆ ಹೊಂದಿಕೊಂಡಿದ್ದಾಗಿ ಹೇಳುತ್ತಾರೆ ಶುಭಾ.ಚಿತ್ರಕ್ಕೆ ಯಶೋವರ್ಧನ್‌ ಸಂಗೀತ, ಆರ್‌.ಗಿರಿ ಛಾಯಾಗ್ರಹಣವಿದೆ. ಆಗಸ್ಟ್‌ನಲ್ಲಿ ಚಿತ್ರ ಆರಂಭವಾಗಲಿದೆ.

ಟಾಪ್ ನ್ಯೂಸ್

15

ಶರ್ಟ್‌ ಒಳಗೆ ಕಂತೆ ಕಂತೆ ನೋಟುಗಳನ್ನು ಬಚ್ಚಿಟ್ಟು ಅಧಿಕಾರಿಗಳ ಕೈಗೆ ಸಿಕ್ಕಿಬಿದ್ದ ವ್ಯಕ್ತಿ!

ಮಹಿಳೆ ವಿವಸ್ತ್ರಗೊಳಿಸಿ ಹಲ್ಲೆ: ಜೈಲಿನಿಂದ ಬಿಡುಗಡೆಯಾದ ಆರೋಪಿಗಳಿಗೆ ಹೂಮಾಲೆ ಹಾಕಿ ಸ್ವಾಗತ

ಮಹಿಳೆ ವಿವಸ್ತ್ರಗೊಳಿಸಿ ಹಲ್ಲೆ: ಜೈಲಿನಿಂದ ಬಿಡುಗಡೆಯಾದ ಆರೋಪಿಗಳಿಗೆ ಹೂಮಾಲೆ ಹಾಕಿ ಸ್ವಾಗತ

Lok Sabha Election: ಏಪ್ರಿಲ್ 28 ರಂದು ಬೆಳಗಾವಿಗೆ ಪ್ರಧಾನಿ ಮೋದಿ

Lok Sabha Election: ಏಪ್ರಿಲ್ 28 ರಂದು ಬೆಳಗಾವಿಗೆ ಪ್ರಧಾನಿ ಮೋದಿ

Editorial: ಗುಕೇಶ್‌ ಗೆಲುವು- ಭಾರತದ ಯುವಶಕ್ತಿಯ ಸಂಕೇತ

Editorial: ಗುಕೇಶ್‌ ಗೆಲುವು- ಭಾರತದ ಯುವಶಕ್ತಿಯ ಸಂಕೇತ

AMU: ಇತಿಹಾಸದಲ್ಲೇ ಮೊದಲು… ಅಲಿಘರ್ ಮುಸ್ಲಿಂ ವಿಶ್ವವಿದ್ಯಾಲಯಕ್ಕೆ ಮಹಿಳಾ ಉಪಕುಲಪತಿ ನೇಮಕ

AMU: ಇತಿಹಾಸದಲ್ಲೇ ಮೊದಲು… ಅಲಿಘರ್ ಮುಸ್ಲಿಂ ವಿಶ್ವವಿದ್ಯಾಲಯಕ್ಕೆ ಮಹಿಳಾ ಉಪಕುಲಪತಿ ನೇಮಕ

Mandya LokSabha Constituency:ಸಕ್ಕರೆ ನಾಡಿನ ಪಾರುಪತ್ಯಕ್ಕೆ ಸಾಂಪ್ರದಾಯಿಕ ಜಿದ್ದಾಜಿದ್ದಿ

Mandya LokSabha Constituency:ಸಕ್ಕರೆ ನಾಡಿನ ಪಾರುಪತ್ಯಕ್ಕೆ ಸಾಂಪ್ರದಾಯಿಕ ಜಿದ್ದಾಜಿದ್ದಿ

Tragedy: ಕುಂದಾಪುರದಿಂದ ನೆಂಟರ ಮನೆಗೆ ಬಂದಿದ್ದ ಇಬ್ಬರು ಬಾಲಕರು ನೀರು ಪಾಲು

Tragedy: ಕುಂದಾಪುರದಿಂದ ನೆಂಟರ ಮನೆಗೆ ಬಂದಿದ್ದ ಇಬ್ಬರು ಬಾಲಕರು ನೀರು ಪಾಲು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Sandalwood; ‘ಫಾರೆಸ್ಟ್‌’ನಲ್ಲಿ ಚಿಕ್ಕಣ್ಣ & ಟೀಂ

