ಯುವ ಸಮೂಹದಲ್ಲಿರುವುದು ಪಠ್ಯ ಪುಸ್ತಕದ ಜ್ಞಾನ; ಪಿ.ಸಾಯಿನಾಥ್


Team Udayavani, Aug 20, 2017, 9:11 PM IST

Sainath-P-600.jpg

ಉಡುಪಿ:ರಾಷ್ಟ್ರೀಯ ಪತ್ರಿಕೆಗಳು, ಚಾನೆಲ್ ಗಳು, ಗ್ರಾಮೀಣ ಸಮಸ್ಯೆಗಳ ಬಗ್ಗೆ ಹೆಚ್ಚು ಬೆಳಕು ಚೆಲ್ಲುತ್ತಿಲ್ಲ. ದೆಹಲಿ, ಮುಂಬೈ, ಚಿನಿವಾರ ಪೇಟೆ, ಬಾಲಿವುಡ್ ಗೆ ಸೀಮಿತವಾಗಿ ಸುದ್ದಿಯನ್ನು ಮಾಡುತ್ತಿರುತ್ತವೆ. ಈ ಪ್ರವೃತ್ತಿ ಪತ್ರಿಕೋದ್ಯಮಕ್ಕೆ ಮಾತ್ರವಲ್ಲ, ಪ್ರಜಾಪ್ರಭುತ್ವಕ್ಕೆ ಮಾರಕ, ನಮ್ಮ ಮಕ್ಕಳಿಗೆ ಮಾರಕ, ನಮ್ಮ ಯುವ ಸಮೂಹಕ್ಕೆ ಮಾರಕ. ನಾವು ಜ್ಞಾನವನ್ನು ಬೆಳೆಸಬೇಕಾಗಿದೆ. ಇತಿಹಾಸದ ಪ್ರಜ್ಞೆಯನ್ನು ಹೆಚ್ಚಿಸಬೇಕಾಗಿದೆ ಎಂದು  ಹಿರಿಯ ಪತ್ರಕರ್ತ, ಮ್ಯಾಗ್ಸಸೆ ಪುರಸ್ಕೃತ ಪಾಲಗುಮ್ಮಿ ಸಾಯಿನಾಥ್ ಹೇಳಿದರು.

ಅವರು ಭಾನುವಾರ ಉಡುಪಿ ಅಜ್ಜರಕಾಡಿನ ಟೌನ್ ಹಾಲ್ ನಲ್ಲಿ ಏಷ್ಯನ್ ಭಾಷೆಗಳ ಸೇವೆಯಲ್ಲಿ ಹತ್ತು ವರ್ಷ ಪೂರೈಸಿದ ಹಿನ್ನೆಲೆಯಲ್ಲಿ ತಲ್ಲೂರು ಫ್ಯಾಮಿಲಿ ಟ್ರಸ್ಟ್ ಆಶ್ರಯದಲ್ಲಿ ನಡೆದ ತಲ್ಲೂರು ನುಡಿಮಾಲೆ ಕರಾವಳಿ ಕಟ್ಟು ದತ್ತಿನಿಧಿ ಉಪನ್ಯಾಸ ಕಾರ್ಯಕ್ರಮದಲ್ಲಿ ಶಿಖರೋಪನ್ಯಾಸ ನೀಡಿ ಮಾತನಾಡಿದರು.

ಇವತ್ತಿನ ಯುವ ಸಮೂಹಕ್ಕೆ ಸ್ವಾತಂತ್ರ್ಯ ಹೋರಾಟವನ್ನು ಕಂಡ ಅನುಭವವಿಲ್ಲ. ಅವೆಲ್ಲವೂ ಪಠ್ಯ ಪುಸ್ತಕದಿಂದ ಬಂದ ಜ್ಞಾನವಾಗಿದೆ. ಸ್ವಾತಂತ್ರ್ಯ ಹೋರಾಟದ ಯಾವುದೇ ಸಂಪರ್ಕವೂ ಇಲ್ಲ. ಇನ್ನು ಕೆಲವೇ ಕೆಲವು ವರ್ಷಗಳಲ್ಲಿ ನಮ್ಮ ನಡುವೆ ಒಬ್ಬರೇ ಒಬ್ಬ ಸ್ವಾತಂತ್ರ್ಯ ಹೋರಾಟಗಾರರು ಬದುಕುಳಿದಿರುವುದಿಲ್ಲ. ಹಾಗಾಗಿ ಈಗ ಜೀವಂತ ಇರುವ ಸ್ವಾತಂತ್ರ್ಯ ಹೋರಾಟಗಾರರ ಅನುಭವಗಳನ್ನು ದಾಖಲಿಸಿಕೊಳ್ಳಬೇಕಾಗಿದೆ ಎಂದರು. 

