ಬಿಜೆಪಿ ಭರವಸೆ ಕಾರ್ಯಗತಗೊಂಡಿಲ್ಲ: ಆಸ್ಕರ್‌ 


Team Udayavani, Feb 19, 2017, 8:45 AM IST

18-LOC-5.jpg

ಉಡುಪಿ: ಚುನಾವಣಾ ಪೂರ್ವದಲ್ಲಿ ಬಿಜೆಪಿ ನೀಡಿದ್ದ ಯಾವುದೇ ಭರವಸೆ ಕಾರ್ಯಗತವಾಗಿಲ್ಲ ಎಂದು ಎಐಸಿಸಿ ಪ್ರಧಾನ ಕಾರ್ಯದರ್ಶಿ ಆಸ್ಕರ್‌ ಫೆರ್ನಾಂಡಿಸ್‌ ಟೀಕಿಸಿದ್ದಾರೆ. ಕಪ್ಪು ಹಣ ತರುವ ಭರವಸೆ ಯೊಂದಿಗೆ ನೋಟು ಅಪಮೌಲ್ಯ ಗೊಳಿಸಲಾಗಿದೆ ಎಂದು ಕೇಂದ್ರ ಹೇಳಿಕೆ ನೀಡುತ್ತಿದೆ. ಚಲಾವಣೆಯಲ್ಲಿ ಇದ್ದ 15ರಿಂದ 18 ಲ.ಕೋ. ರೂ.ಬ್ಯಾಂಕ್‌ಗಳಿಗೆ ಮರು ಪಾವತಿಯಾಗಿದೆ. ಹೀಗಿರುವಾಗ ಕಪ್ಪು ಹಣ ತರುವ ಉದ್ದೇಶ ಈಡೇರಿದೆಯೋ ಎಂಬ ಬಗ್ಗೆ ಸರಕಾರದಿಂದ ಇಷ್ಟರವರೆಗೆ ಯಾವುದೇ ಹೇಳಿಕೆ ಪ್ರಕಟಗೊಂಡಿಲ್ಲ. ಆರ್‌ಬಿಐ ಗವರ್ನರ್‌ ಜತೆಗೆ ಚರ್ಚಿಸದೆ, ಜನರನ್ನು ವಿಶ್ವಾಸಕ್ಕೆ ತೆಗೆದುಕೊಳ್ಳದ ಕೇಂದ್ರ ಸರಕಾರದ ನಡೆಯಿಂದ ದೇಶದ ಆರ್ಥಿಕತೆ ಹಾಗೂ ಉತ್ಪಾದನೆ ಹಿಂಜರಿತ ಕಂಡಿದೆ. ಈ ಸಮಸ್ಯೆಗಳಿಗೆ ಕೇಂದ್ರ ಸರಕಾರ ಯಾವುದೇ ಪರಿಹಾರ ಕಂಡು ಕೊಂಡಿಲ್ಲ ಎಂದು ಅವರು ಜಿಲ್ಲಾ ಕಾಂಗ್ರೆಸ್‌ ಸಭೆಯಲ್ಲಿ ಹೇಳಿದರು.

ಕಾಂಗ್ರೆಸ್‌ಗೆ ಪೂರಕ
ಭ್ರಷ್ಟಾಚಾರವನ್ನು ವಿರೋಧಿಸುತ್ತೇವೆ ಎನ್ನುವ ಮೋದಿಯವರು ಸಹರಾ, ಬಿರ್ಲಾ ಕಂಪೆನಿಗಳಿಂದ ಹಣ ಪಡೆದಿರುವುದು ಕಂಪೆನಿಗಳ ಲೆಕ್ಕಪರಿಶೋಧನಾ ವರದಿಯಲ್ಲಿ ಕಂಡು ಬರುತ್ತದೆ. ಆದರೆ ಕೇಂದ್ರ ಸರಕಾರದಿಂದ ಇಷ್ಟರವರೆಗೆ ಇದಕ್ಕೆ ಸ್ಪಷ್ಟನೆ ಬಂದಿಲ್ಲ. 1972ರಲ್ಲಿ ಇಂದಿರಾ ಗಾಂಧಿಯವರು ಸೋತ ಅನಂತರ 1980ರ ಲೋಕಸಭಾ ಚುನಾವಣೆಯಲ್ಲಿ ಇಂದಿರಾ ಅವರನ್ನು ಮರು ಆಯ್ಕೆ ಮಾಡುವ ವಾತಾವರಣ ಸೃಷ್ಟಿಯಾ ದಂತೆ ಮುಂದಿನ ಲೋಕಸಭಾ ಚುನಾವಣೆ ಯಲ್ಲಿ ಕಾಂಗ್ರೆಸ್‌ ಪಕ್ಷಕ್ಕೆ ಪೂರಕ ವಾತಾ
ವರಣ ಉಂಟಾಗಲಿದೆ ಎಂದರು.

