ಅಪರಾಧ ಮುಕ್ತ ಸಮಾಜ ನಿರ್ಮಾಣ ಇಲಾಖೆಯ ಗುರಿ: ಕೆ. ಟಿ. ಬಾಲಕೃಷ್ಣ


Team Udayavani, Jul 21, 2017, 7:40 AM IST

balakrishna.jpg

ಕಾಪು: ಅಪರಾಧ ಮುಕ್ತ ಸಮಾಜ ನಿರ್ಮಾಣವೇ ಪೊಲೀಸ್‌ ಇಲಾಖೆಯ ಮುಖ್ಯ ಗುರಿಯಾಗಿದೆ. ಇಲಾಖೆ ಸದ‌ೃಢವಾಗಿದ್ದರೆ ಮಾತ್ರ ವ್ಯವಸ್ಥೆ ಸುಧಾರಿಸಲು ಸಾಧ್ಯವಿದೆ. ಅದನ್ನು ಮನಗಂಡು ನಾಗರಿಕರ ಸಹಕಾರದೊಂದಿಗೆ ಕಾನೂನಾತ್ಮಕ ರೀತಿಯಲ್ಲಿ ಸುಧಾರಿತ ಗಸ್ತು ವ್ಯವಸ್ಥೆಯನ್ನು ಅನುಷ್ಠಾನಕ್ಕೆ ತರಲಾಗಿದ್ದು, ನಿರಂತರ ಪೊಲೀಸ್‌ 
ಬೀಟ್‌ಗೆ ಮುಂದಡಿಯಿಡಲಾಗಿದೆ ಎಂದು ಉಡುಪಿ ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ಕೆ. ಟಿ. ಬಾಲಕೃಷ್ಣ ಹೇಳಿದರು.
ಗುರುವಾರದಂದು ಕಾಪು ಶ್ರೀ ಲಕ್ಶ್ಮೀ ಜನಾರ್ದನ ದೇವಸ್ಥಾನದ ಸಭಾಭವನದಲ್ಲಿ ನಡೆದ ಕಾಪು ಪೊಲೀಸ್‌ ವೃತ್ತದ ಕಾಪು, ಶಿರ್ವ ಮತ್ತು ಪಡುಬಿದ್ರಿ ಪೊಲೀಸ್‌ ಠಾಣಾ ವ್ಯಾಪ್ತಿಯ ಸುಧಾರಿತ ಗಸ್ತು ಸಮಿತಿ ಸದಸ್ಯರ ಸಭೆಯನ್ನು ಉದ್ದೇಶಿಸಿ ಅವರು ಮಾತನಾಡಿದರು.

ಹಿಂದಿನ ಪೊಲೀಸ್‌ ವ್ಯವಸ್ಥೆಗೂ ಇಂದಿನ ಪೊಲೀಸ್‌ ವ್ಯವಸ್ಥೆಗೂ ಅಜಗಜಾಂತರದ ವ್ಯತ್ಯಾಸವಿದೆ. ಅದೇ ರೀತಿ ಹಿಂದಿನ ಅಪರಾಧ ಸ್ವರೂಪಕ್ಕೂ ಇಂದಿನ ಅಪರಾಧ ಸ್ವರೂಪಕ್ಕೂ ಬದಲಾವಣೆಗಳಾಗಿವೆ. ಈಗಿನ ವ್ಯವಸ್ಥೆಗಳಡಿ ಹೊಂದಿಕೊಂಡು, ಜನ ಸಾಮಾನ್ಯರ ಆಶೋತ್ತರಗಳಿಗೆ ಪೂರಕವಾಗಿ ಸ್ಪಂದಿಸಬೇಕಾದರೆ ಜನಸ್ನೇಹಿ ಪೊಲೀಸ್‌ ವ್ಯವಸ್ಥೆ ಅನಿವಾರ್ಯವಾಗಿದೆ ಎಂದರು.

