ನಾಳೆಯಿಂದ ಎಸ್ಸೆಸ್ಸೆಲ್ಸಿ ಪರೀಕ್ಷೆ; ಕೇಂದ್ರಗಳಲ್ಲಿ ಬಿಗಿ ಬಂದೋಬಸ್ತ್


Team Udayavani, Mar 29, 2017, 2:17 AM IST

SSLC-30th.jpg

ಬೆಂಗಳೂರು: ಎಸೆಸೆಲ್ಸಿ ಪರೀಕ್ಷೆ ಮಾ. 30ರಿಂದ ಆರಂಭಗೊಳ್ಳಲಿದ್ದು, ವಿದ್ಯಾರ್ಥಿಗಳು ಬೆಳಗ್ಗೆ 9.15ರಿಂದ 9.30ರ ಸಮಯದೊಳಗೆ ಪರೀಕ್ಷಾ ಕೊಠಡಿಗೆ ಹಾಜರಾಗಲು ಸಮಯ ನಿಗದಿಪಡಿಸಲಾಗಿದೆ. 15 ನಿಮಿಷಗಳ ವಿನಾಯಿತಿ ನೀಡಲಾಗಿದ್ದು 9.45ರವರೆಗೆ ಪರೀಕ್ಷಾ ಕೊಠಡಿ ಪ್ರವೇಶಕ್ಕೆ ಅನುಮತಿ ಇರಲಿದೆ. ಈ ಹಿಂದೆ ಬೆಳಗ್ಗೆ 9.30ಕ್ಕೆ ಪರೀಕ್ಷೆ ಪ್ರಾರಂಭವಾದ ಅನಂತರ ತಡವಾಗಿ ಬರುವ ಅಭ್ಯರ್ಥಿಗಳಿಗೆ ಪರೀಕ್ಷಾ ಕೊಠಡಿಯ ಪ್ರವೇಶವನ್ನು ನಿಷೇಧಿಸಿ ಆದೇಶಿಸಲಾಗಿತ್ತು. ಆದರೆ, ವಿದ್ಯಾರ್ಥಿಗಳ ಹಿತದೃಷ್ಟಿಯಿಂದ 15 ನಿಮಿಷ ವಿನಾಯಿತಿ ನೀಡಲಾಗಿದೆ.

ಮಂಗಳವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಪ್ರೌಢಶಿಕ್ಷಣ ಪರೀಕ್ಷಾ ಮಂಡಳಿ ಆಯುಕ್ತೆ ಸೌಜನ್ಯಾ, ರಾಜ್ಯಾದ್ಯಂತ ಒಟ್ಟು 8,77,174 ವಿದ್ಯಾರ್ಥಿಗಳು ಈ ಬಾರಿ ಪರೀಕ್ಷೆಗೆ ಹಾಜರಾಗಲಿದ್ದಾರೆ. ರಾಜ್ಯದ 2,770 ಕೇಂದ್ರಗಳಲ್ಲಿ ಪರೀಕ್ಷೆ ನಡೆಯಲಿದೆ. ಬಾಲಕರು 4,69,835 ಮತ್ತು ಬಾಲಕಿಯರು 4,07,339 ಸೇರಿದಂತೆ ಒಟ್ಟು 8,77,174 ಮಂದಿ ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಲಿದ್ದಾರೆ ಎಂದ ಅವರು, 72 ಸೂಕ್ಷ್ಮ ಪರೀಕ್ಷಾ ಕೇಂದ್ರಗಳು, 17 ಅತೀ ಸೂಕ್ಷ್ಮ ಪರೀಕ್ಷಾ ಕೇಂದ್ರಗಳನ್ನು ಗುರುತಿಸಲಾಗಿದ್ದು, ಅಗತ್ಯ ಬಂದೋಬಸ್ತ್ ಕ್ರಮಕೈಗೊಳ್ಳಲಾಗಿದೆ ಎಂದು ಹೇಳಿದರು. ಪರೀಕ್ಷೆಯನ್ನು ಪಾರದರ್ಶಕವಾಗಿ ನಡೆಸಲು ಹಾಗೂ ಪ್ರಶ್ನೆ ಪತ್ರಿಕೆ ಸೋರಿಕೆ ತಡೆಯಲು ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳಲಾಗಿದೆ. ಪರೀಕ್ಷಾ ಅಕ್ರಮಗಳು ನಡೆಯದಂತೆ ಇಲಾಖೆ ಕ್ರಮಕೈಗೊಂಡಿದ್ದು, ಸರಕಾರಿ ಪರೀಕ್ಷಾ ಕೇಂದ್ರಗಳ ಕೊಠಡಿಗಳಲ್ಲಿ 226, ಅನುದಾನಿತ ಪರೀಕ್ಷಾ ಕೇಂದ್ರಗಳಲ್ಲಿ 564, ಅನುದಾನ ರಹಿತ ಕೇಂದ್ರಗಳಲ್ಲಿ 364 ಹೀಗೆ ಒಟ್ಟು 1,184 ಸಿಸಿ ಟಿವಿ ಕೆಮರಾಗಳನ್ನು ಅಳವಡಿಸಲಾಗಿದೆ.