ಕಾಂಗ್ರೆಸ್‌ ಮುತುವರ್ಜಿ
ಸಚಿವ ಪ್ರಮೋದ್‌ ಮಧ್ವರಾಜ್‌ ಅವರು ಮಾತನಾಡಿ, 9/11, ಸಿಆರ್‌ಝಡ್‌, ಮರಳು ಸಮಸ್ಯೆಗಳು ಬಿಜೆಪಿ ಆಡಳಿತ ಅವಧಿಯ ಕೊಡುಗೆಗಳು. ಆದರೆ ಸಮಸ್ಯೆ ಪರಿಹಾರಕ್ಕಾಗಿ ಕಾಂಗ್ರೆಸ್‌ ಪಕ್ಷ ಮುತುವರ್ಜಿ ವಹಿಸಿದೆ. ಕಾನೂನು ತೊಡಕನ್ನು ಪರಿಹರಿಸಿ ಸಮಸ್ಯೆಗೆ ಪರಿಹಾರ ನೀಡುವಲ್ಲಿ ಸರಕಾರ ಬದ್ಧವಾಗಿದೆ ಎಂದರು. ಈಗಾಗಲೇ ಹೊಸ ತಾಲೂಕು ರಚನೆಗಾಗಿ ಬ್ರಹ್ಮಾವರ, ಬೈಂದೂರು, ಕಾಪು, ಹೆಬ್ರಿಗಳಲ್ಲಿ ಬೇಡಿಕೆಗಳು ಬಂದಿವೆ. ಸಮಿತಿಯ ವರದಿಯ ಆಧಾರದ ನೆಲೆಯಲ್ಲಿ ಹಂತ ಹಂತ ವಾಗಿ ಹೊಸ ತಾಲೂಕುಗಳ  ಘೋಷಣೆ ಮಾಡಲಾಗುವುದು ಎಂದು ಅವರು ಹೇಳಿದರು.

