ಭರ್ಜರಿ ಗೆಲುವು


Team Udayavani, Sep 22, 2017, 3:14 PM IST

22-SU-3.jpg

ಹಿಂದೆ, “ಮೆಗಾ ಬ್ಲಾಕ್‌ಬಸ್ಟರ್‌’ ಎಂಬ ಪೋಸ್ಟರ್‌. ಅದರ ಮುಂದೆ ಧ್ರುವ ಸರ್ಜಾ. ಯಾರಿಗಾದರೂ ಅದು ಖುಷಿಯ ಕ್ಷಣವೇ. ಚಿತ್ರರಂಗದ ಸದ್ಯದ ಮಟ್ಟಿಗೆ ಹಾಕಿದ ಬಂಡವಾಳ ವಾಪಾಸ್‌ ಬಂದರೆ ಸಾಕು ಎಂಬಂತಿರುವಾಗ ಧ್ರುವ ಸರ್ಜಾ ನಟಿಸಿರುವ ಮೂರನೇ ಸಿನಿಮಾ “ಭರ್ಜರಿ’ ದೊಡ್ಡ ಮಟ್ಟದಲ್ಲಿ ಸುದ್ದಿ ಮಾಡುತ್ತಿದೆ. ಅದು ಯಾವ ಮಟ್ಟಿಗೆಂದರೆ ಬಿಡುಗಡೆಯಾದ ಮೂರೇ ದಿನಕ್ಕೇ “ಮೆಗಾ ಬ್ಲಾಕ್‌ ಬ್ಲಿಸ್ಟರ್‌’ ಎಂಬ ಪೋಸ್ಟರ್‌ ಬೀಳುವ ಮಟ್ಟಕ್ಕೆ. ಅದೇ ಕಾರಣಕ್ಕೆ ಇಡೀ ಚಿತ್ರತಂಡ ಖುಷಿಯಾಗಿದೆ.

“ಚಿತ್ರದ ಕಲೆಕ್ಷನ್‌ ಬಗ್ಗೆ ನನಗೆ ಗೊತ್ತಿಲ್ಲ. ಆದರೆ ಜನ ಸಿನಿಮಾವನ್ನು ಇಷ್ಟಪಟ್ಟಿದ್ದಾರೆ. ನೋಡಿದವರಿಂದ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗುತ್ತಿದೆ. ಸಿನಿಮಾದಲ್ಲಿ ಲವ್‌, ಕಾಮಿಡಿ, ಆ್ಯಕ್ಷನ್‌, ಸೆಂಟಿಮೆಂಟ್‌ ಎಲ್ಲವೂ ಇದೆ. ಮುಂದೇನು ಮಾಡಬೇಕೆಂಬ ಭಯ ಕಾಡುತ್ತಿದೆ. ನಾನು ಏನೂ ನಿರೀಕ್ಷಿಸದೇ ಬಂದೆ. ಜನನೇ ಒಂದು ದಾರಿ ತೋರಿಸಿದರು. ಅವರು ಹಾಕಿಕೊಟ್ಟ ದಾರಿಯಲ್ಲಿ ಸಾಗುತ್ತಿದ್ದೇನೆ. ಆರಂಭದಲ್ಲಿ ಈ ಸಿನಿಮಾ ಬಗ್ಗೆನೂ ಭಯವಿತ್ತು. ಚಿತ್ರ ಆರಂಭವಾಗಿ ಎರಡು ವರ್ಷ ಆಗಿದೆ, ಜನ ಎಲ್ಲಿ ಮರೆತುಬಿಡುತ್ತಾರಾ ಎಂದು. ಹಾಗಾಗಿಯೇ ನಿರ್ಮಾಪಕರಿಗೆ ಆಗಾಗ ಫೋನ್‌ ಮಾಡಿ, ಚಿತ್ರವನ್ನು ಚೆನ್ನಾಗಿ ಪಬ್ಲಿಸಿಟಿ ಮಾಡಿ ಎನ್ನುತ್ತಿದ್ದೆ’ ಎಂದು ಚಿತ್ರ ಗೆದ್ದ ಖುಷಿ ವ್ಯಕ್ತಪಡಿಸಿದರು. ನಾಯಕಿಯರಾದ ರಚಿತಾ ರಾಮ್‌ ಹಾಗೂ ವೈಶಾಲಿ ದೀಪಕ್‌ ಕೂಡಾ ಚಿತ್ರದ ಗೆಲುವನ್ನು ಸಂಭ್ರಮಿಸಿದರು.

