ಬರವಣಿಗೆಯಲ್ಲಿ ಗೆದ್ದರೆ ಬಾಳು ಬೆಳಗುತ್ತೆ!


Team Udayavani, Mar 30, 2017, 11:43 PM IST

HandWritting-30-3.jpg

ಬರವಣಿಗೆ ಒಂದು ಕಲೆ. ಕಾದಂಬರಿ, ಕತೆ, ಲೇಖನ, ದಿನಚರಿ ಹಾಗೂ ಇತ್ತೀಚಿನ ದಿನಗಳಲ್ಲಿ ಎಲೆಕ್ಟ್ರಾನಿಕ್‌ ಕ್ಷೇತ್ರದಲ್ಲಿನ ಬೆಳವಣಿಗೆಯಿಂದ ಹೆಚ್ಚು ಜನಪ್ರಿಯವಾಗಿರುವ ಬ್ಲಾಗಿಂಗ್‌, ವೆಬ್‌ ಲೇಖನ ಇತ್ಯಾದಿಗಳ ಶೈಲಿ ಬೇರೆಬೇರೆಯಾಗಿರುತ್ತದೆ.

ಒಬ್ಬ ವ್ಯಕ್ತಿಯ ವ್ಯಕ್ತಿತ್ವ ಬೆಳವಣಿಗೆಯಲ್ಲಿ ಬರವಣಿಗೆಯು ಬಹಳ ಮುಖ್ಯ ಪಾತ್ರವನ್ನು ವಹಿಸುತ್ತದೆ. ಓದುವುದರ ಜತೆ ಜತೆಗೆ ಜ್ಞಾನಾಭಿವೃದ್ಧಿಗೆ ಬರವಣಿಗೆ ಬಹಳ ಮಹತ್ವವನ್ನು ಪಡೆಯುತ್ತದೆ. ಕೇವಲ ಓದುವುದರಿಂದ ಜ್ಞಾನ ಹೆಚ್ಚಾಗುವುದಿಲ್ಲ. ಬದಲಿಗೆ, ಓದಿದ್ದನ್ನು ನಮ್ಮ ಸ್ವಂತ ಪದಗಳಲ್ಲಿ ಅಭಿವ್ಯಕ್ತಗೊಳಿಸುವುದರಿಂದ ಮಾತ್ರ ಆಳವಾಗಿ ಮನನ ಮಾಡಿಕೊಳ್ಳಲು ಸಾಧ್ಯವಾಗುತ್ತದೆ.

ಶಾಲಾ ಮತ್ತು ಕಾಲೇಜು ದಿನಗಳಲ್ಲಿ ನಾವು ಹಲವಾರು ಪರೀಕ್ಷೆಗಳನ್ನು ಎದುರಿಸಿರುತ್ತೇವೆ. ಈ ಪರೀಕ್ಷೆಗಳಲ್ಲಿ ಒಂದರೆಡು ವಾಕ್ಯಗಳಿಂದ ಹಿಡಿದು ಪ್ರಬಂಧ ಮಾದರಿಯ ವಿಸ್ತೃತ ಉತ್ತರಗಳನ್ನು ಬರೆಯಲು ಕೇಳುವುದು ಸಾಮಾನ್ಯ. ಇದಕ್ಕಾಗಿ ಸಾಕಷ್ಟು ಅಭ್ಯಾಸ ಮಾಡಿಕೊಳ್ಳುವುದು ಅನಿವಾರ್ಯ. ಆದರೆ ಶಾಲಾ- ಕಾಲೇಜುಗಳಲ್ಲಿ ಬರೆಯುವ ಉತ್ತರಗಳಿಗೂ ಮತ್ತು ಸ್ಪರ್ಧಾತ್ಮಕ ಪರೀಕ್ಷೆಗಳಲ್ಲಿ ಬರೆಯುವ ಉತ್ತರಗಳಿಗೂ ಸಾಕಷ್ಟು ವ್ಯತ್ಯಾಸವಿರುತ್ತದೆ. ಸ್ಪರ್ಧಾತ್ಮಕ ಪರೀಕ್ಷೆಯಲ್ಲಿ ವಿಷಯ ಒಂದೇ ಆಗಿದ್ದರೂ ಬರವಣಿಗೆಯ ಶೈಲಿ ಭಿನ್ನವಾಗಿರುತ್ತದೆ. 

