ಕಲಿಕೆಯ ಜತೆಗಿರಲಿ ಸಹಪಠ್ಯ ಚಟುವಟಿಕೆ


Team Udayavani, Feb 17, 2017, 4:46 PM IST

Other-17-2.jpg

ಈ ವರ್ಷ ಮಗಳನ್ನು ಡ್ಯಾನ್ಸ್ ಕ್ಲಾಸ್‌ಗೆ ಕಳಿಸುವುದಿಲ್ಲ. ಅವಳು ಹತ್ತನೇ ತರಗತಿಯಲ್ಲಿ ಇದ್ದಾಳಲ್ವ? ಇತ್ತೀಚೆಗೆ ನನ್ನ ಗೆಳತಿಯೊಬ್ಬಳು ಈ ರೀತಿ ಹೇಳಿದಾಗ ನನಗೆ ಆಶ್ಚರ್ಯವೇನೂ ಆಗಲಿಲ್ಲ. ಹತ್ತನೇ ತರಗತಿಯಲ್ಲಿ ಓದುತ್ತಿರುವ ಕಾರಣ ತಾನು ಈ ವರ್ಷ ಯಾವುದೇ ಸಹಪಠ್ಯ ಚಟುವಟಿಕೆಗಳಲ್ಲಿ ಭಾಗವಹಿಸುವುದಿಲ್ಲವೆಂದು ನನ್ನ ವಿದ್ಯಾರ್ಥಿನಿಯೊಬ್ಬಳು ಹೇಳಿದ್ದು ನೆನಪಾಯ್ತು.

ಬಹುತೇಕ ಜನರ ನಂಬಿಕೆ ಇದು. ಉತ್ತಮ ಫ‌ಲಿತಾಂಶ ಲಭಿಸಬೇಕಾದರೆ ಸಹಪಠ್ಯ ಚಟುವಟಿಕೆಗಳಿಂದ ದೂರವಿದ್ದು ಕಲಿಕೆಯಲ್ಲಿ ಮುಳುಗಬೇಕು. ಸಹಪಠ್ಯ ಚಟುವಟಿಕೆಗಳಿಂದ ಸುಮ್ಮನೆ ಸಮಯ ಹಾಳು. ಅದಕ್ಕೆ ವಿನಿಯೋಗಿಸುವ ಸಮಯದಲ್ಲಿ ಪಠ್ಯ ವಿಷಯಗಳನ್ನು ಇನ್ನಷ್ಟು ಚೆನ್ನಾಗಿ ಕಲಿಯಬಹುದು. ಸಹಪಠ್ಯ ಚಟುವಟಿಕೆಗಳನ್ನು ಕಲಿಯುವ ಮಗುವಿನ ಗಮನ ವಿಕೇಂದ್ರೀಕರಣಗೊಳ್ಳುವಂತೆ ಮಾಡುತ್ತದೆ. ದ್ವಿತೀಯ ಪಿ.ಯು.ಸಿ., ಎಸೆಸೆಲ್ಸಿ ಇತ್ಯಾದಿ ನಿರ್ಣಾಯಕ ಹಂತದಲ್ಲಿರುವ ವಿದ್ಯಾರ್ಥಿಗಳಿಗೆ ಸಹಪಠ್ಯ ಚಟುವಟಿಕೆಗಳು ಬೇಕಿಲ್ಲ. ಹಿಂದೆ ಪಠ್ಯೇತರ ಚಟುವಟಿಕೆಗಳು ಎಂದು ಕರೆದು ಕಡಿಮೆ ಪ್ರಾಧಾನ್ಯ ಕೊಟ್ಟಿದ್ದ ಕಲೆ, ಸಾಹಿತ್ಯ, ಕ್ರೀಡೆ ಇತ್ಯಾದಿಗಳನ್ನು ಸಹಪಠ್ಯ ಚಟುವಟಿಕೆಗಳೆಂದು ಶಿಕ್ಷಣ ಇಲಾಖೆ ಕರೆದುದರ ಉದ್ದೇಶವೇ ಅನೇಕರಿಗೆ ಗೊತ್ತಿಲ್ಲ. ಮಗುವಿನ ಸರ್ವತೋಮುಖ ಬೆಳವಣಿಗೆ ಶಿಕ್ಷಣದ ಗುರಿ. ಆ ಗುರಿ ಸಾಧನೆಗೆ ಸಹಪಠ್ಯ ಚಟುವಟಿಕೆಗಳು ಅತ್ಯಗತ್ಯ. 