ನಿರ್ದೇಶಕ ಚೇತನ್‌ ಕೂಡಾ “ಭರ್ಜರಿ’ ಯಶಸ್ಸಿನಿಂದ ಖುಷಿಯಾಗಿದ್ದರು. “ಸಿನಿಮಾದ ಮೇಲೆ ನಂಬಿಕೆ ಇತ್ತು. ಆದರೆ, ಈ ತರಹದ ಓಪನಿಂಗ್‌ ನಿರೀಕ್ಷಿಸಿರಲಿಲ್ಲ. ನೂರು ದಿನ ಮಾಡುವ ಕಲೆಕ್ಷನ್‌ ಅನ್ನು ನಮ್ಮ ಚಿತ್ರ ಮೂರು ದಿನದಲ್ಲಿ ಮಾಡಿದೆ’ ಎಂದು ಖುಷಿಯಾದರು. “ಭರ್ಜರಿ’ ಚಿತ್ರ ಮೂರು ದಿನಕ್ಕೆ 16 ಕೋಟಿ ರೂಪಾಯಿ ಕಲೆಕ್ಷನ್‌ ಮಾಡಿದೆ. ಎಲ್ಲಾ ಕಡೆಗಳಲ್ಲೂ ಹೌಸ್‌ಫ‌ುಲ್‌ ಪ್ರದರ್ಶನ ಕಾಣುತ್ತಿದ್ದು, ವಾರಾಂತ್ಯದಲ್ಲಿ ಚಿತ್ರ 25 ಕೋಟಿ ರೂಪಾಯಿ ಕಲೆಕ್ಟ್ ಮಾಡಲಿದೆ ಎಂಬ ನಿರೀಕ್ಷೆ ಚಿತ್ರತಂಡಕ್ಕಿದೆ.

ಸಾಮಾನ್ಯವಾಗಿ ಕನ್ನಡ ಸಿನಿಮಾಗಳು ಪ್ರದರ್ಶನವಾಗದ ಊರ್ವಶಿ, ರೆಕ್ಸ್‌ಗಳಲ್ಲೂ “ಭರ್ಜರಿ’ ಪ್ರದರ್ಶನ ಕಂಡಿದೆ. ಜೊತೆಗೆ ಮುಂಬೈನಲ್ಲೂ ಚಿತ್ರ ಬಿಡುಗಡೆಯಾಗಿದೆ. ನಿರ್ಮಾಪಕ ಶ್ರೀನಿವಾಸ್‌ ಎರಡು ತಿಂಗಳು ಬಿಟ್ಟು, “ಭರ್ಜರಿ’ ಚಿತ್ರವನ್ನು ತೆಲುಗಿನಲ್ಲೂ ಬಿಡುಗಡೆ ಮಾಡಲಿದ್ದು, ಈಗಾಗಲೇ ಡಬ್ಬಿಂಗ್‌ ಕಾರ್ಯ ಮುಕ್ತಾಯವಾಗಿದೆಯಂತೆ. ತಮಿಳಿನಿಂದ ರೀಮೇಕ್‌ ರೈಟ್ಸ್‌ಗೆ ಬೇಡಿಕೆ ಬರುತ್ತಿದೆಯಂತೆ. ಚಿತ್ರದ ನಿರ್ಮಾಪಕ ಕನಕಪುರ ಶ್ರೀನಿವಾಸ್‌, ವಿತರಕರಾದ ಭಾಷಾ, ಸುಪ್ರಿತ್‌ ಕೂಡಾ ಚಿತ್ರ ಗೆದ್ದ ಬಗ್ಗೆ ಖುಷಿ ಹಂಚಿಕೊಂಡರು. 

ಟಾಪ್ ನ್ಯೂಸ್

Kollywood: ಅಜಿತ್‌ ಹುಟ್ಟುಹಬ್ಬಕ್ಕೆ ಸೂಪರ್‌ ಹಿಟ್ ʼಬಿಲ್ಲಾʼ ರೀ ರಿಲೀಸ್; ಫ್ಯಾನ್ಸ್‌ ಖುಷ್

Kollywood: ಅಜಿತ್‌ ಹುಟ್ಟುಹಬ್ಬಕ್ಕೆ ಸೂಪರ್‌ ಹಿಟ್ ʼಬಿಲ್ಲಾʼ ರೀ ರಿಲೀಸ್; ಫ್ಯಾನ್ಸ್‌ ಖುಷ್

Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ

Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ

19-uv-fusion

Vote: ಬನ್ನಿ ಉತ್ತಮ ನಾಯಕನನ್ನು ಆಯ್ಕೆ ಮಾಡೋಣ

ಜ.26ರಂದು 2ನೇ ಹಂತದ ಚುನಾವಣೆ;ರಾಹುಲ್‌, ತರೂರ್‌, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ

