ಜ. 17: ಪಡುಬಿದ್ರಿಯ “ಢಕ್ಕೆಬಲಿ’ ಆರಂಭ


Team Udayavani, Jan 15, 2017, 3:45 AM IST

1401ra1—padubidri-brahmas.jpg

ಪಡುಬಿದ್ರಿ: ಶ್ರೀ ಖಡ್ಗೆಶ್ವರೀ ಬ್ರಹ್ಮಸ್ಥಾನದಲ್ಲಿ “ಢಕ್ಕೆಬಲಿ’, “ಮಂಡಲ ಸೇವೆ’ ಜ. 17ರಿಂದ ಆರಂಭಗೊಳ್ಳಲಿದೆ. ಜ. 17ರಂದು ಬ್ರಾಹ್ಮಣ ಸಮಾಜದ ವತಿಯಿಂದ ಮಂಡಲ ಹಾಕುವ ಸೇವೆಯೊಂದಿಗೆ ಢಕ್ಕೆಬಲಿ ಆರಂಭಗೊಳ್ಳಲಿದೆ. ನಿರ್ದಿಷ್ಟ ದಿನಗಳಲ್ಲಿ ಈ ಸೇವೆ ಮುಂದುವರಿಯುತ್ತಾ ಪೂರ್ವ ಸಂಪ್ರದಾಯದ ಸೇವೆಗಳೂ ಸೇರಿದಂತೆ ಒಟ್ಟು 39 ಸೇವೆಗಳು ನಡೆದು ಮಾ. 10ರಂದು ಕೊನೆಗೊಳ್ಳಲಿವೆ. 

ಚಿದಂಬರ ರಹಸ್ಯದ ತಾಣ ಚಿದಂಬರ ರಹಸ್ಯಗಳನ್ನು ಒಳಗೊಂಡು ಇಲ್ಲಿನ ಪೂಜಾ ಪರಂಪರೆ, ಆರಾಧನಾ ವಿಧಾನ, ಕೇವಲ ಮಾಂತ್ರಿಕವೂ ಅಲ್ಲದೆ ಯಾಂತ್ರಿಕವಾಗಿ ಒಂದರ ಮೇಲೊಂದರಂತೆ ದೈವೀ ಸನ್ನಿವೇಶಗಳ ಸೃಷ್ಟಿಯಾಗಿ ರಾತ್ರಿಯೆಲ್ಲಿ ಮೈನವಿರೇಳುವ ಕ್ಷಣಗಳನ್ನೊದಗಿಸಿ ನೋಡುಗರ ಕಣ್ಣಲ್ಲಿ ಅಚ್ಚಳಿಯದ ರಮಣೀಯ ದೃಶ್ಯಾವಳಿಗಳ ಸರಮಾಲೆಗಳನ್ನೇ ಉಂಟುಮಾಡುತ್ತವೆ. ಒಂದು ಕಾಲದಲ್ಲಿ ದೊಂದಿ ದೀಪದ ಬೆಳಕಲ್ಲೇ ನಡೆದಿದ್ದ ಈ ಢಕ್ಕೆಬಲಿಗೆ ಈಗ ಗ್ಯಾಸ್‌ಲೈಟ್‌ಗಳ ಪ್ರಕಾಶತೆಯ ಹರಿಯಬಿಡಲಾಗುತ್ತದೆ. ಶ್ರೀ ಖಡೆYàಶ್ವರೀ ಬ್ರಹ್ಮಸ್ಥಾನವನ್ನು ಫಲ, ಪುಷ್ಪಗಳ, ಎಲೆ, ತಾವರೆಗಳ, ತೆಂಗಿನ ಗರಿಗಳಿಂದ ಅಲಂಕರಿಸಿ ಸುಂದರ ಬನವಾಗಿ ಮರು ಸೃಷ್ಟಿಸಲಾಗುತ್ತದೆ. ಆಳಕ್ಕಿಳಿದಂತೆಲ್ಲಾ ಇಲ್ಲಿನ ರಹಸ್ಯಗಳೂ ಒಂದೊಂದಾಗಿ ತೆರೆದುಕೊಂಡರೂ ಅವು ಮತ್ತಷ್ಟು ನಿಗೂಢವಾಗುತ್ತಿರುತ್ತದೆ.