ಸುಮಾರು ಒಂದೂವರೆ ಗಂಟೆಗಳ ಕಾಲ ಉಪನ್ಯಾಸದ ಸಂದರ್ಭದಲ್ಲಿ ಸಾಯಿನಾಥ್ ಅವರು ಹಲವು ಕಿರು ವಿಡಿಯೋಗಳನ್ನು ಪ್ರದರ್ಶಿಸಿ ಗ್ರಾಮೀಣ ಬದುಕು, ಗ್ರಾಮೀಣ ಬದುಕಿನಲ್ಲಿರುವ ಕಲೆ, ಸಂಸ್ಕೃತಿ, ಹಾಡು, ಜನಜೀವನದ ಬಗ್ಗೆ ಮಾಹಿತಿ ನೀಡಿದರು.

ಉಪನ್ಯಾಸದ ನಂತರ ಹಿರಿಯ ಪತ್ರಕರ್ತರಾದ ಜಿಎನ್ ಮೋಹನ್, ಪ್ರೊ.ಎಂಎಸ್ ಶ್ರೀರಾಮ್, ಅಜೀಂ ಪ್ರೇಮ್ ಜೀ ವಿವಿ ಉಪನ್ಯಾಸಕ ಡಾ.ಎ.ನಾರಾಯಣ. ಹಿರಿಯ ಪತ್ರಕರ್ತ ನಾಗೇಶ್ ಹೆಗಡೆ ಸಂವಾದ ನಡೆಸಿದರು. 

ಉಪನ್ಯಾಸ ಕಾರ್ಯಕ್ರಮಕ್ಕೂ ಮುನ್ನ ರಾಜಾರಾಂ ತಲ್ಲೂರಯ ಅವರ ಅಂಕಣ ಬರಹಗಳ ನುಣ್ಣನ್ನ ಬೆಟ್ಟ ಪುಸ್ತಕವನ್ನು ಹಿರಿಯ ಪತ್ರಕರ್ತ ಪಿ.ಸಾಯಿನಾಥ್ ಅವರು ಬಿಡುಗಡೆಗೊಳಿಸಿದರು. ತಲ್ಲೂರು ಫ್ಯಾಮಿಲಿ ಟ್ರಸ್ಟ್ ನ ರಾಜಾರಾಂ ತಲ್ಲೂರು ಅತಿಥಿಗಳನ್ನು ಸ್ವಾಗತಿಸಿದರು. ರಾಮಕೃಷ್ಣ ಹೇರ್ಳೆ ವಂದಿಸಿದರು. 

ಟಾಪ್ ನ್ಯೂಸ್

arrested

Bangaluru cafe ಸ್ಫೋಟದ ಸಂಚುಕೋರ ಎನ್‌ಐಎ ಬಲೆಗೆ: ಯಾರಿದು ಷರೀಫ್?

1-qeqewqeqwe

IPL ಉದ್ಘಾಟನ ಸಮಾರಂಭ ವೀಕ್ಷಣೆ: ಹೊಸ ದಾಖಲೆ

1-wqweqeqweqweqeeqeqwe

ILO ವರದಿ; ಭಾರತದಲ್ಲಿ ನಿರುದ್ಯೋಗ ಉಲ್ಬಣ

Anant KUmar Hegde

Uttara Kannada BJP; ಅನಂತ್‌ ಕುಮಾರ ಹೆಗಡೆ ತಟಸ್ಥ?: ಪ್ರಚಾರದಿಂದಲೂ ದೂರ

1-wqeweeqwqewq

MGNREGA; ಉದ್ಯೋಗ ಖಾತ್ರಿ ಯೋಜನೆ: ಕಾರ್ಮಿಕರ ವೇತನ ಹೆಚ್ಚಳ

congress

Congress; ಕೋಲಾರಕ್ಕೆ ಗೌತಮ್‌ ಅಚ್ಚರಿಯ ಅಭ್ಯರ್ಥಿ?: 3ನೇ ವ್ಯಕ್ತಿಗೆ ಲಾಭ!