ಪಕ್ಷದ ಸಮಾವೇಶ
ಜಿಲ್ಲಾ ಕಾಂಗ್ರೆಸ್‌ ಅಧ್ಯಕ್ಷ, ಕೆಎಸ್‌ಆರ್‌ಟಿಸಿ ಅಧ್ಯಕ್ಷ, ಶಾಸಕ ಗೋಪಾಲ ಪೂಜಾರಿ ಅವರು ಮಾತನಾಡಿ, ಮುಂದಿನ ವಿಧಾನಸಭಾ ಚುನಾವಣೆ ಯಲ್ಲಿ ಕಾಂಗ್ರೆಸ್‌ ಮತ್ತೂಮ್ಮೆ ಅಧಿಕಾರ ಚುಕ್ಕಾಣಿ ಹಿಡಿಯುವ ಸಲುವಾಗಿ ಪ್ರತೀ ವಿಧಾನಸಭಾ ಕ್ಷೇತ್ರದಲ್ಲಿ ಪಕ್ಷದ ಸಮಾವೇಶಕ್ಕೆ ಚಾಲನೆ ನೀಡಲಾಗುವುದು ಎಂದು ತಿಳಿಸಿದರು. ಬ್ಲೋಸಂ ಫೆರ್ನಾಂಡಿಸ್‌, ಮುಖಂಡರಾದ ಪ್ರತಾಪಚಂದ್ರ ಶೆಟ್ಟಿ, ಗೋಪಾಲ ಭಂಡಾರಿ, ಎಂ.ಎ. ಗಫ‌ೂರ್‌, ಅಶೋಕ್‌ ಕುಮಾರ್‌ ಕೊಡವೂರು, ಕೃಷ್ಣರಾಜ ಸರಳಾಯ, ಮುರಳಿ ಶೆಟ್ಟಿ, ಅಬ್ದುಲ್‌ ಅಜೀಜ್‌, ಎಸ್‌. ನಾರಾಯಣ, ಯತೀಶ್‌ ಕರ್ಕೆರಾ, ಸರಳಾ ಕಾಂಚನ್‌, ಎಂ.ಪಿ ಮೊದಿನಬ್ಬ, ಶ್ಯಾಮಲಾ ಭಂಡಾರಿ, ಜಯಶ್ರೀ ಕೃಷ್ಣರಾಜ್‌, ವೆರೋನಿಕಾ ಕರ್ನೇಲಿಯೊ, ಚಂದ್ರಿಕಾ ಕೇಳ್ಕರ್‌, ಎಲ್ಲೂರು ಶಶಿಧರ ಶೆಟ್ಟಿ, ಜನಾರ್ದನ ತೋನ್ಸೆ, ಸುಧೀರ್‌ ಹೆಗ್ಡೆ, ಸುಧಾಕರ್‌ ಕೋಟ್ಯಾನ್‌, ನಿತ್ಯಾನಂದ ಶೆಟ್ಟಿ, ಸತೀಶ್‌ ಅಮೀನ್‌ ಪಡುಕೆರೆ, ಮಲ್ಯಾಡಿ ಶಿವರಾಮ್‌ ಶೆಟ್ಟಿ, ವಿಕಾಸ್‌ ಹೆಗ್ಡೆ, ಪ್ರಶಾಂತ್‌ ಪೂಜಾರಿ, ವಿಶ್ವಾಸ್‌ ಅಮೀನ್‌, ಸುಬ್ರಹ್ಮಣ್ಯ, ದಿನೇಶ್‌ ಪುತ್ರನ್‌, ಮಂಜಯ್ಯ ಶೆಟ್ಟಿ ಮೊದಲಾದವರು ಉಪಸ್ಥಿತರಿದ್ದರು.
ಜಿಲ್ಲಾ ಕಾಂಗ್ರೆಸ್‌ ಪ್ರಧಾನ ಕಾರ್ಯದರ್ಶಿ ಬಿ. ನರಸಿಂಹ ಮೂರ್ತಿ ಅವರು ಕಾರ್ಯಕ್ರಮ ನಿರೂಪಿಸಿ, ಸ್ವಾಗತಿಸಿದರು.

ಟಾಪ್ ನ್ಯೂಸ್

11-belthangady

LS Polls: ಬೆಳ್ತಂಗಡಿ ತಾಲೂಕಿನ ಉಜಿರೆಯ ಮಸ್ಟರಿಂಗ್ ಕೇಂದ್ರಕ್ಕೆ ದ.ಕ. ಜಿಲ್ಲಾಧಿಕಾರಿ ಭೇಟಿ

siddaramaiah

Bidar; ನೇಹಾ ಪ್ರಕರಣದಲ್ಲಿ ಬಿಜೆಪಿ ರಾಜಕೀಯ‌ ಮಾಡುವುದು ಸರಿಯಲ್ಲ: ಸಿಎಂ ಸಿದ್ಧರಾಮಯ್ಯ‌

Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ

Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ

9-bantwala

Bantwala: ಬಾಲಕಿಯೊಂದಿಗೆ ಅನುಚಿತ ವರ್ತನೆ; ಆರೋಪಿ ವಿರುದ್ಧ ಪ್ರಕರಣ ದಾಖಲು

I.N.D.I.A ಮೈತ್ರಿಕೂಟದ ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಲಿ: ಮಾಳವಿಕಾ ಅವಿನಾಶ್

I.N.D.I.A ಮೈತ್ರಿಕೂಟದ ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಲಿ: ಮಾಳವಿಕಾ ಅವಿನಾಶ್

 Delhi: ಬ್ಯಾಂಕ್‌ ಮ್ಯಾನೇಜರ್‌ ಅಪಹರಣ…ಮಾಜಿ ಬಾಡಿಗೆದಾರರನಿಂದ ಸಂಚು!