ಢಕ್ಕೆಬಲಿ – ಪ್ರವಾಸೋದ್ಯಮಕ್ಕೂ ಉತ್ತೇಜನಮುಂಜಾವದ ಪಂಚಾಮೃತಾಭಿಷೇಕದೊಂದಿಗೆ ಆರಂಭಗೊಳ್ಳುವ ವಿಶೇಷ ಢಕ್ಕೆಬಲಿ ಸೇವೆ ಮುಂದೆ ಬ್ರಾಹ್ಮಣಾರಾಧನೆ, ಸಾರ್ವಜನಿಕ ಅನ್ನಸಂತರ್ಪಣೆಗಳ ಬಳಿಕ ಸಂಜೆ ಹೊತ್ತಿಗೆ ವಿಜೃಂಭಣೆಯ ಹೊರೆ ಕಾಣಕೆ ಮೆರವಣಿಗೆಯೊಂದಿಗೆ ವೇಗೋತ್ಕರ್ಷವನ್ನು ಪಡೆದುಕೊಳ್ಳುತ್ತದೆ. ವಿವಿಧ ಫಲಪುಷ್ಪ, ಅಡಕೆ, ಹಿಂಗಾರ, ತೆಂಗಿನಕಾಯಿ, ತೆಂಗಿನಗರಿ, ಸೀಯಾಳಗಳ ಬಲು ರಾಶಿ ರಾಶಿಯೇ ಬಯಲು ಆಲಯ “ಬ್ರಹ್ಮಸ್ಥಾನ’ದೊಳಕ್ಕೆ ಬಂದು ಸೇರಿಕೊಳ್ಳುತ್ತದೆ. ಮುಂದೆ ಇದನ್ನೆಲ್ಲಾ ಬ್ರಾಹ್ಮಣ ಯುವಕರು ಅಲಂಕರಿಸಿ ಕಾನನವನ್ನು ಸಿರಿಸಿಂಗಾರಗೊಳಿಸುತ್ತಾರೆ. ನೋಡುಗರ ಕಣ್ಣಿಗೇ ರಮ್ಯವಾಗಿ ಕಾಣಿಸಿಕೊಳ್ಳುವ ಈ ಪುಷ್ಪಾಲಂಕಾರಗಳಿಂದಲೇ ಪಡುಬಿದ್ರಿಯ ತರುಣರಿಗೆ ಇಂದಿಗೂ ಹೊರ ಜಿಲ್ಲೆ, ರಾಜ್ಯಗಳಲ್ಲಿ ವಿಶಿಷ್ಟ ಹೆಸರಿದೆ. 

ಪಡುಬಿದ್ರಿಯ ಶ್ರೀ ಖಡೆYàಶ್ವರೀ ಬ್ರಹ್ಮಸ್ಥಾನವನ್ನು ಈ ಸುಂದರ ಪುಷ್ಪಾಲಂಕಾರಗಳಿಗಾಗಿಯೇ ಹೊರ ರಾಜ್ಯ, ಜಿಲ್ಲೆ ಸೇರಿದಂತೆ ದೇಶ, ವಿದೇಶಗಳ ಮಂದಿಯೂ ಬಂದು ವೀಕ್ಷಿಸಿ ಪುಳಕಿತರಾಗುತ್ತಾರೆ. ಪ್ರವಾಸೋದ್ಯಮಕ್ಕೂ ಈ ಢಕ್ಕೆಬಲಿ ಪರ್ವವು ಉತ್ತೇಜನವನ್ನೀಯುತ್ತದೆ. 

