ಗಲ್ಲಿ ಮಾತು! ಹುಲಿರಾಯ ಬರ್ತಾನೆ ಜಾಗ ಬಿಡಿ


Team Udayavani, Oct 13, 2017, 6:40 AM IST

GALLI.jpg

“ನಾನು ಲೈಫ‌ಲ್ಲಿ ಸೋಲುಂಡು ನೋವಲ್ಲಿದ್ದಾಗ, ನಿರ್ಮಾಪಕ ಎಂ.ಎನ್‌.ಕುಮಾರ್‌ ನನ್ನ ಕೈ ಹಿಡಿದರು. “ನಾನಿದ್ದೇನೆ’ ಅಂದ್ರು, ಹೇಳಿದಂತೆ ನಡೆದುಕೊಂಡರು. ಅವರಿಗೆ ನಾನು ಋಣಿಯಾಗಿರಿ¤àನಿ…’

– ಹೀಗೆ ಹೇಳುವ ಮೂಲಕ ಮುಂದೊಂದು ದಿನ ನಾನು ಗೆದ್ದೇ ಗೆಲ್ತಿàನಿ ಅಂತ ವಿಶ್ವಾಸದಿಂದ ಹೇಳಿಕೊಂಡರು ನೀನಾಸಂ ಸತೀಶ್‌.

ಅವರು ಹೇಳಿದ್ದು, “ಟೈಗರ್‌ ಗಲ್ಲಿ’ ಬಗ್ಗೆ. ಅ.27 ರಂದು ಚಿತ್ರ ರಾಜ್ಯಾದ್ಯಂತ ತೆರೆಗೆ ಬರುತ್ತಿದೆ. ಈ ಸಿನಿಮಾ ಬಗ್ಗೆ ಮಾಹಿತಿ ಕೊಡಲೆಂದೇ ನಿರ್ದೇಶಕ ರವಿಶ್ರೀವತ್ಸ, ತಮ್ಮ ತಂಡದೊಂದಿಗೆ ಮಾಧ್ಯಮದೆದುರು ಕುಳಿತಿದ್ದರು. ನೀನಾಸಂ ಮೈಕ್‌ ಹಿಡಿದು ಮಾತಿಗಿಳಿದರು. “ನನ್ನ ಲೈಫ‌ಲ್ಲಿ “ಟೈಗರ್‌ ಗಲ್ಲಿ’ ತುಂಬಾ ಮುಖ್ಯವಾದ ಚಿತ್ರ. ಯಾಕೆಂದರೆ, “ರಾಕೆಟ್‌’ ಸೋತು ನೆಲಕಚ್ಚಿದ ವೇಳೆ ನಾನು ನೋವಲ್ಲಿದ್ದೆ. ಆಗ, ನಿರ್ಮಾಪಕರು ಈ ಚಿತ್ರ ಕೊಟ್ಟರು. ಹಾಗಾಗಿ ನಾನು ಎಷ್ಟೇ ಎತ್ತರಕ್ಕೆ ಬೆಳೆದರೂ ಹೀಗೇ ಇರಿ¤àನಿ. ನೋವಲ್ಲಿ ಸ್ಪಂದಿಸಿದವರನ್ನು ಎಂದಿಗೂ ಮರೆಯೋದಿಲ್ಲ. ಈ ಚಿತ್ರ ಮಾಡೋಕೆ ಕಾರಣ ಕಥೆ ಮತ್ತು ಪಾತ್ರ. ಎಲ್ಲದ್ದಕ್ಕೂ ಹೆಚ್ಚಾಗಿ ನಿರ್ದೇಶಕರು ನನಗೆ ಮೊದಲ ಚಿತ್ರದಲ್ಲಿ ನಟಿಸಲು ಅವಕಾಶ ಕೊಟ್ಟಿದ್ದು. ಕಥೆ ಹೇಳಿದಾಗ, ಆ ಪಾತ್ರ ಮಾಡೋಕ್ಕಾಗುತ್ತಾ ಎಂಬ ಪ್ರಶ್ನೆ ಎದುರಾಯ್ತು. ಆದರೂ ನಿರ್ದೇಶಕರು ಕೊಟ್ಟ ಪ್ರೋತ್ಸಾಹ, ಧೈರ್ಯದಿಂದ ಒಳ್ಳೇ ಚಿತ್ರದಲ್ಲಿ ಕೆಲಸ ಮಾಡಲು ಸಾಧ್ಯವಾಗಿದೆ. ನನಗೆ “ರಾಕೆಟ್‌’ನಲ್ಲಾಗಿದ್ದ ಸೋಲು, ನೋವು, ಅವಮಾನಗಳನ್ನೆಲ್ಲಾ ಈ ಚಿತ್ರದ ಮೂಲಕ ತೀರಿಸಿಕೊಳ್ಳುವ ನಂಬಿಕೆ ಇದೆ. ಇಲ್ಲಿ ಜ್ವರ ಇದ್ದರೂ ಎನರ್ಜಿ ಇಟ್ಟುಕೊಂಡು ಕೆಲಸ ಮಾಡಿದೆ. ಅದಕ್ಕೆ ಕಾರಣ, ಜತೆಯಲ್ಲಿದ್ದ ತಂಡ. ಇಲ್ಲಿ ಎಲ್ಲಾ ವರ್ಗಕ್ಕೂ ಇಷ್ಟವಾಗುವ ಅಂಶಗಳಿವೆ. ಭ್ರಷ್ಟಾಚಾರ ಸೇರಿದಂತೆ ಈಗಿನ ವಾಸ್ತವಾಂಶ ಚಿತ್ರದ ಹೈಲೈಟ್‌’ ಅಂದರು ಸತೀಶ್‌.

