ಸದಭಿರುಚಿಯ ರಸ್ತೆಯ ಎರಡು ಕ್ರಾಸ್‌ ಆಚೀಚೆ ಇದೆ ಕಲ್ಯಾಣ ಮಂಟಪ


Team Udayavani, Sep 15, 2017, 10:57 AM IST

15-SUC-4.jpg

ಆ ಪ್ರಶ್ನೆ ಬರುತ್ತದೆ ಎಂದು ರಾಜೇಂದ್ರ ಕಾರಂತ್‌ ಅವರಿಗೆ ಗ್ಯಾರಂಟಿ ಗೊತ್ತಿತ್ತು. ಆದರೆ, ಕೇಳುವುದಕ್ಕೆ ಆಸ್ಪದವೇ ಕೊಡಲಿಲ್ಲ. ನೇರವಾಗಿ ತಾವೇ ಪ್ರಶ್ನೆ ಹಾಕಿಕೊಂಡು, ತಾವೇ ಉತ್ತರವನ್ನೂ ಕೊಟ್ಟುಬಿಟ್ಟರು. “ಟ್ರೇಲರ್‌ ನೋಡಿ, ಇದೇನಪ್ಪಾ ಇಷ್ಟೊಂದು ಡಬ್ಬಲ್‌ ಮೀನಿಂಗ್‌ ಮಾತುಗಳಿವೆ ಅಂತ ಅನಿಸಬಹುದು. ಚಿತ್ರದಲ್ಲಿ ಹಾಗಿಲ್ಲ. ಚಿತ್ರದಲ್ಲಿರುವ ಅಷ್ಟೂ ಡಬ್ಬಲ್‌ ಮೀನಿಂಗ್‌ ಮಾತುಗಳನ್ನು ಹುಡುಕಿ ಹುಡುಕಿ ಟ್ರೇಲರ್‌ ಮಾಡಿದ್ದಾನೆ ತನುಷ್‌. ಚಿತ್ರ ಬೇರೆ ತರಹವೇ ಇದೆ. ಅಶ್ಲೀಲತೆಯ ಗೆರೆ ದಾಟದಂತೆ ಚಿತ್ರ ಮೂಡಿಬಂದಿದೆ. ಇನ್ನೂ ಸರಿಯಾಗಿ ಹೇಳಬೇಕೆಂದರೆ, ಸದಭಿರುಚಿ ರೋಡ್‌ನ‌ ಎರಡು ಕ್ರಾಸ್‌ ಆಚೀಚೆಯಲ್ಲಿ ಈ ಚಿತ್ರ. ಇದೆ. 2 ಗಂಟೆ 10 ನಿಮಿಷದ ಪಕ್ಕಾ ಕಾಮಿಡಿ ಚಿತ್ರ ಇದು. ದುಡ್ಡು ಕೊಟ್ಟು ಬರುವ ಪ್ರೇಕ್ಷಕರಿಗೆ ಫ‌ುಲ್‌ ಮೀಲ್ಸ್‌ ಕೊಡ್ತೀವಿ ಎಂಬ ನಂಬಿಕೆ ಇದೆ’ ಎಂದು ಒಂದೇ ಉಸಿರಿನಲ್ಲಿ ಹೇಳಿಬಿಟ್ಟರು ರಾಜೇಂದ್ರ ಕಾರಂತ್‌.

“ನಂಜುಂಡಿ ಕಲ್ಯಾಣ’ ಚಿತ್ರದ ಟ್ರೇಲರ್‌ ಬಿಡುಗಡೆ ಮತ್ತು ಮೊದಲ ಪತ್ರಿಕಾಗೋಷ್ಠಿಯಲ್ಲಿ ಮೊದಲು ಮಾತನಾಡಿದ್ದು ಅದೇ ರಾಜೇಂದ್ರ ಕಾರಂತ್‌. ಅವರು ಚಿತ್ರಕ್ಕೆ ನಿರ್ದೇಶಕರಷ್ಟೇ ಅಲ್ಲ, ಕಥೆ-ಚಿತ್ರಕಥೆಯನ್ನೂ ಅವರೇ ಬರೆದಿದ್ದಾರೆ. ಕೆಲವು ತಿಂಗಳುಗಳ ಹಿಂದೆ ಶುರುವಾದ ಈ ಚಿತ್ರ, ಇದೀಗ ಮುಗಿದು, ಪೋಸ್‌ r -ಪ್ರೊಡಕ್ಷನ್‌ ಹಂತದಲ್ಲಿದೆ. ಈ ಸಂದರ್ಭದಲ್ಲಿ ಮಾಧ್ಯಮದವರ ಜೊತೆಗೆ ಮಾತಾಡುವುದಕ್ಕೆ ಬಂದಿದ್ದರು. ಟ್ರೇಲರ್‌ ತೋರಿಸಿ ಚಿತ್ರತಂಡದವರೆಲ್ಲರೂ ವೇದಿಕೆ ಏರಿದರು. ರಾಜೇಂದ್ರ ಕಾರಂತ್‌ ಅಕ್ಕ-ಪಕ್ಕ ನಾಯಕ ತನುಷ್‌, ನಾಯಕಿ ಶ್ರಾವ್ಯ, ಪದ್ಮಜಾ ರಾವ್‌, ಮಂಜುನಾಥ್‌ ಹೆಗಡೆ ಮುಂತಾದವರು ಅಕ್ಕ-ಪಕ್ಕ ಕುಳಿತರು.

