ವಸತಿ ಯೋಜನೆ ಸಿಕ್ಕಿಲ್ಲ: ಕರಿಪತಾಕೆ ಪ್ರದರ್ಶಿಸಿ ಪ್ರತಿಭಟನೆ


Team Udayavani, Aug 18, 2017, 7:45 AM IST

170817hbre11a.jpg

ಹೆಬ್ರಿ: ಈಗಾಗಲೇ ಹೆಬ್ರಿಯಿಂದ ಬೇರ್ಪಡೆಗೊಂಡ ಕಾರ್ಕಳ ತಾಲೂಕಿನ ಚಾರ ಗ್ರಾಮ ಪಂಚಾಯತ್‌ ಸ್ವಂತ ಪಂಚಾಯತ್‌ ಕಟ್ಟಡವಿಲ್ಲದೆ ಕಾರ್ಯನಿರ್ವಹಿಸುತ್ತಿದ್ದು ಇದೀಗ 40 ಲಕ್ಷ ರೂ.ವೆಚ್ಚದಲ್ಲಿ ನೂತನವಾಗಿ ನಿರ್ಮಿಸಲಾಗುವ ಕಟ್ಟಡದ ಶಿಲನ್ಯಾಸ ಕಾರ್ಯಕ್ರಮವನ್ನು ಕಾರ್ಕಳ ಶಾಸಕ ವಿ. ಸುನಿಲ್‌ಕುಮಾರ್‌ ನೆರವೇರಿಸಬೇಕಾಗಿದ್ದು, ಅವರ ಅನುಪಸ್ಥಿತಿಯಲ್ಲಿ ಪಂಚಾಯತ್‌ ಅಧ್ಯಕ್ಷ ಸಂದೀಪ ಹಾಗೂ ಪಿ.ಡಿ.ಒ. ಶೇಖರ ಪೂಜಾರಿ ಅವರು ಶಿಲಾನ್ಯಾಸ ನೆರವೆರಿಸಿದ ಘಟನೆ ಆ. 16ರಂದು ನಡೆದಿದೆ.

ಚಾರ ಗ್ರಾಮ ಪಂಚಾಯತ್‌ಗೆ ಗ್ರಾಮ ವಿಕಾಸ ಯೋಜನೆಯಡಿ ಸಿಗಬೇಕಾದ ವಸತಿ ಯೋಜನೆ ಸಿಕ್ಕಿಲ್ಲ ಎಂದು ಗ್ರಾಮ ಪಂಚಾಯತ್‌ ಸದಸ್ಯ ದಿನೇಶ್‌ ಶೆಟ್ಟಿ ನೇತೃತ್ವದಲ್ಲಿ ಶಿಲಾನ್ಯಾಸ ನಡೆಯುತ್ತಿರುವ ಪ್ರದೇಶದಲ್ಲಿ ಕರಿಪತಾಕೆ ಹಿಡಿದು ಪ್ರತಿಭಟನೆ ನಡೆಸುತ್ತಿರುವ ವಿಚಾರ ತಿಳಿದು ಶಾಸಕರು ಸ್ಥಳಕ್ಕೆ ಆಗಮಿಸಿಲ್ಲ ಎಂದು ಪ್ರತಿಭಟನಕಾರರು ಆರೋಪಿಸಿದ್ದಾರೆ.

