ಮಲ್ಪೆಗೆ ಬರಲಿದೆ ಸ್ಕೂಬಾ ಡೈವಿಂಗ್‌


Team Udayavani, Mar 26, 2017, 12:32 PM IST

skooba-diving.jpg

ಉಡುಪಿ: ಕ್ರೀಡಾ ಇಲಾಖೆಯಿಂದ ಮುಡೇìಶ್ವರ ಮತ್ತು ಮಲ್ಪೆಗೆ ಸ್ಕೂಬಾ ಡೈವಿಂಗ್‌ಗೆ ತಲಾ 1 ಕೋ.ರೂ. ಬಿಡುಗಡೆ ಮಾಡುವುದಾಗಿ ಸಚಿವ ಪ್ರಮೋದ್‌ ಮಧ್ವರಾಜ್‌ ಹೇಳಿದರು.

ಜಿಲ್ಲಾಧಿಕಾರಿ ಕಚೇರಿಯಲ್ಲಿ ಶನಿವಾರ ನಡೆದ ಪ್ರವಾಸೋದ್ಯಮ ಅಭಿವೃದ್ಧಿ ಸಮಿತಿ ಸಭೆಯಲ್ಲಿ ಮಾತನಾಡಿದ ಅವರು, ಮುಂದಿನ ಹಂತದಲ್ಲಿ ಕಾಪುವಿಗೆ 1 ಕೋ.ರೂ. ನೀಡುವ ಭರವಸೆ ನೀಡಿದರು. ಕಾಪು ಕಡಲಕಿನಾರೆಯಲ್ಲಿ ಸ್ಕೂಬಾ ಡೈವಿಂಗ್‌ ಸೆಂಟರ್‌ ನಡೆಸಲು ಅನುಮತಿ ನೀಡುವ ಕುರಿತು ಚರ್ಚಿಸಲಾಯಿತು. ಸ್ಕೈ ಡೈವಿಂಗ್‌ ನಡೆಸುವ ಬಗ್ಗೆಯೂ ಚರ್ಚೆ ನಡೆಯಿತು.

ಜಿಲ್ಲೆಯನ್ನು ಪ್ರವಾಸೋದ್ಯಮದಲ್ಲಿ ಮುಂಚೂಣಿಗೆ ತರಲು ಪೂರಕ ಹಾಗೂ ತ್ವರಿತ ನಿರ್ಧಾರಗಳನ್ನು ತೆಗೆದುಕೊಳ್ಳಿ. ತೆಗೆದುಕೊಂಡ ನಿರ್ಧಾರಗಳನ್ನು ಅನುಷ್ಠಾನಕ್ಕೆ ತನ್ನಿ. ಯೋಜನೆಗಳ ಅನುಷ್ಠಾನಕ್ಕೆ ಸಮಯಮಿತಿ ನಿಗದಿಪಡಿಸಿ ಎಂದು ಸಚಿವರು ಹೇಳಿದರು. ಪ್ರವಾಸಿ ಟ್ಯಾಕ್ಸಿ ಯೋಜನೆಯಡಿ ಅರ್ಹ ಫ‌ಲಾನುಭವಿಗಳೆಲ್ಲರಿಗೂ ಟ್ಯಾಕ್ಸಿ ವಿತರಿಸಿರುವುದಕ್ಕೆ ಸಂತಸ ವ್ಯಕ್ತಪಡಿಸಿದರು.

ಮೂರು ಹೌಸ್‌ ಬೋಟ್‌
ಈಗಾಗಲೇ ಜಿಲ್ಲೆಯಲ್ಲಿ ಮೂರು ಹೌಸ್‌ ಬೋಟ್‌ ಉದ್ಯಮಗಳಿಗೆ ಅನುಮೋದನೆ ನೀಡಲಾಗಿದೆ ಎಂದು ಪ್ರವಾಸೋದ್ಯಮ ಇಲಾಖೆಯ ಸಹಾಯಕ ನಿರ್ದೇಶಕಿ ಬಿ.ಆರ್‌. ಅನಿತಾ ಮಾಹಿತಿ ನೀಡಿದರು.

ಬೀಚ್‌ ಸಂಪರ್ಕ ರಸ್ತೆ ವಿಸ್ತರಣೆ ಬಗ್ಗೆಯೂ ಚರ್ಚೆ ನಡೆಯಿತು. ಕೇಂದ್ರ ಸರಕಾರ ಜಿಲ್ಲೆಗೆ ನೀಡಿದ 9.13 ಕೋ.ರೂ. ವೆಚ್ಚದಲ್ಲಿ ಹಲವು ಕಾಮಗಾರಿಗಳು ಪ್ರಗತಿಯಲ್ಲಿದ್ದು, ಉಳಿದಿರುವ ಕಾಮಗಾರಿಗಳ ಬಗ್ಗೆ ಕ್ರಮ ವಹಿಸಲು ಸೂಚಿಸಲಾಯಿತು.