ನಿರ್ದೇಶಕ ರವಿ ಶ್ರೀವತ್ಸ ಅವರಿಗೆ, ನಿರ್ಮಾಪಕರು ಕೊಟ್ಟ ಸಾಥ್‌ನಿಂದಾಗಿಯೇ “ಟೈಗರ್‌ ಗಲ್ಲಿ’ ಆಗಲು ಕಾರಣವಂತೆ. “ಟೈಗರ್‌ ಗಲ್ಲಿ’ ಎಲ್ಲೋ ಒಂದು ಕಡೆ ಬೇರೆಯ ಮಜಾ ಕೊಟ್ಟ ಸಿನಿಮಾ. ಇದು ಬೇರೆ ರೀತಿಯಲ್ಲೇ ನೋಡುಗರನ್ನು ಕರೆದುಕೊಂಡು ಹೋಗುತ್ತೆ ಎಂಬ ಗ್ಯಾರಂಟಿ ಕೊಡ್ತೀನಿ. ಇದುವರೆಗೆ ನಾನು ಮಾಡಿದ ಚಿತ್ರಗಳು ಒನ್‌ಸೈಡೆಡ್‌ ಎಂಬ ಹಣೆಪಟ್ಟಿ ಪಡೆದಿದ್ದವು. ಆದರೆ, ಇದು ಹೊಸತನದ ಮನರಂಜನೆ ಕೊಡಲಿದೆ. ಇಲ್ಲಿ ಶಿವಮಣಿ, ಅಯ್ಯಪ್ಪ, ಗಿರಿರಾಜ್‌ರಂತಹ ತಂತ್ರಜ್ಞರ ಸಹಕಾರ ಮತ್ತು ಪ್ರೋತ್ಸಾಹ ಸಿಕ್ಕಿದ್ದರಿಂದ ಚಿತ್ರ ನನ್ನ ನಿರೀಕ್ಷೆ ಮೀರಿ ಮೂಡಿಬಂದಿದೆ.