ವಿದ್ಯಾರ್ಥಿಯಲ್ಲಿರುವ ಪ್ರತಿಭೆಗಳಿಗೆ, ವಿಶೇಷ ಸಾಮರ್ಥ್ಯಗಳಿಗೆ ಮನ್ನಣೆ ಸಿಕ್ಕಿದಾಗ, ಅವು ಗುರುತಿಸಲ್ಪಟ್ಟಾಗ  ಅವನ ಆತ್ಮವಿಶ್ವಾಸ ಹೆಚ್ಚುತ್ತದೆ. ಮನಸ್ಸು ಉಲ್ಲಾಸಭರಿತವಾಗುತ್ತದೆ. ಇದರಿಂದ ಕಲಿಕೆಯ ಮೇಲೆ ಸಕಾರಾತ್ಮಕ ಪರಿಣಾಮ ಉಂಟಾಗುತ್ತದೆ. ಇದು ಕಲಿಕೆಯ ಏಕತಾನತೆಯಿಂದ ಹೊರಬರಲು ಸಹಾಯ ಮಾಡುತ್ತದೆ. ನಿರಂತರ ಕಲಿಕೆಯಿಂದ ಅವನಲ್ಲಾದ ಮಾನಸಿಕ ಆಯಾಸವನ್ನು ನಿವಾರಿಸಲು ಇಂತಹ ಚಟುವಟಿಕೆಗಳಿಗಷ್ಟೇ  ಸಾಧ್ಯ. ಮಕ್ಕಳನ್ನು ಎಲ್ಲ ಚಟುವಟಿಕೆಗಳಿಂದ ದೂರವಿಟ್ಟು ಕೇವಲ ಓದಿನಲ್ಲೇ ಮುಳುಗುವಂತೆ ಮಾಡಿದ ತತ್‌ಕ್ಷಣ ಅವರು ರ್‍ಯಾಂಕ್‌ ಪಡೆಯುತ್ತಾರೆ ಎಂದು ಭಾವಿಸುವುದು ಹೆತ್ತವರ ಮೂರ್ಖತನ. ಮಕ್ಕಳಲ್ಲಿ ಕಲಿಕೆಯ ಒತ್ತಡ ಹೆಚ್ಚಾದಾಗ, ಆತಂಕ, ಒತ್ತಡ, ಖನ್ನತೆ, ಮಾನಸಿಕ ಸಮಸ್ಯೆಗಳು ತಲೆದೋರಬಹುದು. ಸಹಪಠ್ಯ ಚಟುವಟಿಕೆಗಳು ಒತ್ತಡ ನಿವಾರಕವಾಗಿ ಕೆಲಸ ಮಾಡುತ್ತವೆ. ವಿದ್ಯಾರ್ಥಿಗಳ ಮಾನಸಿಕ ಆರೋಗ್ಯವನ್ನು ಸುಸ್ಥಿತಿಯಲ್ಲಿಡಲು  ಸಹಪಠ್ಯ ಚಟುವಟಿಕೆಗಳು ಅನಿವಾರ್ಯ. 

ಆದುದರಿಂದ ಹೆತ್ತವರು ತಮ್ಮ ಮಕ್ಕಳು ದಿನವಿಡೀ ಉಳಿದೆಲ್ಲ ಚಟುವಟಿಕೆಗಳಿಂದ ದೂರವಿದ್ದು ಓದಿನಲ್ಲೇ ಮುಳುಗಬೇಕು ಎಂಬ ಹಟದಿಂದ ಹೊರಬನ್ನಿ. ನಿಮ್ಮ ಮಗು ಸ್ವಲ್ಪ ಹೊತ್ತು ಮಾನಸಿಕವಾಗಿ ಸ್ವತಂತ್ರವಾಗಿರಲು, ಅವನಿಗಿಷ್ಟವಾದ ಒಂದು ಚಟುವಟಿಕೆಯಲ್ಲಿ ತೊಡಗಿಕೊಳ್ಳಲು ದಿನದಲ್ಲಿ ಸ್ವಲ್ಪ ಸಮಯ ನೀಡಿ. ಇದರಿಂದ ಅವರ ಕಲಿಕೆಯ ಸಮಯ ನಷ್ಟವಾಗುವುದಿಲ್ಲ. ಬದಲಿಗೆ ಹೊಸ ಹುರುಪಿನಿಂದ ಕಲಿಕೆಯಲ್ಲಿ ತೊಡಗಿಕೊಂಡು ಉತ್ತಮ ಅಂಕ ಗಳಿಸಲು ಸಾಧ್ಯವಾಗುತ್ತದೆ. ಉತ್ತಮ ಅಂಕ ಗಳಿಸಿದ ಮಾತ್ರಕ್ಕೆ ಬದುಕು ಯಶಸ್ವಿಯಾಗಬೇಕಿಲ್ಲ. ಬದುಕಿನ ಕೌಶಲಗಳನ್ನು ಕಲಿಯಲು, ಸಾಮಾಜಿಕವಾಗಿ ಹೊಂದಾಣಿಕೆಯಿಂದ ಬದುಕಲು, ಬಾಲ್ಯ ,ಯೌವನಗಳನ್ನು ಸ್ವಲ್ಪಮಟ್ಟಿಗಾದರೂ  ಸಕಾರಾತ್ಮಕವಾಗಿ ಆಸ್ವಾದಿಸಲು ಅವರು ಸಹಪಠ್ಯ ಚಟುವಟಿಕೆಗಳಲ್ಲಿ ಭಾಗವಹಿಸಲಿ.

