ಸಚಿವ ರೈ ರಾಜೀನಾಮೆಗೆ ಉಡುಪಿ ಜಿಲ್ಲಾ ಬಿಜೆಪಿ ಆಗ್ರಹ


Team Udayavani, Jun 20, 2017, 2:52 PM IST

bjp.jpg

ಉಡುಪಿ: ಹಿರಿಯ ಆರ್‌ಎಸ್‌ಎಸ್‌ ನಾಯಕ ಕಲ್ಲಡ್ಕ ಪ್ರಭಾಕರ ಭಟ್‌ ಅವರ ವಿರುದ್ಧ ಐಪಿಸಿ ಸೆಕ್ಷನ್‌ 307ರ ಅಡಿ ಸುಳ್ಳು ಮೊಕದ್ದಮೆ ದಾಖಲಿಸಿ, ಅವರನ್ನು ಬಂಧಿಸುವಂತೆ ದ.ಕ. ಎಸ್‌ಪಿಗೆ ಸಚಿವ ಬಿ. ರಮಾನಾಥ ರೈ ಸೂಚನೆ ನೀಡಿರುವುದು ಖಂಡನೀಯ. ಅವರಿಗೆ ಸಚಿವ ಸ್ಥಾನದಲ್ಲಿ ಮುಂದುವರಿಯಲು ಯಾವುದೇ ನೈತಿಕತೆ ಇಲ್ಲ. ಕೂಡಲೇ ಸಚಿವ ಸ್ಥಾನಕ್ಕೆ ನೈತಿಕ ಹೊಣೆ ಹೊತ್ತು ರಾಜೀನಾಮೆ ನೀಡಬೇಕು, ಇಲ್ಲದಿದ್ದರೆ ಸಿಎಂ ಅವರನ್ನು ತತ್‌ಕ್ಷಣ ವಜಾ ಮಾಡಬೇಕು ಎಂದು ಬಿಜೆಪಿ ಜಿಲ್ಲಾಧ್ಯಕ್ಷ ಮಟ್ಟಾರು ರತ್ನಾಕರ ಹೆಗ್ಡೆ ಆಗ್ರಹಿಸಿದರು.

ಜಿಲ್ಲಾ ಬಿಜೆಪಿ ಕಚೇರಿಯಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ಕ್ರಿಮಿನಲ್‌ ಪ್ರಕರಣ ಯಾವ ಸಂದರ್ಭದಲ್ಲಿ ದಾಖಲಾಗುತ್ತದೆ ಎನ್ನುವ ಸಾಮಾನ್ಯ ಜ್ಞಾನವೂ ರೈ ಅವರಿಗಿಲ್ಲ. ಸ್ವತಃ ಎಸ್‌ಪಿಯೇ ಕಲ್ಲಡ್ಕ ಗಲಭೆಗೆ ಡ್ರಗ್‌ ಮಾಫಿಯಾ ಹಾಗೂ ಮಾದಕ ವಸ್ತುಗಳ ವ್ಯಸನಕ್ಕೆ ತುತ್ತಾಗಿರುವ ಯುವಕರು ಕಾರಣ ಎಂದಿದಿದ್ದರೂ ಗಲಭೆ ಪ್ರಕರಣದಲ್ಲಿ ಪ್ರಭಾಕರ ಭಟ್‌ ಅವರನ್ನು ಎಳೆದು ತಂದದ್ದು ಪ್ರಜಾಪ್ರಭುತ್ವಕ್ಕೆ ಮಾಡಿದ ಅವಮಾನ. ಹಲವು ದಶಕಗಳಿಂದ ರಾಜಕೀಯದಲ್ಲಿರುವ ರೈ ಅವರಿಗೆ ಕಲ್ಲಡ್ಕ ಪ್ರಭಾಕರ ಭಟ್‌ ಅವರ ವ್ಯಕ್ತಿತ್ವದ ಪರಿಚಯ ಗೊತ್ತಿಲ್ಲದೆ ಹೋದದ್ದು ಮಾತ್ರ ದುರಂತ ಎಂದರು.

ಕೋಮು ಸಾಮರಸ್ಯಕ್ಕೆ ಹೆಸರಾದ ಕರಾವಳಿಯಲ್ಲಿ ಕೋಮುಗಳ ನಡುವೆ ಬೆಂಕಿ ಹಚ್ಚುವ ಕೆಲಸವನ್ನು ಸಚಿವ ರೈ ಮಾಡುತ್ತಿದ್ದಾರೆ. ಪ್ರಭಾಕರ ಭಟ್‌ ಅವರನ್ನು ಬಂಧಿಸುವಂತೆ ಪೊಲೀಸ್‌ ಅಧಿಕಾರಿಗಳಿಗೆ ಒತ್ತಡ ಹೇರುತ್ತಿರುವ ಸಚಿವ ರಮಾನಾಥ ರೈ ಈ ಕೂಡಲೇ ರಾಜೀನಾಮೆ ನೀಡಬೇಕು ಎಂದು ಬಿಜೆಪಿ ರಾಜ್ಯ ಕಾರ್ಯದರ್ಶಿ ತಿಂಗಳೆ ವಿಕ್ರಮಾರ್ಜುನ ಹೆಗ್ಗಡೆ ಒತ್ತಾಯಿಸಿದ್ದಾರೆ.