ಕರಿಪತಾಕೆ ಹಿಡಿದು ಪ್ರತಿಭಟನೆ
ಸತತ 2 ವರ್ಷಗಳಿಂದ ಚಾರ ಗ್ರಾ.ಪಂ. ಕಾಂಗ್ರೆಸ್‌ ಬೆಂಬಲಿತ ಪಂಚಾಯತ್‌ ಆದ್ದರಿಂದ ಶಾಸಕರು ನಿರ್ಲಕ್ಷ್ಯ ತೋರಿಸಿದ್ದು, ಇವರಿಂದ ಚಾರ ಗ್ರಾಮದ ಜನತೆಗೆ ಅನ್ಯಾಯವಾಗಿದ್ದು ಸುಮಾರು 1 ಕೋಟಿ ರೂ. ಮೊತ್ತದ ಗ್ರಾಮ ವಿಕಾಸ ಯೋಜನೆ ಮತ್ತು ಬಸವ ವಸತಿ ಯೋಜನೆಯಡಿ ಕೇವಲ 2 ಮನೆ ಮಾತ್ರ ನೀಡಿರುವುದರಿಂದ ಬೇಸರ ತಂದಿದೆ. ಪ್ರತಿಭಟನೆಯ ವಿಚಾರ ತಿಳಿದ ಶಾಸಕರು ಶಿಲಾನ್ಯಾಸ ಕಾರ್ಯಕ್ರಮಕ್ಕೆ ಬರದೆ ನಿರ್ಲಕ್ಷ್ಯ ತೋರಿದ್ದಾರೆ. ಗ್ರಾಮ ವಿಕಾಸ ಯೋಜನೆ ಆಯ್ಕೆ ಮತ್ತು ಬಸವ ವಸತಿ ಯೋಜನೆಯಲ್ಲಿ ಚಾರ ಗ್ರಾ.ಪಂ. ಗೆ ಅನ್ಯಾಯವಾಗಿದೆ ಎಂದು  ಗ್ರಾ.ಪಂ. ವ್ಯವಸ್ಥೆ ದಿನೇಶ್‌ ಕುಮಾರ್‌ ಪತ್ರಿಕಾ ಪ್ರಕಟನೆಯಲ್ಲಿ ತಿಳಿಸಿದ್ದಾರೆ. ಗ್ರಾ.ಪಂ. ಸದಸ್ಯೆ ಸಾವಿತ್ರಿ ನಾಯ್ಕ, ಸಂಜೀವ ನಾಯ್ಕ, ಕೃಷ್ಣಮೂರ್ತಿ ಭಂಡಾರಿ, ಶಂಕರ, ಪ್ರದೀಪ್‌, ಸುಂದರ್‌ ಮೊದಲಾದವರು ಕಪ್ಪು ಬಟ್ಟೆ ಹಿಡಿದು ಪ್ರತಿಭಟನೆ ನಡೆಸಿದರು.

ಮುಂದಿನ ದಿನಗಳಲ್ಲಿ ಪ್ರತಿಭಟನೆ
ಶಾಸಕರು ಕೂಡಲೇ ಚಾರ ಗ್ರಾಮವನ್ನು ಗ್ರಾಮ ವಿಕಾಸ ಯೋಜನೆಗೆ ಸೇರ್ಪಡೆಗೊಳಿಸಬೇಕು. ಮತ್ತು ಬಸವ ಯೋಜನೆಯಲ್ಲಿ ಚಾರಕ್ಕೆ ಅತೀ ಹೆಚ್ಚು ಮನೆಗಳನ್ನು ನೀಡಬೇಕು. ಇಲ್ಲದಿದ್ದರೆ ಮುಂದಿನ ದಿನಗಳಲ್ಲಿ ಚಾರದ ಎಲ್ಲಾ ಗ್ರಾಮಸ್ಥರನ್ನು ಸೇರಿಸಿ ಪ್ರತಿಭಟನೆ ಹಮ್ಮಿಕೊಳ್ಳಲಾಗುವುದು ಎಂದು ಗ್ರಾ.ಪಂ.ಸದಸ್ಯ ದಿನೇಶ್‌ ಶೆಟ್ಟಿ ಪ್ರಕಟನೆಯಲ್ಲಿ ತಿಳಿಸಿದ್ದಾರೆ.