Sandalwood; ‘ಫಾರೆಸ್ಟ್‌’ನಲ್ಲಿ ಚಿಕ್ಕಣ್ಣ & ಟೀಂ

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

Shivanna in lawyer look in Bhairathi Ranagal

Bhairathi Ranagal ಲಾಯರ್ ಶಿವಣ್ಣ; ಕುತೂಹಲ ಹೆಚ್ಚಿಸಿದ ಲುಕ್

Koti

Koti; ಡಾಲಿ ಕಣ್ಣಲ್ಲಿ ಕೋಟಿ ಕನಸು; ಪರಮ್‌ ನಿರ್ದೇಶನದ ಸಿನಿಮಾ

Ritanya Vijay; ದುನಿಯಾ ವಿಜಯ್‌ ಮಗಳು ರಿತನ್ಯಾ ಗ್ರ್ಯಾಂಡ್ ಎಂಟ್ರಿ

Ritanya Vijay; ದುನಿಯಾ ವಿಜಯ್‌ ಮಗಳು ರಿತನ್ಯಾ ಗ್ರ್ಯಾಂಡ್ ಎಂಟ್ರಿ

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

15

ಶರ್ಟ್‌ ಒಳಗೆ ಕಂತೆ ಕಂತೆ ನೋಟುಗಳನ್ನು ಬಚ್ಚಿಟ್ಟು ಅಧಿಕಾರಿಗಳ ಕೈಗೆ ಸಿಕ್ಕಿಬಿದ್ದ ವ್ಯಕ್ತಿ!

ಮಹಿಳೆ ವಿವಸ್ತ್ರಗೊಳಿಸಿ ಹಲ್ಲೆ: ಜೈಲಿನಿಂದ ಬಿಡುಗಡೆಯಾದ ಆರೋಪಿಗಳಿಗೆ ಹೂಮಾಲೆ ಹಾಕಿ ಸ್ವಾಗತ

ಮಹಿಳೆ ವಿವಸ್ತ್ರಗೊಳಿಸಿ ಹಲ್ಲೆ: ಜೈಲಿನಿಂದ ಬಿಡುಗಡೆಯಾದ ಆರೋಪಿಗಳಿಗೆ ಹೂಮಾಲೆ ಹಾಕಿ ಸ್ವಾಗತ

Lok Sabha Election: ಏಪ್ರಿಲ್ 28 ರಂದು ಬೆಳಗಾವಿಗೆ ಪ್ರಧಾನಿ ಮೋದಿ

Lok Sabha Election: ಏಪ್ರಿಲ್ 28 ರಂದು ಬೆಳಗಾವಿಗೆ ಪ್ರಧಾನಿ ಮೋದಿ

Editorial: ಗುಕೇಶ್‌ ಗೆಲುವು- ಭಾರತದ ಯುವಶಕ್ತಿಯ ಸಂಕೇತ

Editorial: ಗುಕೇಶ್‌ ಗೆಲುವು- ಭಾರತದ ಯುವಶಕ್ತಿಯ ಸಂಕೇತ

AMU: ಇತಿಹಾಸದಲ್ಲೇ ಮೊದಲು… ಅಲಿಘರ್ ಮುಸ್ಲಿಂ ವಿಶ್ವವಿದ್ಯಾಲಯಕ್ಕೆ ಮಹಿಳಾ ಉಪಕುಲಪತಿ ನೇಮಕ

AMU: ಇತಿಹಾಸದಲ್ಲೇ ಮೊದಲು… ಅಲಿಘರ್ ಮುಸ್ಲಿಂ ವಿಶ್ವವಿದ್ಯಾಲಯಕ್ಕೆ ಮಹಿಳಾ ಉಪಕುಲಪತಿ ನೇಮಕ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.