3 ವರ್ಷಗಳಲ್ಲಿ ಶಿಕ್ಷಣ ಅನುದಾನ ಬಳಕೆ ಇಷ್ಟು…
Team Udayavani, Jun 23, 2017, 4:07 PM IST
ಉಡುಪಿ: ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣಕ್ಕಾಗಿ 2013-14ರಿಂದ 2016-17ನೇ ಸಾಲಿನವರೆಗೆ 35,000 ಕೋಟಿ ರೂ. ಅನುದಾನ ಹಂಚಿಕೆಯಾಗಿದ್ದು, ಇದರಲ್ಲಿ 33,000 ಕೋಟಿ ರೂ. ಅನುದಾನ ಮಾತ್ರ ಬಳಕೆಯಾಗಿದೆ ಎಂದು ಸಚಿವ ತನ್ವೀರ್ ಸೇಠ್ ಅವರು ವಿಧಾನ ಪರಿಷತ್ತಿನಲ್ಲಿ ಕೋಟ ಶ್ರೀನಿವಾಸ ಪೂಜಾರಿ ಅವರಿಗೆ ತಿಳಿಸಿದರು.
ರಾಜ್ಯದಲ್ಲಿ ಆರ್ಟಿಇ ಕಾಯ್ದೆಯಡಿ 2012-13ರಿಂದ 2016-17ರ ವರೆಗೆ 685 ಕೋಟಿ ರೂ. ಖರ್ಚಾಗಿದೆ. 2016-17ನೇ ಶೈಕ್ಷಣಿಕ ಸಾಲಿನಲ್ಲಿ ಲಭ್ಯವಿದ್ದ ಸೀಟುಗಳ ಸಂಖ್ಯೆ 1,15,237 ಇದ್ದು, ದಾಖಲಾದ ವಿದ್ಯಾರ್ಥಿಗಳ ಸಂಖ್ಯೆ 97,991. ಪ್ರವೇಶ ಪ್ರಕ್ರಿಯೆಗಾಗಿ ಹೊಸದಾಗಿ ತಂತ್ರಾಂಶ ಅಭಿವೃದ್ಧಿ ಪಡಿಸಲಾಗಿದೆ. ಅರ್ಜಿದಾರರಿಗೆ ಯಾವುದೇ ರೀತಿಯ ಪಕ್ಷಪಾತ ಮಾಡದೆ ಪಾರದರ್ಶಕ ರೀತಿಯಲ್ಲಿ ಪತ್ರಿಕಾ ಹಾಗೂ ವಿದ್ಯುನ್ಮಾನ ಮಾಧ್ಯಮಗಳ ಸಮ್ಮುಖದಲ್ಲಿ ಲಾಟರಿ ಪ್ರಕ್ರಿಯೆ ನಡೆಸಲಾಗಿದೆ. ಕಳೆದ 3 ವರ್ಷದಲ್ಲಿ ಯಾವುದೇ ಸರಕಾರಿ ಪ್ರಾಥಮಿಕ ಮತ್ತು ಪ್ರೌಢಶಾಲೆಗಳನ್ನು ಮುಚ್ಚಿಲ್ಲ.
ಸರಕಾರಿ ಶಾಲೆಯಲ್ಲಿ ಆಮೂಲಾಗ್ರ ಬದಲಾವಣೆ ತಂದು ಹೆಚ್ಚು ಹೆಚ್ಚು ಮಕ್ಕಳು ಸರಕಾರಿ ಶಾಲೆಗೆ ಸೇಪರ್ಡೆಗೊಳಿಸುವ ನಿಟ್ಟಿನಲ್ಲಿ ವಿದ್ಯಾವಿಕಾಸ ಯೋಜನೆಯಡಿ ಮಕ್ಕಳಿಗೆ ಉಚಿತ ಪಠ್ಯಪುಸ್ತಕ, ಸಮವಸ್ತ್ರ, ಶೂ ಮತ್ತು ಸಾಕ್ಸ್ ಎಂಟನೇ ತರಗತಿ ಮಕ್ಕಳಿಗೆ ಉಚಿತ ಬೈಸಿಕಲ್ ಮೊದಲಾದ ಪ್ರೋತ್ಸಾಹ, ಮಧ್ಯಾಹ್ನದ ಬಿಸಿಯೂಟ, ಹಾಲು ಮುಂತಾದ ಕಾರ್ಯಕ್ರಮಗಳನ್ನು ಕೈಗೊಳ್ಳಲಾಗುತ್ತಿದೆ ಎಂದು ಸಚಿವರು ಉತ್ತರಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Madhya pradesh Lok Sabha 20204: ಮಧ್ಯಪ್ರದೇಶದಲ್ಲಿ ಕಾಂಗ್ರೆಸ್- ಬಿಜೆಪಿ ನೇರ ಹಣಾಹಣಿ
Vijayapura; ವಿಕಸಿತ ಭಾರತದಲ್ಲಾಗಿರುವ ಅಭಿವೃದ್ಧಿ ಏನು: ಕೆಪಿಸಿಸಿ ವಕ್ತಾರ ಗಣಿಹಾರ ಪ್ರಶ್ನೆ
Pavagada: ಬೈಕ್ ಗೆ ಕಾಡು ಹಂದಿ ಡಿಕ್ಕಿಯಾಗಿ ಸವಾರ ಸಾವು
Koppala; ಬಿಜೆಪಿಯಲ್ಲಿ ಸೌಜನ್ಯತೆ ಇಲ್ಲವೆನಿಸಿ ಕಾಂಗ್ರೆಸ್ ಸೇರಿದೆ: ಸಂಗಣ್ಣ ಕರಡಿ
T20 World Cup; ರೋಹಿತ್, ವಿರಾಟ್ ಆರಂಭಿಕರು? ಅಚ್ಚರಿಯ ಮುಖಗಳಿಲ್ಲ?