ಸಂಘಟಿತ ಅಪರಾಧಗಳ ನಿಯಂತ್ರಣ ಇಲಾಖೆಗೆ ಕಠಿನ ಸವಾಲು: ಸಮಾಜದಲ್ಲಿ ನಿರಂತರವಾಗಿ ನಡೆಯುತ್ತಿರುವ ಮಟ್ಕಾ-ಜುಗಾರಿ, ಗಾಂಜಾ-ಚರಸ್‌ ಮಾರಾಟ ಮತ್ತು ಸೇವನೆ ಸಹಿತ ಇತ್ಯಾದಿ ಸಂಘಟಿತ ಅಪರಾಧಗಳನ್ನು ನಿಯಂತ್ರಿಸುವುದು ಪೊಲೀಸ್‌ ಇಲಾಖೆಯ ಮುಂದಿರುವ ದೊಡ್ಡ ಮತ್ತು ಕಠಿನ ಸವಾಲಾಗಿದೆ. ಇದನ್ನು ಒಮ್ಮೆಗೆ ನಿಯಂತ್ರಿಸುವುದು ಕಷ್ಟ ಸಾಧ್ಯವಾಗಿದೆ. ಒಂದು ಕಡೆ ನಿಯಂತ್ರಣಕ್ಕೆ ಬಂದಾಗ ಮತ್ತೂಂದು ಕಡೆ ಪ್ರಾರಂಭವಾಗುವ ಸಾಧ್ಯತೆಗಳಿದ್ದು, ಆ ಕಾರಣದಿಂದಾಗಿ ಅದರ ಮೂಲವನ್ನೇ ಹತ್ತಿಕ್ಕುವ ಪ್ರಯತ್ನ ಇಲಾಖಾ ಮಟ್ಟದಲ್ಲಿ ನಡೆಯುತ್ತಿದೆ ಎಂದರು.

ಸಾರ್ವಜನಿಕರಿಂದ ಆರೋಪಗಳ ಸುರಿಮಳೆ: ಹೊರ ಜಿಲ್ಲೆ ಮತ್ತು ಹೊರ ರಾಜ್ಯಗಳಿಂದ ಬರುವ ಕೂಲಿ ಕಾರ್ಮಿಕರ ಪಟ್ಟಿ ತಯಾರಿಸಿ ಅವರ ಬಗ್ಗೆ ಜಾಗೃತೆ ವಹಿಸುವುದು, ಕಾಪು ಮತ್ತು ಕಟಪಾಡಿ ಪೇಟೆಯಲ್ಲಿನ ಟ್ರಾಫಿಕ್‌ ವ್ಯವಸ್ಥೆ, ಗಾಂಜಾ, ಅಫೀಮು ಮಾರಾಟ ಜಾಲ, ಮಟ್ಕಾ, ಜುಗಾರಿ, ಮಾದಕ ವಸ್ತುಗಳ ನಿಯಂತ್ರಣ, ಶಿರ್ವ ಪೊಲೀಸ್‌ ಠಾಣೆಗೆ ಜೀಪು ಒದಗಿಸುವಲ್ಲಿನ ವೈಫಲ್ಯ ಇತ್ಯಾದಿ ವಿಚಾರಗಳ ಬಗ್ಗೆ ಸಾರ್ವಜನಿಕರು ಬಹಿರಂಗವಾಗಿ ಅಸಮಾಧಾನ ವ್ಯಕ್ತಪಡಿಸಿದರು. ಸುಧಾರಿತ ಗಸ್ತು ವ್ಯವಸ್ಥೆಯ ಬಗ್ಗೆ ಸಿಬಂದಿಗಳಾದ ನರೇಶ್‌ ಪಡುಬಿದ್ರಿ, ಗಣೇಶ್‌ ಕಾಪು, ಮಧುಸೂದನ್‌ ಶಿರ್ವ ಮಾಹಿತಿ ನೀಡಿದರು. ಬೀಟ್‌ ಸದಸ್ಯರ ಪರವಾಗಿ ಲೀಲಾಧರ ಶೆಟ್ಟಿ, ರಾಮರಾಯ ಪಾಟ್ಕರ್‌, ಶೇಖರ್‌ ಹೆಜಮಾಡಿ ಅಭಿಪ್ರಾಯ ವ್ಯಕ್ತ ಪಡಿಸಿದರು. ಕಾಪು ಎಸೈ ಜಗದೀಶ್‌ ರೆಡ್ಡಿ, ಶಿರ್ವ ಎಸೈ ನರಸಿಂಹ ಶೆಟ್ಟಿ ಉಪಸ್ಥಿತರಿದ್ದರು. ಪೊಲೀಸ್‌ ಉಪಾಧೀಕ್ಷಕ ಎಸ್‌. ಜೆ. ಕುಮಾರಸ್ವಾಮಿ ಸ್ವಾಗತಿಸಿ, ಪ್ರಸ್ತಾವನೆಗೈದರು. ಕಾಪು ವೃತ್ತ ನಿರೀಕ್ಷಕ ಹಾಲಮೂರ್ತಿ ರಾವ್‌ ವಂದಿಸಿದರು. ಪಡುಬಿದ್ರಿ ಎಸೈ ಸತೀಶ್‌ ಕಾರ್ಯಕ್ರಮ ನಿರೂಪಿಸಿದರು.