ನನ್ನ ಗುರು ಕೆ.ವಿ. ರಾಜು ಅವರ ಸಲಹೆ ಮತ್ತು ಕೆಲ ಬದಲಾವಣೆಗಳು ಚಿತ್ರದ ವೇಗಕ್ಕೆ ಕಾರಣವಾಗಿವೆ. ಇಲ್ಲಿ ಪ್ರತಿಯೊಂದು ಪಾತ್ರಕ್ಕೂ ಆದ್ಯತೆ ಇದೆ. ಎಲ್ಲವೂ ಅಬ್ಬರಿಸಿ, ಬೊಬ್ಬರಿಸುತ್ತವೆ. ಸತೀಶ್‌ ಒಳ್ಳೆಯ ನಟ, ಅವರಿಗೆ ಇಲ್ಲಿ ಬೇರೆಯದ್ದೇ ಇಮೇಜ್‌ ಸಿಗಲಿದೆ. ಉಳಿದಂತೆ ಭಾವನಾ ರಾವ್‌, ರೋಷಣಿ, ಪೂಜಾ ಲೋಕೇಶ್‌, ಲಕ್ಷ್ಮೀದೇವಿ, ಯಮುನಾ ಶ್ರೀನಿಧಿ ಹಾಗು ನಿರ್ಮಾಪಕ ಯೋಗಿ ಇತರರ ಪಾತ್ರಗಳು ಕೂಡ ಗಮನಸೆಳೆಯುತ್ತವೆ. ಒಂದಂತೂ ನಿಜ, ಈ ಚಿತ್ರ ನೋಡಿದವರಿಗೆ, ನಾನು ಇರಬೇಕಿತ್ತು ಅನಿಸೋದಂತೂ ಗ್ಯಾರಂಟಿ’ ಅಂದರು ರವಿ ಶ್ರೀವತ್ಸ.

ಶಿವಮಣಿ ಅವರಿಗೆ ಇಲ್ಲೊಂದು ವಿಶೇಷ ಪಾತ್ರ ಸಿಕ್ಕಿದೆಯಂತೆ. ಇನ್ನು ಮುಂದೆ ಅವರು ನಿರ್ದೇಶನದ ಜತೆಗೆ ನಟನೆ ಮುಂದುವರೆಸಿಕೊಂಡು ಹೋಗುತ್ತಾರಂತೆ. “ಜಟ್ಟ’ ಗಿರಿರಾಜ್‌ ಅವರಿಗಿಲ್ಲಿ ಹೊಸ ಬಗೆಯ ಪಾತ್ರ ಸಿಕ್ಕಿದೆಯಂತೆ.

ಕಮರ್ಷಿಯಲ್‌ ಚಿತ್ರದಲ್ಲಿ ಕೆಲಸ ಮಾಡಿದ ಖುಷಿ ಅವರದು. ಅಯ್ಯಪ್ಪ ಅವರಿಗೆ ಈ ಚಿತ್ರದ ಕಥೆಯಲ್ಲಿರುವ ಕಮರ್ಷಿಯಲ್‌ ಅಂಶ ನೋಡಿ ಎಷ್ಟೊಂದು ಎನರ್ಜಿ ಇರುವಂತಹ ಸಬೆjಕ್ಟ್ ಅನ್ನು ಮಿಸ್‌ ಮಾಡಿಕೊಳ್ಳಬಾರದು ಅಂತ ಅವರೊಂದು ಪಾತ್ರ ಮಾಡಿದ್ದಾರಂತೆ. ಉಳಿದಂತೆ ಪೂಜಾ ಇಲ್ಲಿ ಜಡ್ಜ್ ಆಗಿ ಕಾಣಿಸಿಕೊಂಡರೆ, ಭಾವನಾರಾವ್‌ ಇಲ್ಲಿ ಬೋಲ್ಡ್‌ ಹುಡುಗಿಯ ಪಾತ್ರ ಮಾಡಿದ್ದಾರೆ, ಮೈಸೂರಿನ ಹೊಸ ಹುಡುಗಿ ಪೊಲೀಸ್‌ ಅಧಿಕಾರಿಯಾಗಿ ನಟಿಸಿದ್ದಾರಂತೆ. ಸಾಯಿಕೃಷ್ಣ ಅವರಿಗೆ ನಿರ್ದೇಶಕರು ವಿಲನ್‌ ಪಾತ್ರ ಕೊಟ್ಟಿದ್ದಾರಂತೆ. ಈ ಚಿತ್ರವನ್ನು ಜಾಕ್‌ ಮಂಜು ಅವರು ವಿತರಣೆ ಮಾಡುತ್ತಿದ್ದಾರೆ. ಸುಮಾರು 150ಕ್ಕೂ ಹೆಚ್ಚು ಚಿತ್ರಮಂದಿರಗಳಲ್ಲಿ ತೆರೆಗೆ ತರುವ ಯೋಚನೆ ಅವರದು.