ಜತೆಗೆ ಪರೀಕ್ಷಾ ಕೇಂದ್ರಗಳ ಮುಖ್ಯ ಅಧೀಕ್ಷಕರ ಕೊಠಡಿಗಳಲ್ಲಿ, ಸರಕಾರಿ ಕೇಂದ್ರಗಳಲ್ಲಿ 233, ಅನುದಾನಿತ ಕೇಂದ್ರಗಳಲ್ಲಿ 659 ಹಾಗೂ ಅನುದಾನ ರಹಿತ ಕೇಂದ್ರಗಳಲ್ಲಿ 469 ಹೀಗೆ ಒಟ್ಟು 1,361 ಸಿಸಿ ಕೆಮರಾಗಳನ್ನು ಅಳವಡಿಸಲಾಗಿದೆ. ಪ್ರಸಕ್ತ ಸಾಲಿನಲ್ಲಿ ನೋಂದಣಿಯಾಗಿರುವ ಪ್ರೌಢಶಾಲೆಗಳಲ್ಲಿ ಸರಕಾರಿ 5,163, ಅನುದಾನಿತ 3,301, ಅನುದಾನ ರಹಿತ 5,834 ಪ್ರೌಢಶಾಲೆಗಳ ಸಹಿತ ಒಟ್ಟು 14,298 ಪ್ರೌಢಶಾಲೆಗಳ ವಿದ್ಯಾರ್ಥಿಗಳು ಈ ಬಾರಿಯ ಪರೀಕ್ಷೆಗೆ ಹಾಜರಾಗಲಿದ್ದಾರೆ ಎಂದು ವಿವರಿಸಿದರು.

ಪಿಯು ಮಾದರಿ ಉತ್ತರ ಪತ್ರಿಕೆ
ಪದವಿ ಪೂರ್ವ ಶಿಕ್ಷಣ ಇಲಾಖೆ ಪ್ರಸಕ್ತ ಸಾಲಿನ ದ್ವಿತೀಯ ಪಿಯುಸಿ ಪರೀಕ್ಷೆಯ ಮಾದರಿ ಉತ್ತರ ಪತ್ರಿಕೆಗಳನ್ನು ಇಲಾಖಾ ವೆಬ್‌ಸೈಟ್‌: www.pue.kar.nic.inನಲ್ಲಿ ಬಿಟ್ಟಿದೆ. ವಿದ್ಯಾರ್ಥಿಗಳು ಮತ್ತು ಆಸಕ್ತರು ವೆಬ್‌ಸೈಟ್‌ಗೆ ಭೇಟಿ ನೀಡಿ ಕನ್ನಡ, ಇಂಗ್ಲಿಷ್‌, ಹಿಂದಿ ಸಹಿತ 34 ವಿಷಯಗಳ ಮಾದರಿ ಉತ್ತರ ಪತ್ರಿಕೆಗಳನ್ನು ಪರಿಶೀಲಿಸಬಹುದು ಎಂದು ಇಲಾಖೆ ನಿರ್ದೇಶಕಿ ಸಿ. ಶಿಖಾ ಅವರು ತಿಳಿಸಿದ್ದಾರೆ.