ತನುಷ್‌ ಎಲ್ಲರನ್ನೂ ಪರಿಚಯಿಸಿ, ಕಾರಂತರಿಗೆ ಮೈಕು ಕೊಟ್ಟರು. ಇದು ಅವರ ಎರಡನೆಯ ಚಿತ್ರ. “ಮಂಗನ ಕೈಲಿ ಮಾಣಿಕ್ಯ’ ಆದಮೇಲೆ ಅವರು ನಿರ್ದೇಶನ ಮಾಡಿರಲಿಲ್ಲ. “ಮಡಮಕ್ಕಿ’ ಸಂದರ್ಭದಲ್ಲಿ ತನುಷ್‌ ಪರಿಚಯವಾಗಿ, ಮುಂದೊಂದು ದಿನ ಸಿನಿಮಾ ಮಾಡುವ ಮಾತಾಗಿ, ಈಗ ಅದು ಬಿಡುಗಡೆಯ ಹಂತಕ್ಕೆ ಬಂದಿದೆ. “ಕಥೆಗೆ ಏನು ಹೆಸರಿಡಬೇಕು ಅಂತ ಬಂದಾಗ, “ನಂಜುಂಡಿ ಕಲ್ಯಾಣ’ ಅಂತ ಇಡು ಅಂತ ತನುಷ್‌ಗೆ ಹೇಳಿದೆ. ಅವನು ಹೋಗಿ, ರಾಘವೇಂದ್ರ ರಾಜಕುಮಾರ್‌ ಅವರಿಗೆ ಒಪ್ಪಿಸಿಕೊಂಡು ಬಂದ. ಅವನಿಗೆ ಐಡಿಯಾ ಕೊಡುವ ಮೂಲಕ ಅನಾವಶ್ಯಕವಾಗಿ ಜವಾಬ್ದಾರಿ ಎಳೆದುಕೊಂಡೆ. ಅದೊಂದು ಐಕಾನಿಕ್‌ ಚಿತ್ರ. ಆ ಲೆವೆಲ್‌ಗೆ ತೂಗಿಸುವ ಸಿನಿಮಾ ಮಾಡುವುದು ಅಷ್ಟು ಸುಲಭವಲ್ಲ. ತೀರಾ ಅದ್ಭುತವಲ್ಲದಿದ್ದರೂ, ಬೇಸರ ತರಿಸದ ಒಂದು ಚಿತ್ರವನ್ನು 33 ದಿನಗಳಲ್ಲಿ ಮಾಡಿ ಮುಗಿಸಿದ್ದೇವೆ’ ಎಂದರು. ಏನೋ ನೆನಪಿಸಿಕೊಂಡವರಂತೆ, “ಇದು ನಂಜುಂಡಿ ಎಂಬ ಯುವಕನ ಕಥೆ. ತನ್ನ ಹಠಮಾರಿ ತಾಯಿಯನ್ನು ಹೇಗೆ ಒಪ್ಪಿಸಿ, ತಾನು ಇಷ್ಟಪಟ್ಟ ಹುಡುಗಿಯನ್ನು ಮದುವೆಯಾಗುತ್ತಾನೆ’ ಎಂಬುದು ಚಿತ್ರದ ಕಥೆ ಎಂದು ಹೇಳಿದರು. ಈ ಹಿಂದೆ “ಮಡಮಕ್ಕಿ’ ಚಿತ್ರದಲ್ಲಿ  ಸಾಕಷ್ಟು ಕಳೆದುಕೊಂಡಿದ್ದರೂ, ಈ ಚಿತ್ರವನ್ನು ನಿರ್ಮಿಸುವ ಮನಸ್ಸು ಮಾಡಿದ್ದಕ್ಕೆ ತಮ್ಮ ತಂದೆ ದಾಸನಾಪುರ ಶಿವಣ್ಣರನ್ನು ಹೊಗಳಿದರು ತನುಷ್‌. ಇದೇ ಕೊನೆಯ ಅವಕಾಶ ಎಂದು ಹೇಳಿಯೇ ಶಿವಣ್ಣನವರು, ಚಿತ್ರ ನಿರ್ಮಿಸುವುದಕ್ಕೆ ಮುಂದಾದರಂತೆ. ಅವರ ನಂಬಿಕೆ ಉಳಿಸಿಕೊಳ್ಳುವ ಪ್ರಯತ್ನ ಮಾಡಿರುವುದಾಗಿ ಹೇಳಿದರು ತನುಷ್‌. ನಾಯಕಿ ಶ್ರಾವ್ಯಗೆ ಕಾರಂತರಿಂದ
ಹೊಗಳಿಸಿಕೊಳ್ಳಬೇಕು ಎಂಬ ಆಸೆ ಇತ್ತಂತೆ. ಅದು ಈ ಚಿತ್ರದಲ್ಲಿ ಈಡೇರಿದ್ದರಿಂದ ಅವರಿಗೆ ಸಹಜವಾಗಿಯೇ ಖುಷಿಯಾಗಿದೆ. ಇನ್ನು ಪದ್ಮಜಾ ರಾವ್‌ ಅವರು, ಶೂಟಿಂಗ್‌ ಸಂದರ್ಭದಲ್ಲಿ ಕೊಡುತ್ತಿದ್ದ ಊಟವನ್ನು ನೆನಪಿಸಿಕೊಂಡು ಬಾಯಿ ಚಪ್ಪರಿಸಿದರು. ಚಿತ್ರದಲ್ಲಿ ಕಲರ್‌ಫ‌ುಲ್‌ ಸೀರೆ ಮತ್ತು ಒಡವೆಗಳನ್ನು ಧರಿಸುವುದಕ್ಕೆ ಅವಕಾಶ ಕೊಟ್ಟಿದ್ದಕ್ಕೆ, ಧನ್ಯವಾದ ಸಲ್ಲಿಸಿದರು.