ಅಧಿಕೃತ ಮಾಹಿತಿ ಇಲ್ಲ
ಚಾರ ಗ್ರಾಮ ಪಂಚಾಯತ್‌ ಹೊಸ ಕಟ್ಟಡ ಶಂಕುಸ್ಥಾಪನೆಗೆ ಶಾಸಕ ವಿ. ಸುನಿಲ್‌ ಕುಮಾರ್‌ರವರನ್ನು  ಅಧಿಕೃತ ಆಹ್ವಾನ ನೀಡಿರುವುದಿಲ್ಲ. ಗ್ರಾಮ ಪಂಚಾಯತ್‌ ಅಧ್ಯಕ್ಷರು ಮೌಖೀಕವಾಗಿ ಬರುವಂತೆ ಪೋನ್‌ ಮೂಲಕ ತಿಳಿಸಿರುತ್ತಾರೆ. ಅಧ್ಯಕ್ಷರ ಮಾತಿಗೆ ಬೆಲೆ ಕೊಟ್ಟು ಶಾಸಕರು ಬರುವಾಗ ಅಧ್ಯಕ್ಷರು ಕರೆಮಾಡಿ ಪಂಚಾಯತ್‌ ಸದಸ್ಯರ ಆಂತರಿಕ ಕಲಹದಿಂದಾಗಿ ಕಾರ್ಯಕ್ರಮ ರದ್ದುಪಡಿಸಿದ್ದೇವೆ ಎಂದು ತಿಳಿಸಿರುತ್ತಾರೆ. ಆದುದರಿಂದ ಶಾಸಕರು ಮತ್ತು ಜಿಲ್ಲಾ ಪಂಚಾಯತ್‌ ಸದಸ್ಯರು ಮಾರ್ಗ ಮಧ್ಯದಿಂದ ವಾಪಸ್ಸು ತೆರಳಿರುತ್ತಾರೆ ಎಂದು ತಾ.ಪಂ. ಸದಸ್ಯ ಅಮೃತಕುಮಾರ್‌ ಶೆಟ್ಟಿ ಪ್ರಕಟನೆಯಲ್ಲಿ ತಿಳಿಸಿದ್ದಾರೆ.

ದಿನಾಂಕ  ನಿಗದಿ ಪಡಿಸಿದ್ದು ಶಾಸಕರು 
ಶಿಲಾನ್ಯಾಸ ನಡೆಸುವ ಬಗ್ಗೆ ಶಾಸಕ ವಿ. ಸುನಿಲ್‌ಕುಮಾರ್‌ ಅವರಲ್ಲಿ ವಿನಂತಿಸಿದಾಗ ದಿನಾಂಕವನ್ನು ಅವರೇ ನಿಗದಿ ಪಡಿಸಿದ ಪ್ರಕಾರ ಕಾರ್ಯಕ್ರಮ ಆಯೋಜಿಸಲಾಗಿತ್ತು. ಅಲ್ಲದೆ ನಾನು ಸ್ವತ: ಖುದ್ದಾಗಿ ಶಾಸಕರ ಮನೆಗೆ ಬೇಟಿ ನೀಡಿ ಕಾರ್ಯಕ್ರಮಕ್ಕೆ ಆಹ್ವಾನಿಸಿದ್ದಲ್ಲದೆ ದೂರವಾಣಿ ಮೂಲಕವೂ ತಿಳಿಸಿದ್ದೇನೆ ಎಂದು ಗ್ರಾ.ಪಂ. ಅಧ್ಯಕ್ಷ ಸಂದೀಪ್‌ ಪತ್ರಿಕಾ ಪ್ರಕಟನೆಯಲ್ಲಿ ತಿಳಿಸಿದ್ದಾರೆ.

ಟಾಪ್ ನ್ಯೂಸ್

1-wqqwewqe

BJP; ಖೂಬಾ ಮತ್ತೊಮ್ಮೆ ಸಚಿವರಾಗ್ತಾರೆ : ಔರಾದ್ ನಲ್ಲಿ ಯಡಿಯೂರಪ್ಪ ಘೋಷಣೆ

Kollywood: ಅಜಿತ್‌ ಹುಟ್ಟುಹಬ್ಬಕ್ಕೆ ಸೂಪರ್‌ ಹಿಟ್ ʼಬಿಲ್ಲಾʼ ರೀ ರಿಲೀಸ್; ಫ್ಯಾನ್ಸ್‌ ಖುಷ್

Kollywood: ಅಜಿತ್‌ ಹುಟ್ಟುಹಬ್ಬಕ್ಕೆ ಸೂಪರ್‌ ಹಿಟ್ ʼಬಿಲ್ಲಾʼ ರೀ ರಿಲೀಸ್; ಫ್ಯಾನ್ಸ್‌ ಖುಷ್

Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ

Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ

19-uv-fusion

Vote: ಬನ್ನಿ ಉತ್ತಮ ನಾಯಕನನ್ನು ಆಯ್ಕೆ ಮಾಡೋಣ

ಜ.26ರಂದು 2ನೇ ಹಂತದ ಚುನಾವಣೆ;ರಾಹುಲ್‌, ತರೂರ್‌, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ

ಜ.26ರಂದು 2ನೇ ಹಂತದ ಚುನಾವಣೆ;ರಾಹುಲ್‌, ತರೂರ್‌, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ

18-aranthodu

Aranthodu: ಜೀಪ್-ಬೈಕ್ ಅಪಘಾತ; ಗಂಭೀರ ಗಾಯಗೊಂಡಿದ್ದ ಬೈಕ್ ಸವಾರ ಸಾವು

17-voting

Vote: ಮತದಾನದ ಮಹತ್ವ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Kaup: ಎ.25ರಿಂದ ಕಳತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ, ನಾಗಮಂಡಲ

Kaup: ಎ.25ರಿಂದ ಕಳತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ, ನಾಗಮಂಡಲ

ಬಂಟರು ಹಾಗೂ ಬಿಲ್ಲವರು ಮೊಗವೀರರ ಎರಡು ಕಣ್ಣುಗಳಿದ್ದಂತೆ: ಕಿರಣ್‌ ಕುಮಾರ್‌ ಉದ್ಯಾವರ

ಬಂಟರು ಹಾಗೂ ಬಿಲ್ಲವರು ಮೊಗವೀರರ ಎರಡು ಕಣ್ಣುಗಳಿದ್ದಂತೆ: ಕಿರಣ್‌ ಕುಮಾರ್‌ ಉದ್ಯಾವರ

15-udupi

Lok Sabha Election-2024; ಕಾಪು ವಿಧಾನಸಭಾ ಕ್ಷೇತ್ರದಲ್ಲಿ ಅಂತಿಮ ಹಂತದ ಸಿದ್ಧತೆ ಪೂರ್ಣ

4-annamalai

Modi ಕಲ್ಪನೆಯ ವಿಕಸಿತ ಭಾರತಕ್ಕಾಗಿ ಕೋಟ ಅವರನ್ನು ಗೆಲ್ಲಿಸೋಣ: ಅಣ್ಣಾ ಮಲೈ

Today World Malaria Day; ಕರಾವಳಿಯಲ್ಲಿ ಇಳಿಕೆಯಾಗುತ್ತಿದೆ ಮಲೇರಿಯಾ

Today World Malaria Day; ಕರಾವಳಿಯಲ್ಲಿ ಇಳಿಕೆಯಾಗುತ್ತಿದೆ ಮಲೇರಿಯಾ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-wqqwewqe

BJP; ಖೂಬಾ ಮತ್ತೊಮ್ಮೆ ಸಚಿವರಾಗ್ತಾರೆ : ಔರಾದ್ ನಲ್ಲಿ ಯಡಿಯೂರಪ್ಪ ಘೋಷಣೆ

ಬಾಗಲಕೋಟೆ: ಯಾರೇ ಪಕ್ಷ ಬಿಟ್ಟರೂ ಏನೂ ಆಗಲ್ಲ- ಸಿದ್ದು ಸವದಿ

ಬಾಗಲಕೋಟೆ: ಯಾರೇ ಪಕ್ಷ ಬಿಟ್ಟರೂ ಏನೂ ಆಗಲ್ಲ- ಸಿದ್ದು ಸವದಿ

ಧಾರವಾಡ: “ಶ್ರೀರಾಮ-ಕೃಷ್ಣರ ಜೀವನ ಇಂದಿಗೂ ಆದರ್ಶ’

ಧಾರವಾಡ: “ಶ್ರೀರಾಮ-ಕೃಷ್ಣರ ಜೀವನ ಇಂದಿಗೂ ಆದರ್ಶ’

Kollywood: ಅಜಿತ್‌ ಹುಟ್ಟುಹಬ್ಬಕ್ಕೆ ಸೂಪರ್‌ ಹಿಟ್ ʼಬಿಲ್ಲಾʼ ರೀ ರಿಲೀಸ್; ಫ್ಯಾನ್ಸ್‌ ಖುಷ್

Kollywood: ಅಜಿತ್‌ ಹುಟ್ಟುಹಬ್ಬಕ್ಕೆ ಸೂಪರ್‌ ಹಿಟ್ ʼಬಿಲ್ಲಾʼ ರೀ ರಿಲೀಸ್; ಫ್ಯಾನ್ಸ್‌ ಖುಷ್

Kaup: ಎ.25ರಿಂದ ಕಳತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ, ನಾಗಮಂಡಲ

Kaup: ಎ.25ರಿಂದ ಕಳತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ, ನಾಗಮಂಡಲ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.