ಟಾಪ್ ನ್ಯೂಸ್

1-wqeqqwe

Vote; ಕರ್ನಾಟಕ ಮೊದಲ ಹಂತ: ಶೇಕಡಾವಾರು ಮತದಾನದ ವಿವರ

voter

Chamarajanagar; ಮತದಾನ ಮಾಡಬೇಕೋ ಬೇಡವೋ ಎಂದು EVM ಗಳೇ ಧ್ವಂಸ !

1-wqeqewqe

EVM ಕುರಿತು ಸುಪ್ರೀಂ ತೀರ್ಪು ಪ್ರತಿಪಕ್ಷಗಳಿಗೆ ಕಪಾಳ ಮೋಕ್ಷ: ಪ್ರಧಾನಿ ಮೋದಿ

militry

Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ

shettar

Minority ತುಷ್ಟೀಕರಣದಿಂದ ನೇಹಾಳ ಹತ್ಯೆಯಾಗಿದೆ :ಜಗದೀಶ್ ಶೆಟ್ಟರ್

1-adasdsad

Davanagere; ಪ್ರಧಾನಿ ಮೋದಿ ರ್‍ಯಾಲಿಗೆ ಅನುಮತಿ ನೀಡಬಾರದು:ಕಾಂಗ್ರೆಸ್ ಮನವಿ

2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್‍ಯಾಂಕ್‌ ಪಡೆದ ತೀರ್ಥಹಳ್ಳಿಯ ಸುಚಿಂತ್

2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್‍ಯಾಂಕ್‌ ಪಡೆದ ತೀರ್ಥಹಳ್ಳಿಯ ಸುಚಿಂತ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-wqeqqwe

Vote; ಕರ್ನಾಟಕ ಮೊದಲ ಹಂತ: ಶೇಕಡಾವಾರು ಮತದಾನದ ವಿವರ

shettar

Minority ತುಷ್ಟೀಕರಣದಿಂದ ನೇಹಾಳ ಹತ್ಯೆಯಾಗಿದೆ :ಜಗದೀಶ್ ಶೆಟ್ಟರ್

1-asaa

Vijaypura:ರಾಹುಲ್ ಗಾಂಧಿ ನಿರ್ಗಮಿಸುವಾಗ ವೇದಿಕೆಗೆ ಬಂದ ಸಿದ್ದರಾಮಯ್ಯ

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-wqeqqwe

Vote; ಕರ್ನಾಟಕ ಮೊದಲ ಹಂತ: ಶೇಕಡಾವಾರು ಮತದಾನದ ವಿವರ

voter

Chamarajanagar; ಮತದಾನ ಮಾಡಬೇಕೋ ಬೇಡವೋ ಎಂದು EVM ಗಳೇ ಧ್ವಂಸ !

1-wqeqewqe

EVM ಕುರಿತು ಸುಪ್ರೀಂ ತೀರ್ಪು ಪ್ರತಿಪಕ್ಷಗಳಿಗೆ ಕಪಾಳ ಮೋಕ್ಷ: ಪ್ರಧಾನಿ ಮೋದಿ

militry

Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ

shettar

Minority ತುಷ್ಟೀಕರಣದಿಂದ ನೇಹಾಳ ಹತ್ಯೆಯಾಗಿದೆ :ಜಗದೀಶ್ ಶೆಟ್ಟರ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.