ಮೂಳೂರಿನಲ್ಲಿ ಅನಧಿಕೃತ ಕಸಾಯಿಖಾನೆ ಕಾರ್ಯಾಚರಣೆ
Team Udayavani, Oct 23, 2017, 9:43 AM IST
ಕಾಪು: ಮೂಳೂರಿನಲ್ಲಿ ಕಾರ್ಯಾಚರಿಸುತ್ತಿದ್ದ ಅನಧಿಕೃತ ಕಸಾಯಿಖಾನೆಗೆ ರವಿವಾರ ಮುಂಜಾನೆ ಪೊಲೀಸರು ದಾಳಿ ನಡೆಸಿದ್ದು, ಅಕ್ರಮ ಗೋ ಹತ್ಯಾ ಪ್ರಕರಣವನ್ನು ಪತ್ತೆ ಹಚ್ಚಿದ್ದಾರೆ. ಮೂಳೂರಿನ ಅಬ್ದುಲ್ ಖಾದರ್ ಅವರ ಮನೆ ಪಕ್ಕದ ಶೆಡ್ನಲ್ಲಿ ಅಕ್ರಮ ಕಸಾಯಿಖಾನೆ ನಡೆಸುತಿದ್ದು ಕಾಪು ಎಸ್ಐ ನಿತ್ಯಾನಂದ ಗೌಡ ಅವರ ನೇತೃತ್ವದಲ್ಲಿ ಪೊಲೀಸರು ಧಾಳಿ ನಡೆಸಿದ್ದರು.
ಪೊಲೀಸ್ ಧಾಳಿಯ ವೇಳೆ ದನ ಕಡಿದು ಮಾಂಸ ಮಾಡುತ್ತಿದ್ದ ಇಬ್ಬರು ಆರೋಪಿಗಳು ಪರಾರಿಯಾಗಿದ್ದು, ಸ್ಥಳದಲ್ಲಿದ್ದ ದನದ ದೇಹದ ಭಾಗ, ಚರ್ಮ ಮತ್ತು ಮಾಂಸ ಮಾಡಲು ಬಳಸುವ ಆಯುಧಗಳನ್ನು ವಶಪಡಿಸಿಕೊಂಡಿದ್ದಾರೆ. ಸ್ಥಳದಲ್ಲಿ ಅಕ್ರಮವಾಗಿ ಕಟ್ಟಿ ಹಾಕಲಾಗಿದ್ದ ಮೂರು ಕರುಗಳನ್ನು ಪೊಲೀಸರು ರಕ್ಷಿಸಿದ್ದಾರೆ. ದನ ಕಳ್ಳತನ, ಪ್ರಾಣಿ ಹಿಂಸೆ ಮತ್ತು ಗೋ ಹತ್ಯೆ ಸಹಿತ ವಿವಿಧ ಕಾಲಂಗಳಲ್ಲಿ ಪ್ರಕರಣ ದಾಖಲಿಸಿಕೊಂಡಿರುವ ಕಾಪು ಪೊಲೀಸರು ತನಿಖೆ ಮುಂದುವರಿಸಿದ್ದಾರೆ.
ಕರುಗಳನ್ನು ನೀಲಾವರ ಗೋಶಾಲೆಗೆ ಹಸ್ತಾಂತರಿಸಲಾಗಿದೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Bengaluru: ಪಾರ್ಕ್ ನಲ್ಲಿ ಹಾಡಹಗಲೇ ಜೋಡಿಯ ಬರ್ಬರ ಹತ್ಯೆ
Hubli; ಕಾಲೇಜಿನಲ್ಲಿ ಕಾರ್ಪೊರೇಟರ್ ಪುತ್ರಿಯನ್ನು ಇರಿದು ಕೊಲೆ; ಯುವಕನ ಬಂಧನ
Bidar; ನಾಮಪತ್ರ ಸಲ್ಲಿಸಲು ಓಡೋಡಿ ಬಂದ ಖೂಬಾ
Belagavi; ಕೋಟ್ಯಾಧೀಶೆ ಪ್ರಿಯಾಂಕಾ; ಸತೀಶ್ ಜಾರಕಿಹೊಳಿ ಮಗಳ ಆಸ್ತಿ ವಿವರ ಇಲ್ಲಿದೆ
Dharwad; ದಿಂಗಾಲೇಶ್ವರ ಸ್ವಾಮೀಜಿ ನಾಮಪತ್ರ ಸಲ್ಲಿಕೆ: ಸಚಿವ ಜೋಶಿ ವಿರುದ್ದ ಗಂಭೀರ ಆರೋಪ