ಟಾಪ್ ನ್ಯೂಸ್

siddaramaiah

Bidar; ನೇಹಾ ಪ್ರಕರಣದಲ್ಲಿ ಬಿಜೆಪಿ ರಾಜಕೀಯ‌ ಮಾಡುವುದು ಸರಿಯಲ್ಲ: ಸಿಎಂ ಸಿದ್ಧರಾಮಯ್ಯ‌

Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ

Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ

9-bantwala

Bantwala: ಬಾಲಕಿಯೊಂದಿಗೆ ಅನುಚಿತ ವರ್ತನೆ; ಆರೋಪಿ ವಿರುದ್ಧ ಪ್ರಕರಣ ದಾಖಲು

I.N.D.I.A ಮೈತ್ರಿಕೂಟದ ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಲಿ: ಮಾಳವಿಕಾ ಅವಿನಾಶ್

I.N.D.I.A ಮೈತ್ರಿಕೂಟದ ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಲಿ: ಮಾಳವಿಕಾ ಅವಿನಾಶ್

 Delhi: ಬ್ಯಾಂಕ್‌ ಮ್ಯಾನೇಜರ್‌ ಅಪಹರಣ…ಮಾಜಿ ಬಾಡಿಗೆದಾರರನಿಂದ ಸಂಚು!

 Delhi: ಬ್ಯಾಂಕ್‌ ಮ್ಯಾನೇಜರ್‌ ಅಪಹರಣ…ಮಾಜಿ ಬಾಡಿಗೆದಾರರನಿಂದ ಸಂಚು!

pralhad joshi

Hubli; ದ್ವಂದ್ವತೆ, ತುಷ್ಟೀಕರಣ ಕಾಂಗ್ರೆಸ್ ರಕ್ತದ ಕಣಕಣದಲ್ಲಿದೆ: ಪ್ರಹ್ಲಾದ ಜೋಶಿ

ಹೆದ್ದಾರಿ ಬದಿ ನಿಂತಿದ್ದ ಟ್ರಕ್ ಗೆ ಕಾರು ಡಿಕ್ಕಿ… ಮಗು ಸೇರಿ 6 ಮಂದಿ ಸ್ಥಳದಲ್ಲೇ ಮೃತ್ಯು

ಹೆದ್ದಾರಿ ಬದಿ ನಿಂತಿದ್ದ ಟ್ರಕ್ ಗೆ ಕಾರು ಡಿಕ್ಕಿ… ಮಗು ಸೇರಿ 6 ಮಂದಿ ಸ್ಥಳದಲ್ಲೇ ಮೃತ್ಯು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

4-annamalai

Modi ಕಲ್ಪನೆಯ ವಿಕಸಿತ ಭಾರತಕ್ಕಾಗಿ ಕೋಟ ಅವರನ್ನು ಗೆಲ್ಲಿಸೋಣ: ಅಣ್ಣಾ ಮಲೈ

Today World Malaria Day; ಕರಾವಳಿಯಲ್ಲಿ ಇಳಿಕೆಯಾಗುತ್ತಿದೆ ಮಲೇರಿಯಾ

Today World Malaria Day; ಕರಾವಳಿಯಲ್ಲಿ ಇಳಿಕೆಯಾಗುತ್ತಿದೆ ಮಲೇರಿಯಾ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

Veerappa Moily ಬಿಜೆಪಿ ವಿರುದ್ಧ ಅಸಮಾಧಾನ ಜ್ವಾಲಾಮುಖಿ ಸ್ಫೋಟ

Veerappa Moily ಬಿಜೆಪಿ ವಿರುದ್ಧ ಅಸಮಾಧಾನ ಜ್ವಾಲಾಮುಖಿ ಸ್ಫೋಟ

Udupi; ಮಸ್ಟರಿಂಗ್‌ ಕೇಂದ್ರದಲ್ಲಿ ಸಕಲ ತಯಾರಿ

Udupi; ಮಸ್ಟರಿಂಗ್‌ ಕೇಂದ್ರದಲ್ಲಿ ಸಕಲ ತಯಾರಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

siddaramaiah

Bidar; ನೇಹಾ ಪ್ರಕರಣದಲ್ಲಿ ಬಿಜೆಪಿ ರಾಜಕೀಯ‌ ಮಾಡುವುದು ಸರಿಯಲ್ಲ: ಸಿಎಂ ಸಿದ್ಧರಾಮಯ್ಯ‌

10-screenshot

Students Notes: ಸ್ಕ್ರೀನ್‌ ಶಾರ್ಟ್‌ಗಳೆಂದು ಪುಸ್ತಕವಾಗದಿರಲಿ

Telugu version of ‘Markasthra’ titled ‘Maranayudham

ತೆಲುಗಿನಲ್ಲಿ ಮಾಲಾಶ್ರೀ ಚಿತ್ರ; ಮಾರಕಾಸ್ತ್ರ ಈಗ ಮಾರಣಾಯುಧಂ

bike

Devadurga: ಅಪಘಾತದಲ್ಲಿ ಬೈಕ್ ಸವಾರರಿಬ್ಬರು ಸಾವು

Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ

Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.