ಈ ಅಲಂಕಾರಗಳೆಲ್ಲಾ ಮುಗಿದು ರಾತ್ರಿಯ ವೇಳೆ ತಂಬಿಲ ಸೇವೆ, ಢಕ್ಕೆಬಲಿಗಳು ಅಲ್ಲಿನ ಪುರೋಹಿತರು, ಕೊರಡುಗಳು, ವೈದ್ಯರು, ಗುರಿಕಾರರು, ಮಾನ್ಯರು ಹಾಗೂ ಸ್ಥಳವಂದಿಗರ ಕೂಡುವಿಕೆಯಿಂದ ನಡುರಾತ್ರಿಯ ಒಂದಿಷ್ಟು ವಿರಾಮದ ಹೊರತಾಗಿ ಮುಂಜಾವದವರೆಗೂ ಮುಂದುವರಿಯುತ್ತವೆ. ಬೆಳಗ್ಗೆ ಪ್ರಸಾದ ವಿತರಣೆಯೊಂದಿಗೆ ಈ ಸೇವೆಗಳು ಕೊನೆಗೊಳ್ಳುತ್ತವೆ. ಪ್ರಸಾದವಾಗಿ ಅಲಂಕರಿಸಿದ ಬಾಳೆಹಣ್ಣು. ಹೂ, ಸೀಯಾಳಗಳು ವಿತರಿಸಲ್ಪಡುವುದಲ್ಲದೇ ಈ ಕಾನನದೊಳಗಿನ ಮರಳಿನ ಕಣಗಳೇ ಭಕ್ತರ ಹಣೆ ಸೇರುತ್ತದೆ. ಮರುದಿನದ ಸೇವೆ ಮತ್ತೆ ಅಲ್ಲಿ ನಡೆಯುವ ಪಂಚಾಮೃತಾಭಿಷೇಕದೊಂದಿಗೆ ಆರಂಭಗೊಳ್ಳುವುದು. ಈ ಬಾರಿಯ ಢಕ್ಕೆಬಲಿ ಸೇವೆಗಳು  

ಟಾಪ್ ನ್ಯೂಸ್

ಭಾರತದಲ್ಲಿ ರಿಲೀಸ್‌ಗೂ ಮುನ್ನ ʼಮಂಕಿ ಮ್ಯಾನ್‌ʼ ಹೆಚ್‌ ಡಿ ಕಾಪಿ ಲೀಕ್: ವಿಳಂಬ ಯಾಕೆ?

ಭಾರತದಲ್ಲಿ ರಿಲೀಸ್‌ಗೂ ಮುನ್ನ ʼಮಂಕಿ ಮ್ಯಾನ್‌ʼ ಹೆಚ್‌ ಡಿ ಕಾಪಿ ಲೀಕ್: ವಿಳಂಬ ಯಾಕೆ?

1-wqqwqwe

West Bengal; ಮಗಳನ್ನು ಕಂಡು ಕಣ್ಣೀರಿಟ್ಟ ಶೇಖ್ ಷಹಜಹಾನ್: ಬಿಜೆಪಿ ವ್ಯಂಗ್ಯ

Politics: ಮೋದಿ ಸಾರ್ವಜನಿಕರಲ್ಲಿ ಕೋಮು ಭಾವನೆ ಹುಟ್ಟು ಹಾಕುತ್ತಿದ್ದಾರೆ; ಎಚ್.ಕೆ. ಪಾಟೀಲ

Politics: ಮೋದಿ ಸಾರ್ವಜನಿಕರಲ್ಲಿ ಕೋಮು ಭಾವನೆ ಹುಟ್ಟು ಹಾಕುತ್ತಿದ್ದಾರೆ; ಎಚ್.ಕೆ. ಪಾಟೀಲ

2-hubli

Neha Case: ನ್ಯಾಯಾಂಗ ಬಂಧನದಲ್ಲಿದ್ದ ಆರೋಪಿ ಸಿಐಡಿ ವಶಕ್ಕೆ

Udupi: ಅನುಮತಿಯಿಲ್ಲದೆ ಪೋಸ್ಟರ್‌ ಅಭಿಯಾನ; ಬಿಜೆಪಿ ಯುವ ಮೋರ್ಚಾ ಮುಖಂಡರ ವಿರುದ್ಧ ಕೇಸ್

Udupi: ಅನುಮತಿಯಿಲ್ಲದೆ ಪೋಸ್ಟರ್‌ ಅಭಿಯಾನ; ಬಿಜೆಪಿ ಯುವ ಮೋರ್ಚಾ ಮುಖಂಡರ ವಿರುದ್ಧ ಕೇಸ್

Amit Shah: 2024ರ ಚುನಾವಣೆಯಲ್ಲಿ ಎನ್‌ ಡಿಎಗೆ 400ಕ್ಕೂ ಅಧಿಕ ಸ್ಥಾನ ಖಚಿತ: ಶಾ

Amit Shah: 2024ರ ಚುನಾವಣೆಯಲ್ಲಿ ಎನ್‌ ಡಿಎಗೆ 400ಕ್ಕೂ ಅಧಿಕ ಸ್ಥಾನ ಖಚಿತ: ಶಾ

11

ಕ್ರಿಕೆಟ್‌ ಬಗ್ಗೆ ಕಿಂಚಿತ್ತೂ ಜ್ಞಾನವಿಲ್ಲದ ವ್ಯಕ್ತಿಗೆ ಡ್ರೀಮ್‌11ನಲ್ಲಿ ಒಲಿಯಿತು 1.5 ಕೋಟಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಶೋಧ ಕಾರ್ಯಾಚರಣೆಯ ಬಿಸಿಗೆ ತಣ್ಣಗಾದರೇ?