ಹೋಮ್‌ ಸ್ಟೇ ನೋಂದಣಿಯನ್ನು ಸಮಯಮಿತಿಯೊಳಗೆ ನಡೆಸಲು ಎಸ್ಪಿ ಅವರಿಗೆ ಹಾಗೂ ಎನ್‌ಒಸಿ ನೀಡುವ
ಗ್ರಾ.ಪಂ.ಗಳಿಗೆ ಸುತ್ತೋಲೆ ಮೂಲಕ ಮಾಹಿತಿ ನೀಡಿ ಎಂದು ಜಿಲ್ಲಾಧಿಕಾರಿಗಳಿಗೆ ಸಚಿವರು ಹೇಳಿದರು. ಹೋಂ ಸ್ಟೇ ಮತ್ತು ಸಂಬಂಧಪಟ್ಟವರ ಜತೆ ಸೇರಿ ಕಾರ್ಯಾಗಾರವೊಂದನ್ನು ನಡೆಸಿ ಎಂದೂ ಸಚಿವರು ಹೇಳಿದರು.

ಬೀಚ್‌ಗಳನ್ನು ಅಭಿವೃದ್ಧಿ ಪಡಿಸಲು ಟೆಂಡರ್‌ ಪಡೆದ ಸಂಸ್ಥೆಗಳ ಪ್ರತಿನಿಧಿಗಳಾದ ಸುದೇಶ್‌, ಯತೀಶ್‌ ಬೈಕಂಪಾಡಿ, ಮನೋಹರ ಶೆಟ್ಟಿ, ಅಪ್ನಾ ಹಾಲಿಡೇಸ್‌ನ ನಾಗರಾಜ್‌ ಹೆಬ್ಟಾರ್‌ ಬೀಚ್‌ ಅಭಿವೃದ್ಧಿಗೆ ಹಲವು ಸಲಹೆಗಳನ್ನು ನೀಡಿದರು.

ಏನಿದು ಸ್ಕೂಬಾ ಡೈವಿಂಗ್‌?
ಸಮುದ್ರದ ಆಳಕ್ಕೆ ಈಜಿಕೊಂಡು ಹೋಗುವುದು ಸ್ಕೂಬಾ ಡೈವಿಂಗ್‌. ಸೆಲ್ಫ್ ಕಂಟೇನ್‌x ಅಂಡರ್‌ವಾಟರ್‌ ಡೈವಿಂಗ್‌ನ್ನು ಸಂಕುಚಿತಗೊಳಿಸಿ ಸ್ಕೂಬಾ ಎಂದು ಕರೆಯಲಾಗುವುದು. ಮೊದಲು ಹೋಗುವವರಿಗೆ 30-40 ಮೀ. ಆಳಕ್ಕೆ ಬಿಡುತ್ತಾರೆ. ಹೋಗುವಾಗ ಆಕ್ಸಿಜನ್‌ ಸಿಲಿಂಡರ್‌, ನೀರಿನೊಳಗೆ ಹೋದರೂ ನೀರು ಶರೀರಕ್ಕೆ ತಾಗದಂತೆ ಬೇಕಾದ ಜಾಕೆಟ್‌ ಮೊದಲಾದ ಸಲಕರಣೆಗಳನ್ನು ಅಳವಡಿಸಲಾಗುತ್ತದೆ. ಇದೊಂದು ಹವ್ಯಾಸ. ಇದನ್ನು ಪ್ರವಾಸೋದ್ಯಮಕ್ಕೂ ಅನ್ವಯಿಸಬಹುದಾಗಿದೆ. ಇದಕ್ಕೆ ಹೋಗುವ ಮುನ್ನ ತರಬೇತಿ ಕೊಡುತ್ತಾರೆ. ಪ್ರಸ್ತುತ ಮುಡೇìಶ್ವರದ ನೇತ್ರಾಣಿ ದ್ವೀಪದಲ್ಲಿ ಗೋವಾದವರು ನಡೆಸುವ ಸ್ಕೂಬಾ ಡೈವಿಂಗ್‌ ಕೇಂದ್ರವಿದೆ. ಈಗ ಸಚಿವರು ಪ್ರಸ್ತಾವಿಸಿರುವುದು ಸರಕಾರದ ವತಿಯಿಂದ ಆರಂಭವಾಗುವ ಸ್ಕೂಬಾ ಡೈವಿಂಗ್‌ ಕೇಂದ್ರ. 

