ಶೀಘ್ರದಲ್ಲೇ ಕಾಪು ತಾಲೂಕು ಅನುಷ್ಠಾನ: ವಿನಯ ಕುಮಾರ್‌ ಸೊರಕೆ


Team Udayavani, Mar 26, 2017, 1:11 PM IST

sorake.jpg

ಕಾಪು: ಕಾಪು ತಾಲೂಕು ಘೋಷಣೆಯಾದಷ್ಟೇ ವೇಗದಲ್ಲಿ ಅನುಷ್ಠಾನವೂ ಆಗಲಿದೆ. ಮುಖ್ಯಮಂತ್ರಿ ಎಸ್‌. ಸಿದ್ದರಾಮಯ್ಯ ಮತ್ತು ಕಂದಾಯ ಸಚಿವ ಕಾಗೋಡು ತಿಮ್ಮಪ್ಪ ಅವರ ಬಳಿ ಈ ಬಗ್ಗೆ ಮಾತುಕತೆಯನ್ನೂ ನಡೆಸಿದ್ದೇನೆ. ಎಲ್ಲವೂ ಅಂದುಕೊಂಡಂತೆ ನಡೆದರೆ ಎ. 22ಕ್ಕೆ ಸ್ವತಃ ಮುಖ್ಯಮಂತ್ರಿ ಮತ್ತು ಕಂದಾಯ ಸಚಿವರೇ ಆಗಮಿಸಿ ಕಾಪು ತಾಲೂಕು ಅನುಷ್ಠಾನ ಯೋಜನೆಗೆ ಚಾಲನೆ ನೀಡುವರು ಎಂದು ಮಾಜಿ ಸಚಿವ, ಕಾಪು ಶಾಸಕ ವಿನಯ ಕುಮಾರ್‌ ಸೊರಕೆ ಹೇಳಿದರು.

ಕಾಪು ತಾಲೂಕು ಘೋಷಣಾ ಸಂಭ್ರಮಾಚರಣೆ ಮತ್ತು ಸಾರ್ವಜನಿಕ ಆಭಿನಂದನ ಸಮಿತಿ ಆಶ್ರಯದಲ್ಲಿ ಮಾ. 25ರಂದು ಕಾಪು ಶ್ರೀ ಲಕ್ಷ್ಮೀ ಜನಾರ್ದನ ದೇವಸ್ಥಾನದ ಸಭಾಭವನದಲ್ಲಿ ಹಮ್ಮಿ ಕೊಳ್ಳಲಾಗಿದ್ದ ಸಾರ್ವಜನಿಕ ಅಭಿನಂದನ ಕಾರ್ಯಕ್ರಮದಲ್ಲಿ ಸಾರ್ವಜನಿಕ ಅಭಿನಂದನೆ ಸ್ವೀಕರಿಸಿ ಅವರು ಮಾತನಾಡಿ ದರು.

ವಿರೋಧಿಗಳಿಗೆ ಶೋಭೆಯೇ ? 
ಕಾಪು ತಾಲೂಕಿಗೆ ಹೋರಾಟ ನಡೆಸುವಾಗ ಪ್ರಾರಂಭದಲ್ಲಿ ಕೈ ಜೋಡಿಸಿ ಮತ್ತೆ ಕೈ ಕೊಟ್ಟ ಕೆಲವರು ಬಳಿಕ ತಾಲೂಕು ಆಗುವುದೇ ಇಲ್ಲ ಎಂದು ಹೇಳುತ್ತಾ ಅಪಪ್ರಚಾರ ಮಾಡಿದ್ದರು. ಈಗ ತಾಲೂಕು ಘೋಷಣೆಯಾದ ಬಳಿಕ ಕಾಪು ತಾಲೂಕು ಘೋಷಣೆಗೆ ಮಾತ್ರ ಸೀಮಿತವಾಗಿರದೇ ಶೀಘ್ರ ಅನುಷ್ಠಾನಗೊಳಿಸಲಿ ಎಂದು ಸವಾಲೆಸೆಯುತ್ತಿದ್ದಾರೆ. ತಾಲೂಕೇ ಬೇಡ ಎಂದವರು ಈಗ ಈ ರೀತಿಯ ಮಾತುಗಳನ್ನಾಡುವುದು ಶೋಭೆಯೇ ಎಂದರು.