rape

Sullia;ಕೂಜಿಮಲೆ ಪ್ರದೇಶದಲ್ಲಿ ಕಾಣಿಸಿಕೊಂಡಾಕೆ ನಕ್ಸಲ್‌ ಅಲ್ಲ: ರಾಜಸ್ಥಾನಿ ಮಹಿಳೆ !


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Udupi: ನೇಣು ಬಿಗಿದು ಆತ್ಮಹತ್ಯೆ

Udupi: ನೇಣು ಬಿಗಿದು ಆತ್ಮಹತ್ಯೆ

Udupi: ಕರ್ತವ್ಯದಲ್ಲಿದ್ದ ಪೊಲೀಸ್‌ಗೆ ಹಲ್ಲೆ, ಜೀವಬೆದರಿಕೆ: ಪ್ರತ್ಯೇಕ ಪ್ರಕರಣ ದಾಖಲು

Udupi: ಕರ್ತವ್ಯದಲ್ಲಿದ್ದ ಪೊಲೀಸ್‌ಗೆ ಹಲ್ಲೆ, ಜೀವಬೆದರಿಕೆ: ಪ್ರತ್ಯೇಕ ಪ್ರಕರಣ ದಾಖಲು

Belapu: ರೈಲ್ವೇ ಹಳಿ ಬಳಿ ಬಿದ್ದು ಸಾವು

Belapu: ರೈಲ್ವೇ ಹಳಿ ಬಳಿ ಬಿದ್ದು ಸಾವು

ಕನ್ನಡಕುದ್ರು: ತೆಂಗಿನ ಮರಗಳಿಗೆ ಕೀಟ ಬಾಧೆ: ಕೃಷಿ ವಿಜ್ಞಾನಿಗಳ ತಂಡ ಭೇಟಿ; ಪರಿಶೀಲನೆ

ಕನ್ನಡಕುದ್ರು: ತೆಂಗಿನ ಮರಗಳಿಗೆ ಕೀಟ ಬಾಧೆ: ಕೃಷಿ ವಿಜ್ಞಾನಿಗಳ ತಂಡ ಭೇಟಿ; ಪರಿಶೀಲನೆ

“ಆಟ’ಕ್ಕೆ ಅಂತಾರಾಷ್ಟ್ರೀಯ ದಿನ ನಿಗದಿಗೆ ಹಕ್ಕೊತ್ತಾಯ

“ಆಟ’ಕ್ಕೆ ಅಂತಾರಾಷ್ಟ್ರೀಯ ದಿನ ನಿಗದಿಗೆ ಹಕ್ಕೊತ್ತಾಯ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

arrested

Bangaluru cafe ಸ್ಫೋಟದ ಸಂಚುಕೋರ ಎನ್‌ಐಎ ಬಲೆಗೆ: ಯಾರಿದು ಷರೀಫ್?

1-qeqewqeqwe

IPL ಉದ್ಘಾಟನ ಸಮಾರಂಭ ವೀಕ್ಷಣೆ: ಹೊಸ ದಾಖಲೆ

Lok Sabha Election: ಬಿಜೆಪಿ-ಜೆಡಿಎಸ್‌ “ಜಂಟಿ ಸಮರಾಭ್ಯಾಸ’

Lok Sabha Election: ಬಿಜೆಪಿ-ಜೆಡಿಎಸ್‌ “ಜಂಟಿ ಸಮರಾಭ್ಯಾಸ’

1-wqweqeqweqweqeeqeqwe

ILO ವರದಿ; ಭಾರತದಲ್ಲಿ ನಿರುದ್ಯೋಗ ಉಲ್ಬಣ

Anant KUmar Hegde

Uttara Kannada BJP; ಅನಂತ್‌ ಕುಮಾರ ಹೆಗಡೆ ತಟಸ್ಥ?: ಪ್ರಚಾರದಿಂದಲೂ ದೂರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.