ಟಾಪ್ ನ್ಯೂಸ್

Lok Sabha Election; ಕಾಂಗ್ರೆಸ್‌ ಗೆದ್ದರೆ ಸಿದ್ದರಾಮಯ್ಯ ಸ್ಥಾನ ಭದ್ರ

Lok Sabha Election; ಕಾಂಗ್ರೆಸ್‌ ಗೆದ್ದರೆ ಸಿದ್ದರಾಮಯ್ಯ ಸ್ಥಾನ ಭದ್ರ

BJP-JDS ಮೈತ್ರಿಕೂಟದಿಂದ 28 ಸ್ಥಾನ ಗೆದ್ದೇ ಗೆಲ್ಲುತ್ತೇವೆ: ಬಿಎಸ್‌ವೈ

BJP-JDS ಮೈತ್ರಿಕೂಟದಿಂದ 28 ಸ್ಥಾನ ಗೆದ್ದೇ ಗೆಲ್ಲುತ್ತೇವೆ: ಬಿಎಸ್‌ವೈ

Lok Sabha Election-2024; ಬಿಜೆಪಿ ನಾಯಕರಿಂದ ಅಸಹಕಾರ: ದೇವೇಗೌಡ

Lok Sabha Election-2024; ಬಿಜೆಪಿ ನಾಯಕರಿಂದ ಅಸಹಕಾರ: ದೇವೇಗೌಡ

Jayaprakash Hegde “ಉತ್ತಮ ಕೆಲಸ ಮಾಡಿಸಿಕೊಳ್ಳಬೇಕಾದ ಅವಶ್ಯಕತೆ ಮತದಾರರಿಗಿದೆ’

Jayaprakash Hegde “ಉತ್ತಮ ಕೆಲಸ ಮಾಡಿಸಿಕೊಳ್ಳಬೇಕಾದ ಅವಶ್ಯಕತೆ ಮತದಾರರಿಗಿದೆ’

Kundapura “ಪ್ರವಾಸೋದ್ಯಮ ಅಭಿವೃದ್ಧಿಗಾಗಿ ಗೆಲ್ಲಿಸಿ’: ಜಯಪ್ರಕಾಶ್‌ ಹೆಗ್ಡೆKundapura “ಪ್ರವಾಸೋದ್ಯಮ ಅಭಿವೃದ್ಧಿಗಾಗಿ ಗೆಲ್ಲಿಸಿ’: ಜಯಪ್ರಕಾಶ್‌ ಹೆಗ್ಡೆ

Kundapura “ಪ್ರವಾಸೋದ್ಯಮ ಅಭಿವೃದ್ಧಿಗಾಗಿ ಗೆಲ್ಲಿಸಿ’: ಜಯಪ್ರಕಾಶ್‌ ಹೆಗ್ಡೆ

Malpe ಮೀನುಗಾರಿಕೆ ಅಭಿವೃದ್ಧಿಗೆ ಹೆಚ್ಚಿನ ಆದ್ಯತೆ: ಜೆ.ಪಿ. ಹೆಗ್ಡೆ

Malpe ಮೀನುಗಾರಿಕೆ ಅಭಿವೃದ್ಧಿಗೆ ಹೆಚ್ಚಿನ ಆದ್ಯತೆ: ಜೆ.ಪಿ. ಹೆಗ್ಡೆ

Rahul Gandhi: ಜಾತಿಗಣತಿಯನ್ನು ಯಾವ ಶಕ್ತಿಯೂ ತಡೆಯಲಾರದು: ರಾಹುಲ್‌ ಗಾಂಧಿ

Rahul Gandhi: ಜಾತಿಗಣತಿಯನ್ನು ಯಾವ ಶಕ್ತಿಯೂ ತಡೆಯಲಾರದು: ರಾಹುಲ್‌ ಗಾಂಧಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Malpe ಮೀನುಗಾರಿಕೆ ಅಭಿವೃದ್ಧಿಗೆ ಹೆಚ್ಚಿನ ಆದ್ಯತೆ: ಜೆ.ಪಿ. ಹೆಗ್ಡೆ

Malpe ಮೀನುಗಾರಿಕೆ ಅಭಿವೃದ್ಧಿಗೆ ಹೆಚ್ಚಿನ ಆದ್ಯತೆ: ಜೆ.ಪಿ. ಹೆಗ್ಡೆ

20-shirva-1

ಮೂಡುಬೆಳ್ಳೆ ಶ್ರೀಮಹಾಲಿಂಗೇಶ್ವರ, ಶ್ರೀ ಮಹಾಗಣಪತಿ, ಶ್ರೀ ಸೂರ್ಯನಾರಾಯಣ ದೇಗುಲ

ಶೋಧ ಕಾರ್ಯಾಚರಣೆಯ ಬಿಸಿಗೆ ತಣ್ಣಗಾದರೇ?