ಸ್ಪರ್ಧಾತ್ಮಕ ಪರೀಕ್ಷೆಗಳಲ್ಲಿ ಬರವಣಿಗೆ ಕೌಶಲ
ನಾಗರಿಕ ಸೇವಾ ಪರೀಕ್ಷೆ, ಗಜೆಟೆಡ್‌ ಪ್ರೊಬೆಷನರಿ ಪರೀಕ್ಷೆ, ಫಾರೆಸ್ಟ್ ಸರ್ವಿಸ್‌ ಇತ್ಯಾದಿ ಪರೀಕ್ಷೆಗಳ ಮುಖ್ಯ ಪತ್ರಿಕೆಗಳಲ್ಲಿ ವಿಸ್ತೃತ ರೂಪದ ಪ್ರಶ್ನೆಗಳನ್ನು ಕೇಳಲಾಗಿರುತ್ತದೆ. ಈ ಪ್ರಶ್ನೆಗಳಿಗೆ ಉತ್ತರಗಳನ್ನು 50 ಪದಗಳಿಂದ ಹಿಡಿದು 250 ಪದಗಳಿಗೆ ಮೀರದಂತೆ ಬರೆಯಬೇಕಾಗುತ್ತದೆ. ಪ್ರಬಂಧ ಪತ್ರಿಕೆಯನ್ನು ಸುಮಾರು 2500- 3000 ಪದಗಳಿಗೆ ಮೀರದಂತೆ ಬರೆಯಲು ಕೇಳುವುದು ಸಹಜ. ಬರವಣಿಗೆ ಕೌಶಲ, ಸ್ಪರ್ಧಾತ್ಮಕ ಪರೀಕ್ಷೆಗಳ ಸಫ‌ಲತೆಯಲ್ಲಿ ನಿರ್ಣಾಯಕ ಪಾತ್ರವನ್ನು ವಹಿಸುತ್ತದೆ. 

ಎಷ್ಟೋ ಬಾರಿ ಪರೀಕ್ಷೆ ಬರೆದ ಅಭ್ಯರ್ಥಿಗಳು, ನಾನು ಎಲ್ಲ ಪ್ರಶ್ನೆಗಳಿಗೆ ಉತ್ತರಿಸಿದ್ದೆ. ಆದರೆ ಅಂಕಗಳೇ ಸಿಕ್ಕಿಲ್ಲ ಎಂದು ಕೊರಗುವುದನ್ನು ನಾವು ಕಂಡಿರುತ್ತೇವೆ. ಪರೀಕ್ಷಾ ವ್ಯವಸ್ಥೆಯನ್ನು ದೂಷಿಸುವುದಕ್ಕೂ ಮುಂಚಿತವಾಗಿ ಒಮ್ಮೆ ಆತ್ಮಾವಲೋಕನ ಮಾಡಿಕೊಳ್ಳಬೇಕು. ನಿಜವಾಗಿಯೂ ತಾನು ಪ್ರಶ್ನೆಯ ನಿರೀಕ್ಷೆಯಂತೆ ಉತ್ತರಗಳನ್ನು ಬರೆದಿದ್ದೇನೆಯೇ, ಇಲ್ಲವೆ? ಎಂಬುದನ್ನು ಕಂಡುಕೊಂಡು, ಮುಂದಿನ ಪರೀಕ್ಷೆಯಲ್ಲಿ ತಪ್ಪುಗಳು ಮರುಕಳಿಸದಂತೆ, ಯೋಚನೆ ಮಾಡಿ ಉತ್ತರಗಳನ್ನು ಬರೆಯಬೇಕು.

ಕೀ- ಪದಗಳ ಮೇಲೆ ಗಮನರಲಿ
ಪ್ರತಿಯೊಂದು ಸ್ಪರ್ಧಾತ್ಮಕ ಪರೀಕ್ಷೆಯು ನಿರ್ದಿಷ್ಟವಾದ ಕೀ- ಪದವನ್ನು ಹೊಂದಿರುತ್ತದೆ. ಅಭ್ಯರ್ಥಿಗಳು ಈ ಕೀ- ಪದಗಳನ್ನು ಗಮನಿಸಿ ಅನಂತರ ಉತ್ತರಗಳನ್ನು ಬರೆಯಬೇಕು. ಉತ್ತಮ ಬರವಣಿಗೆ ಶೈಲಿಗಾಗಿ ಮುಖ್ಯವಾಗಿ ಎರಡು ಅಂಶಗಳನ್ನು ಗಮನದಲ್ಲಿಟ್ಟುಕೊಳ್ಳಬೇಕು. ಪ್ರಶ್ನೆಯನ್ನು ಸರಿಯಾಗಿ ಓದಿಕೊಂಡು ಅರ್ಥ ಮಾಡಿಕೊಳ್ಳುವುದು ಹಾಗೂ ಕೇಳಿರುವ ಪದಗಳ ಮಿತಿಯನ್ನು ಮೀರದಂತೆ, ಕೀ- ಪದಗಳನ್ನು ಆಧಾರವಾಗಿಟ್ಟುಕೊಂಡು ಉತ್ತರಗಳನ್ನು ಬರೆಯುವುದು. ಸತತ ಅಭ್ಯಾಸದಿಂದ ಮಾತ್ರ ಬರವಣಿಗೆಯನ್ನು ಉತ್ತಮಪಡಿಸಿಕೊಳ್ಳಲು ಸಾಧ್ಯ. ಸ್ಪರ್ಧೆ ವರ್ಷದಿಂದ ವರ್ಷಕ್ಕೆ ಹೆಚ್ಚುತ್ತಲೇ ಇದೆ. ಸತತ ಪ್ರರಿಶ್ರಮ ಹಾಗೂ ಪ್ರಯತ್ನದಿಂದ ಮಾತ್ರ ಯಶಸ್ಸನ್ನು ಕಾಣಲು ಸಾಧ್ಯ. 

