ಉಡುಪಿ: ನಿಂತಿದ್ದ ಕಾರಿಗೆ ಮತ್ತೂಂದು ಕಾರು ಢಿಕ್ಕಿ
Team Udayavani, Oct 23, 2017, 9:34 AM IST
ಉಡುಪಿ: ನಿಂತಿದ್ದ ಕಾರಿಗೆ ಮತ್ತೂಂದು ಕಾರು ಢಿಕ್ಕಿ ಹೊಡೆದ ಪರಿಣಾಮ ಎರಡೂ ಕಾರುಗಳು ಸಂಪೂರ್ಣ ಜಖಂಗೊಂಡಿರುವ ಘಟನೆ ಶನಿವಾರ ತಡರಾತ್ರಿ ಬನ್ನಂಜೆಯ ಲಾಡ್ಜ್ ಒಂದರ ಮುಂಭಾಗದಲ್ಲಿ ಸಂಭವಿಸಿದೆ.
ಬೆಂಗಳೂರು ಮೂಲದ ತಿರುಮಲ ಗೌಡ ಅವರು ಕುಟುಂಬ ಸಮೇತರಾಗಿ ಉಡುಪಿಗೆ ತೀರ್ಥಯಾತ್ರೆಗೆ ಆಗಮಿಸಿದ್ದು, ರವಿವಾರ ಮುಂಜಾನೆ 3 ಗಂಟೆಗೆ ಬೆಂಗಳೂರು ತೆರಳುವ ಸಲುವಾಗಿ ಲಾಡ್ಜ್ ಮುಂಭಾದಲ್ಲಿ ಕಾರು ನಿಲ್ಲಿಸಿ ಲಾಡ್ಜ್ನಲ್ಲಿ ತಂಗಿದ್ದರು. ಅವೇಳೆ ಸಿಟಿ ಬಸ್ ನಿಲ್ದಾಣದಿಂದ ಕರಾವಳಿ ಭಾಗಕ್ಕೆ ತೆರಳುತ್ತಿದ್ದ ಕಾರೊಂದು ವೇಗವಾಗಿ ಬಂದು ತಿರುಮಲ ಗೌಡ ಅವರ ನಿಂತಿದ್ದ ಕಾರಿನ ಎಡಬದಿಗೆ ಗುದ್ದಿದೆ.
ಢಿಕ್ಕಿಯ ರಭಸಕ್ಕೆ ಎರಡೂ ಕಾರುಗಳು ಜಖಂಗೊಂಡಿವೆ. ಈ ಬಗ್ಗೆ ಉಡುಪಿ ಸಂಚಾರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Pernankila ದೇವಾಲಯ ಬ್ರಹ್ಮಕುಂಭಾಭಿಷೇಕ ಸಂಪನ್ನ
ಬಿಲ್ ಗೇಟ್ಸ್ ಜತೆ ಮಾತುಕತೆಯಲ್ಲಿ ಪ್ರಧಾನಿ ಮೋದಿ ಎಐ ಚರ್ಚೆ
Jammu-Srinagar National Highway; ಕಮರಿಗೆ ಉರುಳಿದ ಟ್ಯಾಕ್ಸಿ; ಹತ್ತು ಜನರು ಸಾವು
Brijesh Chowta; ಎ.4: ಅಧಿಕೃತ ನಾಮಪತ್ರ ಸಲ್ಲಿಕೆ; ಕ್ಯಾ| ಚೌಟರ ಆಸ್ತಿ ಇಷ್ಟು !
Banda; ಗ್ಯಾಂಗ್ಸ್ಟರ್ ಮುಖ್ತಾರ್ ಅನ್ಸಾರಿಗೆ ವಿಷಪ್ರಾಶನ: ಪುತ್ರನ ಆರೋಪ