ಹಳೆ ದ್ವೇಷ: ತುಮಕೂರಿನಲ್ಲಿ ಯೋಧನ ಮೇಲೆ ಮಾರಣಾಂತಿಕ ಹಲ್ಲೆ
Team Udayavani, Jan 17, 2017, 11:40 AM IST
ಕೊರಟಗೆರೆ: ಇಲ್ಲಿನ ಬೈಚಾಪುರ ಗ್ರಾಮದಲ್ಲಿ ರಜೆಯಲ್ಲಿ ಮನೆಗೆ ಬಂದಿದ್ದ ಯೋಧನೊಬ್ಬನ ಮೇಲೆ ದ್ವೇಷ ಸಾಧಿಸಿ ಗುಂಪೊಂದು ಮಾರಣಾಂತಿಹ ಹಲ್ಲೆ ನಡೆಸಿದ ಘಟನೆ ಸೋಮವಾರ ಸಂಜೆ ನಡೆದಿದೆ.
ಜಮ್ಮುವಿನಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಯೋಧ ಗೋವಿಂದರಾಜು (23) ಮತ್ತು ಆತನ ತಾಯಿ ಹನುಮಕ್ಕ (55)ಮೇಲೆ ಗುಂಪು ದಾಳಿ ನಡೆದಿದ್ದು ಕೊರಟಗೆರೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಗ್ರಾಮ ಪಂಚಾಯತ್ ಸದಸ್ಯೆ ಜಯಲಕ್ಷ್ಮಮ್ಮ ಮತ್ತು ಬೆಂಬಲಿಗರು ಹಲ್ಲೆ ನಡೆಸಿರುವುದಾಗಿ ಅರೋಪಿಸಲಾಗಿದೆ. ದಾಳಿ ನಡೆಸಿದ ವೇಳೆ ಯೋಧ ಗೋವಿಂದ್ರಾಜ್ ಬಳಿಯಿದ್ದ ಚಿನ್ನದ ಸರ ಮತ್ತು 5000 ರೂಪಾಯಿ ನಗದು ಹಣವನ್ನು ದೋಚಿರುವ ಬಗ್ಗೆ ದೂರಿನಲ್ಲಿ ಹೇಳಲಾಗಿದೆ.
ಈ ಹಿಂದೆ ಊರಿನ ಅಭಿವೃದ್ದಿಗೆ ಶ್ರಮಿಸದೆ ಇದ್ದುದಕ್ಕಾಗಿ ಜಯಲಕ್ಷ್ಮಮ್ಮ ರನ್ನು ಯೋಧ ತರಾಟೆಗೆ ತೆಗೆದುಕೊಂಡಿದ್ದು, ಇದೇ ದ್ವೇಷದಲ್ಲಿ ದಾಳಿ ನಡೆಸಿದ್ದಾರೆ ಎಂದು ಹೇಳಲಾಗಿದೆ.
ಗೋವಿಂದ್ ರಾಜ್ ಕಳೆದ 3 ವರ್ಷಗಳಿಂದ ಸೇನೆಯಲ್ಲಿ ಸೇವೆ ಸಲ್ಲಿಸುತ್ತಿದ್ದಾರೆ. ಹಲ್ಲೆಯ ಬಳಿಕ ಅವರು ಚೇತರಿಸಿಕೊಂಡಿದ್ದು, ಪ್ರಾಣಾಪಾಯವಿಲ್ಲ ಎಂದು ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್ ಬ್ರಿಜೇಶ್ ಚೌಟ
ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್ ಬೆಂಬಲಿಸಿ: ಪದ್ಮರಾಜ್ ಪೂಜಾರಿ
ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ
ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ
Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