ಚೇತನ್‌ ನಾಡಿಗೇರ್‌

ಟಾಪ್ ನ್ಯೂಸ್

pramod-muthalik

Neha Hiremath Case; ಕೊಲೆಗಡುಕನನ್ನು ಎನ್ ಕೌಂಟರ್ ಮಾಡಿ: ಪ್ರಮೋದ್ ಮುತಾಲಿಕ್ ಆಗ್ರಹ

Neha Hiremath Case: ಹಂತಕನ ಊರಿನಲ್ಲಿ ಪ್ರತಿಭಟನೆ, ಮುಸ್ಲಿಂ ಸಮುದಾಯದ ಸಾಥ್

Neha Hiremath Case: ಹಂತಕನ ಊರಿನಲ್ಲಿ ಪ್ರತಿಭಟನೆ, ಮುಸ್ಲಿಂ ಸಮುದಾಯದ ಸಾಥ್

7-bng

Bengaluru: ರೈಲಿಗೆ ಸಿಲುಕಿ ವೈದ್ಯ, ಸ್ಟಾಫ್ ನರ್ಸ್‌ ಆತ್ಮಹತ್ಯೆ

Udupi: ಟಿಪ್ಪರ್ – ಬೈಕ್ ನಡುವೆ ಭೀಕರ ಅಪಘಾತ; ಬೈಕ್ ಸವಾರ ಸ್ಥಳದಲ್ಲೇ ಸಾವು

Udupi: ಟಿಪ್ಪರ್ – ಬೈಕ್ ನಡುವೆ ಭೀಕರ ಅಪಘಾತ; ಬೈಕ್ ಸವಾರ ಸ್ಥಳದಲ್ಲೇ ಸಾವು

6-bng-crime

Bengaluru Crime: ಅಕ್ರಮ ಸಂಬಂಧ ಜೋಡಿ ಕೊಲೆಯಲ್ಲಿ ಅಂತ್ಯ

ಬೊಮ್ಮಾಯಿ

Hubli; ಕಾನೂನು ವ್ಯವಸ್ಥೆ ಹೀಗೆ ಮುಂದುವರಿದರೆ ರಾಜ್ಯ ಬಿಹಾರವಾಗುತ್ತದೆ: ಬಸವರಾಜ ಬೊಮ್ಮಾಯಿ

Bangalore south Lok Sabha Constituency:ಸುಶಿಕ್ಷಿತರ ಕ್ಷೇತ್ರದಲ್ಲಿ ಸೂರ್ಯ ಸೌಮ್ಯಾ ಕದನ

Bangalore south Lok Sabha Constituency:ಸುಶಿಕ್ಷಿತರ ಕ್ಷೇತ್ರದಲ್ಲಿ ಸೂರ್ಯ ಸೌಮ್ಯಾ ಕದನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Shivanna in lawyer look in Bhairathi Ranagal

Bhairathi Ranagal ಲಾಯರ್ ಶಿವಣ್ಣ; ಕುತೂಹಲ ಹೆಚ್ಚಿಸಿದ ಲುಕ್

Koti

Koti; ಡಾಲಿ ಕಣ್ಣಲ್ಲಿ ಕೋಟಿ ಕನಸು; ಪರಮ್‌ ನಿರ್ದೇಶನದ ಸಿನಿಮಾ