– ವಿಜಯ್‌ ಭರಮಸಾಗರ

ಟಾಪ್ ನ್ಯೂಸ್

24

OTT Release: ವಿಜಯ್‌ ದೇವರಕೊಂಡ ʼಫ್ಯಾಮಿಲಿ ಸ್ಟಾರ್‌ʼ ಓಟಿಟಿ ರಿಲೀಸ್‌ಗೆ ಡೇಟ್‌ ಫಿಕ್ಸ್

90 ದಿನದಲ್ಲಿ ನೇಹಾ ಕುಟುಂಬಕ್ಕೆ ನ್ಯಾಯ ಸಿಗುವ ವಿಶ್ವಾಸವಿದೆ..: ರಣದೀಪ್ ಸಿಂಗ್ ಸುರ್ಜೇವಾಲಾ

90 ದಿನದಲ್ಲಿ ನೇಹಾ ಕುಟುಂಬಕ್ಕೆ ನ್ಯಾಯ ಸಿಗುವ ವಿಶ್ವಾಸವಿದೆ..: ರಣದೀಪ್ ಸಿಂಗ್ ಸುರ್ಜೇವಾಲಾ

23

ಹೂಡಿಕೆದಾರರಿಗೆ ಲಾಭಾಂಶ ನೀಡದ ಆರೋಪ ʼManjummel Boysʼ ನಿರ್ಮಾಪಕರ ವಿರುದ್ದ ದೂರು ದಾಖಲು

LS Polls: ವೇದಿಕೆಯಲ್ಲಿ ಭಾಷಣ ಮಾಡುತ್ತಲೇ ಅಸ್ವಸ್ಥಗೊಂಡ ಕೇಂದ್ರ ಸಚಿವ ನಿತಿನ್ ಗಡ್ಕರಿ

LS Polls: ವೇದಿಕೆಯಲ್ಲಿ ಭಾಷಣ ಮಾಡುತ್ತಲೇ ಅಸ್ವಸ್ಥಗೊಂಡ ಕೇಂದ್ರ ಸಚಿವ ನಿತಿನ್ ಗಡ್ಕರಿ

21

ಹೊಸ ಚಿತ್ರಕ್ಕೆ ಮಹೇಶ್‌ ಬಾಬು ರೆಡಿ: ‘ವೀರ ಮದಕರಿ’ ಬಾಲ ಕಲಾವಿದೆ ಈಗ ನಾಯಕಿ

Lok Sabha Election: ಗೋವಾದ ಎರಡೂ ಕ್ಷೇತ್ರದಲ್ಲಿ 16 ಅಭ್ಯರ್ಥಿಗಳು ಕಣಕ್ಕೆ, ಇಲ್ಲಿದೆ ವಿವರ

Lok Sabha Election: ಗೋವಾದ ಎರಡೂ ಕ್ಷೇತ್ರದಲ್ಲಿ 16 ಅಭ್ಯರ್ಥಿಗಳು ಕಣಕ್ಕೆ, ಇಲ್ಲಿದೆ ವಿವರ

ಮುಂಬರುವ ಚುನಾವಣೆಗೆ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ: ಎಂ. ವೈ. ಪಾಟೀಲ್

