ಮಾಜಿ ಸಚಿವ -ಡಿಸಿ ಮಧ್ಯೆ ಟ್ವೀಟ್‌ ಸಮರ !


Team Udayavani, May 28, 2020, 9:55 AM IST

ಮಾಜಿ ಸಚಿವ -ಡಿಸಿ ಮಧ್ಯೆ ಟ್ವೀಟ್‌ ಸಮರ !

ಉಡುಪಿ: ದುಬಾೖಯಿಂದ ಆಗಮಿಸಿದ ಗರ್ಭಿಣಿ ಮಹಿಳೆಯನ್ನು ಹೋಂ ಕ್ವಾರಂಟೈನ್‌ ಬದಲಾಗಿ ಹೊಟೇಲ್‌ ಕ್ವಾರಂಟೈನ್‌ಗೆ ಕಳುಹಿಸುವ ಮೂಲಕ ಜಿಲ್ಲಾಧಿಕಾರಿ ಜಿ. ಜಗದೀಶ್‌ ಅವರು ಸರಕಾರದ ನಿಯಮ ಉಲ್ಲಂಘಿಸಿ, ಬೇಜವಾಬ್ದಾರಿಯಿಂದ ವರ್ತಿಸಿದ್ದಾರೆ. ಅವರ ವಿರುದ್ಧ ಕ್ರಮ ಕೈಗೊಳ್ಳುವಂತೆ ಮಾಜಿ ಸಚಿವ ಪ್ರಮೋದ್‌ ಮಧ್ವರಾಜ್‌ ಮುಖ್ಯಮಂತ್ರಿ ಯಡಿಯೂರಪ್ಪ ಅವರಿಗೆ ಬುಧವಾರ ಟ್ವೀಟ್‌ ಮೂಲಕ ದೂರು ನೀಡಿದ್ದಾರೆ.

ಗರ್ಭಿಣಿ ಮಹಿಳೆ ಉಡುಪಿ ಲಾಡ್ಜ್ ನಲ್ಲಿ 15 ದಿನಗಳ ಕ್ವಾರಂಟೈನ್‌ ಅವಧಿ ಪೂರೈಸಿದ್ದಾರೆ. ಆದರೂ ಇನ್ನೂ ಕ್ವಾರಂಟೈನ್‌ ಸೆಂಟರ್‌ನಲ್ಲಿ ಇಡಲಾಗಿದೆ. ಜಿಲ್ಲಾಡಳಿತ ಸರಕಾರದ ನಿಯಮ ಪಾಲಿಸುತ್ತಿಲ್ಲ. ಮನೆಯಿಂದ ಆಹಾರ ಕಲ್ಪಿಸುವ ವ್ಯವಸ್ಥೆಯನ್ನು ಸಹ ನಿಷೇಧಿಸಿದೆ ಎಂದು ಅವರು ದೂರಿನಲ್ಲಿ ತಿಳಿಸಿದ್ದಾರೆ.

ಡಿಸಿ ಪ್ರತ್ಯುತ್ತರ
ಮಾಜಿ ಸಚಿವ ಪ್ರಮೋದ್‌ ಮಧ್ವರಾಜ್‌ ಟ್ವೀಟ್‌ಗೆ ಪ್ರತ್ಯುತ್ತರ ನೀಡಿದ ಉಡುಪಿ ಜಿಲ್ಲಾಧಿಕಾರಿ ಅವರು, ಇಲ್ಲಿ ಬೇಜವಾಬ್ದಾರಿ ಪ್ರಶ್ನೆಯೇ ಇಲ್ಲ. ಜಿಲ್ಲೆಗೆ 8 ಸಾವಿರ ಜನರು ಹೊರ ದೇಶ, ರಾಜ್ಯದಿಂದ ಬಂದಿದ್ದಾರೆ. ಅವರೆಲ್ಲರನ್ನು ಕೋವಿಡ್‌ ಪರೀಕ್ಷೆಗೆ ಒಳಪಡಿಸಬೇಕಾಗಿದೆ. ದುಬಾೖಯಿಂದ ಬಂದ ಗರ್ಭಿಣಿ ಮಹಿಳೆಯು ಕೋವಿಡ್ ವೈರಸ್‌ ಸೋಂಕಿತ ವ್ಯಕ್ತಿಯ ಪ್ರಾಥಮಿಕ ಸಂಪರ್ಕ ಹೊಂದಿರುವ ಕಾರಣದಿಂದ 14 ದಿನಗಳ ಅನಂತರ ಪರೀಕ್ಷಿಸಿ ಬಿಡುಗಡೆ ಮಾಡಲಾಗುತ್ತದೆ ಎಂದು ರೀಟ್ವೀಟ್‌ ಮಾಡಿದ್ದಾರೆ.