– ಪ್ರಶಾಂತ್‌. ಎಸ್‌.

ಟಾಪ್ ನ್ಯೂಸ್

1-weqwewqe

Davangere: 10 ರೂ.ಗಳ ನಾಣ್ಯ ರೂಪದಲ್ಲಿ 25 ಸಾವಿರ ರೂ. ಠೇವಣಿ ಕಟ್ಟಿದ ಅಭ್ಯರ್ಥಿ!

Exam

CET ಸುಗಮವಾಗಿ ನಡೆದಿದೆ: ಆಕ್ಷೇಪಣೆ ಸಲ್ಲಿಕೆಗೆ ಏ.27ರವರೆಗೆ ಅವಕಾಶ

1-wwqwqe

BJP ಶ್ರೀರಾಮುಲು, ಗಾಯತ್ರಿ ಸಿದ್ದೇಶ್ವರ್ ಈಗಾಗಲೇ ಗೆದ್ದಿದ್ದಾರೆ: ಜನಾರ್ದನ ರೆಡ್ಡಿ

Outrage over mistakes in CET exam question paper; Request for mercy marks

CET ಪರೀಕ್ಷೆ ಪ್ರಶ್ನೆಪತ್ರಿಕೆಯಲ್ಲಿ ಲೋಪಕ್ಕೆ ಆಕ್ರೋಶ; ಕೃಪಾಂಕಕ್ಕೆ ಆಗ್ರಹ

1-qweeweq

Viral video; ಯಾರಿವರು ಇಶಾ ಅರೋರಾ? ಮತದಾನದ ದಿನ ಭಾರಿ ಸುದ್ದಿ

New Jersey: ಸ್ಥಳೀಯ ಶಾಪ್‌ ನಲ್ಲಿ ಕಳ್ಳತನ- ಇಬ್ಬರು ಭಾರತೀಯ ವಿದ್ಯಾರ್ಥಿನಿಯರ ಬಂಧನ

New Jersey: ಸ್ಥಳೀಯ ಶಾಪ್‌ ನಲ್ಲಿ ಕಳ್ಳತನ- ಇಬ್ಬರು ಭಾರತೀಯ ವಿದ್ಯಾರ್ಥಿನಿಯರ ಬಂಧನ

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ದಕ್ಷ ಬೋಧಕ ವರ್ಗ ಕೋರ್ಸ್‌ಗಳು ವಿಶಿಷ್ಟ  , ಸರಳ

ದಕ್ಷ ಬೋಧಕ ವರ್ಗ ಕೋರ್ಸ್‌ಗಳು ವಿಶಿಷ್ಟ  , ಸರಳ

vydyakeeya

ವೈದ್ಯಕೀಯ ವ್ಯಾಸಂಗಕ್ಕೆ ಫ್ಲೆಕ್ಸಿಬಲ್‌ ಟಚ್‌

ಸಾರ್ವಜನಿಕ ಆಡಳಿತ ಆಸಕ್ತಿಯಿದ್ದರೆ ಅವಕಾಶಗಳು ಹಲವು

ಸಾರ್ವಜನಿಕ ಆಡಳಿತ ಆಸಕ್ತಿಯಿದ್ದರೆ ಅವಕಾಶಗಳು ಹಲವು

stand-up-comedy

ಆಧುನಿಕರ ಆಕರ್ಷಣೆ ಸ್ಟ್ಯಾಂಡಪ್‌ ಕಾಮಿಡಿ!

novel

ಕೃಷಿ ಬದುಕಿನ ಸೂಕ್ಷ್ಮ ನೋಟ ನೀಡುವ ಅಗೆದೆಷ್ಟೂ ನಕ್ಷತ್ರ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

1-weqwewqe

Davangere: 10 ರೂ.ಗಳ ನಾಣ್ಯ ರೂಪದಲ್ಲಿ 25 ಸಾವಿರ ರೂ. ಠೇವಣಿ ಕಟ್ಟಿದ ಅಭ್ಯರ್ಥಿ!

Minchu

Bidar; ಬಿರುಗಾಳಿ‌ ಸಹಿತ ಭಾರಿ ಮಳೆ :ಸಿಡಿಲು ಬಡಿದು‌ ರೈತ ಸಾವು

1-wewqewqe

Kalaburgi: ಮಹಿಳೆಯ ಬಾತ್ ರೂಮ್ ವಿಡಿಯೋ ರೆಕಾರ್ಡ್ ಮಾಡಿದ ಸೆಕ್ಯೂರಿಟಿ ಗಾರ್ಡ್

Exam

CET ಸುಗಮವಾಗಿ ನಡೆದಿದೆ: ಆಕ್ಷೇಪಣೆ ಸಲ್ಲಿಕೆಗೆ ಏ.27ರವರೆಗೆ ಅವಕಾಶ

1-qweqwewq

Congress;ಕಾರ್ಕಳ ಕ್ಷೇತ್ರದಿಂದ 40 ಸಾವಿರ ಲೀಡ್ ಗೆ ಪ್ರಯತ್ನ: ಮುನಿಯಾಲು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.