ಮುಂಬರುವ ಚುನಾವಣೆಗೆ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ: ಎಂ. ವೈ. ಪಾಟೀಲ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Sandalwood; ‘ಫಾರೆಸ್ಟ್‌’ನಲ್ಲಿ ಚಿಕ್ಕಣ್ಣ & ಟೀಂ

Sandalwood; ‘ಫಾರೆಸ್ಟ್‌’ನಲ್ಲಿ ಚಿಕ್ಕಣ್ಣ & ಟೀಂ

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

Shivanna in lawyer look in Bhairathi Ranagal

Bhairathi Ranagal ಲಾಯರ್ ಶಿವಣ್ಣ; ಕುತೂಹಲ ಹೆಚ್ಚಿಸಿದ ಲುಕ್

Koti

Koti; ಡಾಲಿ ಕಣ್ಣಲ್ಲಿ ಕೋಟಿ ಕನಸು; ಪರಮ್‌ ನಿರ್ದೇಶನದ ಸಿನಿಮಾ

Ritanya Vijay; ದುನಿಯಾ ವಿಜಯ್‌ ಮಗಳು ರಿತನ್ಯಾ ಗ್ರ್ಯಾಂಡ್ ಎಂಟ್ರಿ

Ritanya Vijay; ದುನಿಯಾ ವಿಜಯ್‌ ಮಗಳು ರಿತನ್ಯಾ ಗ್ರ್ಯಾಂಡ್ ಎಂಟ್ರಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

24

OTT Release: ವಿಜಯ್‌ ದೇವರಕೊಂಡ ʼಫ್ಯಾಮಿಲಿ ಸ್ಟಾರ್‌ʼ ಓಟಿಟಿ ರಿಲೀಸ್‌ಗೆ ಡೇಟ್‌ ಫಿಕ್ಸ್

Theft ಶಿರೂರು: ಜ್ಯುವೆಲ್ಲರಿ ಅಂಗಡಿ ಶಟರ್‌ ಮುರಿದು ಕಳ್ಳತನ

Theft ಶಿರೂರು: ಜ್ಯುವೆಲ್ಲರಿ ಅಂಗಡಿ ಶಟರ್‌ ಮುರಿದು ಕಳ್ಳತನ

90 ದಿನದಲ್ಲಿ ನೇಹಾ ಕುಟುಂಬಕ್ಕೆ ನ್ಯಾಯ ಸಿಗುವ ವಿಶ್ವಾಸವಿದೆ..: ರಣದೀಪ್ ಸಿಂಗ್ ಸುರ್ಜೇವಾಲಾ

90 ದಿನದಲ್ಲಿ ನೇಹಾ ಕುಟುಂಬಕ್ಕೆ ನ್ಯಾಯ ಸಿಗುವ ವಿಶ್ವಾಸವಿದೆ..: ರಣದೀಪ್ ಸಿಂಗ್ ಸುರ್ಜೇವಾಲಾ

ನಮ್ಮ ಆರಾಧನ ಪದ್ಧತಿ ಯುವ ಪೀಳಿಗೆಗೆ ಪರಿಚಯಿಸುವ ಅಗತ್ಯವಿದೆ: ರಾಕೇಶ್‌ ಶೆಟ್ಟಿ ಬೆಳ್ಳಾರೆ

ನಮ್ಮ ಆರಾಧನ ಪದ್ಧತಿ ಯುವ ಪೀಳಿಗೆಗೆ ಪರಿಚಯಿಸುವ ಅಗತ್ಯವಿದೆ: ರಾಕೇಶ್‌ ಶೆಟ್ಟಿ ಬೆಳ್ಳಾರೆ

20-shirva-1

ಮೂಡುಬೆಳ್ಳೆ ಶ್ರೀಮಹಾಲಿಂಗೇಶ್ವರ, ಶ್ರೀ ಮಹಾಗಣಪತಿ, ಶ್ರೀ ಸೂರ್ಯನಾರಾಯಣ ದೇಗುಲ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.