ಗರ್ಭಿಣಿ ಮಹಿಳೆ ಮನೆಗೆ
15 ದಿನ ಕ್ವಾರಂಟೈನ್‌ ಅವಧಿ ಮುಗಿಸಿದ ಗರ್ಭಿಣಿಯನ್ನು ಹೊಟೇಲ್‌ನಿಂದ ಬಿಡುಗಡೆ ಮಾಡಿ ಮನೆಗೆ ಕಳುಹಿಸಲಾಗಿದೆ. ನಾನು ಜಿಲ್ಲಾಡಳಿತದ ವಿರುದ್ಧವಾಗಿಲ್ಲ. ಆದರೆ ನಿಯಮ ಮೀರಿ ಅಕ್ರಮ ಗಣಿಗಾರಿಕೆ, ಜನರಿಗೆ ಕಿರುಕುಳ ನೀಡಿದಾಗ ಧ್ವನಿ ಎತ್ತಬೇಕಾಗುತ್ತದೆ. ಉತ್ತಮ ಕೆಲಸಗಳಿಗೆ ನನ್ನ ಬೆಂಬಲವಿರುತ್ತದೆ ಎಂದು ಪ್ರಮೋದ್‌ ಮಧ್ವರಾಜ್‌ ಅವರು ಟ್ವೀಟರ್‌ ಖಾತೆಯಲ್ಲಿ ಮಾಹಿತಿ  ನೀಡಿದ್ದಾರೆ.

ರಘುಪತಿ ಭಟ್‌ ಟ್ವೀಟ್‌
ಮಾಜಿ ಸಚಿವ ಪ್ರಮೋದ್‌ ಮಧ್ವರಾಜ್‌ ಟ್ವೀಟ್‌ಗೆ ರೀ ಟ್ವೀಟ್‌ ಮಾಡಿದ ಶಾಸಕ ಕೆ.ರಘುಪತಿ ಭಟ್‌ 60 ದಿನಗಳಿಂದ ಹೋಂ ಕ್ವಾರಂಟೈನ್‌ ಆಗಿರುವ ಮಾಜಿ ಸಚಿವರು ಜಿಲ್ಲಾಧಿಕಾರಿ ವಿರುದ್ಧ ದೂರು ನೀಡಿದ್ದಾರೆ ಆದರೆ ಜಿಲ್ಲೆಯ ಜನರ ಆರೋಗ್ಯದ ಕಡೆಗೆ ನಿರಂತರವಾಗಿ ದುಡಿಯುತ್ತಿರುವ ಜಿಲ್ಲಾಧಿಕಾರಿ ನೇತೃತ್ವದ ತಂಡ ಉತ್ತಮವಾಗಿ ಕಾರ್ಯನಿರ್ವಹಿಸುತ್ತಿದೆ ಎಂದು ಹೇಳಿದ್ದಾರೆ.

