ಪೇಜಾವರ ಕಿರಿಯ ಶ್ರೀಗಳ ಮೊದಲ ಮಹಾಪೂಜೆ ಹಿರಿಯ ಶ್ರೀಗಳು ಇಂದು ಮಠಕ್ಕೆ?
Team Udayavani, Aug 22, 2017, 7:40 AM IST
ಉಡುಪಿ: ಶ್ರೀ ಪೇಜಾವರ ಮಠದ ಶ್ರೀ ವಿಶ್ವೇಶತೀರ್ಥ ಶ್ರೀಪಾದರ ಆರೋಗ್ಯದ ಕಾರಣ ಶ್ರೀಕೃಷ್ಣ ಮಠದಲ್ಲಿ ಸೋಮವಾರ ಮಧ್ಯಾಹ್ನ ಕಿರಿಯ ಶ್ರೀ ವಿಶ್ವಪ್ರಸನ್ನ ತೀರ್ಥ ಶ್ರೀಪಾದರು ಮಹಾಪೂಜೆಯನ್ನು ಇದೇ ಮೊದಲ ಬಾರಿಗೆ ನಡೆಸಿದರು.
ರವಿವಾರ ಮಣಿಪಾಲ ಆಸ್ಪತ್ರೆಯಲ್ಲಿ ಶಸ್ತ್ರಚಿಕಿತ್ಸೆಗೆ ಒಳಗಾದ ಶ್ರೀ ವಿಶ್ವೇಶ ತೀರ್ಥ ಶ್ರೀಪಾದರನ್ನು ಸೋಮವಾರ ಪರಿಶೀಲನೆ ನಡೆಸಿದ ವೈದ್ಯರು ಆಸ್ಪತ್ರೆ ಯಿಂದ ಬಿಡುಗಡೆಗೊಳಿಸಲು ಒಪ್ಪಲಿಲ್ಲ. ಸ್ವಾಮೀಜಿಯವರು ಮಠಕ್ಕೆ ತೆರಳಲು ಉತ್ಸುಕ ರಾಗಿದ್ದರೂ ವೈದ್ಯರ ಒಪ್ಪಿಗೆ ಇಲ್ಲದ ಕಾರಣ ಕಿರಿಯ ಶ್ರೀಗಳಿಗೆ ದೂರವಾಣಿ ಕರೆ ನೀಡಿ “ಪರ್ಯಾಯಕ್ಕೆ ಕುಳಿತುಕೊಳ್ಳುವಾಗಲೇ ಇಬ್ಬರೂ ಜತೆ ಸೇರಿ ಮಾಡುವುದೆಂದು ತಿಳಿಸಿದ್ದೆವು. ಆದ್ದರಿಂದ ನೀವು ಪೂಜೆ ಸಲ್ಲಿಸಿ’ ಎಂದು ತಿಳಿಸಿದರು.
ಮಧ್ಯಾಹ್ನ 11.30ರ ವರೆಗೂ ಗುರುಗಳು ಬರುತ್ತಾರೆಂದು ಕಾದಿದ್ದ ಕಿರಿಯ ಶ್ರೀಗಳು ಮತ್ತೆ ಮಹಾಪೂಜೆ ನಡೆಸಿದರು. ಇತ್ತ ಆಸ್ಪತ್ರೆಯ ಪ್ರತ್ಯೇಕ ಕೊಠಡಿಯಲ್ಲಿ ತಮ್ಮ ದೈನಂದಿನ ಧಾರ್ಮಿಕ ಕೈಂಕರ್ಯ ಗಳನ್ನು ಪೇಜಾವರ ಶ್ರೀಗಳು ನಡೆಸಿದರು. ಮಂಗಳವಾರ ಆಸ್ಪತ್ರೆಯಿಂದ ಮಠಕ್ಕೆ ಮರಳುವ ಸಾಧ್ಯತೆ ಇದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Lok Sabha Election 2024; ಉಡುಪಿ-ಚಿಕ್ಕಮಗಳೂರು: ಅಭ್ಯರ್ಥಿಗಳ ದಿನಚರಿ
Kapu Assembly constituency: ನಕಲಿ ಮತದಾನ;ಆರೋಪ
Road Mishap; ಪಡುಬಿದ್ರಿ: ವಿದ್ಯುತ್ ಕಂಬಕ್ಕೆ ಕಾರು ಢಿಕ್ಕಿ: ಮಹಿಳೆ ಸಾವು
Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ
Election: ಮತದಾನ ಆರಂಭವಾದ 2 ಗಂಟೆಯಲ್ಲೇ ಉಡುಪಿ ಚಿಕ್ಕಮಗಳೂರು ಕ್ಷೇತ್ರದಲ್ಲಿ 12.82% ಮತದಾನ