ಗುಡಿಸಲಿಗೆ ಬೆಂಕಿ, ಸಿಲಿಂಡರ್ ಸ್ಫೋಟ
Team Udayavani, May 23, 2017, 3:33 PM IST
ಉಡುಪಿ: ನಿಟ್ಟೂರು ಅಡ್ಕದಕಟ್ಟೆ ಬಬ್ಬುಸ್ವಾಮಿ ದೈವಸ್ಥಾನದ ಸಮೀಪ ಅನ್ಯ ಜಿಲ್ಲೆಯ ಕೂಲಿ ಕಾರ್ಮಿಕರು ವಾಸ್ತವ್ಯ ಮಾಡಿಕೊಂಡಿದ್ದ ಸುಮಾರು 15 ಗುಡಿಸಲಿಗೆ ಬೆಂಕಿ ಬಿದ್ದು ಅಪಾರ ನಷ್ಟ ಸಂಭವಿಸಿದೆ.
ಮನೆಯಲ್ಲಿ ಯಾರೂ ಇಲ್ಲದಿದ್ದ ಪರಿಣಾಮ ಪ್ರಾಣಹಾನಿ ಸಂಭವಿಸಿಲ್ಲ. ಪಕ್ಕದ ಪಾಳುಬಾವಿ ಯೊಂದರಲ್ಲಿ ಕಸ ಹಾಕಲಾಗುತ್ತಿತ್ತು. ಸೋಮವಾರ ಅದಕ್ಕೆ ಬೆಂಕಿ ಕೊಡಲಾಗಿತ್ತು. ಆ ಬೆಂಕಿಯು ಗುಡಿಸಲಿಗೆ ತಾಗಿ ಬೆಂಕಿ ವ್ಯಾಪಿಸಿಕೊಂಡಿತ್ತು. ಬೆಂಕಿ ಹಬ್ಬಿದ ಪರಿಣಾಮ ಗುಡಿಸಲಿನ ಒಳಗಿದ್ದ ಗ್ಯಾಸ್ ಸಿಲಿಂಡರ್ ಸ್ಫೋಟಗೊಂಡು ಸ್ಥಳೀಯರ ಆತಂಕಕ್ಕೂ ಕಾರಣವಾಗಿತ್ತು. ಸ್ಥಳೀಯ ನಿವಾಸಿ ಬಾಲಕೃಷ್ಣ ಶೆಟ್ಟಿಯವರು ನೀಡಿದ ಮಾಹಿತಿಯಂತೆ ಅಗ್ನಿಶಾಮಕ ದಳದ ಸಿಬಂದಿ ಸ್ಥಳಕ್ಕೆ ತೆರಳಿ ಸಾರ್ವಜನಿಕರೊಂದಿಗೆ ಸೇರಿಕೊಂಡು ಬೆಂಕಿಯನ್ನು ನಂದಿಸಿದ್ದಾರೆ.
ಗುಡಿಸಲು ವಾಸಿಗಳಾದ ಮೇನಪ್ಪ, ವೆಂಕಪ್ಪ, ಉಳ್ಳಪ್ಪ, ಪರಶುರಾಮ, ಚಿನ್ನಸ್ವಾಮಿ, ಸಿದ್ಧಪ್ಪ, ಕಾಲಿಯಪ್ಪ, ಅಪ್ಪಾದೊರೈ, ಶೇಖರ, ಲಕ್ಷ್ಮೀ ಮತ್ತಿತರರ ಮನೆಗಳು ಬೆಂಕಿಗಾಹುತಿಯಾಗಿವೆ. ಮನೆಯ ಪಾತ್ರೆ ಇನ್ನಿತರ ಸೊತ್ತುಗಳು, ಮರಮಟ್ಟು ಗಳು, ನಗದು, ಬಟ್ಟೆಬರೆಗಳ ಸಹಿತ ಹಲವು ವಸ್ತುಗಳು ಸುಟ್ಟು ಕರಕಲಾಗಿವೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Udupi: ಟಿಪ್ಪರ್ – ಬೈಕ್ ನಡುವೆ ಭೀಕರ ಅಪಘಾತ; ಬೈಕ್ ಸವಾರ ಸ್ಥಳದಲ್ಲೇ ಸಾವು
Ajekaru: ಹೆರ್ಮುಂಡೆ; ಚಿಂಕರಮಲೆ ಅರಣ್ಯದಲ್ಲಿ ಕಾಳ್ಗಿಚ್ಚು; ಹಾನಿ
Malpe Beach: ಈಜಲು ಹೋದ ಮೂವರು ಸಮುದ್ರಪಾಲು; ಓರ್ವನ ಸಾವು, ಇಬ್ಬರ ರಕ್ಷಣೆ
ಕೋತಲಕಟ್ಟೆ: ಹೆದ್ದಾರಿ ಬಳಿ ನಿಲ್ಲಿಸಿದ್ದ ಸ್ಕೂಟಿ ಕಳವು
Thekkatte ಶ್ರೀರಾಮ ಭಜನಾ ಮಂದಿರದಲ್ಲಿ ರಾಮನವಮಿ: ರಾವಣ ದಹನ ಮತ್ತು ಓಕುಳಿ ಉತ್ಸವ ಸಂಪನ್ನ
MUST WATCH
ಹೊಸ ಸೇರ್ಪಡೆ
Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!
Kushtagi:ವಿದ್ಯುತ್ದೀಪದ ಕಂಬಗಳಿಗೆ ಬಲ್ಬ್ ಅಳವಡಿಸುವ ವೇಳೆ ಅವಘಡ; ಪುರಸಭೆ ಸಿಬ್ಬಂದಿಗೆ ಗಾಯ
Festivals: ಹಬ್ಬಗಳು ಮರೆಯಾಗುತ್ತಿವೆಯೇ?
Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್ರಿಂದ ಪರಿಶೀಲನೆ
Nagaland Poll: ಬೇಡಿಕೆ ಈಡೇರಿಸಿ- ಆರು ಜಿಲ್ಲೆಗಳಲ್ಲಿ ಒಂದೇ ಒಂದು ಮತದಾನ ನಡೆದಿಲ್ಲ!