– ಜೆಸ್ಸಿ. ಪಿ. ವಿ., ಕೆಯ್ಯೂರು, ಪುತ್ತೂರು

ಟಾಪ್ ನ್ಯೂಸ್

Olympic Games Paris 2024; ಬೆಳಗಿತು ಪ್ಯಾರಿಸ್‌ ಒಲಿಂಪಿಕ್‌ ಜ್ಯೋತಿ

Olympic Games Paris 2024; ಬೆಳಗಿತು ಪ್ಯಾರಿಸ್‌ ಒಲಿಂಪಿಕ್‌ ಜ್ಯೋತಿ

UPSC Exam: 30ಕ್ಕಿಂತ ಅಧಿಕ ಕನ್ನಡಿಗರ ಆಯ್ಕೆ

UPSC Exam: 30ಕ್ಕಿಂತ ಅಧಿಕ ಕನ್ನಡಿಗರ ಆಯ್ಕೆ

ಶ್ರೀ ಕ್ಷೇತ್ರ ಗೆಜ್ಜೆಗಿರಿ ಮೇಳದಿಂದ ವಿದೇಶದಲ್ಲಿ ಯಕ್ಷಗಾನ ಪ್ರದರ್ಶನ

ಶ್ರೀ ಕ್ಷೇತ್ರ ಗೆಜ್ಜೆಗಿರಿ ಮೇಳದಿಂದ ವಿದೇಶದಲ್ಲಿ ಯಕ್ಷಗಾನ ಪ್ರದರ್ಶನ

ನಾರಾಯಣ ಗುರುಗಳ ಪ್ರತಿಮೆ ಜಗತ್ತು ನೋಡುವಂತೆ ಮಾಡಿದ ಪ್ರಧಾನಿ ಮೋದಿ: ಸತೀಶ್‌ ಕುಂಪಲ

ನಾರಾಯಣ ಗುರುಗಳ ಪ್ರತಿಮೆ ಜಗತ್ತು ನೋಡುವಂತೆ ಮಾಡಿದ ಪ್ರಧಾನಿ ಮೋದಿ: ಸತೀಶ್‌ ಕುಂಪಲ

Congress; ಕ್ಷೇತ್ರದ ಅಭಿವೃದ್ಧಿಗಾಗಿ ಪ್ರತ್ಯೇಕ ಪ್ರಣಾಳಿಕೆ: ಜಯಪ್ರಕಾಶ್‌ ಹೆಗ್ಡೆ

Congress; ಕ್ಷೇತ್ರದ ಅಭಿವೃದ್ಧಿಗಾಗಿ ಪ್ರತ್ಯೇಕ ಪ್ರಣಾಳಿಕೆ: ಜಯಪ್ರಕಾಶ್‌ ಹೆಗ್ಡೆ

banPuttur ಚುನಾವಣೆ ಕರ್ತವ್ಯ ನಿರತ ಅಂಗನವಾಡಿ ಕಾರ್ಯಕರ್ತೆಗೆ ಹಲ್ಲೆ

Puttur ಚುನಾವಣೆ ಕರ್ತವ್ಯ ನಿರತ ಅಂಗನವಾಡಿ ಕಾರ್ಯಕರ್ತೆಗೆ ಹಲ್ಲೆ

Kota ಮತದಾನ ಮಾಡಿ ಕೊನೆಯುಸಿರೆಳೆದ ಅಜ್ಜಿ!