ಜ.26ರಂದು 2ನೇ ಹಂತದ ಚುನಾವಣೆ;ರಾಹುಲ್‌, ತರೂರ್‌, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ

18-aranthodu

Aranthodu: ಜೀಪ್-ಬೈಕ್ ಅಪಘಾತ; ಗಂಭೀರ ಗಾಯಗೊಂಡಿದ್ದ ಬೈಕ್ ಸವಾರ ಸಾವು

17-voting

Vote: ಮತದಾನದ ಮಹತ್ವ

Siddaramaiah

Haveri; ದೇಶ ಬಿಡುತ್ತೇನೆ ಎಂದಿದ್ದ ದೇವೇಗೌಡರು ಮೋದಿ ಜತೆ ಸೇರಿದ್ದಾರೆ: ಸಿದ್ದರಾಮಯ್ಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Sandalwood; ‘ಫಾರೆಸ್ಟ್‌’ನಲ್ಲಿ ಚಿಕ್ಕಣ್ಣ & ಟೀಂ

Sandalwood; ‘ಫಾರೆಸ್ಟ್‌’ನಲ್ಲಿ ಚಿಕ್ಕಣ್ಣ & ಟೀಂ

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

Shivanna in lawyer look in Bhairathi Ranagal

Bhairathi Ranagal ಲಾಯರ್ ಶಿವಣ್ಣ; ಕುತೂಹಲ ಹೆಚ್ಚಿಸಿದ ಲುಕ್

Koti

Koti; ಡಾಲಿ ಕಣ್ಣಲ್ಲಿ ಕೋಟಿ ಕನಸು; ಪರಮ್‌ ನಿರ್ದೇಶನದ ಸಿನಿಮಾ

Ritanya Vijay; ದುನಿಯಾ ವಿಜಯ್‌ ಮಗಳು ರಿತನ್ಯಾ ಗ್ರ್ಯಾಂಡ್ ಎಂಟ್ರಿ

Ritanya Vijay; ದುನಿಯಾ ವಿಜಯ್‌ ಮಗಳು ರಿತನ್ಯಾ ಗ್ರ್ಯಾಂಡ್ ಎಂಟ್ರಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಬಾಗಲಕೋಟೆ: ಯಾರೇ ಪಕ್ಷ ಬಿಟ್ಟರೂ ಏನೂ ಆಗಲ್ಲ- ಸಿದ್ದು ಸವದಿ

ಬಾಗಲಕೋಟೆ: ಯಾರೇ ಪಕ್ಷ ಬಿಟ್ಟರೂ ಏನೂ ಆಗಲ್ಲ- ಸಿದ್ದು ಸವದಿ

ಧಾರವಾಡ: “ಶ್ರೀರಾಮ-ಕೃಷ್ಣರ ಜೀವನ ಇಂದಿಗೂ ಆದರ್ಶ’

ಧಾರವಾಡ: “ಶ್ರೀರಾಮ-ಕೃಷ್ಣರ ಜೀವನ ಇಂದಿಗೂ ಆದರ್ಶ’

Kollywood: ಅಜಿತ್‌ ಹುಟ್ಟುಹಬ್ಬಕ್ಕೆ ಸೂಪರ್‌ ಹಿಟ್ ʼಬಿಲ್ಲಾʼ ರೀ ರಿಲೀಸ್; ಫ್ಯಾನ್ಸ್‌ ಖುಷ್

Kollywood: ಅಜಿತ್‌ ಹುಟ್ಟುಹಬ್ಬಕ್ಕೆ ಸೂಪರ್‌ ಹಿಟ್ ʼಬಿಲ್ಲಾʼ ರೀ ರಿಲೀಸ್; ಫ್ಯಾನ್ಸ್‌ ಖುಷ್

Kaup: ಎ.25ರಿಂದ ಕಳತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ, ನಾಗಮಂಡಲ

Kaup: ಎ.25ರಿಂದ ಕಳತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ, ನಾಗಮಂಡಲ

Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ

Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.