ಸಮಗ್ರ ಅಭಿವೃದ್ಧಿಗೆ ಒತ್ತು ಘೋಷಿತ ಕಾಪು ತಾಲೂಕು ವ್ಯಾಪ್ತಿಯಲ್ಲಿ 1 ಲಕ್ಷ ಸಸಿ ನೆಡುವಿಕೆ, 6,000 ಮನೆ ನಿವೇಶನ ಸಹಿತ ಮನೆ ನಿರ್ಮಾಣ, ಪುರಸಭಾ ವ್ಯಾಪ್ತಿಯಲ್ಲಿ ವಸತಿ ಬಡಾವಣೆ, ಕೆರೆ, ಪಾರ್ಕ್‌ ಅಭಿವೃದ್ಧಿಗೆ ಒತ್ತು, 9 ಸೇತುವೆಗಳ ನಿರ್ಮಾಣ, ಪ್ರಮುಖ ರಸ್ತೆಗಳನ್ನು ದ್ವಿಪಥ ರಸ್ತೆಗಳನ್ನಾಗಿ ಪರಿವರ್ತಿಸುವುದು, ಹೆಜಮಾಡಿ ಬಂದರು ಅಭಿವೃದ್ಧಿ, ಬೆಳಪುವಿನ ಸೈಯನ್ಸ್‌ ಸೆಂಟರ್‌ ಶೀಘ್ರ ಅನುಷ್ಠಾನ ಸೇರಿದಂತೆ ಕ್ಷೇತ್ರದ ಸಮಗ್ರ ಅಭಿವೃದ್ಧಿಗೆ ಪೂರಕ ಎಲ್ಲ ಸಿದ್ಧತೆ, ಪ್ರಸ್ತಾವನೆಯನ್ನು ಸರಕಾರದ ಮುಂದಿರಿಸಿದ್ದೇನೆ ಎಂದರು.

ಶಾಸಕ ಸೊರಕೆ, ಲೀಲಾಧರ ಶೆಟ್ಟಿ ಅವರಿಗೆ ಸಮ್ಮಾನ ಸಾರ್ವಜನಿಕ ಅಭಿನಂದನ ಸಮಿತಿ ಮತ್ತು ಸಾರ್ವಜನಿಕರ ಪರವಾಗಿ ಕಾಪು ಶಾಸಕ ವಿನಯ ಕುಮಾರ್‌ ಸೊರಕೆ ಮತ್ತು ಕಾಪು ತಾಲೂಕು ಹೋರಾಟ ಸಮಿತಿ ಅಧ್ಯಕ್ಷ ಸಮಾಜರತ್ನ ಕೆ. ಲೀಲಾಧರ ಶೆಟ್ಟಿ ಅವರನ್ನು ಗೌರವಪೂರ್ವಕವಾಗಿ ಅಭಿನಂದಿಸಿ ಸಮ್ಮಾನಿಸಲಾಯಿತು.

ಕರ್ನಾಟಕ ರಾಜ್ಯ ಧಾರ್ಮಿಕ ಪರಿಷತ್‌ನ ಸದಸ್ಯ ವೇ| ಮೂ| ಕೇಂಜ ಶ್ರೀಧರ ತಂತ್ರಿ, ಶಿರ್ವ ಸೈಂಟ್‌ ಮೆರೀಸ್‌
ಚರ್ಚ್‌ನ ಧರ್ಮಗುರು ರೆ| ಫಾ| ಸ್ಟಾ  éನಿತಾವ್ರೋ, ಕಾಪು ಜುಮ್ಮಾ ಮಸೀದಿ ಧರ್ಮಗುರು ಇರ್ಷಾದ್‌ ಸಆದಿ ಆಶೀರ್ವಚನ ನೀಡಿದರು. ರಾಷ್ಟ್ರ ಪ್ರಶಸ್ತಿ ಪುರಸ್ಕೃತ ಶಿಕ್ಷಕ, ಶಿಕ್ಷಣ ತಜ್ಞ ಕುದಿ ವಸಂತ ಶೆಟ್ಟಿ ಅಭಿನಂದನ ಭಾಷಣ ಮಾಡಿದರು.