 Delhi: ಬ್ಯಾಂಕ್‌ ಮ್ಯಾನೇಜರ್‌ ಅಪಹರಣ…ಮಾಜಿ ಬಾಡಿಗೆದಾರರನಿಂದ ಸಂಚು!

pralhad joshi

Hubli; ದ್ವಂದ್ವತೆ, ತುಷ್ಟೀಕರಣ ಕಾಂಗ್ರೆಸ್ ರಕ್ತದ ಕಣಕಣದಲ್ಲಿದೆ: ಪ್ರಹ್ಲಾದ ಜೋಶಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

4-annamalai

Modi ಕಲ್ಪನೆಯ ವಿಕಸಿತ ಭಾರತಕ್ಕಾಗಿ ಕೋಟ ಅವರನ್ನು ಗೆಲ್ಲಿಸೋಣ: ಅಣ್ಣಾ ಮಲೈ

Today World Malaria Day; ಕರಾವಳಿಯಲ್ಲಿ ಇಳಿಕೆಯಾಗುತ್ತಿದೆ ಮಲೇರಿಯಾ

Today World Malaria Day; ಕರಾವಳಿಯಲ್ಲಿ ಇಳಿಕೆಯಾಗುತ್ತಿದೆ ಮಲೇರಿಯಾ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

Veerappa Moily ಬಿಜೆಪಿ ವಿರುದ್ಧ ಅಸಮಾಧಾನ ಜ್ವಾಲಾಮುಖಿ ಸ್ಫೋಟ

Veerappa Moily ಬಿಜೆಪಿ ವಿರುದ್ಧ ಅಸಮಾಧಾನ ಜ್ವಾಲಾಮುಖಿ ಸ್ಫೋಟ

Udupi; ಮಸ್ಟರಿಂಗ್‌ ಕೇಂದ್ರದಲ್ಲಿ ಸಕಲ ತಯಾರಿ

Udupi; ಮಸ್ಟರಿಂಗ್‌ ಕೇಂದ್ರದಲ್ಲಿ ಸಕಲ ತಯಾರಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

11-belthangady

LS Polls: ಬೆಳ್ತಂಗಡಿ ತಾಲೂಕಿನ ಉಜಿರೆಯ ಮಸ್ಟರಿಂಗ್ ಕೇಂದ್ರಕ್ಕೆ ದ.ಕ. ಜಿಲ್ಲಾಧಿಕಾರಿ ಭೇಟಿ

siddaramaiah

Bidar; ನೇಹಾ ಪ್ರಕರಣದಲ್ಲಿ ಬಿಜೆಪಿ ರಾಜಕೀಯ‌ ಮಾಡುವುದು ಸರಿಯಲ್ಲ: ಸಿಎಂ ಸಿದ್ಧರಾಮಯ್ಯ‌

10-screenshot

Students Notes: ಸ್ಕ್ರೀನ್‌ ಶಾರ್ಟ್‌ಗಳೆಂದು ಪುಸ್ತಕವಾಗದಿರಲಿ

Telugu version of ‘Markasthra’ titled ‘Maranayudham

ತೆಲುಗಿನಲ್ಲಿ ಮಾಲಾಶ್ರೀ ಚಿತ್ರ; ಮಾರಕಾಸ್ತ್ರ ಈಗ ಮಾರಣಾಯುಧಂ

bike

Devadurga: ಅಪಘಾತದಲ್ಲಿ ಬೈಕ್ ಸವಾರರಿಬ್ಬರು ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.