ಶೋಧ ಕಾರ್ಯಾಚರಣೆಯ ಬಿಸಿಗೆ ತಣ್ಣಗಾದರೇ?

ಉಡುಪಿ-ಚಿಕ್ಕಮಗಳೂರು ಲೋಕಸಭಾ ಕ್ಷೇತ್ರ: 405 ಸೂಕ್ಷ್ಮ ಮತಗಟ್ಟೆ : ಕೆ. ವಿದ್ಯಾಕುಮಾರಿ

ಉಡುಪಿ-ಚಿಕ್ಕಮಗಳೂರು ಲೋಕಸಭಾ ಕ್ಷೇತ್ರ: 405 ಸೂಕ್ಷ್ಮ ಮತಗಟ್ಟೆ : ಕೆ. ವಿದ್ಯಾಕುಮಾರಿ

Lok Sabha Election ; ಪ್ರಚಾರ ಜೋರು, ಚರ್ಚಾ ವಿಷಯ ಮೂರು!

Lok Sabha Election ; ಪ್ರಚಾರ ಜೋರು, ಚರ್ಚಾ ವಿಷಯ ಮೂರು!

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Lok Sabha Election; ಕಾಂಗ್ರೆಸ್‌ ಗೆದ್ದರೆ ಸಿದ್ದರಾಮಯ್ಯ ಸ್ಥಾನ ಭದ್ರ

Lok Sabha Election; ಕಾಂಗ್ರೆಸ್‌ ಗೆದ್ದರೆ ಸಿದ್ದರಾಮಯ್ಯ ಸ್ಥಾನ ಭದ್ರ

BJP-JDS ಮೈತ್ರಿಕೂಟದಿಂದ 28 ಸ್ಥಾನ ಗೆದ್ದೇ ಗೆಲ್ಲುತ್ತೇವೆ: ಬಿಎಸ್‌ವೈ

BJP-JDS ಮೈತ್ರಿಕೂಟದಿಂದ 28 ಸ್ಥಾನ ಗೆದ್ದೇ ಗೆಲ್ಲುತ್ತೇವೆ: ಬಿಎಸ್‌ವೈ

Lok Sabha Election-2024; ಬಿಜೆಪಿ ನಾಯಕರಿಂದ ಅಸಹಕಾರ: ದೇವೇಗೌಡ

Lok Sabha Election-2024; ಬಿಜೆಪಿ ನಾಯಕರಿಂದ ಅಸಹಕಾರ: ದೇವೇಗೌಡ

Jayaprakash Hegde “ಉತ್ತಮ ಕೆಲಸ ಮಾಡಿಸಿಕೊಳ್ಳಬೇಕಾದ ಅವಶ್ಯಕತೆ ಮತದಾರರಿಗಿದೆ’

Jayaprakash Hegde “ಉತ್ತಮ ಕೆಲಸ ಮಾಡಿಸಿಕೊಳ್ಳಬೇಕಾದ ಅವಶ್ಯಕತೆ ಮತದಾರರಿಗಿದೆ’

Kundapura “ಪ್ರವಾಸೋದ್ಯಮ ಅಭಿವೃದ್ಧಿಗಾಗಿ ಗೆಲ್ಲಿಸಿ’: ಜಯಪ್ರಕಾಶ್‌ ಹೆಗ್ಡೆKundapura “ಪ್ರವಾಸೋದ್ಯಮ ಅಭಿವೃದ್ಧಿಗಾಗಿ ಗೆಲ್ಲಿಸಿ’: ಜಯಪ್ರಕಾಶ್‌ ಹೆಗ್ಡೆ

Kundapura “ಪ್ರವಾಸೋದ್ಯಮ ಅಭಿವೃದ್ಧಿಗಾಗಿ ಗೆಲ್ಲಿಸಿ’: ಜಯಪ್ರಕಾಶ್‌ ಹೆಗ್ಡೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.