ಶಿಷ್ಟಾಚಾರ ಉಲ್ಲಂ ಸಿದ ಸಿಎಂ
ಉಡುಪಿಗೆ ರಾಷ್ಟ್ರಪತಿ ಭೇಟಿ ನೀಡಿದ ಸಂದರ್ಭ ರಾಜ್ಯದ ಮುಖ್ಯಮಂತ್ರಿಯಾಗಿ ಸಿದ್ದರಾಮಯ್ಯ ಭಾಗವಹಿಸದೆ ಇರುವುದು ಶಿಷ್ಟಾಚಾರದ ಉಲ್ಲಂಘನೆಯಾಗಿದೆ. ರಾಷ್ಟ್ರಪತಿ, ಪ್ರಧಾನಿ ಕಾರ್ಯಕ್ರಮಗಳಲ್ಲಿ ಮುಖ್ಯಮಂತ್ರಿ ಹಾಜರಿರಬೇಕಾದುದು ಕರ್ತವ್ಯ. ಆದರೆ ಶ್ರೀಕೃಷ್ಣ ಮಠಕ್ಕೆ ಭೇಟಿ ನೀಡಬೇಕಾಗುತ್ತದೆ ಎನ್ನುವ ಕಾರಣಕ್ಕಾಗಿ ಉದ್ದೇಶ ಪೂರ್ವಕವಾಗಿ ಅವರು ಈ ಕಾರ್ಯಕ್ರಮದಿಂದ ತಪ್ಪಿಸಿಕೊಂಡಿದ್ದಾರೆ. ಶ್ರೀಕೃಷ್ಣ ಮಠದ ಬಗ್ಗೆ ಇದ್ದ ದ್ವಂದ್ವ ನಿಲುವನ್ನು ಸರಿಪಡಿಸಲು ಉತ್ತಮ ಅವಕಾಶವಿತ್ತು. ಆದರೆ ಹಾಗೇ ಮಾಡದೇ ಸಮಸ್ತ ಹಿಂದೂ ಸಮಾಜ, ಶ್ರೀಕೃಷ್ಣ ಮಠಕ್ಕೆ
ಅಗೌರವ ತೋರಿದ್ದಾರೆ. ಹಿಂದೂಗಳ ಭಾವನೆಗೆ ಧಕ್ಕೆ ತಂದಿರುವ ಅವರು ತತ್‌ಕ್ಷಣವೇ ಕ್ಷಮೆ ಯಾಚಿಸಬೇಕು ಎಂದು ಒತ್ತಾಯಿಸಿದರು.

ಕಾಪು ಶಾಸಕ ವಿನಯಕುಮಾರ್‌ ಸೊರಕೆ ಅವರು, ತಮ್ಮ ಗೂಂಡಾ ಬೆಂಬಲಿಗರೊಂದಿಗೆ ಸೇರಿಕೊಂಡು ಎಲ್ಲೂರಿನ ಸ್ಥಳೀಯ ನಿವಾಸಿ ಸಂತೋಷ್‌ ಅವರಿಗೆ ನಿಂದಿಸಿ, ಜೀವ ಬೆದರಿಕೆ ಹಾಕಿರುವುದು ಖಂಡನೀಯ ಎಂದರು.

ಜೂ. 21: ಯೋಗ ದಿನಾಚರಣೆ
ಜಿಲ್ಲಾ ಬಿಜೆಪಿ ವತಿಯಿಂದ ವಿಶ್ವ ಯೋಗ ದಿನಾನಚರಣೆಯ ಪ್ರಯುಕ್ತ ಜೂ. 21ರ ಬೆಳಗ್ಗೆ 7.30ರಿಂದ 9 ಗಂಟೆ ವರೆಗೆ ಉಡುಪಿ ಕಿದಿಯೂರು ಹೊಟೇಲ್‌ನ ಶೇಷಶಯನ ಸಭಾಂಗಣದಲ್ಲಿ ವಿಶೇಷ ಯೋಗಾಸನ ಕಾರ್ಯಕ್ರಮ ನಡೆಯಲಿದೆ ಎಂದರು.