Ritanya Vijay; ದುನಿಯಾ ವಿಜಯ್‌ ಮಗಳು ರಿತನ್ಯಾ ಗ್ರ್ಯಾಂಡ್ ಎಂಟ್ರಿ

Ritanya Vijay; ದುನಿಯಾ ವಿಜಯ್‌ ಮಗಳು ರಿತನ್ಯಾ ಗ್ರ್ಯಾಂಡ್ ಎಂಟ್ರಿ

DEVIL; ಹೆಚ್ಚು ದಿನ ವಿಶ್ರಾಂತಿಯಿಲ್ಲ, ಅಕ್ಟೋಬರ್‌ನಲ್ಲಿ ಡೆವಿಲ್‌ ಬರೋದು ಪಕ್ಕಾ: ದರ್ಶನ್‌

DEVIL; ಹೆಚ್ಚು ದಿನ ವಿಶ್ರಾಂತಿಯಿಲ್ಲ, ಅಕ್ಟೋಬರ್‌ನಲ್ಲಿ ಡೆವಿಲ್‌ ಬರೋದು ಪಕ್ಕಾ: ದರ್ಶನ್‌

Kiran Raj, Yasha Shivakumar starer Bharjari Gandu movie

Kannada Cinema; ರಿಲೀಸ್‌ ಅಖಾಡದಲ್ಲಿ ‘ಭರ್ಜರಿ ಗಂಡು’; ಕಿರಣ್‌ಗೆ ಯಶ ನಾಯಕಿ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

8-ptr

Puttur: ಶ್ರೀ ಮಹಾಲಿಂಗೇಶ್ವರ ದೇವರ ಅವಭೃಥ ಸವಾರಿ

pramod-muthalik

Neha Hiremath Case; ಕೊಲೆಗಡುಕನನ್ನು ಎನ್ ಕೌಂಟರ್ ಮಾಡಿ: ಪ್ರಮೋದ್ ಮುತಾಲಿಕ್ ಆಗ್ರಹ

Neha Hiremath Case: ಹಂತಕನ ಊರಿನಲ್ಲಿ ಪ್ರತಿಭಟನೆ, ಮುಸ್ಲಿಂ ಸಮುದಾಯದ ಸಾಥ್

Neha Hiremath Case: ಹಂತಕನ ಊರಿನಲ್ಲಿ ಪ್ರತಿಭಟನೆ, ಮುಸ್ಲಿಂ ಸಮುದಾಯದ ಸಾಥ್

jagadish shettar

Belagavi; ಕಾಂಗ್ರೆಸ್ ಸರ್ಕಾರದ ಓಲೈಕೆಯಿಂದ ಜಿಹಾದಿ ಕೃತ್ಯಗಳು ಹೆಚ್ಚುತ್ತಿದೆ: ಶೆಟ್ಟರ್

7-bng

Bengaluru: ರೈಲಿಗೆ ಸಿಲುಕಿ ವೈದ್ಯ, ಸ್ಟಾಫ್ ನರ್ಸ್‌ ಆತ್ಮಹತ್ಯೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.