ಶೋಧ ಕಾರ್ಯಾಚರಣೆಯ ಬಿಸಿಗೆ ತಣ್ಣಗಾದರೇ?

ಉಡುಪಿ-ಚಿಕ್ಕಮಗಳೂರು ಲೋಕಸಭಾ ಕ್ಷೇತ್ರ: 405 ಸೂಕ್ಷ್ಮ ಮತಗಟ್ಟೆ : ಕೆ. ವಿದ್ಯಾಕುಮಾರಿ

ಉಡುಪಿ-ಚಿಕ್ಕಮಗಳೂರು ಲೋಕಸಭಾ ಕ್ಷೇತ್ರ: 405 ಸೂಕ್ಷ್ಮ ಮತಗಟ್ಟೆ : ಕೆ. ವಿದ್ಯಾಕುಮಾರಿ

Lok Sabha Election ; ಪ್ರಚಾರ ಜೋರು, ಚರ್ಚಾ ವಿಷಯ ಮೂರು!

Lok Sabha Election ; ಪ್ರಚಾರ ಜೋರು, ಚರ್ಚಾ ವಿಷಯ ಮೂರು!

Udupi-Chikmagalur Lok Sabha constituency: ಯುವ ಮತದಾರರ ಚುನಾವಣೆ ಉತ್ಸಾಹ

Udupi-Chikmagalur: ಯುವ ಮತದಾರರ ಚುನಾವಣೆ ಉತ್ಸಾಹ

12

Theft; ಕೊಲ್ಲೂರು: ಮಹಿಳೆಯ ಚಿನ್ನ, ನಗದು ಕಳವು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಭಾರತದಲ್ಲಿ ರಿಲೀಸ್‌ಗೂ ಮುನ್ನ ʼಮಂಕಿ ಮ್ಯಾನ್‌ʼ ಹೆಚ್‌ ಡಿ ಕಾಪಿ ಲೀಕ್: ವಿಳಂಬ ಯಾಕೆ?

ಭಾರತದಲ್ಲಿ ರಿಲೀಸ್‌ಗೂ ಮುನ್ನ ʼಮಂಕಿ ಮ್ಯಾನ್‌ʼ ಹೆಚ್‌ ಡಿ ಕಾಪಿ ಲೀಕ್: ವಿಳಂಬ ಯಾಕೆ?

3-

Bagalkote: ಯತ್ನಾಳ ಗೊಡ್ಡ ಎಮ್ಮಿ ಇದ್ದಂಗ: ಕಾಶಪ್ಪನವರ ಟೀಕೆ

1-wqqwqwe

West Bengal; ಮಗಳನ್ನು ಕಂಡು ಕಣ್ಣೀರಿಟ್ಟ ಶೇಖ್ ಷಹಜಹಾನ್: ಬಿಜೆಪಿ ವ್ಯಂಗ್ಯ

Politics: ಮೋದಿ ಸಾರ್ವಜನಿಕರಲ್ಲಿ ಕೋಮು ಭಾವನೆ ಹುಟ್ಟು ಹಾಕುತ್ತಿದ್ದಾರೆ; ಎಚ್.ಕೆ. ಪಾಟೀಲ

Politics: ಮೋದಿ ಸಾರ್ವಜನಿಕರಲ್ಲಿ ಕೋಮು ಭಾವನೆ ಹುಟ್ಟು ಹಾಕುತ್ತಿದ್ದಾರೆ; ಎಚ್.ಕೆ. ಪಾಟೀಲ

2-hubli

Neha Case: ನ್ಯಾಯಾಂಗ ಬಂಧನದಲ್ಲಿದ್ದ ಆರೋಪಿ ಸಿಐಡಿ ವಶಕ್ಕೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.