ಕಾಪು ಪುರಸಭಾಧ್ಯಕ್ಷೆ ಸೌಮ್ಯಾ, ಉಪಾಧ್ಯಕ್ಷ ಕೆ. ಎಚ್‌. ಉಸ್ಮಾನ್‌, ಕಾಪು ಅಭಿವೃದ್ಧಿ ಸಮಿತಿ ಅಧ್ಯಕ್ಷ ವಾಸುದೇವ ಶೆಟ್ಟಿ, ಉಡುಪಿ ಸಾಯಿರಾಧಾ ಗ್ರೂಪ್ಸ್‌ನ ಅಧ್ಯಕ್ಷ ಮನೋಹರ ಶೆಟ್ಟಿ, ಜೆಡಿಎಸ್‌ನ ಜಿಲ್ಲಾಧ್ಯಕ್ಷ ಯೋಗೀಶ್‌ ಶೆಟ್ಟಿ ಬಾಲಾಜಿ, ಕಾಪು ಶ್ರೀ ಜನಾರ್ದನ ದೇವಸ್ಥಾನದ ಆಡಳಿತ ಮೊಕೇ¤ಸರ ಮೋಹನ್‌ ಎಂ. ಬಂಗೇರ, ಗಣ್ಯರಾದ ಸುಧೀರ್‌ ಹೆಗ್ಡೆ, ಮಾಧವ ಆರ್‌. ಪಾಲನ್‌, ಶೇಖರ ಆಚಾರ್ಯ, ನಜೀರ್‌ ಅಹ್ಮದ್‌, ಅಶೋಕ್‌ ಎಂ. ಸುವರ್ಣ, ಮೈರ್ಮಾಡಿ ಸುಧಾಕರ ಶೆಟ್ಟಿ, ವಿಲ್ಸನ್‌ ರೊಡ್ರಿಗಸ್‌, ಪ್ರಭಾಕರ ಪೂಜಾರಿ, ನಿತ್ಯಾನಂದ ಶೆಟ್ಟಿ, ಅಮೃತ್‌ ಶೆಣೈ, ಉದಯ ಶೆಟ್ಟಿ ಮುನಿಯಾಲು, ಗೀತಾ ವಾಗ್ಲೆ ಉಪಸ್ಥಿತರಿದ್ದರು.

ಕಾಪು ಬ್ಲಾಕ್‌ ಕಾಂಗ್ರೆಸ್‌ ಸಮಿತಿ ಅಧ್ಯಕ್ಷ ನವೀನ್‌ಚಂದ್ರ ಜೆ. ಶೆಟ್ಟಿ ಸ್ವಾಗತಿಸಿದರು. ದ.ಕ. ಜಿಲ್ಲಾ ಕೇಂದ್ರ ಸಹಕಾರಿ
ಬ್ಯಾಂಕ್‌ ನಿರ್ದೇಶಕ ಡಾ| ದೇವಿಪ್ರಸಾದ್‌ ಶೆಟ್ಟಿ ಪ್ರಸ್ತಾವನೆಗೈದರು. ಕಾಪು ನಗರ ಯೋಜನಾ ಪ್ರಾಧಿಕಾರದ ಅಧ್ಯಕ್ಷ ಕಾಪು ದಿವಾಕರ ಶೆಟ್ಟಿ ವಂದಿಸಿದರು. ಟಿ.ವಿ. ನಿರೂಪಕ ನವೀನ್‌ ಶೆಟ್ಟಿ ಎಡೆ¾àರು ಕಾರ್ಯಕ್ರಮ ನಿರೂಪಿಸಿದರು.

ಟಾಪ್ ನ್ಯೂಸ್

Seat next to parents for children under 12 years on the plane?

DGCA: ವಿಮಾನದಲ್ಲಿ 12 ವರ್ಷದೊಳಗಿನ ಮಕ್ಕಳಿಗೆ ಪೋಷಕರ ಪಕ್ಕ ಆಸನ?