Kota ಮತದಾನ ಮಾಡಿ ಕೊನೆಯುಸಿರೆಳೆದ ಅಜ್ಜಿ!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ದಕ್ಷ ಬೋಧಕ ವರ್ಗ ಕೋರ್ಸ್‌ಗಳು ವಿಶಿಷ್ಟ  , ಸರಳ

ದಕ್ಷ ಬೋಧಕ ವರ್ಗ ಕೋರ್ಸ್‌ಗಳು ವಿಶಿಷ್ಟ  , ಸರಳ

vydyakeeya

ವೈದ್ಯಕೀಯ ವ್ಯಾಸಂಗಕ್ಕೆ ಫ್ಲೆಕ್ಸಿಬಲ್‌ ಟಚ್‌

ಸಾರ್ವಜನಿಕ ಆಡಳಿತ ಆಸಕ್ತಿಯಿದ್ದರೆ ಅವಕಾಶಗಳು ಹಲವು

ಸಾರ್ವಜನಿಕ ಆಡಳಿತ ಆಸಕ್ತಿಯಿದ್ದರೆ ಅವಕಾಶಗಳು ಹಲವು

stand-up-comedy

ಆಧುನಿಕರ ಆಕರ್ಷಣೆ ಸ್ಟ್ಯಾಂಡಪ್‌ ಕಾಮಿಡಿ!

novel

ಕೃಷಿ ಬದುಕಿನ ಸೂಕ್ಷ್ಮ ನೋಟ ನೀಡುವ ಅಗೆದೆಷ್ಟೂ ನಕ್ಷತ್ರ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Olympic Games Paris 2024; ಬೆಳಗಿತು ಪ್ಯಾರಿಸ್‌ ಒಲಿಂಪಿಕ್‌ ಜ್ಯೋತಿ

Olympic Games Paris 2024; ಬೆಳಗಿತು ಪ್ಯಾರಿಸ್‌ ಒಲಿಂಪಿಕ್‌ ಜ್ಯೋತಿ

UPSC Exam: 30ಕ್ಕಿಂತ ಅಧಿಕ ಕನ್ನಡಿಗರ ಆಯ್ಕೆ

UPSC Exam: 30ಕ್ಕಿಂತ ಅಧಿಕ ಕನ್ನಡಿಗರ ಆಯ್ಕೆ

ಶ್ರೀ ಕ್ಷೇತ್ರ ಗೆಜ್ಜೆಗಿರಿ ಮೇಳದಿಂದ ವಿದೇಶದಲ್ಲಿ ಯಕ್ಷಗಾನ ಪ್ರದರ್ಶನ

ಶ್ರೀ ಕ್ಷೇತ್ರ ಗೆಜ್ಜೆಗಿರಿ ಮೇಳದಿಂದ ವಿದೇಶದಲ್ಲಿ ಯಕ್ಷಗಾನ ಪ್ರದರ್ಶನ

ನಾರಾಯಣ ಗುರುಗಳ ಪ್ರತಿಮೆ ಜಗತ್ತು ನೋಡುವಂತೆ ಮಾಡಿದ ಪ್ರಧಾನಿ ಮೋದಿ: ಸತೀಶ್‌ ಕುಂಪಲ

ನಾರಾಯಣ ಗುರುಗಳ ಪ್ರತಿಮೆ ಜಗತ್ತು ನೋಡುವಂತೆ ಮಾಡಿದ ಪ್ರಧಾನಿ ಮೋದಿ: ಸತೀಶ್‌ ಕುಂಪಲ

Congress; ಕ್ಷೇತ್ರದ ಅಭಿವೃದ್ಧಿಗಾಗಿ ಪ್ರತ್ಯೇಕ ಪ್ರಣಾಳಿಕೆ: ಜಯಪ್ರಕಾಶ್‌ ಹೆಗ್ಡೆ

Congress; ಕ್ಷೇತ್ರದ ಅಭಿವೃದ್ಧಿಗಾಗಿ ಪ್ರತ್ಯೇಕ ಪ್ರಣಾಳಿಕೆ: ಜಯಪ್ರಕಾಶ್‌ ಹೆಗ್ಡೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.