ಟಾಪ್ ನ್ಯೂಸ್

11-udyavara

Sand Mining; ಉದ್ಯಾವರ: ಚುನಾವಣ ಚೆಕ್‌ಪೋಸ್ಟ್‌ ಬಳಿ ಅಕ್ರಮ ಮರಳು ಸಾಗಾಟ ಪತ್ತೆ

MDH-Everest ban: India seeks details from Singapore, Hong Kong

MDH- Everest ಮಸಾಲೆ ನಿಷೇಧ: ಸಿಂಗಾಪುರ, ಹಾಂಕಾಂಗ್‌ ನಿಂದ ವಿವರ ಕೇಳಿದ ಭಾರತ

ದೇಶದ ನಿರುದ್ಯೋಗ ಪ್ರಮಾಣ 45 ವರ್ಷದಲ್ಲೇ ಗರಿಷ್ಠ: ಪ್ರಿಯಾಂಕಾ ಕಿಡಿ

Priyanka Gandhi; ದೇಶದ ನಿರುದ್ಯೋಗ ಪ್ರಮಾಣ 45 ವರ್ಷದಲ್ಲೇ ಗರಿಷ್ಠ

Neha Hiremath ತಂದೆ ಜತೆ ಮಾತನಾಡಿ ಸಾಂತ್ವನ ಹೇಳಿದ ಸಿಎಂ ಸಿದ್ದು

Neha Hiremath ತಂದೆ ಜತೆ ಮಾತನಾಡಿ ಸಾಂತ್ವನ ಹೇಳಿದ ಸಿಎಂ ಸಿದ್ದು

Congress ಗೆದ್ದರೆ ಸಿದ್ದರಾಮಯ್ಯ ಕೆಳಗಿಳಿಸಿ ಡಿಕೆಶಿ ಸಿಎಂ: ಯತ್ನಾಳ್

Congress ಗೆದ್ದರೆ ಸಿದ್ದರಾಮಯ್ಯ ಕೆಳಗಿಳಿಸಿ ಡಿಕೆಶಿ ಸಿಎಂ: ಯತ್ನಾಳ್

Harihara ಬಿಜೆಪಿ ಶಾಸಕ ಬಿ.ಪಿ.ಹರೀಶ್‌ಗೆ ಜೀವ ಬೆದರಿಕೆ,

Harihara ಬಿಜೆಪಿ ಶಾಸಕ ಬಿ.ಪಿ.ಹರೀಶ್‌ಗೆ ಜೀವ ಬೆದರಿಕೆ

9-aranthodu

Aranthodu: ಬೆಂಕಿ ಅವಘಡ; ತಪ್ಪಿದ ಭಾರೀ ಅನಾಹುತ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

12

Theft; ಕೊಲ್ಲೂರು: ಮಹಿಳೆಯ ಚಿನ್ನ, ನಗದು ಕಳವು

11-udyavara

Sand Mining; ಉದ್ಯಾವರ: ಚುನಾವಣ ಚೆಕ್‌ಪೋಸ್ಟ್‌ ಬಳಿ ಅಕ್ರಮ ಮರಳು ಸಾಗಾಟ ಪತ್ತೆ

10-shirva

ಮೂಡುಬೆಳ್ಳೆ ಶ್ರೀಮಹಾಲಿಂಗೇಶ್ವರ, ಶ್ರೀ ಮಹಾಗಣಪತಿ, ಶ್ರೀ ಸೂರ್ಯನಾರಾಯಣ ದೇಗುಲ

Lok Sabha Election 2024 ಕೊಡುವವನ ಪಾತ್ರ ನಿರ್ವಹಿಸಲು ಮತದಾರ ಸಜ್ಜು

Lok Sabha Election 2024 ಕೊಡುವವನ ಪಾತ್ರ ನಿರ್ವಹಿಸಲು ಮತದಾರ ಸಜ್ಜು

Udupi; ಎ. 24ರ ಬಳಿಕ ಹೊರಗಿನವರು ಕ್ಷೇತ್ರದಲ್ಲಿರುವಂತಿಲ್ಲ: ಜಿಲ್ಲಾಧಿಕಾರಿ

Udupi; ಎ. 24ರ ಬಳಿಕ ಹೊರಗಿನವರು ಕ್ಷೇತ್ರದಲ್ಲಿರುವಂತಿಲ್ಲ: ಜಿಲ್ಲಾಧಿಕಾರಿ

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

12

Theft; ಕೊಲ್ಲೂರು: ಮಹಿಳೆಯ ಚಿನ್ನ, ನಗದು ಕಳವು

11-udyavara

Sand Mining; ಉದ್ಯಾವರ: ಚುನಾವಣ ಚೆಕ್‌ಪೋಸ್ಟ್‌ ಬಳಿ ಅಕ್ರಮ ಮರಳು ಸಾಗಾಟ ಪತ್ತೆ

Gadag; ತೋಂಟದಾರ್ಯ ಮಠದ ಅದ್ದೂರಿ ಮಹಾರಥೋತ್ಸವ

Gadag; ತೋಂಟದಾರ್ಯ ಮಠದ ಅದ್ದೂರಿ ಮಹಾರಥೋತ್ಸವ

10-shirva

ಮೂಡುಬೆಳ್ಳೆ ಶ್ರೀಮಹಾಲಿಂಗೇಶ್ವರ, ಶ್ರೀ ಮಹಾಗಣಪತಿ, ಶ್ರೀ ಸೂರ್ಯನಾರಾಯಣ ದೇಗುಲ

MDH-Everest ban: India seeks details from Singapore, Hong Kong

MDH- Everest ಮಸಾಲೆ ನಿಷೇಧ: ಸಿಂಗಾಪುರ, ಹಾಂಕಾಂಗ್‌ ನಿಂದ ವಿವರ ಕೇಳಿದ ಭಾರತ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.