ಟಾಪ್ ನ್ಯೂಸ್

ಸಿರಿಯಾದ ಮೇಲೆ ಇಸ್ರೇಲ್ ವೈಮಾನಿಕ ದಾಳಿ… 5 ಹಿಜ್ಬುಲ್ ಸದಸ್ಯರು ಸೇರಿ 38 ಮಂದಿ ಹತ

ಸಿರಿಯಾದ ಮೇಲೆ ಇಸ್ರೇಲ್ ವೈಮಾನಿಕ ದಾಳಿ… 5 ಹಿಜ್ಬುಲ್ ಸದಸ್ಯರು ಸೇರಿ 38 ಮಂದಿ ಹತ

20-

Crime: ಗುದದ್ವಾರಕ್ಕೆ ಗಾಳಿ: ಸ್ನೇಹಿತನ ದುರ್ಮರಣ: ಕೃತ್ಯವೆಸಗಿದಾತನ ಬಂಧನ

Bidar; The man jumps into the water tank

Bidar; ಪತ್ನಿಯ ಅನೈತಿಕ ಸಂಬಂಧಕ್ಕೆ ಮನನೊಂದು ನೀರಿನ ಟ್ಯಾಂಕ್ ಗೆ ಬಿದ್ದು ಪತಿ ಆತ್ಮಹತ್ಯೆ

19-gobi

Gobi Manchurian ಬ್ಯಾನ್‌ ಎಫೆಕ್ಟ್: ಚಾಟ್ಸ್‌ ಮಾರಾಟ ಕುಸಿತ

ಡೀಸೆಲ್ ಇಲ್ಲದೆ ನಿಂತ ವಾಹನ… ಕಸವನ್ನು ಹೆಗಲ ಮೇಲೆ ಹೊತ್ತು ವಿಲೇವಾರಿ ಮಾಡಿದ ಪೌರಕಾರ್ಮಿಕ

ಡೀಸೆಲ್ ಇಲ್ಲದೆ ನಿಂತ ವಾಹನ… ಕಸವನ್ನು ಹೆಗಲ ಮೇಲೆ ಹೊತ್ತು ವಿಲೇವಾರಿ ಮಾಡಿದ ಪೌರಕಾರ್ಮಿಕ

Chitradurga; We are not waiting for anyone, nomination is sure…: M. Chandrappa

Chitradurga; ನಾವು ಯಾರನ್ನೂ ಕಾಯಲ್ಲ, ನಾಮಿನೇಷನ್ ಪಕ್ಕಾ…: ಎಂ.ಚಂದ್ರಪ್ಪ

ಬಂಧನದಲ್ಲಿರುವ ಪತಿಯ ಬೆಂಬಲಕ್ಕಾಗಿ ವಾಟ್ಸ್‌ಆ್ಯಪ್‌ ಅಭಿಯಾನ ಆರಂಭಿಸಿದ ಕೇಜ್ರಿವಾಲ್ ಪತ್ನಿ

ಬಂಧನದಲ್ಲಿರುವ ಪತಿಯ ಬೆಂಬಲಕ್ಕಾಗಿ ವಾಟ್ಸ್‌ಆ್ಯಪ್‌ ಅಭಿಯಾನ ಆರಂಭಿಸಿದ ಕೇಜ್ರಿವಾಲ್ ಪತ್ನಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

9-tmpl

Malpe: ವಡಭಾಂಡೇಶ್ವರ ಭಕ್ತವೃಂದ; ಉತ್ತಿಷ್ಠ ಭಾರತ, ಸಾಧಕರಿಗೆ ಸಮ್ಮಾನ

8-pernankila

Pernankila ದೇವಾಲಯ ಬ್ರಹ್ಮಕುಂಭಾಭಿಷೇಕ ಸಂಪನ್ನ

6-good-friday

Good Friday: ಕ್ರೈಸ್ತರಿಂದ ಕೊನೆಯ ಭೋಜನದ ಸ್ಮರಣೆ

5-toll-gate

Toll Gate: ಎ.1ರಿಂದ ಟೋಲ್‌ ದರದಲ್ಲಿ ಹೆಚ್ಚಳ

Udupi: ನೇಣು ಬಿಗಿದು ಆತ್ಮಹತ್ಯೆ

Udupi: ನೇಣು ಬಿಗಿದು ಆತ್ಮಹತ್ಯೆ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

ಸಿರಿಯಾದ ಮೇಲೆ ಇಸ್ರೇಲ್ ವೈಮಾನಿಕ ದಾಳಿ… 5 ಹಿಜ್ಬುಲ್ ಸದಸ್ಯರು ಸೇರಿ 38 ಮಂದಿ ಹತ

ಸಿರಿಯಾದ ಮೇಲೆ ಇಸ್ರೇಲ್ ವೈಮಾನಿಕ ದಾಳಿ… 5 ಹಿಜ್ಬುಲ್ ಸದಸ್ಯರು ಸೇರಿ 38 ಮಂದಿ ಹತ

20-

Crime: ಗುದದ್ವಾರಕ್ಕೆ ಗಾಳಿ: ಸ್ನೇಹಿತನ ದುರ್ಮರಣ: ಕೃತ್ಯವೆಸಗಿದಾತನ ಬಂಧನ

Bidar; The man jumps into the water tank

Bidar; ಪತ್ನಿಯ ಅನೈತಿಕ ಸಂಬಂಧಕ್ಕೆ ಮನನೊಂದು ನೀರಿನ ಟ್ಯಾಂಕ್ ಗೆ ಬಿದ್ದು ಪತಿ ಆತ್ಮಹತ್ಯೆ

19-gobi

Gobi Manchurian ಬ್ಯಾನ್‌ ಎಫೆಕ್ಟ್: ಚಾಟ್ಸ್‌ ಮಾರಾಟ ಕುಸಿತ

18-

Book Brahma ಸ್ವಾತಂತ್ರ‍್ಯೋತ್ಸವ ಕಥಾ ಸ್ಪರ್ಧೆ, ಕಾದಂಬರಿ ಪುರಸ್ಕಾರ- 2024: ವಿವರಗಳು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.