Congress ಗೆದ್ದರೆ ದಲಿತರ ಮೀಸಲು ಮುಸ್ಲಿಂ ಪಾಲು: ಮೋದಿ ಮತ್ತೆ ವಾಗ್ಬಾಣ

Congress ಗೆದ್ದರೆ ದಲಿತರ ಮೀಸಲು ಮುಸ್ಲಿಂ ಪಾಲು: ಮೋದಿ ಮತ್ತೆ ವಾಗ್ಬಾಣ

Dakshina Kannada: 5 ಸಿಎಪಿಎಫ್‌/ಕೆಎಸ್‌ಆರ್‌ಪಿ ತುಕಡಿ, 3,100 ಸಿಬಂದಿ ನಿಯೋಜನೆ

Dakshina Kannada: 5 ಸಿಎಪಿಎಫ್‌/ಕೆಎಸ್‌ಆರ್‌ಪಿ ತುಕಡಿ, 3,100 ಸಿಬಂದಿ ನಿಯೋಜನೆ

Election: ಮಂಗಳೂರು-ಶೋರ್ನೂರು-ಬೆಂಗಳೂರು ಮಧ್ಯೆ ವಿಶೇಷ ರೈಲು

Election: ಮಂಗಳೂರು-ಶೋರ್ನೂರು-ಬೆಂಗಳೂರು ಮಧ್ಯೆ ವಿಶೇಷ ರೈಲು

Udupi-Chikmagalur Lok Sabha constituency: ಯುವ ಮತದಾರರ ಚುನಾವಣೆ ಉತ್ಸಾಹ

Udupi-Chikmagalur: ಯುವ ಮತದಾರರ ಚುನಾವಣೆ ಉತ್ಸಾಹ

ಪರಿಹಾರ ತಾರತಮ್ಯ ಕಾಂಗ್ರೆಸ್‌ನ ನರೇಟಿವ್‌: ಅಣ್ಣಾಮಲೈ

ಪರಿಹಾರ ತಾರತಮ್ಯ ಕಾಂಗ್ರೆಸ್‌ನ ನರೇಟಿವ್‌: ಅಣ್ಣಾಮಲೈ

ಚೌಟರನ್ನು ದಾಖಲೆಯ ಅಂತರದಿಂದ ಗೆಲ್ಲಿಸಿ: ತಮಿಳುನಾಡು ಬಿಜೆಪಿ ಅಧ್ಯಕ್ಷ ಅಣ್ಣಾಮಲೈ

Puttur; ಚೌಟರನ್ನು ದಾಖಲೆಯ ಅಂತರದಿಂದ ಗೆಲ್ಲಿಸಿ: ಅಣ್ಣಾಮಲೈ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Udupi-Chikmagalur Lok Sabha constituency: ಯುವ ಮತದಾರರ ಚುನಾವಣೆ ಉತ್ಸಾಹ

Udupi-Chikmagalur: ಯುವ ಮತದಾರರ ಚುನಾವಣೆ ಉತ್ಸಾಹ

12

Theft; ಕೊಲ್ಲೂರು: ಮಹಿಳೆಯ ಚಿನ್ನ, ನಗದು ಕಳವು

11-udyavara

Sand Mining; ಉದ್ಯಾವರ: ಚುನಾವಣ ಚೆಕ್‌ಪೋಸ್ಟ್‌ ಬಳಿ ಅಕ್ರಮ ಮರಳು ಸಾಗಾಟ ಪತ್ತೆ

10-shirva

ಮೂಡುಬೆಳ್ಳೆ ಶ್ರೀಮಹಾಲಿಂಗೇಶ್ವರ, ಶ್ರೀ ಮಹಾಗಣಪತಿ, ಶ್ರೀ ಸೂರ್ಯನಾರಾಯಣ ದೇಗುಲ

Lok Sabha Election 2024 ಕೊಡುವವನ ಪಾತ್ರ ನಿರ್ವಹಿಸಲು ಮತದಾರ ಸಜ್ಜು

Lok Sabha Election 2024 ಕೊಡುವವನ ಪಾತ್ರ ನಿರ್ವಹಿಸಲು ಮತದಾರ ಸಜ್ಜು

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

Seat next to parents for children under 12 years on the plane?

DGCA: ವಿಮಾನದಲ್ಲಿ 12 ವರ್ಷದೊಳಗಿನ ಮಕ್ಕಳಿಗೆ ಪೋಷಕರ ಪಕ್ಕ ಆಸನ?

Congress ಗೆದ್ದರೆ ದಲಿತರ ಮೀಸಲು ಮುಸ್ಲಿಂ ಪಾಲು: ಮೋದಿ ಮತ್ತೆ ವಾಗ್ಬಾಣ

Congress ಗೆದ್ದರೆ ದಲಿತರ ಮೀಸಲು ಮುಸ್ಲಿಂ ಪಾಲು: ಮೋದಿ ಮತ್ತೆ ವಾಗ್ಬಾಣ

Dakshina Kannada: 5 ಸಿಎಪಿಎಫ್‌/ಕೆಎಸ್‌ಆರ್‌ಪಿ ತುಕಡಿ, 3,100 ಸಿಬಂದಿ ನಿಯೋಜನೆ

Dakshina Kannada: 5 ಸಿಎಪಿಎಫ್‌/ಕೆಎಸ್‌ಆರ್‌ಪಿ ತುಕಡಿ, 3,100 ಸಿಬಂದಿ ನಿಯೋಜನೆ

Election: ಮಂಗಳೂರು-ಶೋರ್ನೂರು-ಬೆಂಗಳೂರು ಮಧ್ಯೆ ವಿಶೇಷ ರೈಲು

Election: ಮಂಗಳೂರು-ಶೋರ್ನೂರು-ಬೆಂಗಳೂರು ಮಧ್ಯೆ ವಿಶೇಷ ರೈಲು

Udupi-Chikmagalur Lok Sabha constituency: ಯುವ ಮತದಾರರ ಚುನಾವಣೆ ಉತ್ಸಾಹ

Udupi-Chikmagalur: ಯುವ ಮತದಾರರ ಚುನಾವಣೆ ಉತ್ಸಾಹ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.